Homeಕರ್ನಾಟಕಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

- Advertisement -
- Advertisement -

ಸೋಫಿಟೆಲ್‍ನಿಂದ ರೆನೆಸಾನ್ಸ್ ಹೋಟೆಲ್‍ಗೆ ಶಿಫ್ಟ್ ಆಗಿದ್ದ ತೃಪ್ತರಾಗದ ಶಾಸಕರನ್ನು ಮಾತಾಡಿಸಿ ಕರೆದುಕೊಂಡೇ ಬರುತ್ತೇನೆಂದು ಹೊರಟ ಡಿ.ಕೆ.ಶಿವಕುಮಾರ್ ಸಾಧಿಸಿದ್ದೇನು? ಒಬ್ಬ ಶಾಸಕರನ್ನಾದರೂ ಕರೆದುಕೊಂಡು ಬರುವುದಿರಲಿ ಮಾತಾಡಿಸಲೂ ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರಿಗೆ ಏನು ಬೇಕೋ ಅದನ್ನು ಅವರು ಪಡೆದುಕೊಂಡಾಯಿತು. ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಇಂಗ್ಲಿಷ್ ಚಾನೆಲ್‍ಗಳೂ ಒಳಗೊಂಡಂತೆ ಮಾಧ್ಯಮದ ಕೇಂದ್ರಬಿಂದು ಡಿ.ಕೆ.ಶಿ ಅವರೇ ಆಗಿದ್ದರು. ಮಹಾರಾಷ್ಟ್ರದಲ್ಲಿ ಮತ್ತು ಇಂಗ್ಲಿಷಿನಲ್ಲಿ ವ್ಯವಹರಿಸುವ ಹಲವಾರು ಪ್ರಭಾವೀ ಟ್ವಿಟ್ಟಿಗರು ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿ ಬಿದ್ದರೆಂದರೆ, ಮುಂಬೈನ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಅವರಿಗೆ ಟ್ವಿಟ್ಟರ್ ನಲ್ಲೇ ಉತ್ತರಿಸಿ ಓಡಿ ಹೋಗಿ ಡಿಕೆಶಿ ಪಕ್ಕ ಕೂರಬೇಕಾಯಿತು. ಅಂತಿಮವಾಗಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೋಗುವಾಗ ಜೊತೆಯಲ್ಲಿ ಮಿಲಿಂದ್ ದೇವ್ರಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನಸೀಮ್ ಖಾನ್ ಸಹಾ ಇದ್ದರು.

ಖ್ಯಾತ ಪತ್ರಕರ್ತೆ ಸ್ವಾತಿ ಚತುರ್ವೇದಿ ಒಂದೇ ಸಮನೆ ಟ್ವೀಟ್ ಮಾಡುತ್ತಾ ಕಾಂಗ್ರೆಸ್ಸಿಗರನ್ನು ಕಾಡಿದರು. ರಾಹುಲ್‍ಗಾಂಧಿಗೂ ಟ್ಯಾಗ್ ಮಾಡಿ, ‘ಅಲ್ಲಿ ಒಬ್ಬಂಟಿಯಾಗಿ ಹೋರಾಡುತ್ತಿರುವ ಡಿ.ಕೆ.ಶಿವಕುಮಾರ್‍ರನ್ನು ನೋಡಿ ಕಲಿತುಕೊಳ್ಳಿ’ ಎಂದರು. ರಾಹುಲ್‍ಗಾಂಧಿಯ ಸ್ಥಾನದಲ್ಲಿ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗುವ ಹೆಸರುಗಳಲ್ಲಿ ಮಿಲಿಂದ್ ದೇವ್ರಾ ಹೆಸರೂ ಓಡುತ್ತಿತ್ತು. ಹಾಗಾಗಿ ರಾಷ್ಟ್ರೀಯ ಅಧ್ಯಕ್ಷರಾಗಬೇಕಾದವರು ಡಿ.ಕೆ.ಶಿವಕುಮಾರ್ ಥರದವರು; ಮಿಲಿಂದ್ ದೇವ್ರಾ ಅಲ್ಲ ಎಂದೆಲ್ಲಾ ಹೇಳಲಾಯಿತು.

ಇದಕ್ಕೆ ಮುಂಚೆ ಸ್ಪೀಕರ್‍ಗೆ 12 ಜನ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಬಂದಾಗಲೂ ವಿಧಾನಸೌಧಕ್ಕೆ ಓಡಿದ್ದ ಡಿಕೆಶಿ ಶಾಸಕ ಮುನಿರತ್ನರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಮರುದಿನ ಮುಂಬೈನ ಅದೇ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿಕೊಂಡು ವಿಮಾನ ಹತ್ತುವ ಮುಂಚೆಯೇ ‘ಮುಂಬೈಗೆ ಹೋಗಿ ಅವರನ್ನು ಕರೆತರುತ್ತೇನೆ’ ಎಂದು ಘೋಷಿಸಿದರು. ಹೋಟೆಲ್‍ನಲ್ಲಿದ್ದ ಶಾಸಕರನ್ನು ಡಿಕೆಶಿ ಭೇಟಿಯಾಗದಂತೆ ತಡೆಯಬೇಕೆಂದರೆ ಅವರಿಂದಲೇ ದೂರು ಪಡೆದುಕೊಳ್ಳಬೇಕು. ಬಿಜೆಪಿ ಅದನ್ನೂ ಮಾಡಿತು. ಮಧ್ಯರಾತ್ರಿ ಅಲ್ಲಿದ್ದ 10 ಶಾಸಕರಿಂದ ದೂರು ಬರೆಸಿಕೊಂಡು, ಮರುದಿನ ಅಲ್ಲಿನ ಡಿಸಿಪಿ ‘ಈ ಪತ್ರ ಇಲ್ಲದೇ ಇದ್ದರೆ ನಾವು ನಿಮ್ಮನ್ನು ತಡೆಯುತ್ತಿರಲಿಲ್ಲ’ ಎಂದು ಹೇಳಲು ಬೇಕಾದ ವ್ಯವಸ್ಥೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆಶಿ ಪರ ಬ್ಯಾಟಿಂಗ್ ಮಾಡಿದ ಸ್ವಾತಿ ಚತುರ್ವೇದಿ

