Homeಕರ್ನಾಟಕಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

- Advertisement -
- Advertisement -

ಸೋಫಿಟೆಲ್‍ನಿಂದ ರೆನೆಸಾನ್ಸ್ ಹೋಟೆಲ್‍ಗೆ ಶಿಫ್ಟ್ ಆಗಿದ್ದ ತೃಪ್ತರಾಗದ ಶಾಸಕರನ್ನು ಮಾತಾಡಿಸಿ ಕರೆದುಕೊಂಡೇ ಬರುತ್ತೇನೆಂದು ಹೊರಟ ಡಿ.ಕೆ.ಶಿವಕುಮಾರ್ ಸಾಧಿಸಿದ್ದೇನು? ಒಬ್ಬ ಶಾಸಕರನ್ನಾದರೂ ಕರೆದುಕೊಂಡು ಬರುವುದಿರಲಿ ಮಾತಾಡಿಸಲೂ ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರಿಗೆ ಏನು ಬೇಕೋ ಅದನ್ನು ಅವರು ಪಡೆದುಕೊಂಡಾಯಿತು. ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಇಂಗ್ಲಿಷ್ ಚಾನೆಲ್‍ಗಳೂ ಒಳಗೊಂಡಂತೆ ಮಾಧ್ಯಮದ ಕೇಂದ್ರಬಿಂದು ಡಿ.ಕೆ.ಶಿ ಅವರೇ ಆಗಿದ್ದರು. ಮಹಾರಾಷ್ಟ್ರದಲ್ಲಿ ಮತ್ತು ಇಂಗ್ಲಿಷಿನಲ್ಲಿ ವ್ಯವಹರಿಸುವ ಹಲವಾರು ಪ್ರಭಾವೀ ಟ್ವಿಟ್ಟಿಗರು ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿ ಬಿದ್ದರೆಂದರೆ, ಮುಂಬೈನ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಅವರಿಗೆ ಟ್ವಿಟ್ಟರ್ ನಲ್ಲೇ ಉತ್ತರಿಸಿ ಓಡಿ ಹೋಗಿ ಡಿಕೆಶಿ ಪಕ್ಕ ಕೂರಬೇಕಾಯಿತು. ಅಂತಿಮವಾಗಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೋಗುವಾಗ ಜೊತೆಯಲ್ಲಿ ಮಿಲಿಂದ್ ದೇವ್ರಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನಸೀಮ್ ಖಾನ್ ಸಹಾ ಇದ್ದರು.

ಖ್ಯಾತ ಪತ್ರಕರ್ತೆ ಸ್ವಾತಿ ಚತುರ್ವೇದಿ ಒಂದೇ ಸಮನೆ ಟ್ವೀಟ್ ಮಾಡುತ್ತಾ ಕಾಂಗ್ರೆಸ್ಸಿಗರನ್ನು ಕಾಡಿದರು. ರಾಹುಲ್‍ಗಾಂಧಿಗೂ ಟ್ಯಾಗ್ ಮಾಡಿ, ‘ಅಲ್ಲಿ ಒಬ್ಬಂಟಿಯಾಗಿ ಹೋರಾಡುತ್ತಿರುವ ಡಿ.ಕೆ.ಶಿವಕುಮಾರ್‍ರನ್ನು ನೋಡಿ ಕಲಿತುಕೊಳ್ಳಿ’ ಎಂದರು. ರಾಹುಲ್‍ಗಾಂಧಿಯ ಸ್ಥಾನದಲ್ಲಿ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗುವ ಹೆಸರುಗಳಲ್ಲಿ ಮಿಲಿಂದ್ ದೇವ್ರಾ ಹೆಸರೂ ಓಡುತ್ತಿತ್ತು. ಹಾಗಾಗಿ ರಾಷ್ಟ್ರೀಯ ಅಧ್ಯಕ್ಷರಾಗಬೇಕಾದವರು ಡಿ.ಕೆ.ಶಿವಕುಮಾರ್ ಥರದವರು; ಮಿಲಿಂದ್ ದೇವ್ರಾ ಅಲ್ಲ ಎಂದೆಲ್ಲಾ ಹೇಳಲಾಯಿತು.

ಇದಕ್ಕೆ ಮುಂಚೆ ಸ್ಪೀಕರ್‍ಗೆ 12 ಜನ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಬಂದಾಗಲೂ ವಿಧಾನಸೌಧಕ್ಕೆ ಓಡಿದ್ದ ಡಿಕೆಶಿ ಶಾಸಕ ಮುನಿರತ್ನರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಮರುದಿನ ಮುಂಬೈನ ಅದೇ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿಕೊಂಡು ವಿಮಾನ ಹತ್ತುವ ಮುಂಚೆಯೇ ‘ಮುಂಬೈಗೆ ಹೋಗಿ ಅವರನ್ನು ಕರೆತರುತ್ತೇನೆ’ ಎಂದು ಘೋಷಿಸಿದರು. ಹೋಟೆಲ್‍ನಲ್ಲಿದ್ದ ಶಾಸಕರನ್ನು ಡಿಕೆಶಿ ಭೇಟಿಯಾಗದಂತೆ ತಡೆಯಬೇಕೆಂದರೆ ಅವರಿಂದಲೇ ದೂರು ಪಡೆದುಕೊಳ್ಳಬೇಕು. ಬಿಜೆಪಿ ಅದನ್ನೂ ಮಾಡಿತು. ಮಧ್ಯರಾತ್ರಿ ಅಲ್ಲಿದ್ದ 10 ಶಾಸಕರಿಂದ ದೂರು ಬರೆಸಿಕೊಂಡು, ಮರುದಿನ ಅಲ್ಲಿನ ಡಿಸಿಪಿ ‘ಈ ಪತ್ರ ಇಲ್ಲದೇ ಇದ್ದರೆ ನಾವು ನಿಮ್ಮನ್ನು ತಡೆಯುತ್ತಿರಲಿಲ್ಲ’ ಎಂದು ಹೇಳಲು ಬೇಕಾದ ವ್ಯವಸ್ಥೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆಶಿ ಪರ ಬ್ಯಾಟಿಂಗ್ ಮಾಡಿದ ಸ್ವಾತಿ ಚತುರ್ವೇದಿ

