Homeಮುಖಪುಟಗೌತಮ್ ಅದಾನಿಗೆ ಮತ್ತೆ ಸಂಕಷ್ಟ: ಕೃತಕವಾಗಿ ಶೇರುಗಳ ಬೆಲೆ ಹೆಚ್ಚಿಸಿದ ಅದಾನಿ ಗ್ರೂಪ್- ಒಸಿಸಿಆರ್‌ಪಿ ಆರೋಪ

ಗೌತಮ್ ಅದಾನಿಗೆ ಮತ್ತೆ ಸಂಕಷ್ಟ: ಕೃತಕವಾಗಿ ಶೇರುಗಳ ಬೆಲೆ ಹೆಚ್ಚಿಸಿದ ಅದಾನಿ ಗ್ರೂಪ್- ಒಸಿಸಿಆರ್‌ಪಿ ಆರೋಪ

- Advertisement -
- Advertisement -

ಇತ್ತಿಚೆಗೆ ಉದ್ಯಮಿ ಗೌತಮ್ ಅದಾನಿಯವರು ಹಿಂಡನ್‌ಬರ್ಗ್ ವರದಿಯಿಂದಾಗಿ ಭಾರೀ ಹೊಡೆತ ತಿಂದಿದ್ದರು. ಇದೀಗ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದಾನಿ ಗ್ರೂಪ್ ಕೃತಕವಾಗಿ ತನ್ನ ಕಂಪನಿಗಳ ಶೇರುಗಳ ಬೆಲೆಗಳನ್ನು ಹೆಚ್ಚಿಸಿದೆ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ಯೋಜನೆ (ಒಸಿಸಿಆರ್‌ಪಿ)ಯು ಗುರುವಾರ ಆರೋಪಿಸಿದೆ.

ಭಾರತೀಯ ಶೇರು ಮಾರುಕಟ್ಟೆಗಳಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದೆ. ಅದಾನಿ ಕುಟುಂಬವು ಅಪಾರದರ್ಶಕ ಮಾರಿಷಸ್ ನಿಧಿಗಳ ಮೂಲಕ ತನ್ನದೇ ಕಂಪನಿಗಳಲ್ಲಿ ಕೋಟ್ಯಂತರ ಡಾಲರ್‌ಗಳನ್ನು ಹೂಡಿಕೆ ಮಾಡಿದೆ ಎಂದು ಒಸಿಸಿಆರ್‌ಪಿ ಆರೋಪ ಮಾಡಿದೆ.

ಅದಾನಿ ಗ್ರೂಪ್ ಕಂಪನಿಗಳಲ್ಲಿ ಮಾರಿಷಸ್ ನಿಧಿಗಳ ಮೂಲಕ ರಹಸ್ಯ ಹೂಡಿಕೆ ಮಾಡಲಾಗಿದೆ. ಇದರಲ್ಲಿ ಗೌತಮ ಅದಾನಿಯವರ ಹಿರಿಯ ಸೋದರ ವಿನೋದ್ ಅದಾನಿ ಅವರ ಪಾತ್ರವೂ ಇದೆ ಎಂದು ಒಸಿಸಿಆರ್‌ಪಿ ವರದಿಯು ಎತ್ತಿ ತೋರಿಸಿದೆ.

ಈ ವರ್ಷದ ಜನವರಿಯಲ್ಲಿ ಅಮೆರಿಕದ ಹೂಡಿಕೆ ಸಂಸ್ಥೆ ಹಿಂಡನ್‌ಬರ್ಗ್ ರೀಸರ್ಚ್ ಅದಾನಿ ಗ್ರೂಪ್ ವಿರುದ್ಧ ಕೃತಕವಾಗಿ ಶೇರುಗಳ ಬೆಲೆಗಳನ್ನು ಹೆಚ್ಚಿಸಿದ್ದ ಇಂತಹುದೇ ಆರೋಪ ಮಾಡಿತ್ತು.

ಒಸಿಸಿಆರ್‌ಪಿ ಒದಗಿಸಿರುವ ಹೊಸ ದಾಖಲೆಗಳು ಅದಾನಿ ಗ್ರೂಪ್‌ನೊಂದಿಗೆ ನಿಕಟ ನಂಟು ಹೊಂದಿರುವ ಚಾಂಗ್ ಚುಂಗ್-ಲಿಂಗ್ ಮತ್ತು ನಾಸೀರ್ ಅಲಿ ಶಬಾನ್ ಅಹ್ಲಿ ಅವರು ಪ್ರಮುಖ ಹೂಡಿಕೆದಾರರಾಗಿದ್ದಾರೆ ಎಂದು ಬಹಿರಂಗಗೊಳಿಸಿವೆ.

ಕಡಲಾಚೆಯ ಹೂಡಿಕೆಗಳ ಕುರಿತು ಒಸಿಸಿಆರ್‌ಪಿ ವರದಿಯು ಅದಾನಿ ಕಂಪನಿಗಳ ಶೇರುಗಳಿಗೆ ಭಾರೀ ಹಿನ್ನಡೆಯನ್ನುಂಟು ಮಾಡಿದೆ. ಗುರುವಾರ ಬೆಳಿಗ್ಗೆ ಮಾರುಕಟ್ಟೆ ಆರಂಭಗೊಂಡ ಬೆನ್ನಿಗೇ ಎಲ್ಲ ಅದಾನಿ ಗ್ರೂಪ್ ಶೇರುಗಳು ತೀವ್ರವಾಗಿ ಕುಸಿದಿದ್ದವು.

ಮಧ್ಯಾಹ್ನ 2:30ಕ್ಕೆ ಇದ್ದಂತೆ ಅದಾನಿ ಎಂಟರ್‌ಪ್ರೈಸಸ್ ಶೇ.3.15, ಅದಾನಿ ಗ್ರೀನ್ ಶೇ.3.40,ಅದಾನಿ ಪವರ್ ಶೇ.2.10, ಅದಾನಿ ಟೋಟಲ್ ಗ್ಯಾಸ್ ಶೇ.2.63, ಅದಾನಿ ವಿಲ್ಮರ್ ಶೇ.2.22, ಅಂಬುಜಾ ಸಿಮೆಂಟ್ಸ್ ಶೇ.4.10, ಅದಾನಿ ಟ್ರಾನ್ಸ್‌ಮಿಷನ್ 2.70, ಎನ್‌ಡಿಟಿವಿ ಶೇ.1.96, ಎಸಿಸಿ ಶೇ.1.65 ಮತ್ತು ಅದಾನಿ ಪೋರ್ಟ್ಸ್ ಶೇ.3.36ರಷ್ಟು ನಷ್ಟದಲ್ಲಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...