ಅದೂ ಸಹಾ ಡಿಕೆಶಿಯ ಸಾಮಥ್ರ್ಯದ ಬಗೆಗಿನ ಇಮೇಜ್‍ ಅನ್ನು ಹೆಚ್ಚಿಸಿತೇ ಹೊರತು ಕಡಿಮೆ ಮಾಡಲಿಲ್ಲ. ಹೋಟೆಲ್ ಮುಂದೆ ಪೊಲೀಸರು ತಡೆದಾಗ ಶಿವಕುಮಾರ್ ವಾಪಸ್ ಹೋಗಲಿಲ್ಲ. ನಾನಿವತ್ತು ಇಲ್ಲೇ ಇದ್ದು ಕರೆದುಕೊಂಡೇ ಹೋಗುತ್ತೇನೆ ಎಂದರು. ಇಂಗ್ಲಿಷ್ ಮೀಡಿಯಾಗಳಿಗೆ ಮಾತನಾಡಿದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಡಿಕೆಶಿ ವಹಿಸಿದ್ದ ಪಾತ್ರದಿಂದ ‘ಟ್ರಬಲ್‍ಶೂಟರ್’ ಪಟ್ಟ ಗಿಟ್ಟಿಸಿಕೊಂಡಿದ್ದ ಅವರು ಮಧ್ಯೆ ಡಲ್ ಆಗಿದ್ದರು. ಈಗ ಮತ್ತೆ ಟ್ರಬಲ್‍ಶೂಟರ್ ಅಲ್ಲದಿದ್ದರೂ ಫೈಟರ್ ಎಂಬ ಇಮೇಜ್‍ಅನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಸ್ಥಾಪನೆ ಮಾಡಿಕೊಂಡರು.

2002ರಲ್ಲಿ ವಿಲಾಸರಾವ್ ದೇಶಮುಖ್ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ, 2017ರಲ್ಲಿ ಗುಜರಾತ್‍ನ ಎಂಎಲ್‍ಎಗಳು ಅಹ್ಮದ್ ಪಟೇಲ್‍ರಿಗೇ ರಾಜ್ಯಸಭಾ ಚುನಾವಣೆಯಲ್ಲಿ ಓಟು ಹಾಕುವಂತೆ ಮಾಡಲು ಶಾಸಕರನ್ನು ಕರ್ನಾಟಕಕ್ಕೇ ಕಳಿಸಿ ಡಿಕೆಶಿ ಸುಪರ್ದಿಗೆ ವಹಿಸಲಾಗಿತ್ತು. ಎಲ್ಲವನ್ನೂ ತಲೆ ಮೇಲೆ ಹೊತ್ತುಕೊಂಡು ಮಾಡಿದ ಅವರು ಇಂದಲ್ಲಾ ನಾಳೆ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡೇ ಇದ್ದಾರೆ.

ಆದರೆ, ತನ್ನ ಹಿಂದೆ ಬೆರಳಣಿಕೆಯ ಶಾಸಕರನ್ನೂ ಹೊಂದಿಲ್ಲದಿರುವುದೇ ಅವರ ಸಮಸ್ಯೆ. ಅದರ ಜೊತೆಗೆ ‘ಬ್ಯಾಡ್‍ಬಾಯ್’ ಇಮೇಜ್ ಇನ್ನೂ ಇದ್ದು, ಕುಮಾರಸ್ವಾಮಿಗಿರುವ ಜನಾನುರಾಗಿ ಎಂದೋ ಅಥವಾ ಸಿದ್ದರಾಮಯ್ಯರಿಗಿರುವ ಮಾಸ್ ಲೀಡರ್ ಎಂಬ ಇಮೇಜೋ ಇಲ್ಲದಿರುವ ಕೊರತೆ ಇದೆ. ಕನಿಷ್ಠ ಒಕ್ಕಲಿಗರ ನಾಯಕ ಎಂಬ ಪಟ್ಟವಾದರೂ ಇರಲಿ ಎಂಬ ಕಾರಣಕ್ಕೆ ‘ಯಾವ ಕಾರಣಕ್ಕೂ ಕುಮಾರಸ್ವಾಮಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡುವುದಿಲ್ಲ’ ಎಂಬ ಮಾತನ್ನು ಪದೇ ಪದೇ ಹೇಳಿದ್ದಾರೆ.

ಇವೆಲ್ಲವೂ ಇಂದಲ್ಲಾ ನಾಳೆ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಏರಿಸುತ್ತದಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ರಮೇಶ್‍ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...