Homeಕರ್ನಾಟಕಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

- Advertisement -
- Advertisement -

ಸೋಫಿಟೆಲ್‍ನಿಂದ ರೆನೆಸಾನ್ಸ್ ಹೋಟೆಲ್‍ಗೆ ಶಿಫ್ಟ್ ಆಗಿದ್ದ ತೃಪ್ತರಾಗದ ಶಾಸಕರನ್ನು ಮಾತಾಡಿಸಿ ಕರೆದುಕೊಂಡೇ ಬರುತ್ತೇನೆಂದು ಹೊರಟ ಡಿ.ಕೆ.ಶಿವಕುಮಾರ್ ಸಾಧಿಸಿದ್ದೇನು? ಒಬ್ಬ ಶಾಸಕರನ್ನಾದರೂ ಕರೆದುಕೊಂಡು ಬರುವುದಿರಲಿ ಮಾತಾಡಿಸಲೂ ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರಿಗೆ ಏನು ಬೇಕೋ ಅದನ್ನು ಅವರು ಪಡೆದುಕೊಂಡಾಯಿತು. ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಇಂಗ್ಲಿಷ್ ಚಾನೆಲ್‍ಗಳೂ ಒಳಗೊಂಡಂತೆ ಮಾಧ್ಯಮದ ಕೇಂದ್ರಬಿಂದು ಡಿ.ಕೆ.ಶಿ ಅವರೇ ಆಗಿದ್ದರು. ಮಹಾರಾಷ್ಟ್ರದಲ್ಲಿ ಮತ್ತು ಇಂಗ್ಲಿಷಿನಲ್ಲಿ ವ್ಯವಹರಿಸುವ ಹಲವಾರು ಪ್ರಭಾವೀ ಟ್ವಿಟ್ಟಿಗರು ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿ ಬಿದ್ದರೆಂದರೆ, ಮುಂಬೈನ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಅವರಿಗೆ ಟ್ವಿಟ್ಟರ್ ನಲ್ಲೇ ಉತ್ತರಿಸಿ ಓಡಿ ಹೋಗಿ ಡಿಕೆಶಿ ಪಕ್ಕ ಕೂರಬೇಕಾಯಿತು. ಅಂತಿಮವಾಗಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೋಗುವಾಗ ಜೊತೆಯಲ್ಲಿ ಮಿಲಿಂದ್ ದೇವ್ರಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನಸೀಮ್ ಖಾನ್ ಸಹಾ ಇದ್ದರು.

ಖ್ಯಾತ ಪತ್ರಕರ್ತೆ ಸ್ವಾತಿ ಚತುರ್ವೇದಿ ಒಂದೇ ಸಮನೆ ಟ್ವೀಟ್ ಮಾಡುತ್ತಾ ಕಾಂಗ್ರೆಸ್ಸಿಗರನ್ನು ಕಾಡಿದರು. ರಾಹುಲ್‍ಗಾಂಧಿಗೂ ಟ್ಯಾಗ್ ಮಾಡಿ, ‘ಅಲ್ಲಿ ಒಬ್ಬಂಟಿಯಾಗಿ ಹೋರಾಡುತ್ತಿರುವ ಡಿ.ಕೆ.ಶಿವಕುಮಾರ್‍ರನ್ನು ನೋಡಿ ಕಲಿತುಕೊಳ್ಳಿ’ ಎಂದರು. ರಾಹುಲ್‍ಗಾಂಧಿಯ ಸ್ಥಾನದಲ್ಲಿ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗುವ ಹೆಸರುಗಳಲ್ಲಿ ಮಿಲಿಂದ್ ದೇವ್ರಾ ಹೆಸರೂ ಓಡುತ್ತಿತ್ತು. ಹಾಗಾಗಿ ರಾಷ್ಟ್ರೀಯ ಅಧ್ಯಕ್ಷರಾಗಬೇಕಾದವರು ಡಿ.ಕೆ.ಶಿವಕುಮಾರ್ ಥರದವರು; ಮಿಲಿಂದ್ ದೇವ್ರಾ ಅಲ್ಲ ಎಂದೆಲ್ಲಾ ಹೇಳಲಾಯಿತು.

ಇದಕ್ಕೆ ಮುಂಚೆ ಸ್ಪೀಕರ್‍ಗೆ 12 ಜನ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಬಂದಾಗಲೂ ವಿಧಾನಸೌಧಕ್ಕೆ ಓಡಿದ್ದ ಡಿಕೆಶಿ ಶಾಸಕ ಮುನಿರತ್ನರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಮರುದಿನ ಮುಂಬೈನ ಅದೇ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿಕೊಂಡು ವಿಮಾನ ಹತ್ತುವ ಮುಂಚೆಯೇ ‘ಮುಂಬೈಗೆ ಹೋಗಿ ಅವರನ್ನು ಕರೆತರುತ್ತೇನೆ’ ಎಂದು ಘೋಷಿಸಿದರು. ಹೋಟೆಲ್‍ನಲ್ಲಿದ್ದ ಶಾಸಕರನ್ನು ಡಿಕೆಶಿ ಭೇಟಿಯಾಗದಂತೆ ತಡೆಯಬೇಕೆಂದರೆ ಅವರಿಂದಲೇ ದೂರು ಪಡೆದುಕೊಳ್ಳಬೇಕು. ಬಿಜೆಪಿ ಅದನ್ನೂ ಮಾಡಿತು. ಮಧ್ಯರಾತ್ರಿ ಅಲ್ಲಿದ್ದ 10 ಶಾಸಕರಿಂದ ದೂರು ಬರೆಸಿಕೊಂಡು, ಮರುದಿನ ಅಲ್ಲಿನ ಡಿಸಿಪಿ ‘ಈ ಪತ್ರ ಇಲ್ಲದೇ ಇದ್ದರೆ ನಾವು ನಿಮ್ಮನ್ನು ತಡೆಯುತ್ತಿರಲಿಲ್ಲ’ ಎಂದು ಹೇಳಲು ಬೇಕಾದ ವ್ಯವಸ್ಥೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆಶಿ ಪರ ಬ್ಯಾಟಿಂಗ್ ಮಾಡಿದ ಸ್ವಾತಿ ಚತುರ್ವೇದಿ

