Homeಕರ್ನಾಟಕಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

- Advertisement -
- Advertisement -

ಸೋಫಿಟೆಲ್‍ನಿಂದ ರೆನೆಸಾನ್ಸ್ ಹೋಟೆಲ್‍ಗೆ ಶಿಫ್ಟ್ ಆಗಿದ್ದ ತೃಪ್ತರಾಗದ ಶಾಸಕರನ್ನು ಮಾತಾಡಿಸಿ ಕರೆದುಕೊಂಡೇ ಬರುತ್ತೇನೆಂದು ಹೊರಟ ಡಿ.ಕೆ.ಶಿವಕುಮಾರ್ ಸಾಧಿಸಿದ್ದೇನು? ಒಬ್ಬ ಶಾಸಕರನ್ನಾದರೂ ಕರೆದುಕೊಂಡು ಬರುವುದಿರಲಿ ಮಾತಾಡಿಸಲೂ ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರಿಗೆ ಏನು ಬೇಕೋ ಅದನ್ನು ಅವರು ಪಡೆದುಕೊಂಡಾಯಿತು. ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಇಂಗ್ಲಿಷ್ ಚಾನೆಲ್‍ಗಳೂ ಒಳಗೊಂಡಂತೆ ಮಾಧ್ಯಮದ ಕೇಂದ್ರಬಿಂದು ಡಿ.ಕೆ.ಶಿ ಅವರೇ ಆಗಿದ್ದರು. ಮಹಾರಾಷ್ಟ್ರದಲ್ಲಿ ಮತ್ತು ಇಂಗ್ಲಿಷಿನಲ್ಲಿ ವ್ಯವಹರಿಸುವ ಹಲವಾರು ಪ್ರಭಾವೀ ಟ್ವಿಟ್ಟಿಗರು ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿ ಬಿದ್ದರೆಂದರೆ, ಮುಂಬೈನ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಅವರಿಗೆ ಟ್ವಿಟ್ಟರ್ ನಲ್ಲೇ ಉತ್ತರಿಸಿ ಓಡಿ ಹೋಗಿ ಡಿಕೆಶಿ ಪಕ್ಕ ಕೂರಬೇಕಾಯಿತು. ಅಂತಿಮವಾಗಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೋಗುವಾಗ ಜೊತೆಯಲ್ಲಿ ಮಿಲಿಂದ್ ದೇವ್ರಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನಸೀಮ್ ಖಾನ್ ಸಹಾ ಇದ್ದರು.

ಖ್ಯಾತ ಪತ್ರಕರ್ತೆ ಸ್ವಾತಿ ಚತುರ್ವೇದಿ ಒಂದೇ ಸಮನೆ ಟ್ವೀಟ್ ಮಾಡುತ್ತಾ ಕಾಂಗ್ರೆಸ್ಸಿಗರನ್ನು ಕಾಡಿದರು. ರಾಹುಲ್‍ಗಾಂಧಿಗೂ ಟ್ಯಾಗ್ ಮಾಡಿ, ‘ಅಲ್ಲಿ ಒಬ್ಬಂಟಿಯಾಗಿ ಹೋರಾಡುತ್ತಿರುವ ಡಿ.ಕೆ.ಶಿವಕುಮಾರ್‍ರನ್ನು ನೋಡಿ ಕಲಿತುಕೊಳ್ಳಿ’ ಎಂದರು. ರಾಹುಲ್‍ಗಾಂಧಿಯ ಸ್ಥಾನದಲ್ಲಿ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗುವ ಹೆಸರುಗಳಲ್ಲಿ ಮಿಲಿಂದ್ ದೇವ್ರಾ ಹೆಸರೂ ಓಡುತ್ತಿತ್ತು. ಹಾಗಾಗಿ ರಾಷ್ಟ್ರೀಯ ಅಧ್ಯಕ್ಷರಾಗಬೇಕಾದವರು ಡಿ.ಕೆ.ಶಿವಕುಮಾರ್ ಥರದವರು; ಮಿಲಿಂದ್ ದೇವ್ರಾ ಅಲ್ಲ ಎಂದೆಲ್ಲಾ ಹೇಳಲಾಯಿತು.

ಇದಕ್ಕೆ ಮುಂಚೆ ಸ್ಪೀಕರ್‍ಗೆ 12 ಜನ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಬಂದಾಗಲೂ ವಿಧಾನಸೌಧಕ್ಕೆ ಓಡಿದ್ದ ಡಿಕೆಶಿ ಶಾಸಕ ಮುನಿರತ್ನರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಮರುದಿನ ಮುಂಬೈನ ಅದೇ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿಕೊಂಡು ವಿಮಾನ ಹತ್ತುವ ಮುಂಚೆಯೇ ‘ಮುಂಬೈಗೆ ಹೋಗಿ ಅವರನ್ನು ಕರೆತರುತ್ತೇನೆ’ ಎಂದು ಘೋಷಿಸಿದರು. ಹೋಟೆಲ್‍ನಲ್ಲಿದ್ದ ಶಾಸಕರನ್ನು ಡಿಕೆಶಿ ಭೇಟಿಯಾಗದಂತೆ ತಡೆಯಬೇಕೆಂದರೆ ಅವರಿಂದಲೇ ದೂರು ಪಡೆದುಕೊಳ್ಳಬೇಕು. ಬಿಜೆಪಿ ಅದನ್ನೂ ಮಾಡಿತು. ಮಧ್ಯರಾತ್ರಿ ಅಲ್ಲಿದ್ದ 10 ಶಾಸಕರಿಂದ ದೂರು ಬರೆಸಿಕೊಂಡು, ಮರುದಿನ ಅಲ್ಲಿನ ಡಿಸಿಪಿ ‘ಈ ಪತ್ರ ಇಲ್ಲದೇ ಇದ್ದರೆ ನಾವು ನಿಮ್ಮನ್ನು ತಡೆಯುತ್ತಿರಲಿಲ್ಲ’ ಎಂದು ಹೇಳಲು ಬೇಕಾದ ವ್ಯವಸ್ಥೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆಶಿ ಪರ ಬ್ಯಾಟಿಂಗ್ ಮಾಡಿದ ಸ್ವಾತಿ ಚತುರ್ವೇದಿ

