Homeಕರ್ನಾಟಕಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

- Advertisement -
- Advertisement -

ಸೋಫಿಟೆಲ್‍ನಿಂದ ರೆನೆಸಾನ್ಸ್ ಹೋಟೆಲ್‍ಗೆ ಶಿಫ್ಟ್ ಆಗಿದ್ದ ತೃಪ್ತರಾಗದ ಶಾಸಕರನ್ನು ಮಾತಾಡಿಸಿ ಕರೆದುಕೊಂಡೇ ಬರುತ್ತೇನೆಂದು ಹೊರಟ ಡಿ.ಕೆ.ಶಿವಕುಮಾರ್ ಸಾಧಿಸಿದ್ದೇನು? ಒಬ್ಬ ಶಾಸಕರನ್ನಾದರೂ ಕರೆದುಕೊಂಡು ಬರುವುದಿರಲಿ ಮಾತಾಡಿಸಲೂ ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಅವರಿಗೆ ಏನು ಬೇಕೋ ಅದನ್ನು ಅವರು ಪಡೆದುಕೊಂಡಾಯಿತು. ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಇಂಗ್ಲಿಷ್ ಚಾನೆಲ್‍ಗಳೂ ಒಳಗೊಂಡಂತೆ ಮಾಧ್ಯಮದ ಕೇಂದ್ರಬಿಂದು ಡಿ.ಕೆ.ಶಿ ಅವರೇ ಆಗಿದ್ದರು. ಮಹಾರಾಷ್ಟ್ರದಲ್ಲಿ ಮತ್ತು ಇಂಗ್ಲಿಷಿನಲ್ಲಿ ವ್ಯವಹರಿಸುವ ಹಲವಾರು ಪ್ರಭಾವೀ ಟ್ವಿಟ್ಟಿಗರು ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿ ಬಿದ್ದರೆಂದರೆ, ಮುಂಬೈನ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಅವರಿಗೆ ಟ್ವಿಟ್ಟರ್ ನಲ್ಲೇ ಉತ್ತರಿಸಿ ಓಡಿ ಹೋಗಿ ಡಿಕೆಶಿ ಪಕ್ಕ ಕೂರಬೇಕಾಯಿತು. ಅಂತಿಮವಾಗಿ ಡಿಕೆಶಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೋಗುವಾಗ ಜೊತೆಯಲ್ಲಿ ಮಿಲಿಂದ್ ದೇವ್ರಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನಸೀಮ್ ಖಾನ್ ಸಹಾ ಇದ್ದರು.

ಖ್ಯಾತ ಪತ್ರಕರ್ತೆ ಸ್ವಾತಿ ಚತುರ್ವೇದಿ ಒಂದೇ ಸಮನೆ ಟ್ವೀಟ್ ಮಾಡುತ್ತಾ ಕಾಂಗ್ರೆಸ್ಸಿಗರನ್ನು ಕಾಡಿದರು. ರಾಹುಲ್‍ಗಾಂಧಿಗೂ ಟ್ಯಾಗ್ ಮಾಡಿ, ‘ಅಲ್ಲಿ ಒಬ್ಬಂಟಿಯಾಗಿ ಹೋರಾಡುತ್ತಿರುವ ಡಿ.ಕೆ.ಶಿವಕುಮಾರ್‍ರನ್ನು ನೋಡಿ ಕಲಿತುಕೊಳ್ಳಿ’ ಎಂದರು. ರಾಹುಲ್‍ಗಾಂಧಿಯ ಸ್ಥಾನದಲ್ಲಿ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾಗುವ ಹೆಸರುಗಳಲ್ಲಿ ಮಿಲಿಂದ್ ದೇವ್ರಾ ಹೆಸರೂ ಓಡುತ್ತಿತ್ತು. ಹಾಗಾಗಿ ರಾಷ್ಟ್ರೀಯ ಅಧ್ಯಕ್ಷರಾಗಬೇಕಾದವರು ಡಿ.ಕೆ.ಶಿವಕುಮಾರ್ ಥರದವರು; ಮಿಲಿಂದ್ ದೇವ್ರಾ ಅಲ್ಲ ಎಂದೆಲ್ಲಾ ಹೇಳಲಾಯಿತು.

ಇದಕ್ಕೆ ಮುಂಚೆ ಸ್ಪೀಕರ್‍ಗೆ 12 ಜನ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿ ಬಂದಾಗಲೂ ವಿಧಾನಸೌಧಕ್ಕೆ ಓಡಿದ್ದ ಡಿಕೆಶಿ ಶಾಸಕ ಮುನಿರತ್ನರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಮರುದಿನ ಮುಂಬೈನ ಅದೇ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿಕೊಂಡು ವಿಮಾನ ಹತ್ತುವ ಮುಂಚೆಯೇ ‘ಮುಂಬೈಗೆ ಹೋಗಿ ಅವರನ್ನು ಕರೆತರುತ್ತೇನೆ’ ಎಂದು ಘೋಷಿಸಿದರು. ಹೋಟೆಲ್‍ನಲ್ಲಿದ್ದ ಶಾಸಕರನ್ನು ಡಿಕೆಶಿ ಭೇಟಿಯಾಗದಂತೆ ತಡೆಯಬೇಕೆಂದರೆ ಅವರಿಂದಲೇ ದೂರು ಪಡೆದುಕೊಳ್ಳಬೇಕು. ಬಿಜೆಪಿ ಅದನ್ನೂ ಮಾಡಿತು. ಮಧ್ಯರಾತ್ರಿ ಅಲ್ಲಿದ್ದ 10 ಶಾಸಕರಿಂದ ದೂರು ಬರೆಸಿಕೊಂಡು, ಮರುದಿನ ಅಲ್ಲಿನ ಡಿಸಿಪಿ ‘ಈ ಪತ್ರ ಇಲ್ಲದೇ ಇದ್ದರೆ ನಾವು ನಿಮ್ಮನ್ನು ತಡೆಯುತ್ತಿರಲಿಲ್ಲ’ ಎಂದು ಹೇಳಲು ಬೇಕಾದ ವ್ಯವಸ್ಥೆ ಮಾಡಿಕೊಂಡರು.

