Homeಕರ್ನಾಟಕಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

- Advertisement -
- Advertisement -

ಸೋಫಿಟೆಲ್‍ನಿಂದ ರೆನೆಸಾನ್ಸ್ ಹೋಟೆಲ್‍ಗೆ ಶಿಫ್ಟ್ ಆಗಿದ್ದ ತೃಪ್ತರಾಗದ ಶಾಸಕರನ್ನು ಮಾತಾಡಿಸಿ ಕರೆದುಕೊಂಡೇ ಬರುತ್ತೇನೆಂದು ಹೊರಟ ಡಿ.ಕೆ.ಶಿವಕುಮಾರ್ ಸಾಧಿಸಿದ್ದೇನು? ಒಬ್ಬ ಶಾಸಕರನ್ನಾದರೂ ಕರೆದುಕೊಂಡು ಬರುವುದಿರಲಿ ಮಾತಾಡಿಸಲೂ ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರಿಗೆ ಏನು ಬೇಕೋ ಅದನ್ನು ಅವರು ಪಡೆದುಕೊಂಡಾಯಿತು. ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಇಂಗ್ಲಿಷ್ ಚಾನೆಲ್‍ಗಳೂ ಒಳಗೊಂಡಂತೆ ಮಾಧ್ಯಮದ ಕೇಂದ್ರಬಿಂದು ಡಿ.ಕೆ.ಶಿ ಅವರೇ ಆಗಿದ್ದರು. ಮಹಾರಾಷ್ಟ್ರದಲ್ಲಿ ಮತ್ತು ಇಂಗ್ಲಿಷಿನಲ್ಲಿ ವ್ಯವಹರಿಸುವ ಹಲವಾರು ಪ್ರಭಾವೀ ಟ್ವಿಟ್ಟಿಗರು ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿ ಬಿದ್ದರೆಂದರೆ, ಮುಂಬೈನ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಅವರಿಗೆ ಟ್ವಿಟ್ಟರ್ ನಲ್ಲೇ ಉತ್ತರಿಸಿ ಓಡಿ ಹೋಗಿ ಡಿಕೆಶಿ ಪಕ್ಕ ಕೂರಬೇಕಾಯಿತು. ಅಂತಿಮವಾಗಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೋಗುವಾಗ ಜೊತೆಯಲ್ಲಿ ಮಿಲಿಂದ್ ದೇವ್ರಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನಸೀಮ್ ಖಾನ್ ಸಹಾ ಇದ್ದರು.

ಖ್ಯಾತ ಪತ್ರಕರ್ತೆ ಸ್ವಾತಿ ಚತುರ್ವೇದಿ ಒಂದೇ ಸಮನೆ ಟ್ವೀಟ್ ಮಾಡುತ್ತಾ ಕಾಂಗ್ರೆಸ್ಸಿಗರನ್ನು ಕಾಡಿದರು. ರಾಹುಲ್‍ಗಾಂಧಿಗೂ ಟ್ಯಾಗ್ ಮಾಡಿ, ‘ಅಲ್ಲಿ ಒಬ್ಬಂಟಿಯಾಗಿ ಹೋರಾಡುತ್ತಿರುವ ಡಿ.ಕೆ.ಶಿವಕುಮಾರ್‍ರನ್ನು ನೋಡಿ ಕಲಿತುಕೊಳ್ಳಿ’ ಎಂದರು. ರಾಹುಲ್‍ಗಾಂಧಿಯ ಸ್ಥಾನದಲ್ಲಿ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗುವ ಹೆಸರುಗಳಲ್ಲಿ ಮಿಲಿಂದ್ ದೇವ್ರಾ ಹೆಸರೂ ಓಡುತ್ತಿತ್ತು. ಹಾಗಾಗಿ ರಾಷ್ಟ್ರೀಯ ಅಧ್ಯಕ್ಷರಾಗಬೇಕಾದವರು ಡಿ.ಕೆ.ಶಿವಕುಮಾರ್ ಥರದವರು; ಮಿಲಿಂದ್ ದೇವ್ರಾ ಅಲ್ಲ ಎಂದೆಲ್ಲಾ ಹೇಳಲಾಯಿತು.

ಇದಕ್ಕೆ ಮುಂಚೆ ಸ್ಪೀಕರ್‍ಗೆ 12 ಜನ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಬಂದಾಗಲೂ ವಿಧಾನಸೌಧಕ್ಕೆ ಓಡಿದ್ದ ಡಿಕೆಶಿ ಶಾಸಕ ಮುನಿರತ್ನರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಮರುದಿನ ಮುಂಬೈನ ಅದೇ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿಕೊಂಡು ವಿಮಾನ ಹತ್ತುವ ಮುಂಚೆಯೇ ‘ಮುಂಬೈಗೆ ಹೋಗಿ ಅವರನ್ನು ಕರೆತರುತ್ತೇನೆ’ ಎಂದು ಘೋಷಿಸಿದರು. ಹೋಟೆಲ್‍ನಲ್ಲಿದ್ದ ಶಾಸಕರನ್ನು ಡಿಕೆಶಿ ಭೇಟಿಯಾಗದಂತೆ ತಡೆಯಬೇಕೆಂದರೆ ಅವರಿಂದಲೇ ದೂರು ಪಡೆದುಕೊಳ್ಳಬೇಕು. ಬಿಜೆಪಿ ಅದನ್ನೂ ಮಾಡಿತು. ಮಧ್ಯರಾತ್ರಿ ಅಲ್ಲಿದ್ದ 10 ಶಾಸಕರಿಂದ ದೂರು ಬರೆಸಿಕೊಂಡು, ಮರುದಿನ ಅಲ್ಲಿನ ಡಿಸಿಪಿ ‘ಈ ಪತ್ರ ಇಲ್ಲದೇ ಇದ್ದರೆ ನಾವು ನಿಮ್ಮನ್ನು ತಡೆಯುತ್ತಿರಲಿಲ್ಲ’ ಎಂದು ಹೇಳಲು ಬೇಕಾದ ವ್ಯವಸ್ಥೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆಶಿ ಪರ ಬ್ಯಾಟಿಂಗ್ ಮಾಡಿದ ಸ್ವಾತಿ ಚತುರ್ವೇದಿ