ಅದೂ ಸಹಾ ಡಿಕೆಶಿಯ ಸಾಮಥ್ರ್ಯದ ಬಗೆಗಿನ ಇಮೇಜ್‍ ಅನ್ನು ಹೆಚ್ಚಿಸಿತೇ ಹೊರತು ಕಡಿಮೆ ಮಾಡಲಿಲ್ಲ. ಹೋಟೆಲ್ ಮುಂದೆ ಪೊಲೀಸರು ತಡೆದಾಗ ಶಿವಕುಮಾರ್ ವಾಪಸ್ ಹೋಗಲಿಲ್ಲ. ನಾನಿವತ್ತು ಇಲ್ಲೇ ಇದ್ದು ಕರೆದುಕೊಂಡೇ ಹೋಗುತ್ತೇನೆ ಎಂದರು. ಇಂಗ್ಲಿಷ್ ಮೀಡಿಯಾಗಳಿಗೆ ಮಾತನಾಡಿದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಡಿಕೆಶಿ ವಹಿಸಿದ್ದ ಪಾತ್ರದಿಂದ ‘ಟ್ರಬಲ್‍ಶೂಟರ್’ ಪಟ್ಟ ಗಿಟ್ಟಿಸಿಕೊಂಡಿದ್ದ ಅವರು ಮಧ್ಯೆ ಡಲ್ ಆಗಿದ್ದರು. ಈಗ ಮತ್ತೆ ಟ್ರಬಲ್‍ಶೂಟರ್ ಅಲ್ಲದಿದ್ದರೂ ಫೈಟರ್ ಎಂಬ ಇಮೇಜ್‍ಅನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಸ್ಥಾಪನೆ ಮಾಡಿಕೊಂಡರು.

2002ರಲ್ಲಿ ವಿಲಾಸರಾವ್ ದೇಶಮುಖ್ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ, 2017ರಲ್ಲಿ ಗುಜರಾತ್‍ನ ಎಂಎಲ್‍ಎಗಳು ಅಹ್ಮದ್ ಪಟೇಲ್‍ರಿಗೇ ರಾಜ್ಯಸಭಾ ಚುನಾವಣೆಯಲ್ಲಿ ಓಟು ಹಾಕುವಂತೆ ಮಾಡಲು ಶಾಸಕರನ್ನು ಕರ್ನಾಟಕಕ್ಕೇ ಕಳಿಸಿ ಡಿಕೆಶಿ ಸುಪರ್ದಿಗೆ ವಹಿಸಲಾಗಿತ್ತು. ಎಲ್ಲವನ್ನೂ ತಲೆ ಮೇಲೆ ಹೊತ್ತುಕೊಂಡು ಮಾಡಿದ ಅವರು ಇಂದಲ್ಲಾ ನಾಳೆ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡೇ ಇದ್ದಾರೆ.

ಆದರೆ, ತನ್ನ ಹಿಂದೆ ಬೆರಳಣಿಕೆಯ ಶಾಸಕರನ್ನೂ ಹೊಂದಿಲ್ಲದಿರುವುದೇ ಅವರ ಸಮಸ್ಯೆ. ಅದರ ಜೊತೆಗೆ ‘ಬ್ಯಾಡ್‍ಬಾಯ್’ ಇಮೇಜ್ ಇನ್ನೂ ಇದ್ದು, ಕುಮಾರಸ್ವಾಮಿಗಿರುವ ಜನಾನುರಾಗಿ ಎಂದೋ ಅಥವಾ ಸಿದ್ದರಾಮಯ್ಯರಿಗಿರುವ ಮಾಸ್ ಲೀಡರ್ ಎಂಬ ಇಮೇಜೋ ಇಲ್ಲದಿರುವ ಕೊರತೆ ಇದೆ. ಕನಿಷ್ಠ ಒಕ್ಕಲಿಗರ ನಾಯಕ ಎಂಬ ಪಟ್ಟವಾದರೂ ಇರಲಿ ಎಂಬ ಕಾರಣಕ್ಕೆ ‘ಯಾವ ಕಾರಣಕ್ಕೂ ಕುಮಾರಸ್ವಾಮಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡುವುದಿಲ್ಲ’ ಎಂಬ ಮಾತನ್ನು ಪದೇ ಪದೇ ಹೇಳಿದ್ದಾರೆ.

ಇವೆಲ್ಲವೂ ಇಂದಲ್ಲಾ ನಾಳೆ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಏರಿಸುತ್ತದಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ರಮೇಶ್‍ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...