Homeಕರ್ನಾಟಕಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

- Advertisement -
- Advertisement -

ಸೋಫಿಟೆಲ್‍ನಿಂದ ರೆನೆಸಾನ್ಸ್ ಹೋಟೆಲ್‍ಗೆ ಶಿಫ್ಟ್ ಆಗಿದ್ದ ತೃಪ್ತರಾಗದ ಶಾಸಕರನ್ನು ಮಾತಾಡಿಸಿ ಕರೆದುಕೊಂಡೇ ಬರುತ್ತೇನೆಂದು ಹೊರಟ ಡಿ.ಕೆ.ಶಿವಕುಮಾರ್ ಸಾಧಿಸಿದ್ದೇನು? ಒಬ್ಬ ಶಾಸಕರನ್ನಾದರೂ ಕರೆದುಕೊಂಡು ಬರುವುದಿರಲಿ ಮಾತಾಡಿಸಲೂ ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರಿಗೆ ಏನು ಬೇಕೋ ಅದನ್ನು ಅವರು ಪಡೆದುಕೊಂಡಾಯಿತು. ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಇಂಗ್ಲಿಷ್ ಚಾನೆಲ್‍ಗಳೂ ಒಳಗೊಂಡಂತೆ ಮಾಧ್ಯಮದ ಕೇಂದ್ರಬಿಂದು ಡಿ.ಕೆ.ಶಿ ಅವರೇ ಆಗಿದ್ದರು. ಮಹಾರಾಷ್ಟ್ರದಲ್ಲಿ ಮತ್ತು ಇಂಗ್ಲಿಷಿನಲ್ಲಿ ವ್ಯವಹರಿಸುವ ಹಲವಾರು ಪ್ರಭಾವೀ ಟ್ವಿಟ್ಟಿಗರು ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿ ಬಿದ್ದರೆಂದರೆ, ಮುಂಬೈನ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಅವರಿಗೆ ಟ್ವಿಟ್ಟರ್ ನಲ್ಲೇ ಉತ್ತರಿಸಿ ಓಡಿ ಹೋಗಿ ಡಿಕೆಶಿ ಪಕ್ಕ ಕೂರಬೇಕಾಯಿತು. ಅಂತಿಮವಾಗಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೋಗುವಾಗ ಜೊತೆಯಲ್ಲಿ ಮಿಲಿಂದ್ ದೇವ್ರಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನಸೀಮ್ ಖಾನ್ ಸಹಾ ಇದ್ದರು.

ಖ್ಯಾತ ಪತ್ರಕರ್ತೆ ಸ್ವಾತಿ ಚತುರ್ವೇದಿ ಒಂದೇ ಸಮನೆ ಟ್ವೀಟ್ ಮಾಡುತ್ತಾ ಕಾಂಗ್ರೆಸ್ಸಿಗರನ್ನು ಕಾಡಿದರು. ರಾಹುಲ್‍ಗಾಂಧಿಗೂ ಟ್ಯಾಗ್ ಮಾಡಿ, ‘ಅಲ್ಲಿ ಒಬ್ಬಂಟಿಯಾಗಿ ಹೋರಾಡುತ್ತಿರುವ ಡಿ.ಕೆ.ಶಿವಕುಮಾರ್‍ರನ್ನು ನೋಡಿ ಕಲಿತುಕೊಳ್ಳಿ’ ಎಂದರು. ರಾಹುಲ್‍ಗಾಂಧಿಯ ಸ್ಥಾನದಲ್ಲಿ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗುವ ಹೆಸರುಗಳಲ್ಲಿ ಮಿಲಿಂದ್ ದೇವ್ರಾ ಹೆಸರೂ ಓಡುತ್ತಿತ್ತು. ಹಾಗಾಗಿ ರಾಷ್ಟ್ರೀಯ ಅಧ್ಯಕ್ಷರಾಗಬೇಕಾದವರು ಡಿ.ಕೆ.ಶಿವಕುಮಾರ್ ಥರದವರು; ಮಿಲಿಂದ್ ದೇವ್ರಾ ಅಲ್ಲ ಎಂದೆಲ್ಲಾ ಹೇಳಲಾಯಿತು.

ಇದಕ್ಕೆ ಮುಂಚೆ ಸ್ಪೀಕರ್‍ಗೆ 12 ಜನ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಬಂದಾಗಲೂ ವಿಧಾನಸೌಧಕ್ಕೆ ಓಡಿದ್ದ ಡಿಕೆಶಿ ಶಾಸಕ ಮುನಿರತ್ನರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಮರುದಿನ ಮುಂಬೈನ ಅದೇ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿಕೊಂಡು ವಿಮಾನ ಹತ್ತುವ ಮುಂಚೆಯೇ ‘ಮುಂಬೈಗೆ ಹೋಗಿ ಅವರನ್ನು ಕರೆತರುತ್ತೇನೆ’ ಎಂದು ಘೋಷಿಸಿದರು. ಹೋಟೆಲ್‍ನಲ್ಲಿದ್ದ ಶಾಸಕರನ್ನು ಡಿಕೆಶಿ ಭೇಟಿಯಾಗದಂತೆ ತಡೆಯಬೇಕೆಂದರೆ ಅವರಿಂದಲೇ ದೂರು ಪಡೆದುಕೊಳ್ಳಬೇಕು. ಬಿಜೆಪಿ ಅದನ್ನೂ ಮಾಡಿತು. ಮಧ್ಯರಾತ್ರಿ ಅಲ್ಲಿದ್ದ 10 ಶಾಸಕರಿಂದ ದೂರು ಬರೆಸಿಕೊಂಡು, ಮರುದಿನ ಅಲ್ಲಿನ ಡಿಸಿಪಿ ‘ಈ ಪತ್ರ ಇಲ್ಲದೇ ಇದ್ದರೆ ನಾವು ನಿಮ್ಮನ್ನು ತಡೆಯುತ್ತಿರಲಿಲ್ಲ’ ಎಂದು ಹೇಳಲು ಬೇಕಾದ ವ್ಯವಸ್ಥೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆಶಿ ಪರ ಬ್ಯಾಟಿಂಗ್ ಮಾಡಿದ ಸ್ವಾತಿ ಚತುರ್ವೇದಿ

