Homeಕರ್ನಾಟಕಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

- Advertisement -
- Advertisement -

ಸೋಫಿಟೆಲ್‍ನಿಂದ ರೆನೆಸಾನ್ಸ್ ಹೋಟೆಲ್‍ಗೆ ಶಿಫ್ಟ್ ಆಗಿದ್ದ ತೃಪ್ತರಾಗದ ಶಾಸಕರನ್ನು ಮಾತಾಡಿಸಿ ಕರೆದುಕೊಂಡೇ ಬರುತ್ತೇನೆಂದು ಹೊರಟ ಡಿ.ಕೆ.ಶಿವಕುಮಾರ್ ಸಾಧಿಸಿದ್ದೇನು? ಒಬ್ಬ ಶಾಸಕರನ್ನಾದರೂ ಕರೆದುಕೊಂಡು ಬರುವುದಿರಲಿ ಮಾತಾಡಿಸಲೂ ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರಿಗೆ ಏನು ಬೇಕೋ ಅದನ್ನು ಅವರು ಪಡೆದುಕೊಂಡಾಯಿತು. ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಇಂಗ್ಲಿಷ್ ಚಾನೆಲ್‍ಗಳೂ ಒಳಗೊಂಡಂತೆ ಮಾಧ್ಯಮದ ಕೇಂದ್ರಬಿಂದು ಡಿ.ಕೆ.ಶಿ ಅವರೇ ಆಗಿದ್ದರು. ಮಹಾರಾಷ್ಟ್ರದಲ್ಲಿ ಮತ್ತು ಇಂಗ್ಲಿಷಿನಲ್ಲಿ ವ್ಯವಹರಿಸುವ ಹಲವಾರು ಪ್ರಭಾವೀ ಟ್ವಿಟ್ಟಿಗರು ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿ ಬಿದ್ದರೆಂದರೆ, ಮುಂಬೈನ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಅವರಿಗೆ ಟ್ವಿಟ್ಟರ್ ನಲ್ಲೇ ಉತ್ತರಿಸಿ ಓಡಿ ಹೋಗಿ ಡಿಕೆಶಿ ಪಕ್ಕ ಕೂರಬೇಕಾಯಿತು. ಅಂತಿಮವಾಗಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೋಗುವಾಗ ಜೊತೆಯಲ್ಲಿ ಮಿಲಿಂದ್ ದೇವ್ರಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನಸೀಮ್ ಖಾನ್ ಸಹಾ ಇದ್ದರು.

ಖ್ಯಾತ ಪತ್ರಕರ್ತೆ ಸ್ವಾತಿ ಚತುರ್ವೇದಿ ಒಂದೇ ಸಮನೆ ಟ್ವೀಟ್ ಮಾಡುತ್ತಾ ಕಾಂಗ್ರೆಸ್ಸಿಗರನ್ನು ಕಾಡಿದರು. ರಾಹುಲ್‍ಗಾಂಧಿಗೂ ಟ್ಯಾಗ್ ಮಾಡಿ, ‘ಅಲ್ಲಿ ಒಬ್ಬಂಟಿಯಾಗಿ ಹೋರಾಡುತ್ತಿರುವ ಡಿ.ಕೆ.ಶಿವಕುಮಾರ್‍ರನ್ನು ನೋಡಿ ಕಲಿತುಕೊಳ್ಳಿ’ ಎಂದರು. ರಾಹುಲ್‍ಗಾಂಧಿಯ ಸ್ಥಾನದಲ್ಲಿ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗುವ ಹೆಸರುಗಳಲ್ಲಿ ಮಿಲಿಂದ್ ದೇವ್ರಾ ಹೆಸರೂ ಓಡುತ್ತಿತ್ತು. ಹಾಗಾಗಿ ರಾಷ್ಟ್ರೀಯ ಅಧ್ಯಕ್ಷರಾಗಬೇಕಾದವರು ಡಿ.ಕೆ.ಶಿವಕುಮಾರ್ ಥರದವರು; ಮಿಲಿಂದ್ ದೇವ್ರಾ ಅಲ್ಲ ಎಂದೆಲ್ಲಾ ಹೇಳಲಾಯಿತು.

ಇದಕ್ಕೆ ಮುಂಚೆ ಸ್ಪೀಕರ್‍ಗೆ 12 ಜನ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಬಂದಾಗಲೂ ವಿಧಾನಸೌಧಕ್ಕೆ ಓಡಿದ್ದ ಡಿಕೆಶಿ ಶಾಸಕ ಮುನಿರತ್ನರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಮರುದಿನ ಮುಂಬೈನ ಅದೇ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿಕೊಂಡು ವಿಮಾನ ಹತ್ತುವ ಮುಂಚೆಯೇ ‘ಮುಂಬೈಗೆ ಹೋಗಿ ಅವರನ್ನು ಕರೆತರುತ್ತೇನೆ’ ಎಂದು ಘೋಷಿಸಿದರು. ಹೋಟೆಲ್‍ನಲ್ಲಿದ್ದ ಶಾಸಕರನ್ನು ಡಿಕೆಶಿ ಭೇಟಿಯಾಗದಂತೆ ತಡೆಯಬೇಕೆಂದರೆ ಅವರಿಂದಲೇ ದೂರು ಪಡೆದುಕೊಳ್ಳಬೇಕು. ಬಿಜೆಪಿ ಅದನ್ನೂ ಮಾಡಿತು. ಮಧ್ಯರಾತ್ರಿ ಅಲ್ಲಿದ್ದ 10 ಶಾಸಕರಿಂದ ದೂರು ಬರೆಸಿಕೊಂಡು, ಮರುದಿನ ಅಲ್ಲಿನ ಡಿಸಿಪಿ ‘ಈ ಪತ್ರ ಇಲ್ಲದೇ ಇದ್ದರೆ ನಾವು ನಿಮ್ಮನ್ನು ತಡೆಯುತ್ತಿರಲಿಲ್ಲ’ ಎಂದು ಹೇಳಲು ಬೇಕಾದ ವ್ಯವಸ್ಥೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆಶಿ ಪರ ಬ್ಯಾಟಿಂಗ್ ಮಾಡಿದ ಸ್ವಾತಿ ಚತುರ್ವೇದಿ

