Homeಕರ್ನಾಟಕಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

- Advertisement -
- Advertisement -

ಸೋಫಿಟೆಲ್‍ನಿಂದ ರೆನೆಸಾನ್ಸ್ ಹೋಟೆಲ್‍ಗೆ ಶಿಫ್ಟ್ ಆಗಿದ್ದ ತೃಪ್ತರಾಗದ ಶಾಸಕರನ್ನು ಮಾತಾಡಿಸಿ ಕರೆದುಕೊಂಡೇ ಬರುತ್ತೇನೆಂದು ಹೊರಟ ಡಿ.ಕೆ.ಶಿವಕುಮಾರ್ ಸಾಧಿಸಿದ್ದೇನು? ಒಬ್ಬ ಶಾಸಕರನ್ನಾದರೂ ಕರೆದುಕೊಂಡು ಬರುವುದಿರಲಿ ಮಾತಾಡಿಸಲೂ ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರಿಗೆ ಏನು ಬೇಕೋ ಅದನ್ನು ಅವರು ಪಡೆದುಕೊಂಡಾಯಿತು. ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಇಂಗ್ಲಿಷ್ ಚಾನೆಲ್‍ಗಳೂ ಒಳಗೊಂಡಂತೆ ಮಾಧ್ಯಮದ ಕೇಂದ್ರಬಿಂದು ಡಿ.ಕೆ.ಶಿ ಅವರೇ ಆಗಿದ್ದರು. ಮಹಾರಾಷ್ಟ್ರದಲ್ಲಿ ಮತ್ತು ಇಂಗ್ಲಿಷಿನಲ್ಲಿ ವ್ಯವಹರಿಸುವ ಹಲವಾರು ಪ್ರಭಾವೀ ಟ್ವಿಟ್ಟಿಗರು ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿ ಬಿದ್ದರೆಂದರೆ, ಮುಂಬೈನ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಅವರಿಗೆ ಟ್ವಿಟ್ಟರ್ ನಲ್ಲೇ ಉತ್ತರಿಸಿ ಓಡಿ ಹೋಗಿ ಡಿಕೆಶಿ ಪಕ್ಕ ಕೂರಬೇಕಾಯಿತು. ಅಂತಿಮವಾಗಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೋಗುವಾಗ ಜೊತೆಯಲ್ಲಿ ಮಿಲಿಂದ್ ದೇವ್ರಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನಸೀಮ್ ಖಾನ್ ಸಹಾ ಇದ್ದರು.

ಖ್ಯಾತ ಪತ್ರಕರ್ತೆ ಸ್ವಾತಿ ಚತುರ್ವೇದಿ ಒಂದೇ ಸಮನೆ ಟ್ವೀಟ್ ಮಾಡುತ್ತಾ ಕಾಂಗ್ರೆಸ್ಸಿಗರನ್ನು ಕಾಡಿದರು. ರಾಹುಲ್‍ಗಾಂಧಿಗೂ ಟ್ಯಾಗ್ ಮಾಡಿ, ‘ಅಲ್ಲಿ ಒಬ್ಬಂಟಿಯಾಗಿ ಹೋರಾಡುತ್ತಿರುವ ಡಿ.ಕೆ.ಶಿವಕುಮಾರ್‍ರನ್ನು ನೋಡಿ ಕಲಿತುಕೊಳ್ಳಿ’ ಎಂದರು. ರಾಹುಲ್‍ಗಾಂಧಿಯ ಸ್ಥಾನದಲ್ಲಿ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗುವ ಹೆಸರುಗಳಲ್ಲಿ ಮಿಲಿಂದ್ ದೇವ್ರಾ ಹೆಸರೂ ಓಡುತ್ತಿತ್ತು. ಹಾಗಾಗಿ ರಾಷ್ಟ್ರೀಯ ಅಧ್ಯಕ್ಷರಾಗಬೇಕಾದವರು ಡಿ.ಕೆ.ಶಿವಕುಮಾರ್ ಥರದವರು; ಮಿಲಿಂದ್ ದೇವ್ರಾ ಅಲ್ಲ ಎಂದೆಲ್ಲಾ ಹೇಳಲಾಯಿತು.

ಇದಕ್ಕೆ ಮುಂಚೆ ಸ್ಪೀಕರ್‍ಗೆ 12 ಜನ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಬಂದಾಗಲೂ ವಿಧಾನಸೌಧಕ್ಕೆ ಓಡಿದ್ದ ಡಿಕೆಶಿ ಶಾಸಕ ಮುನಿರತ್ನರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಮರುದಿನ ಮುಂಬೈನ ಅದೇ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿಕೊಂಡು ವಿಮಾನ ಹತ್ತುವ ಮುಂಚೆಯೇ ‘ಮುಂಬೈಗೆ ಹೋಗಿ ಅವರನ್ನು ಕರೆತರುತ್ತೇನೆ’ ಎಂದು ಘೋಷಿಸಿದರು. ಹೋಟೆಲ್‍ನಲ್ಲಿದ್ದ ಶಾಸಕರನ್ನು ಡಿಕೆಶಿ ಭೇಟಿಯಾಗದಂತೆ ತಡೆಯಬೇಕೆಂದರೆ ಅವರಿಂದಲೇ ದೂರು ಪಡೆದುಕೊಳ್ಳಬೇಕು. ಬಿಜೆಪಿ ಅದನ್ನೂ ಮಾಡಿತು. ಮಧ್ಯರಾತ್ರಿ ಅಲ್ಲಿದ್ದ 10 ಶಾಸಕರಿಂದ ದೂರು ಬರೆಸಿಕೊಂಡು, ಮರುದಿನ ಅಲ್ಲಿನ ಡಿಸಿಪಿ ‘ಈ ಪತ್ರ ಇಲ್ಲದೇ ಇದ್ದರೆ ನಾವು ನಿಮ್ಮನ್ನು ತಡೆಯುತ್ತಿರಲಿಲ್ಲ’ ಎಂದು ಹೇಳಲು ಬೇಕಾದ ವ್ಯವಸ್ಥೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆಶಿ ಪರ ಬ್ಯಾಟಿಂಗ್ ಮಾಡಿದ ಸ್ವಾತಿ ಚತುರ್ವೇದಿ

