Homeಮುಖಪುಟಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

ಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

- Advertisement -
- Advertisement -

ಶಿವಸೇನೆ ಪಕ್ಷದ 40 ಶಾಸಕರು ಬಂಡಾಯವೆದ್ದು ಮಹಾವಿಕಾಸ್ ಅಘಾಡಿ ಸರ್ಕಾರ ಕೆಡವಿ, ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿ ಉದ್ಧವ್ ಠಾಕ್ರೆಗೆ ಸವಾಲೆಸೆದಿದ್ದಾರೆ. ಈ ಬೆನ್ನಲ್ಲೆ ಪಕ್ಷದ 16 ಸಂಸದರು ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನು ಬೆಂಬಲಿಸುವಂತೆ ಮಾಜಿ ಸಿಎಂ ಠಾಕ್ರೆ ಮೇಲೆ ಒತ್ತಡ ಹೇರುವ ಮೂಲಕ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.

ಇಂದು ಉದ್ಧವ್ ಠಾಕ್ರೆಯವರು ನಡೆಸಿದ ಸಭೆಯಲ್ಲಿ ಭಾಗವಹಿಸಿರುವ ಸಂಸದರು, “ಮಹಾರಾಷ್ಟ್ರದಲ್ಲಿ ಆದಿವಾಸಿ ಜನಸಂಖ್ಯೆ ಗಣನೀಯ ಮಟ್ಟದಲ್ಲಿದೆ. ದ್ರೌಪದಿ ಮುರ್ಮುರವರು ಬುಡಕಟ್ಟು ಮಹಿಳೆಯಾದ ಕಾರಣ ಅವರನ್ನು ಬೆಂಬಲಿಸಬೇಕೆಂದು” ಒತ್ತಡ ತಂದಿದ್ದಾರೆ. ಇದುವರೆಗೂ ವಿರೋಧ ಪಕ್ಷಗಳ ಅಭ್ಯರ್ಥಿಯಾದ ಯಶವಂತ ಸಿನ್ಹಾರನ್ನು ಬೆಂಬಲಿಸುವುದಾಗಿ ಘೋಷಿಸಿದ್ದ ಠಾಕ್ರೆಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಶಿವಸೆನೆಯ ಸಂಸದ ಗಜಾನನ ಕೀರ್ತಿಕರ್ 16 ಸಂಸದರ ಪರವಾಗಿ ಮಾತನಾಡಿದ್ದು, ಬುಡಕಟ್ಟು ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನೆ ಬೆಂಬಲಿಸುತ್ತೇವೆ ಎಂದಿದ್ದಾರೆ. ಏಕನಾಥ್ ಶಿಂಧೆ ಬಂಡಾಯವೆದ್ದು ಸಿಎಂ ಆದ ನಂತರ ಪಕ್ಷವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿರುವ ಠಾಕ್ರೆಗೆ ಸಂಸದರ ನಿರ್ಣಯ ಗಾಯದ ಮೇಲೆ ಬರೆ ಎಳೆದಂತೆ ಪರಿಣಮಿಸಿದೆ. ಹಾಗಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪ್ ಜಾರಿಗೊಳಿಸದೆ ಸಂಸದರು ತಮಗೆ ಸರಿ ಎನಿಸಿದವರಿಗೆ ಮತ ಹಾಕಲು ಬಿಡಲಾಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಈ ಕುರಿತು ಮಾಧ್ಯಮಗಳ ಜೊತೆ ಪ್ರತಿಕ್ರಿಯಿಸಿರುವ ಉದ್ಧವ್ ಠಾಕ್ರೆ ಈ ಬಗ್ಗೆ ಇನ್ನು ಎರಡು ದಿನದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅವರ ಸಹವರ್ತಿ ರಾಜ್ಯಸಭಾ ಸಂಸದ ಸಂಜಯ್ ರಾವತ್ ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ. ಇದು ಅವರಿಗೆ ಸಂಸದರ ನಿರ್ಣಯ ಕೋಪ ತರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಶಿವಸೇನೆಯು 19 ಲೋಕಸಭಾ ಸಂಸದರು ಮತ್ತು 03 ರಾಜ್ಯಸಭಾ ಸಂಸದರನ್ನು ಹೊಂದಿದೆ. ಸಂಸತ್ ಸದಸ್ಯರಲ್ಲಿ ಬಂಡಾಯವನ್ನು ತಪ್ಪಿಸಲು ಕಳೆದ ವಾರ ಠಾಕ್ರೆ ಲೋಕಸಭಾ ಹೊಸ ಮುಖ್ಯ ಸಚೇತಕರನ್ನು ನೇಮಿಸಿದ್ದರು. ಆದರೆ ಇಂದಿನ ಸಭೆಗೆ ಏಕನಾಥ್ ಶಿಂಧೆಯ ಪುತರ ಸೇರಿದಂತೆ 06 ಜನರು ಗೈರು ಹಾಜರಾಗಿದ್ದಾರೆ.

ಠಾಕ್ರೆ ಬೆಂಬಲಿಗ ಸಂಸದ ಅರವಿಂದ್ ಸಾವಂತ್ ಕಳೆದ ವಾರ ಸಂದರ್ಶನದಲ್ಲಿ ಮಾತನಾಡುತ್ತಾ, “ಯಾರಿಗೆ ಪಕ್ಷದಲ್ಲಿ ಇರಲು ಇಷ್ಟವಿಲ್ಲವೊ ಅವರು ಪಕ್ಷ ತ್ಯಜಿಸಲಿ. ನಾವು 19 ಸಂಸದರಿದ್ದ ಪಕ್ಷಾಂತರ ನಿಷೇಧ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಮೂರನೇ ಎರಡು ಬಹುಮತವಾದ 12 ಸಂಸದರು ಇದಕ್ಕೆ ಸಿದ್ದವಿದ್ದಾರೆಯೆ?” ಎಂದು ಪ್ರಶ್ನಿಸಿದ್ದರು.


ಇದನ್ನೂ ಓದಿ: ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...