Homeಕರ್ನಾಟಕಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

- Advertisement -
- Advertisement -

ಸೋಫಿಟೆಲ್‍ನಿಂದ ರೆನೆಸಾನ್ಸ್ ಹೋಟೆಲ್‍ಗೆ ಶಿಫ್ಟ್ ಆಗಿದ್ದ ತೃಪ್ತರಾಗದ ಶಾಸಕರನ್ನು ಮಾತಾಡಿಸಿ ಕರೆದುಕೊಂಡೇ ಬರುತ್ತೇನೆಂದು ಹೊರಟ ಡಿ.ಕೆ.ಶಿವಕುಮಾರ್ ಸಾಧಿಸಿದ್ದೇನು? ಒಬ್ಬ ಶಾಸಕರನ್ನಾದರೂ ಕರೆದುಕೊಂಡು ಬರುವುದಿರಲಿ ಮಾತಾಡಿಸಲೂ ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರಿಗೆ ಏನು ಬೇಕೋ ಅದನ್ನು ಅವರು ಪಡೆದುಕೊಂಡಾಯಿತು. ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಇಂಗ್ಲಿಷ್ ಚಾನೆಲ್‍ಗಳೂ ಒಳಗೊಂಡಂತೆ ಮಾಧ್ಯಮದ ಕೇಂದ್ರಬಿಂದು ಡಿ.ಕೆ.ಶಿ ಅವರೇ ಆಗಿದ್ದರು. ಮಹಾರಾಷ್ಟ್ರದಲ್ಲಿ ಮತ್ತು ಇಂಗ್ಲಿಷಿನಲ್ಲಿ ವ್ಯವಹರಿಸುವ ಹಲವಾರು ಪ್ರಭಾವೀ ಟ್ವಿಟ್ಟಿಗರು ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿ ಬಿದ್ದರೆಂದರೆ, ಮುಂಬೈನ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಅವರಿಗೆ ಟ್ವಿಟ್ಟರ್ ನಲ್ಲೇ ಉತ್ತರಿಸಿ ಓಡಿ ಹೋಗಿ ಡಿಕೆಶಿ ಪಕ್ಕ ಕೂರಬೇಕಾಯಿತು. ಅಂತಿಮವಾಗಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೋಗುವಾಗ ಜೊತೆಯಲ್ಲಿ ಮಿಲಿಂದ್ ದೇವ್ರಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನಸೀಮ್ ಖಾನ್ ಸಹಾ ಇದ್ದರು.

ಖ್ಯಾತ ಪತ್ರಕರ್ತೆ ಸ್ವಾತಿ ಚತುರ್ವೇದಿ ಒಂದೇ ಸಮನೆ ಟ್ವೀಟ್ ಮಾಡುತ್ತಾ ಕಾಂಗ್ರೆಸ್ಸಿಗರನ್ನು ಕಾಡಿದರು. ರಾಹುಲ್‍ಗಾಂಧಿಗೂ ಟ್ಯಾಗ್ ಮಾಡಿ, ‘ಅಲ್ಲಿ ಒಬ್ಬಂಟಿಯಾಗಿ ಹೋರಾಡುತ್ತಿರುವ ಡಿ.ಕೆ.ಶಿವಕುಮಾರ್‍ರನ್ನು ನೋಡಿ ಕಲಿತುಕೊಳ್ಳಿ’ ಎಂದರು. ರಾಹುಲ್‍ಗಾಂಧಿಯ ಸ್ಥಾನದಲ್ಲಿ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗುವ ಹೆಸರುಗಳಲ್ಲಿ ಮಿಲಿಂದ್ ದೇವ್ರಾ ಹೆಸರೂ ಓಡುತ್ತಿತ್ತು. ಹಾಗಾಗಿ ರಾಷ್ಟ್ರೀಯ ಅಧ್ಯಕ್ಷರಾಗಬೇಕಾದವರು ಡಿ.ಕೆ.ಶಿವಕುಮಾರ್ ಥರದವರು; ಮಿಲಿಂದ್ ದೇವ್ರಾ ಅಲ್ಲ ಎಂದೆಲ್ಲಾ ಹೇಳಲಾಯಿತು.

ಇದಕ್ಕೆ ಮುಂಚೆ ಸ್ಪೀಕರ್‍ಗೆ 12 ಜನ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಬಂದಾಗಲೂ ವಿಧಾನಸೌಧಕ್ಕೆ ಓಡಿದ್ದ ಡಿಕೆಶಿ ಶಾಸಕ ಮುನಿರತ್ನರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಮರುದಿನ ಮುಂಬೈನ ಅದೇ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿಕೊಂಡು ವಿಮಾನ ಹತ್ತುವ ಮುಂಚೆಯೇ ‘ಮುಂಬೈಗೆ ಹೋಗಿ ಅವರನ್ನು ಕರೆತರುತ್ತೇನೆ’ ಎಂದು ಘೋಷಿಸಿದರು. ಹೋಟೆಲ್‍ನಲ್ಲಿದ್ದ ಶಾಸಕರನ್ನು ಡಿಕೆಶಿ ಭೇಟಿಯಾಗದಂತೆ ತಡೆಯಬೇಕೆಂದರೆ ಅವರಿಂದಲೇ ದೂರು ಪಡೆದುಕೊಳ್ಳಬೇಕು. ಬಿಜೆಪಿ ಅದನ್ನೂ ಮಾಡಿತು. ಮಧ್ಯರಾತ್ರಿ ಅಲ್ಲಿದ್ದ 10 ಶಾಸಕರಿಂದ ದೂರು ಬರೆಸಿಕೊಂಡು, ಮರುದಿನ ಅಲ್ಲಿನ ಡಿಸಿಪಿ ‘ಈ ಪತ್ರ ಇಲ್ಲದೇ ಇದ್ದರೆ ನಾವು ನಿಮ್ಮನ್ನು ತಡೆಯುತ್ತಿರಲಿಲ್ಲ’ ಎಂದು ಹೇಳಲು ಬೇಕಾದ ವ್ಯವಸ್ಥೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆಶಿ ಪರ ಬ್ಯಾಟಿಂಗ್ ಮಾಡಿದ ಸ್ವಾತಿ ಚತುರ್ವೇದಿ