ಅದೂ ಸಹಾ ಡಿಕೆಶಿಯ ಸಾಮಥ್ರ್ಯದ ಬಗೆಗಿನ ಇಮೇಜ್‍ ಅನ್ನು ಹೆಚ್ಚಿಸಿತೇ ಹೊರತು ಕಡಿಮೆ ಮಾಡಲಿಲ್ಲ. ಹೋಟೆಲ್ ಮುಂದೆ ಪೊಲೀಸರು ತಡೆದಾಗ ಶಿವಕುಮಾರ್ ವಾಪಸ್ ಹೋಗಲಿಲ್ಲ. ನಾನಿವತ್ತು ಇಲ್ಲೇ ಇದ್ದು ಕರೆದುಕೊಂಡೇ ಹೋಗುತ್ತೇನೆ ಎಂದರು. ಇಂಗ್ಲಿಷ್ ಮೀಡಿಯಾಗಳಿಗೆ ಮಾತನಾಡಿದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಡಿಕೆಶಿ ವಹಿಸಿದ್ದ ಪಾತ್ರದಿಂದ ‘ಟ್ರಬಲ್‍ಶೂಟರ್’ ಪಟ್ಟ ಗಿಟ್ಟಿಸಿಕೊಂಡಿದ್ದ ಅವರು ಮಧ್ಯೆ ಡಲ್ ಆಗಿದ್ದರು. ಈಗ ಮತ್ತೆ ಟ್ರಬಲ್‍ಶೂಟರ್ ಅಲ್ಲದಿದ್ದರೂ ಫೈಟರ್ ಎಂಬ ಇಮೇಜ್‍ಅನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಸ್ಥಾಪನೆ ಮಾಡಿಕೊಂಡರು.

2002ರಲ್ಲಿ ವಿಲಾಸರಾವ್ ದೇಶಮುಖ್ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ, 2017ರಲ್ಲಿ ಗುಜರಾತ್‍ನ ಎಂಎಲ್‍ಎಗಳು ಅಹ್ಮದ್ ಪಟೇಲ್‍ರಿಗೇ ರಾಜ್ಯಸಭಾ ಚುನಾವಣೆಯಲ್ಲಿ ಓಟು ಹಾಕುವಂತೆ ಮಾಡಲು ಶಾಸಕರನ್ನು ಕರ್ನಾಟಕಕ್ಕೇ ಕಳಿಸಿ ಡಿಕೆಶಿ ಸುಪರ್ದಿಗೆ ವಹಿಸಲಾಗಿತ್ತು. ಎಲ್ಲವನ್ನೂ ತಲೆ ಮೇಲೆ ಹೊತ್ತುಕೊಂಡು ಮಾಡಿದ ಅವರು ಇಂದಲ್ಲಾ ನಾಳೆ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡೇ ಇದ್ದಾರೆ.

ಆದರೆ, ತನ್ನ ಹಿಂದೆ ಬೆರಳಣಿಕೆಯ ಶಾಸಕರನ್ನೂ ಹೊಂದಿಲ್ಲದಿರುವುದೇ ಅವರ ಸಮಸ್ಯೆ. ಅದರ ಜೊತೆಗೆ ‘ಬ್ಯಾಡ್‍ಬಾಯ್’ ಇಮೇಜ್ ಇನ್ನೂ ಇದ್ದು, ಕುಮಾರಸ್ವಾಮಿಗಿರುವ ಜನಾನುರಾಗಿ ಎಂದೋ ಅಥವಾ ಸಿದ್ದರಾಮಯ್ಯರಿಗಿರುವ ಮಾಸ್ ಲೀಡರ್ ಎಂಬ ಇಮೇಜೋ ಇಲ್ಲದಿರುವ ಕೊರತೆ ಇದೆ. ಕನಿಷ್ಠ ಒಕ್ಕಲಿಗರ ನಾಯಕ ಎಂಬ ಪಟ್ಟವಾದರೂ ಇರಲಿ ಎಂಬ ಕಾರಣಕ್ಕೆ ‘ಯಾವ ಕಾರಣಕ್ಕೂ ಕುಮಾರಸ್ವಾಮಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡುವುದಿಲ್ಲ’ ಎಂಬ ಮಾತನ್ನು ಪದೇ ಪದೇ ಹೇಳಿದ್ದಾರೆ.

ಇವೆಲ್ಲವೂ ಇಂದಲ್ಲಾ ನಾಳೆ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಏರಿಸುತ್ತದಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ರಮೇಶ್‍ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...