ಅದೂ ಸಹಾ ಡಿಕೆಶಿಯ ಸಾಮಥ್ರ್ಯದ ಬಗೆಗಿನ ಇಮೇಜ್‍ ಅನ್ನು ಹೆಚ್ಚಿಸಿತೇ ಹೊರತು ಕಡಿಮೆ ಮಾಡಲಿಲ್ಲ. ಹೋಟೆಲ್ ಮುಂದೆ ಪೊಲೀಸರು ತಡೆದಾಗ ಶಿವಕುಮಾರ್ ವಾಪಸ್ ಹೋಗಲಿಲ್ಲ. ನಾನಿವತ್ತು ಇಲ್ಲೇ ಇದ್ದು ಕರೆದುಕೊಂಡೇ ಹೋಗುತ್ತೇನೆ ಎಂದರು. ಇಂಗ್ಲಿಷ್ ಮೀಡಿಯಾಗಳಿಗೆ ಮಾತನಾಡಿದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಡಿಕೆಶಿ ವಹಿಸಿದ್ದ ಪಾತ್ರದಿಂದ ‘ಟ್ರಬಲ್‍ಶೂಟರ್’ ಪಟ್ಟ ಗಿಟ್ಟಿಸಿಕೊಂಡಿದ್ದ ಅವರು ಮಧ್ಯೆ ಡಲ್ ಆಗಿದ್ದರು. ಈಗ ಮತ್ತೆ ಟ್ರಬಲ್‍ಶೂಟರ್ ಅಲ್ಲದಿದ್ದರೂ ಫೈಟರ್ ಎಂಬ ಇಮೇಜ್‍ಅನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಸ್ಥಾಪನೆ ಮಾಡಿಕೊಂಡರು.

2002ರಲ್ಲಿ ವಿಲಾಸರಾವ್ ದೇಶಮುಖ್ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ, 2017ರಲ್ಲಿ ಗುಜರಾತ್‍ನ ಎಂಎಲ್‍ಎಗಳು ಅಹ್ಮದ್ ಪಟೇಲ್‍ರಿಗೇ ರಾಜ್ಯಸಭಾ ಚುನಾವಣೆಯಲ್ಲಿ ಓಟು ಹಾಕುವಂತೆ ಮಾಡಲು ಶಾಸಕರನ್ನು ಕರ್ನಾಟಕಕ್ಕೇ ಕಳಿಸಿ ಡಿಕೆಶಿ ಸುಪರ್ದಿಗೆ ವಹಿಸಲಾಗಿತ್ತು. ಎಲ್ಲವನ್ನೂ ತಲೆ ಮೇಲೆ ಹೊತ್ತುಕೊಂಡು ಮಾಡಿದ ಅವರು ಇಂದಲ್ಲಾ ನಾಳೆ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡೇ ಇದ್ದಾರೆ.

ಆದರೆ, ತನ್ನ ಹಿಂದೆ ಬೆರಳಣಿಕೆಯ ಶಾಸಕರನ್ನೂ ಹೊಂದಿಲ್ಲದಿರುವುದೇ ಅವರ ಸಮಸ್ಯೆ. ಅದರ ಜೊತೆಗೆ ‘ಬ್ಯಾಡ್‍ಬಾಯ್’ ಇಮೇಜ್ ಇನ್ನೂ ಇದ್ದು, ಕುಮಾರಸ್ವಾಮಿಗಿರುವ ಜನಾನುರಾಗಿ ಎಂದೋ ಅಥವಾ ಸಿದ್ದರಾಮಯ್ಯರಿಗಿರುವ ಮಾಸ್ ಲೀಡರ್ ಎಂಬ ಇಮೇಜೋ ಇಲ್ಲದಿರುವ ಕೊರತೆ ಇದೆ. ಕನಿಷ್ಠ ಒಕ್ಕಲಿಗರ ನಾಯಕ ಎಂಬ ಪಟ್ಟವಾದರೂ ಇರಲಿ ಎಂಬ ಕಾರಣಕ್ಕೆ ‘ಯಾವ ಕಾರಣಕ್ಕೂ ಕುಮಾರಸ್ವಾಮಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡುವುದಿಲ್ಲ’ ಎಂಬ ಮಾತನ್ನು ಪದೇ ಪದೇ ಹೇಳಿದ್ದಾರೆ.

ಇವೆಲ್ಲವೂ ಇಂದಲ್ಲಾ ನಾಳೆ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಏರಿಸುತ್ತದಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ರಮೇಶ್‍ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...