ಅದೂ ಸಹಾ ಡಿಕೆಶಿಯ ಸಾಮಥ್ರ್ಯದ ಬಗೆಗಿನ ಇಮೇಜ್‍ ಅನ್ನು ಹೆಚ್ಚಿಸಿತೇ ಹೊರತು ಕಡಿಮೆ ಮಾಡಲಿಲ್ಲ. ಹೋಟೆಲ್ ಮುಂದೆ ಪೊಲೀಸರು ತಡೆದಾಗ ಶಿವಕುಮಾರ್ ವಾಪಸ್ ಹೋಗಲಿಲ್ಲ. ನಾನಿವತ್ತು ಇಲ್ಲೇ ಇದ್ದು ಕರೆದುಕೊಂಡೇ ಹೋಗುತ್ತೇನೆ ಎಂದರು. ಇಂಗ್ಲಿಷ್ ಮೀಡಿಯಾಗಳಿಗೆ ಮಾತನಾಡಿದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಡಿಕೆಶಿ ವಹಿಸಿದ್ದ ಪಾತ್ರದಿಂದ ‘ಟ್ರಬಲ್‍ಶೂಟರ್’ ಪಟ್ಟ ಗಿಟ್ಟಿಸಿಕೊಂಡಿದ್ದ ಅವರು ಮಧ್ಯೆ ಡಲ್ ಆಗಿದ್ದರು. ಈಗ ಮತ್ತೆ ಟ್ರಬಲ್‍ಶೂಟರ್ ಅಲ್ಲದಿದ್ದರೂ ಫೈಟರ್ ಎಂಬ ಇಮೇಜ್‍ಅನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಸ್ಥಾಪನೆ ಮಾಡಿಕೊಂಡರು.

2002ರಲ್ಲಿ ವಿಲಾಸರಾವ್ ದೇಶಮುಖ್ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ, 2017ರಲ್ಲಿ ಗುಜರಾತ್‍ನ ಎಂಎಲ್‍ಎಗಳು ಅಹ್ಮದ್ ಪಟೇಲ್‍ರಿಗೇ ರಾಜ್ಯಸಭಾ ಚುನಾವಣೆಯಲ್ಲಿ ಓಟು ಹಾಕುವಂತೆ ಮಾಡಲು ಶಾಸಕರನ್ನು ಕರ್ನಾಟಕಕ್ಕೇ ಕಳಿಸಿ ಡಿಕೆಶಿ ಸುಪರ್ದಿಗೆ ವಹಿಸಲಾಗಿತ್ತು. ಎಲ್ಲವನ್ನೂ ತಲೆ ಮೇಲೆ ಹೊತ್ತುಕೊಂಡು ಮಾಡಿದ ಅವರು ಇಂದಲ್ಲಾ ನಾಳೆ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡೇ ಇದ್ದಾರೆ.

ಆದರೆ, ತನ್ನ ಹಿಂದೆ ಬೆರಳಣಿಕೆಯ ಶಾಸಕರನ್ನೂ ಹೊಂದಿಲ್ಲದಿರುವುದೇ ಅವರ ಸಮಸ್ಯೆ. ಅದರ ಜೊತೆಗೆ ‘ಬ್ಯಾಡ್‍ಬಾಯ್’ ಇಮೇಜ್ ಇನ್ನೂ ಇದ್ದು, ಕುಮಾರಸ್ವಾಮಿಗಿರುವ ಜನಾನುರಾಗಿ ಎಂದೋ ಅಥವಾ ಸಿದ್ದರಾಮಯ್ಯರಿಗಿರುವ ಮಾಸ್ ಲೀಡರ್ ಎಂಬ ಇಮೇಜೋ ಇಲ್ಲದಿರುವ ಕೊರತೆ ಇದೆ. ಕನಿಷ್ಠ ಒಕ್ಕಲಿಗರ ನಾಯಕ ಎಂಬ ಪಟ್ಟವಾದರೂ ಇರಲಿ ಎಂಬ ಕಾರಣಕ್ಕೆ ‘ಯಾವ ಕಾರಣಕ್ಕೂ ಕುಮಾರಸ್ವಾಮಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡುವುದಿಲ್ಲ’ ಎಂಬ ಮಾತನ್ನು ಪದೇ ಪದೇ ಹೇಳಿದ್ದಾರೆ.

ಇವೆಲ್ಲವೂ ಇಂದಲ್ಲಾ ನಾಳೆ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಏರಿಸುತ್ತದಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ರಮೇಶ್‍ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...