Homeಮುಖಪುಟಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

- Advertisement -
- Advertisement -

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್ ಶುಕ್ರವಾರ (ಏ.10) ಅನುಮತಿ ನೀಡಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅನ್ನು ಸಂಸದೀಯ ಸಮಿತಿಗೆ ಕಳುಹಿಸಬೇಕು ಎಂಬ ನಿರ್ಣಯ ತಿರಸ್ಕೃತಗೊಂಡ ಬಳಿಕ, ಮಾರ್ಚ್ 25 ರಂದು ಸಂಸತ್ತು ಅಂಗೀಕರಿಸಿದೆ. ಈ ಶಾಸನವು 2019ರ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಕ್ಕುಗಳ ಸಂರಕ್ಷಣಾ ಕಾಯ್ದೆಯಲ್ಲಿ ಹೇಳಲಾದ ಟ್ರಾನ್ಸ್‌ಜೆಂಡರ್‌ ವ್ಯಕ್ತಿಯಾಗಿ ಯಾರು ಅರ್ಹತೆ ಪಡೆಯುತ್ತಾರೆ ಎಂಬುದನ್ನು ಮರು ವ್ಯಾಖ್ಯಾನಿಸುವ ತಿದ್ದುಪಡಿ ತಂದಿದೆ.

ಹೊಸ ಕಾನೂನು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ತಮ್ಮದೇ ಆದ ಲಿಂಗ ಗುರುತನ್ನು (self-perceived gender identity) ಹೊಂದುವ ಹಕ್ಕನ್ನು ತೆಗೆದುಹಾಕುತ್ತದೆ. ಅಷ್ಟೇ ಅಲ್ಲದೆ, ಈ ಕಾನೂನಿನ ವ್ಯಾಪ್ತಿಯನ್ನು ಕೇವಲ ಕೆಲವು ನಿರ್ದಿಷ್ಟ ಜೈವಿಕ ಅಥವಾ ದೈಹಿಕ ಗುಣಲಕ್ಷಣಗಳು, ಇಂಟರ್ ಸೆಕ್ಸ್ ವೈವಿಧ್ಯಗಳು ಅಥವಾ ಕಿನ್ನರ್, ಹಿಜ್ರಾ, ಅರವಣಿ ಮತ್ತು ಜೋಗ್ತಿಯಂತಹ ನಿರ್ದಿಷ್ಟ ಸಾಮಾಜಿಕ-ಸಾಂಸ್ಕೃತಿಕ ಗುರುತು ಹೊಂದಿರುವವರಿಗೆ ಮಾತ್ರ ಸೀಮಿತಗೊಳಿಸುತ್ತದೆ.

ತಿದ್ದುಪಡಿ ಕಾಯ್ದೆಯ ವಿರುದ್ದ ಸಲ್ಲಿಸಲಾದ ಎರಡು ಅರ್ಜಿಗಳನ್ನು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಕೇರಳ ಹೈಕೋರ್ಟ್ ಪೀಠ ಶುಕ್ರವಾರ ವಿಚಾರಣೆ ನಡೆಸಿದೆ. ವಾದಗಳನ್ನು ಆಲಿಸಿದ ನಂತರ, ನ್ಯಾಯಮೂರ್ತಿ ಅರ್ಜಿಗಳ ಕುರಿತು ನೋಟಿಸ್ ಜಾರಿ ಮಾಡಿದ್ದಾರೆ ಎಂದು livelaw.in ವರದಿ ಮಾಡಿದೆ.

ಹೊಸ ಶಾಸನದ ಹಲವು ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಎರಡು ಅರ್ಜಿಗಳು, ಇದು 2014ರ ‘ನ್ಯಾಷನಲ್ ಲೀಗಲ್ ಸರ್ವಿಸಸ್ ಅಥಾರಿಟಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ (ಎನ್‌ಎಎಲ್‌ಎಸ್‌ಎ) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ತತ್ವಗಳಿಗೆ ವಿರುದ್ಧವಾಗಿದೆ ಎಂದು ವಾದಿಸಿವೆ. ಸ್ವಯಂ-ಗುರುತಿಸುವಿಕೆಯ ಹಕ್ಕನ್ನು ತೆಗೆದುಹಾಕಿರುವುದು ಮತ್ತು ಕಡ್ಡಾಯ ವೈದ್ಯಕೀಯ ಪ್ರಮಾಣೀಕರಣವನ್ನು ಸೇರಿಸಿರುವುದು ಈ ವಿರೋಧಕ್ಕೆ ಪ್ರಮುಖ ಕಾರಣಗಳೆಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.

2014ರ ತೀರ್ಪು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗಾಗಿ ಔಪಚಾರಿಕವಾಗಿ ಮೂರನೇ ಲಿಂಗ (third gender) ಎಂಬ ವರ್ಗವನ್ನು ಸೃಷ್ಟಿಸಿತ್ತು ಮತ್ತು ಅವರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗವೆಂದು ಗುರುತಿಸಿತ್ತು.