ಅದೂ ಸಹಾ ಡಿಕೆಶಿಯ ಸಾಮಥ್ರ್ಯದ ಬಗೆಗಿನ ಇಮೇಜ್‍ ಅನ್ನು ಹೆಚ್ಚಿಸಿತೇ ಹೊರತು ಕಡಿಮೆ ಮಾಡಲಿಲ್ಲ. ಹೋಟೆಲ್ ಮುಂದೆ ಪೊಲೀಸರು ತಡೆದಾಗ ಶಿವಕುಮಾರ್ ವಾಪಸ್ ಹೋಗಲಿಲ್ಲ. ನಾನಿವತ್ತು ಇಲ್ಲೇ ಇದ್ದು ಕರೆದುಕೊಂಡೇ ಹೋಗುತ್ತೇನೆ ಎಂದರು. ಇಂಗ್ಲಿಷ್ ಮೀಡಿಯಾಗಳಿಗೆ ಮಾತನಾಡಿದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಡಿಕೆಶಿ ವಹಿಸಿದ್ದ ಪಾತ್ರದಿಂದ ‘ಟ್ರಬಲ್‍ಶೂಟರ್’ ಪಟ್ಟ ಗಿಟ್ಟಿಸಿಕೊಂಡಿದ್ದ ಅವರು ಮಧ್ಯೆ ಡಲ್ ಆಗಿದ್ದರು. ಈಗ ಮತ್ತೆ ಟ್ರಬಲ್‍ಶೂಟರ್ ಅಲ್ಲದಿದ್ದರೂ ಫೈಟರ್ ಎಂಬ ಇಮೇಜ್‍ಅನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಸ್ಥಾಪನೆ ಮಾಡಿಕೊಂಡರು.

2002ರಲ್ಲಿ ವಿಲಾಸರಾವ್ ದೇಶಮುಖ್ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ, 2017ರಲ್ಲಿ ಗುಜರಾತ್‍ನ ಎಂಎಲ್‍ಎಗಳು ಅಹ್ಮದ್ ಪಟೇಲ್‍ರಿಗೇ ರಾಜ್ಯಸಭಾ ಚುನಾವಣೆಯಲ್ಲಿ ಓಟು ಹಾಕುವಂತೆ ಮಾಡಲು ಶಾಸಕರನ್ನು ಕರ್ನಾಟಕಕ್ಕೇ ಕಳಿಸಿ ಡಿಕೆಶಿ ಸುಪರ್ದಿಗೆ ವಹಿಸಲಾಗಿತ್ತು. ಎಲ್ಲವನ್ನೂ ತಲೆ ಮೇಲೆ ಹೊತ್ತುಕೊಂಡು ಮಾಡಿದ ಅವರು ಇಂದಲ್ಲಾ ನಾಳೆ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡೇ ಇದ್ದಾರೆ.

ಆದರೆ, ತನ್ನ ಹಿಂದೆ ಬೆರಳಣಿಕೆಯ ಶಾಸಕರನ್ನೂ ಹೊಂದಿಲ್ಲದಿರುವುದೇ ಅವರ ಸಮಸ್ಯೆ. ಅದರ ಜೊತೆಗೆ ‘ಬ್ಯಾಡ್‍ಬಾಯ್’ ಇಮೇಜ್ ಇನ್ನೂ ಇದ್ದು, ಕುಮಾರಸ್ವಾಮಿಗಿರುವ ಜನಾನುರಾಗಿ ಎಂದೋ ಅಥವಾ ಸಿದ್ದರಾಮಯ್ಯರಿಗಿರುವ ಮಾಸ್ ಲೀಡರ್ ಎಂಬ ಇಮೇಜೋ ಇಲ್ಲದಿರುವ ಕೊರತೆ ಇದೆ. ಕನಿಷ್ಠ ಒಕ್ಕಲಿಗರ ನಾಯಕ ಎಂಬ ಪಟ್ಟವಾದರೂ ಇರಲಿ ಎಂಬ ಕಾರಣಕ್ಕೆ ‘ಯಾವ ಕಾರಣಕ್ಕೂ ಕುಮಾರಸ್ವಾಮಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡುವುದಿಲ್ಲ’ ಎಂಬ ಮಾತನ್ನು ಪದೇ ಪದೇ ಹೇಳಿದ್ದಾರೆ.

ಇವೆಲ್ಲವೂ ಇಂದಲ್ಲಾ ನಾಳೆ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಏರಿಸುತ್ತದಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ರಮೇಶ್‍ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...