ಅದೂ ಸಹಾ ಡಿಕೆಶಿಯ ಸಾಮಥ್ರ್ಯದ ಬಗೆಗಿನ ಇಮೇಜ್‍ ಅನ್ನು ಹೆಚ್ಚಿಸಿತೇ ಹೊರತು ಕಡಿಮೆ ಮಾಡಲಿಲ್ಲ. ಹೋಟೆಲ್ ಮುಂದೆ ಪೊಲೀಸರು ತಡೆದಾಗ ಶಿವಕುಮಾರ್ ವಾಪಸ್ ಹೋಗಲಿಲ್ಲ. ನಾನಿವತ್ತು ಇಲ್ಲೇ ಇದ್ದು ಕರೆದುಕೊಂಡೇ ಹೋಗುತ್ತೇನೆ ಎಂದರು. ಇಂಗ್ಲಿಷ್ ಮೀಡಿಯಾಗಳಿಗೆ ಮಾತನಾಡಿದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಡಿಕೆಶಿ ವಹಿಸಿದ್ದ ಪಾತ್ರದಿಂದ ‘ಟ್ರಬಲ್‍ಶೂಟರ್’ ಪಟ್ಟ ಗಿಟ್ಟಿಸಿಕೊಂಡಿದ್ದ ಅವರು ಮಧ್ಯೆ ಡಲ್ ಆಗಿದ್ದರು. ಈಗ ಮತ್ತೆ ಟ್ರಬಲ್‍ಶೂಟರ್ ಅಲ್ಲದಿದ್ದರೂ ಫೈಟರ್ ಎಂಬ ಇಮೇಜ್‍ಅನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಸ್ಥಾಪನೆ ಮಾಡಿಕೊಂಡರು.

2002ರಲ್ಲಿ ವಿಲಾಸರಾವ್ ದೇಶಮುಖ್ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ, 2017ರಲ್ಲಿ ಗುಜರಾತ್‍ನ ಎಂಎಲ್‍ಎಗಳು ಅಹ್ಮದ್ ಪಟೇಲ್‍ರಿಗೇ ರಾಜ್ಯಸಭಾ ಚುನಾವಣೆಯಲ್ಲಿ ಓಟು ಹಾಕುವಂತೆ ಮಾಡಲು ಶಾಸಕರನ್ನು ಕರ್ನಾಟಕಕ್ಕೇ ಕಳಿಸಿ ಡಿಕೆಶಿ ಸುಪರ್ದಿಗೆ ವಹಿಸಲಾಗಿತ್ತು. ಎಲ್ಲವನ್ನೂ ತಲೆ ಮೇಲೆ ಹೊತ್ತುಕೊಂಡು ಮಾಡಿದ ಅವರು ಇಂದಲ್ಲಾ ನಾಳೆ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡೇ ಇದ್ದಾರೆ.

ಆದರೆ, ತನ್ನ ಹಿಂದೆ ಬೆರಳಣಿಕೆಯ ಶಾಸಕರನ್ನೂ ಹೊಂದಿಲ್ಲದಿರುವುದೇ ಅವರ ಸಮಸ್ಯೆ. ಅದರ ಜೊತೆಗೆ ‘ಬ್ಯಾಡ್‍ಬಾಯ್’ ಇಮೇಜ್ ಇನ್ನೂ ಇದ್ದು, ಕುಮಾರಸ್ವಾಮಿಗಿರುವ ಜನಾನುರಾಗಿ ಎಂದೋ ಅಥವಾ ಸಿದ್ದರಾಮಯ್ಯರಿಗಿರುವ ಮಾಸ್ ಲೀಡರ್ ಎಂಬ ಇಮೇಜೋ ಇಲ್ಲದಿರುವ ಕೊರತೆ ಇದೆ. ಕನಿಷ್ಠ ಒಕ್ಕಲಿಗರ ನಾಯಕ ಎಂಬ ಪಟ್ಟವಾದರೂ ಇರಲಿ ಎಂಬ ಕಾರಣಕ್ಕೆ ‘ಯಾವ ಕಾರಣಕ್ಕೂ ಕುಮಾರಸ್ವಾಮಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡುವುದಿಲ್ಲ’ ಎಂಬ ಮಾತನ್ನು ಪದೇ ಪದೇ ಹೇಳಿದ್ದಾರೆ.

ಇವೆಲ್ಲವೂ ಇಂದಲ್ಲಾ ನಾಳೆ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಏರಿಸುತ್ತದಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ರಮೇಶ್‍ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...