ಅದೂ ಸಹಾ ಡಿಕೆಶಿಯ ಸಾಮಥ್ರ್ಯದ ಬಗೆಗಿನ ಇಮೇಜ್‍ ಅನ್ನು ಹೆಚ್ಚಿಸಿತೇ ಹೊರತು ಕಡಿಮೆ ಮಾಡಲಿಲ್ಲ. ಹೋಟೆಲ್ ಮುಂದೆ ಪೊಲೀಸರು ತಡೆದಾಗ ಶಿವಕುಮಾರ್ ವಾಪಸ್ ಹೋಗಲಿಲ್ಲ. ನಾನಿವತ್ತು ಇಲ್ಲೇ ಇದ್ದು ಕರೆದುಕೊಂಡೇ ಹೋಗುತ್ತೇನೆ ಎಂದರು. ಇಂಗ್ಲಿಷ್ ಮೀಡಿಯಾಗಳಿಗೆ ಮಾತನಾಡಿದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಡಿಕೆಶಿ ವಹಿಸಿದ್ದ ಪಾತ್ರದಿಂದ ‘ಟ್ರಬಲ್‍ಶೂಟರ್’ ಪಟ್ಟ ಗಿಟ್ಟಿಸಿಕೊಂಡಿದ್ದ ಅವರು ಮಧ್ಯೆ ಡಲ್ ಆಗಿದ್ದರು. ಈಗ ಮತ್ತೆ ಟ್ರಬಲ್‍ಶೂಟರ್ ಅಲ್ಲದಿದ್ದರೂ ಫೈಟರ್ ಎಂಬ ಇಮೇಜ್‍ಅನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಸ್ಥಾಪನೆ ಮಾಡಿಕೊಂಡರು.

2002ರಲ್ಲಿ ವಿಲಾಸರಾವ್ ದೇಶಮುಖ್ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ, 2017ರಲ್ಲಿ ಗುಜರಾತ್‍ನ ಎಂಎಲ್‍ಎಗಳು ಅಹ್ಮದ್ ಪಟೇಲ್‍ರಿಗೇ ರಾಜ್ಯಸಭಾ ಚುನಾವಣೆಯಲ್ಲಿ ಓಟು ಹಾಕುವಂತೆ ಮಾಡಲು ಶಾಸಕರನ್ನು ಕರ್ನಾಟಕಕ್ಕೇ ಕಳಿಸಿ ಡಿಕೆಶಿ ಸುಪರ್ದಿಗೆ ವಹಿಸಲಾಗಿತ್ತು. ಎಲ್ಲವನ್ನೂ ತಲೆ ಮೇಲೆ ಹೊತ್ತುಕೊಂಡು ಮಾಡಿದ ಅವರು ಇಂದಲ್ಲಾ ನಾಳೆ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡೇ ಇದ್ದಾರೆ.

ಆದರೆ, ತನ್ನ ಹಿಂದೆ ಬೆರಳಣಿಕೆಯ ಶಾಸಕರನ್ನೂ ಹೊಂದಿಲ್ಲದಿರುವುದೇ ಅವರ ಸಮಸ್ಯೆ. ಅದರ ಜೊತೆಗೆ ‘ಬ್ಯಾಡ್‍ಬಾಯ್’ ಇಮೇಜ್ ಇನ್ನೂ ಇದ್ದು, ಕುಮಾರಸ್ವಾಮಿಗಿರುವ ಜನಾನುರಾಗಿ ಎಂದೋ ಅಥವಾ ಸಿದ್ದರಾಮಯ್ಯರಿಗಿರುವ ಮಾಸ್ ಲೀಡರ್ ಎಂಬ ಇಮೇಜೋ ಇಲ್ಲದಿರುವ ಕೊರತೆ ಇದೆ. ಕನಿಷ್ಠ ಒಕ್ಕಲಿಗರ ನಾಯಕ ಎಂಬ ಪಟ್ಟವಾದರೂ ಇರಲಿ ಎಂಬ ಕಾರಣಕ್ಕೆ ‘ಯಾವ ಕಾರಣಕ್ಕೂ ಕುಮಾರಸ್ವಾಮಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡುವುದಿಲ್ಲ’ ಎಂಬ ಮಾತನ್ನು ಪದೇ ಪದೇ ಹೇಳಿದ್ದಾರೆ.

ಇವೆಲ್ಲವೂ ಇಂದಲ್ಲಾ ನಾಳೆ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಏರಿಸುತ್ತದಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ರಮೇಶ್‍ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...