ತಿದ್ದುಪಡಿ ಅಧಿಸೂಚನೆ ಹೊರಬಂದ ನಂತರ, ತಾವು ಹಾರ್ಮೋನ್ ರಿಪ್ಲೇಸ್‌ಮೆಂಟ್ ಥೆರಪಿ ಪಡೆಯುತ್ತಿದ್ದ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುವುದನ್ನು ನಿಲ್ಲಿಸಿವೆ ಎಂದು ಇಬ್ಬರೂ ಅರ್ಜಿದಾರರು ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು, ಇಂತಹ ಚಿಕಿತ್ಸೆಯನ್ನು ವ್ಯಕ್ತಿಯೊಬ್ಬರಿಗೆ ದಿಢೀರನೆ ನಿಲ್ಲಿಸಿದರೆ, ಅದು ಅವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ. ಅಲ್ಲದೆ, ಈ ವಿಷಯದ ಬಗ್ಗೆ ಶಾಸನದಲ್ಲೇ ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ. ಶ್ರೀಕುಮಾರ್ ಅವರು, ಸ್ವಯಂ-ಗುರುತಿಸುವಿಕೆಯ ವಿಷಯವು ಹಲವಾರು ದೇಶಗಳಲ್ಲಿ ದೊಡ್ಡ ವಿವಾದವಾಗಿದೆ ಎಂದು ಹೇಳಿದ್ದಾರೆ. ಅಮೆರಿಕಾದಲ್ಲಿ ಅನೇಕರು ತಮ್ಮ ಜೈವಿಕ ಲಿಂಗಕ್ಕೆ ವಿರುದ್ಧವಾಗಿ ತಮ್ಮನ್ನು ತಾವು ಘೋಷಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದಕ್ಕೆ ಉತ್ತರಿಸಿ ನ್ಯಾಯಮೂರ್ತಿ ಥಾಮಸ್ ಅವರು, “ಪಾಶ್ಚಾತ್ಯ ದೇಶಗಳನ್ನು ಅಂಧವಾಗಿ ಅನುಕರಿಸುವುದನ್ನು ತಡೆಯುವುದು ಶಾಸಕಾಂಗದ ಉದ್ದೇಶವಿರಬಹುದು. ಅಲ್ಲಿ ಮಕ್ಕಳು ತಾವು ಬೆಕ್ಕು ಎಂದು ಹೇಳಿಕೊಳ್ಳಬಹುದು ಮತ್ತು ಅದನ್ನು ಯಾರೂ ಪ್ರಶ್ನಿಸುವಂತಿಲ್ಲ. ಇಂತಹ ಪರಿಸ್ಥಿತಿಯನ್ನು ತಡೆಯುವುದೇ ಶಾಸಕಾಂಗದ ಉದ್ದೇಶವಾಗಿರಬಹುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿಂದಿನ ವಿಚಾರಣೆಯಲ್ಲಿ, ಈ ಹೊಸ ಕಾಯ್ದೆಯ ಜಾರಿಯಿಂದಾಗಿ ಹಾರ್ಮೋನ್ ರಿಪ್ಲೇಸ್‌ಮೆಂಟ್ ಥೆರಪಿ ಮತ್ತು ಇತರ ಲಿಂಗ ದೃಢೀಕರಣ ವೈದ್ಯಕೀಯ ಸೇವೆಗಳು ಸ್ಥಗಿತಗೊಳ್ಳಲಿವೆಯೇ ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ನ್ಯಾಯಾಲಯವು ಸಾಲಿಸಿಟರ್ ಜನರಲ್ ಶ್ರೀಕುಮಾರ್ ಅವರಿಗೆ ಸೂಚಿಸಿತ್ತು.

ಶುಕ್ರವಾರದಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರು, ವೈದ್ಯಕೀಯ ತುರ್ತುಸ್ಥಿತಿಗಳಿಗೆ ಸಂಬಂಧಿಸಿದ ಇಂತಹ ಕುಂದುಕೊರತೆಗಳು ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.

ಅರ್ಜಿದಾರರ ಪರ ವಕೀಲರಾದ ಅರುಂಧತಿ ಕಾಟ್ಜು ಅವರು, ಎನ್‌ಎಎಲ್‌ಎಸ್‌ಎ ಪ್ರಕರಣ ಮತ್ತು ಹಿಂದಿನ ಶಾಸನವು ಒಬ್ಬರ ಗ್ರಹಿಸಿದ ಲಿಂಗ ಗುರುತಿನ ಸ್ವಯಂ-ಗುರುತಿಸುವಿಕೆಯ ಹಕ್ಕನ್ನು ಗುರುತಿಸಿದೆ ಎಂದು ಗಮನ ಸೆಳೆದಿದ್ದಾರೆ ಎಂದು ಬಾರ್ ಅಂಡ್ & ವರದಿ ಮಾಡಿದೆ.

ಅಲ್ಲದೆ, ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಹಸ್ತಕ್ಷೇಪಗಳ ಬಗ್ಗೆ ವೈದ್ಯಕೀಯ ಸಂಸ್ಥೆಗಳು ವರದಿ ಸಲ್ಲಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ, “ಶಸ್ತ್ರಚಿಕಿತ್ಸೆಯಲ್ಲದ ಚಿಕಿತ್ಸೆಗಳನ್ನು ನೀಡುತ್ತಿದ್ದ ವೈದ್ಯರ ಮೇಲೆ ಇದು ಭಯದ ವಾತಾವರಣವನ್ನು ನಿರ್ಮಿಸಿದೆ” ಎಂದು ಕಾಟ್ಜು ಹೇಳಿರುವುದನ್ನು livelaw.in ವರದಿ ಮಾಡಿದೆ.

ಈ ತಿದ್ದುಪಡಿಯು ಕೇವಲ ಸ್ವಯಂ ಘೋಷಣೆಯನ್ನು ಮಾತ್ರ ಹೊರಗಿಡುತ್ತದೆ ಎಂದು ಶ್ರೀಕುಮಾರ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಾಲಯವು ಶಾಸನಕ್ಕೆ ತಡೆಯಾಜ್ಞೆ ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರೂ, ಅರ್ಜಿದಾರರಿಗೆ ಮಧ್ಯಂತರ ಪರಿಹಾರವನ್ನು ನೀಡಿರುವುದಾಗಿ ಎಂದು ಬಾರ್ & ಬೆಂಚ್ ವರದಿ ಹೇಳಿದೆ.






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...