ಅದೂ ಸಹಾ ಡಿಕೆಶಿಯ ಸಾಮಥ್ರ್ಯದ ಬಗೆಗಿನ ಇಮೇಜ್‍ ಅನ್ನು ಹೆಚ್ಚಿಸಿತೇ ಹೊರತು ಕಡಿಮೆ ಮಾಡಲಿಲ್ಲ. ಹೋಟೆಲ್ ಮುಂದೆ ಪೊಲೀಸರು ತಡೆದಾಗ ಶಿವಕುಮಾರ್ ವಾಪಸ್ ಹೋಗಲಿಲ್ಲ. ನಾನಿವತ್ತು ಇಲ್ಲೇ ಇದ್ದು ಕರೆದುಕೊಂಡೇ ಹೋಗುತ್ತೇನೆ ಎಂದರು. ಇಂಗ್ಲಿಷ್ ಮೀಡಿಯಾಗಳಿಗೆ ಮಾತನಾಡಿದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಡಿಕೆಶಿ ವಹಿಸಿದ್ದ ಪಾತ್ರದಿಂದ ‘ಟ್ರಬಲ್‍ಶೂಟರ್’ ಪಟ್ಟ ಗಿಟ್ಟಿಸಿಕೊಂಡಿದ್ದ ಅವರು ಮಧ್ಯೆ ಡಲ್ ಆಗಿದ್ದರು. ಈಗ ಮತ್ತೆ ಟ್ರಬಲ್‍ಶೂಟರ್ ಅಲ್ಲದಿದ್ದರೂ ಫೈಟರ್ ಎಂಬ ಇಮೇಜ್‍ಅನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಸ್ಥಾಪನೆ ಮಾಡಿಕೊಂಡರು.

2002ರಲ್ಲಿ ವಿಲಾಸರಾವ್ ದೇಶಮುಖ್ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ, 2017ರಲ್ಲಿ ಗುಜರಾತ್‍ನ ಎಂಎಲ್‍ಎಗಳು ಅಹ್ಮದ್ ಪಟೇಲ್‍ರಿಗೇ ರಾಜ್ಯಸಭಾ ಚುನಾವಣೆಯಲ್ಲಿ ಓಟು ಹಾಕುವಂತೆ ಮಾಡಲು ಶಾಸಕರನ್ನು ಕರ್ನಾಟಕಕ್ಕೇ ಕಳಿಸಿ ಡಿಕೆಶಿ ಸುಪರ್ದಿಗೆ ವಹಿಸಲಾಗಿತ್ತು. ಎಲ್ಲವನ್ನೂ ತಲೆ ಮೇಲೆ ಹೊತ್ತುಕೊಂಡು ಮಾಡಿದ ಅವರು ಇಂದಲ್ಲಾ ನಾಳೆ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡೇ ಇದ್ದಾರೆ.

ಆದರೆ, ತನ್ನ ಹಿಂದೆ ಬೆರಳಣಿಕೆಯ ಶಾಸಕರನ್ನೂ ಹೊಂದಿಲ್ಲದಿರುವುದೇ ಅವರ ಸಮಸ್ಯೆ. ಅದರ ಜೊತೆಗೆ ‘ಬ್ಯಾಡ್‍ಬಾಯ್’ ಇಮೇಜ್ ಇನ್ನೂ ಇದ್ದು, ಕುಮಾರಸ್ವಾಮಿಗಿರುವ ಜನಾನುರಾಗಿ ಎಂದೋ ಅಥವಾ ಸಿದ್ದರಾಮಯ್ಯರಿಗಿರುವ ಮಾಸ್ ಲೀಡರ್ ಎಂಬ ಇಮೇಜೋ ಇಲ್ಲದಿರುವ ಕೊರತೆ ಇದೆ. ಕನಿಷ್ಠ ಒಕ್ಕಲಿಗರ ನಾಯಕ ಎಂಬ ಪಟ್ಟವಾದರೂ ಇರಲಿ ಎಂಬ ಕಾರಣಕ್ಕೆ ‘ಯಾವ ಕಾರಣಕ್ಕೂ ಕುಮಾರಸ್ವಾಮಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡುವುದಿಲ್ಲ’ ಎಂಬ ಮಾತನ್ನು ಪದೇ ಪದೇ ಹೇಳಿದ್ದಾರೆ.

ಇವೆಲ್ಲವೂ ಇಂದಲ್ಲಾ ನಾಳೆ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಏರಿಸುತ್ತದಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ರಮೇಶ್‍ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...