ಇದನ್ನೂ ಓದಿ: ಡಿಕೆಶಿ ಪರ ಬ್ಯಾಟಿಂಗ್ ಮಾಡಿದ ಸ್ವಾತಿ ಚತುರ್ವೇದಿ

ಅದೂ ಸಹಾ ಡಿಕೆಶಿಯ ಸಾಮಥ್ರ್ಯದ ಬಗೆಗಿನ ಇಮೇಜ್‍ ಅನ್ನು ಹೆಚ್ಚಿಸಿತೇ ಹೊರತು ಕಡಿಮೆ ಮಾಡಲಿಲ್ಲ. ಹೋಟೆಲ್ ಮುಂದೆ ಪೊಲೀಸರು ತಡೆದಾಗ ಶಿವಕುಮಾರ್ ವಾಪಸ್ ಹೋಗಲಿಲ್ಲ. ನಾನಿವತ್ತು ಇಲ್ಲೇ ಇದ್ದು ಕರೆದುಕೊಂಡೇ ಹೋಗುತ್ತೇನೆ ಎಂದರು. ಇಂಗ್ಲಿಷ್ ಮೀಡಿಯಾಗಳಿಗೆ ಮಾತನಾಡಿದರು. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಡಿಕೆಶಿ ವಹಿಸಿದ್ದ ಪಾತ್ರದಿಂದ ‘ಟ್ರಬಲ್‍ಶೂಟರ್’ ಪಟ್ಟ ಗಿಟ್ಟಿಸಿಕೊಂಡಿದ್ದ ಅವರು ಮಧ್ಯೆ ಡಲ್ ಆಗಿದ್ದರು. ಈಗ ಮತ್ತೆ ಟ್ರಬಲ್‍ಶೂಟರ್ ಅಲ್ಲದಿದ್ದರೂ ಫೈಟರ್ ಎಂಬ ಇಮೇಜ್‍ಅನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಸ್ಥಾಪನೆ ಮಾಡಿಕೊಂಡರು.

2002ರಲ್ಲಿ ವಿಲಾಸರಾವ್ ದೇಶಮುಖ್ ವಿಶ್ವಾಸಮತ ಯಾಚನೆ ಮಾಡುವ ಸಂದರ್ಭದಲ್ಲಿ, 2017ರಲ್ಲಿ ಗುಜರಾತ್‍ನ ಎಂಎಲ್‍ಎಗಳು ಅಹ್ಮದ್ ಪಟೇಲ್‍ರಿಗೇ ರಾಜ್ಯಸಭಾ ಚುನಾವಣೆಯಲ್ಲಿ ಓಟು ಹಾಕುವಂತೆ ಮಾಡಲು ಶಾಸಕರನ್ನು ಕರ್ನಾಟಕಕ್ಕೇ ಕಳಿಸಿ ಡಿಕೆಶಿ ಸುಪರ್ದಿಗೆ ವಹಿಸಲಾಗಿತ್ತು. ಎಲ್ಲವನ್ನೂ ತಲೆ ಮೇಲೆ ಹೊತ್ತುಕೊಂಡು ಮಾಡಿದ ಅವರು ಇಂದಲ್ಲಾ ನಾಳೆ ರಾಜ್ಯದ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡೇ ಇದ್ದಾರೆ.

ಆದರೆ, ತನ್ನ ಹಿಂದೆ ಬೆರಳಣಿಕೆಯ ಶಾಸಕರನ್ನೂ ಹೊಂದಿಲ್ಲದಿರುವುದೇ ಅವರ ಸಮಸ್ಯೆ. ಅದರ ಜೊತೆಗೆ ‘ಬ್ಯಾಡ್‍ಬಾಯ್’ ಇಮೇಜ್ ಇನ್ನೂ ಇದ್ದು, ಕುಮಾರಸ್ವಾಮಿಗಿರುವ ಜನಾನುರಾಗಿ ಎಂದೋ ಅಥವಾ ಸಿದ್ದರಾಮಯ್ಯರಿಗಿರುವ ಮಾಸ್ ಲೀಡರ್ ಎಂಬ ಇಮೇಜೋ ಇಲ್ಲದಿರುವ ಕೊರತೆ ಇದೆ. ಕನಿಷ್ಠ ಒಕ್ಕಲಿಗರ ನಾಯಕ ಎಂಬ ಪಟ್ಟವಾದರೂ ಇರಲಿ ಎಂಬ ಕಾರಣಕ್ಕೆ ‘ಯಾವ ಕಾರಣಕ್ಕೂ ಕುಮಾರಸ್ವಾಮಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡುವುದಿಲ್ಲ’ ಎಂಬ ಮಾತನ್ನು ಪದೇ ಪದೇ ಹೇಳಿದ್ದಾರೆ.

ಇವೆಲ್ಲವೂ ಇಂದಲ್ಲಾ ನಾಳೆ ಅವರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಏರಿಸುತ್ತದಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ರಮೇಶ್‍ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...