Homeಮುಖಪುಟಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

ಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

- Advertisement -
- Advertisement -

ಶಿವಸೇನೆ ಪಕ್ಷದ 40 ಶಾಸಕರು ಬಂಡಾಯವೆದ್ದು ಮಹಾವಿಕಾಸ್ ಅಘಾಡಿ ಸರ್ಕಾರ ಕೆಡವಿ, ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿ ಉದ್ಧವ್ ಠಾಕ್ರೆಗೆ ಸವಾಲೆಸೆದಿದ್ದಾರೆ. ಈ ಬೆನ್ನಲ್ಲೆ ಪಕ್ಷದ 16 ಸಂಸದರು ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನು ಬೆಂಬಲಿಸುವಂತೆ ಮಾಜಿ ಸಿಎಂ ಠಾಕ್ರೆ ಮೇಲೆ ಒತ್ತಡ ಹೇರುವ ಮೂಲಕ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.

ಇಂದು ಉದ್ಧವ್ ಠಾಕ್ರೆಯವರು ನಡೆಸಿದ ಸಭೆಯಲ್ಲಿ ಭಾಗವಹಿಸಿರುವ ಸಂಸದರು, “ಮಹಾರಾಷ್ಟ್ರದಲ್ಲಿ ಆದಿವಾಸಿ ಜನಸಂಖ್ಯೆ ಗಣನೀಯ ಮಟ್ಟದಲ್ಲಿದೆ. ದ್ರೌಪದಿ ಮುರ್ಮುರವರು ಬುಡಕಟ್ಟು ಮಹಿಳೆಯಾದ ಕಾರಣ ಅವರನ್ನು ಬೆಂಬಲಿಸಬೇಕೆಂದು” ಒತ್ತಡ ತಂದಿದ್ದಾರೆ. ಇದುವರೆಗೂ ವಿರೋಧ ಪಕ್ಷಗಳ ಅಭ್ಯರ್ಥಿಯಾದ ಯಶವಂತ ಸಿನ್ಹಾರನ್ನು ಬೆಂಬಲಿಸುವುದಾಗಿ ಘೋಷಿಸಿದ್ದ ಠಾಕ್ರೆಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಶಿವಸೆನೆಯ ಸಂಸದ ಗಜಾನನ ಕೀರ್ತಿಕರ್ 16 ಸಂಸದರ ಪರವಾಗಿ ಮಾತನಾಡಿದ್ದು, ಬುಡಕಟ್ಟು ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನೆ ಬೆಂಬಲಿಸುತ್ತೇವೆ ಎಂದಿದ್ದಾರೆ. ಏಕನಾಥ್ ಶಿಂಧೆ ಬಂಡಾಯವೆದ್ದು ಸಿಎಂ ಆದ ನಂತರ ಪಕ್ಷವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿರುವ ಠಾಕ್ರೆಗೆ ಸಂಸದರ ನಿರ್ಣಯ ಗಾಯದ ಮೇಲೆ ಬರೆ ಎಳೆದಂತೆ ಪರಿಣಮಿಸಿದೆ. ಹಾಗಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪ್ ಜಾರಿಗೊಳಿಸದೆ ಸಂಸದರು ತಮಗೆ ಸರಿ ಎನಿಸಿದವರಿಗೆ ಮತ ಹಾಕಲು ಬಿಡಲಾಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಈ ಕುರಿತು ಮಾಧ್ಯಮಗಳ ಜೊತೆ ಪ್ರತಿಕ್ರಿಯಿಸಿರುವ ಉದ್ಧವ್ ಠಾಕ್ರೆ ಈ ಬಗ್ಗೆ ಇನ್ನು ಎರಡು ದಿನದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅವರ ಸಹವರ್ತಿ ರಾಜ್ಯಸಭಾ ಸಂಸದ ಸಂಜಯ್ ರಾವತ್ ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ. ಇದು ಅವರಿಗೆ ಸಂಸದರ ನಿರ್ಣಯ ಕೋಪ ತರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಶಿವಸೇನೆಯು 19 ಲೋಕಸಭಾ ಸಂಸದರು ಮತ್ತು 03 ರಾಜ್ಯಸಭಾ ಸಂಸದರನ್ನು ಹೊಂದಿದೆ. ಸಂಸತ್ ಸದಸ್ಯರಲ್ಲಿ ಬಂಡಾಯವನ್ನು ತಪ್ಪಿಸಲು ಕಳೆದ ವಾರ ಠಾಕ್ರೆ ಲೋಕಸಭಾ ಹೊಸ ಮುಖ್ಯ ಸಚೇತಕರನ್ನು ನೇಮಿಸಿದ್ದರು. ಆದರೆ ಇಂದಿನ ಸಭೆಗೆ ಏಕನಾಥ್ ಶಿಂಧೆಯ ಪುತರ ಸೇರಿದಂತೆ 06 ಜನರು ಗೈರು ಹಾಜರಾಗಿದ್ದಾರೆ.

ಠಾಕ್ರೆ ಬೆಂಬಲಿಗ ಸಂಸದ ಅರವಿಂದ್ ಸಾವಂತ್ ಕಳೆದ ವಾರ ಸಂದರ್ಶನದಲ್ಲಿ ಮಾತನಾಡುತ್ತಾ, “ಯಾರಿಗೆ ಪಕ್ಷದಲ್ಲಿ ಇರಲು ಇಷ್ಟವಿಲ್ಲವೊ ಅವರು ಪಕ್ಷ ತ್ಯಜಿಸಲಿ. ನಾವು 19 ಸಂಸದರಿದ್ದ ಪಕ್ಷಾಂತರ ನಿಷೇಧ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಮೂರನೇ ಎರಡು ಬಹುಮತವಾದ 12 ಸಂಸದರು ಇದಕ್ಕೆ ಸಿದ್ದವಿದ್ದಾರೆಯೆ?” ಎಂದು ಪ್ರಶ್ನಿಸಿದ್ದರು.


ಇದನ್ನೂ ಓದಿ: ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...