Homeಮುಖಪುಟಗೌತಮ್ ಅದಾನಿಗೆ ಮತ್ತೆ ಸಂಕಷ್ಟ: ಕೃತಕವಾಗಿ ಶೇರುಗಳ ಬೆಲೆ ಹೆಚ್ಚಿಸಿದ ಅದಾನಿ ಗ್ರೂಪ್- ಒಸಿಸಿಆರ್‌ಪಿ ಆರೋಪ

ಗೌತಮ್ ಅದಾನಿಗೆ ಮತ್ತೆ ಸಂಕಷ್ಟ: ಕೃತಕವಾಗಿ ಶೇರುಗಳ ಬೆಲೆ ಹೆಚ್ಚಿಸಿದ ಅದಾನಿ ಗ್ರೂಪ್- ಒಸಿಸಿಆರ್‌ಪಿ ಆರೋಪ

- Advertisement -
- Advertisement -

ಇತ್ತಿಚೆಗೆ ಉದ್ಯಮಿ ಗೌತಮ್ ಅದಾನಿಯವರು ಹಿಂಡನ್‌ಬರ್ಗ್ ವರದಿಯಿಂದಾಗಿ ಭಾರೀ ಹೊಡೆತ ತಿಂದಿದ್ದರು. ಇದೀಗ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದಾನಿ ಗ್ರೂಪ್ ಕೃತಕವಾಗಿ ತನ್ನ ಕಂಪನಿಗಳ ಶೇರುಗಳ ಬೆಲೆಗಳನ್ನು ಹೆಚ್ಚಿಸಿದೆ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ಯೋಜನೆ (ಒಸಿಸಿಆರ್‌ಪಿ)ಯು ಗುರುವಾರ ಆರೋಪಿಸಿದೆ.

ಭಾರತೀಯ ಶೇರು ಮಾರುಕಟ್ಟೆಗಳಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದೆ. ಅದಾನಿ ಕುಟುಂಬವು ಅಪಾರದರ್ಶಕ ಮಾರಿಷಸ್ ನಿಧಿಗಳ ಮೂಲಕ ತನ್ನದೇ ಕಂಪನಿಗಳಲ್ಲಿ ಕೋಟ್ಯಂತರ ಡಾಲರ್‌ಗಳನ್ನು ಹೂಡಿಕೆ ಮಾಡಿದೆ ಎಂದು ಒಸಿಸಿಆರ್‌ಪಿ ಆರೋಪ ಮಾಡಿದೆ.

ಅದಾನಿ ಗ್ರೂಪ್ ಕಂಪನಿಗಳಲ್ಲಿ ಮಾರಿಷಸ್ ನಿಧಿಗಳ ಮೂಲಕ ರಹಸ್ಯ ಹೂಡಿಕೆ ಮಾಡಲಾಗಿದೆ. ಇದರಲ್ಲಿ ಗೌತಮ ಅದಾನಿಯವರ ಹಿರಿಯ ಸೋದರ ವಿನೋದ್ ಅದಾನಿ ಅವರ ಪಾತ್ರವೂ ಇದೆ ಎಂದು ಒಸಿಸಿಆರ್‌ಪಿ ವರದಿಯು ಎತ್ತಿ ತೋರಿಸಿದೆ.

ಈ ವರ್ಷದ ಜನವರಿಯಲ್ಲಿ ಅಮೆರಿಕದ ಹೂಡಿಕೆ ಸಂಸ್ಥೆ ಹಿಂಡನ್‌ಬರ್ಗ್ ರೀಸರ್ಚ್ ಅದಾನಿ ಗ್ರೂಪ್ ವಿರುದ್ಧ ಕೃತಕವಾಗಿ ಶೇರುಗಳ ಬೆಲೆಗಳನ್ನು ಹೆಚ್ಚಿಸಿದ್ದ ಇಂತಹುದೇ ಆರೋಪ ಮಾಡಿತ್ತು.

ಒಸಿಸಿಆರ್‌ಪಿ ಒದಗಿಸಿರುವ ಹೊಸ ದಾಖಲೆಗಳು ಅದಾನಿ ಗ್ರೂಪ್‌ನೊಂದಿಗೆ ನಿಕಟ ನಂಟು ಹೊಂದಿರುವ ಚಾಂಗ್ ಚುಂಗ್-ಲಿಂಗ್ ಮತ್ತು ನಾಸೀರ್ ಅಲಿ ಶಬಾನ್ ಅಹ್ಲಿ ಅವರು ಪ್ರಮುಖ ಹೂಡಿಕೆದಾರರಾಗಿದ್ದಾರೆ ಎಂದು ಬಹಿರಂಗಗೊಳಿಸಿವೆ.

ಕಡಲಾಚೆಯ ಹೂಡಿಕೆಗಳ ಕುರಿತು ಒಸಿಸಿಆರ್‌ಪಿ ವರದಿಯು ಅದಾನಿ ಕಂಪನಿಗಳ ಶೇರುಗಳಿಗೆ ಭಾರೀ ಹಿನ್ನಡೆಯನ್ನುಂಟು ಮಾಡಿದೆ. ಗುರುವಾರ ಬೆಳಿಗ್ಗೆ ಮಾರುಕಟ್ಟೆ ಆರಂಭಗೊಂಡ ಬೆನ್ನಿಗೇ ಎಲ್ಲ ಅದಾನಿ ಗ್ರೂಪ್ ಶೇರುಗಳು ತೀವ್ರವಾಗಿ ಕುಸಿದಿದ್ದವು.

ಮಧ್ಯಾಹ್ನ 2:30ಕ್ಕೆ ಇದ್ದಂತೆ ಅದಾನಿ ಎಂಟರ್‌ಪ್ರೈಸಸ್ ಶೇ.3.15, ಅದಾನಿ ಗ್ರೀನ್ ಶೇ.3.40,ಅದಾನಿ ಪವರ್ ಶೇ.2.10, ಅದಾನಿ ಟೋಟಲ್ ಗ್ಯಾಸ್ ಶೇ.2.63, ಅದಾನಿ ವಿಲ್ಮರ್ ಶೇ.2.22, ಅಂಬುಜಾ ಸಿಮೆಂಟ್ಸ್ ಶೇ.4.10, ಅದಾನಿ ಟ್ರಾನ್ಸ್‌ಮಿಷನ್ 2.70, ಎನ್‌ಡಿಟಿವಿ ಶೇ.1.96, ಎಸಿಸಿ ಶೇ.1.65 ಮತ್ತು ಅದಾನಿ ಪೋರ್ಟ್ಸ್ ಶೇ.3.36ರಷ್ಟು ನಷ್ಟದಲ್ಲಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...