Homeಮುಖಪುಟಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

- Advertisement -
- Advertisement -

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್ ಶುಕ್ರವಾರ (ಏ.10) ಅನುಮತಿ ನೀಡಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅನ್ನು ಸಂಸದೀಯ ಸಮಿತಿಗೆ ಕಳುಹಿಸಬೇಕು ಎಂಬ ನಿರ್ಣಯ ತಿರಸ್ಕೃತಗೊಂಡ ಬಳಿಕ, ಮಾರ್ಚ್ 25 ರಂದು ಸಂಸತ್ತು ಅಂಗೀಕರಿಸಿದೆ. ಈ ಶಾಸನವು 2019ರ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಕ್ಕುಗಳ ಸಂರಕ್ಷಣಾ ಕಾಯ್ದೆಯಲ್ಲಿ ಹೇಳಲಾದ ಟ್ರಾನ್ಸ್‌ಜೆಂಡರ್‌ ವ್ಯಕ್ತಿಯಾಗಿ ಯಾರು ಅರ್ಹತೆ ಪಡೆಯುತ್ತಾರೆ ಎಂಬುದನ್ನು ಮರು ವ್ಯಾಖ್ಯಾನಿಸುವ ತಿದ್ದುಪಡಿ ತಂದಿದೆ.

ಹೊಸ ಕಾನೂನು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ತಮ್ಮದೇ ಆದ ಲಿಂಗ ಗುರುತನ್ನು (self-perceived gender identity) ಹೊಂದುವ ಹಕ್ಕನ್ನು ತೆಗೆದುಹಾಕುತ್ತದೆ. ಅಷ್ಟೇ ಅಲ್ಲದೆ, ಈ ಕಾನೂನಿನ ವ್ಯಾಪ್ತಿಯನ್ನು ಕೇವಲ ಕೆಲವು ನಿರ್ದಿಷ್ಟ ಜೈವಿಕ ಅಥವಾ ದೈಹಿಕ ಗುಣಲಕ್ಷಣಗಳು, ಇಂಟರ್ ಸೆಕ್ಸ್ ವೈವಿಧ್ಯಗಳು ಅಥವಾ ಕಿನ್ನರ್, ಹಿಜ್ರಾ, ಅರವಣಿ ಮತ್ತು ಜೋಗ್ತಿಯಂತಹ ನಿರ್ದಿಷ್ಟ ಸಾಮಾಜಿಕ-ಸಾಂಸ್ಕೃತಿಕ ಗುರುತು ಹೊಂದಿರುವವರಿಗೆ ಮಾತ್ರ ಸೀಮಿತಗೊಳಿಸುತ್ತದೆ.

ತಿದ್ದುಪಡಿ ಕಾಯ್ದೆಯ ವಿರುದ್ದ ಸಲ್ಲಿಸಲಾದ ಎರಡು ಅರ್ಜಿಗಳನ್ನು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಕೇರಳ ಹೈಕೋರ್ಟ್ ಪೀಠ ಶುಕ್ರವಾರ ವಿಚಾರಣೆ ನಡೆಸಿದೆ. ವಾದಗಳನ್ನು ಆಲಿಸಿದ ನಂತರ, ನ್ಯಾಯಮೂರ್ತಿ ಅರ್ಜಿಗಳ ಕುರಿತು ನೋಟಿಸ್ ಜಾರಿ ಮಾಡಿದ್ದಾರೆ ಎಂದು livelaw.in ವರದಿ ಮಾಡಿದೆ.

ಹೊಸ ಶಾಸನದ ಹಲವು ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಎರಡು ಅರ್ಜಿಗಳು, ಇದು 2014ರ ‘ನ್ಯಾಷನಲ್ ಲೀಗಲ್ ಸರ್ವಿಸಸ್ ಅಥಾರಿಟಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ (ಎನ್‌ಎಎಲ್‌ಎಸ್‌ಎ) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ತತ್ವಗಳಿಗೆ ವಿರುದ್ಧವಾಗಿದೆ ಎಂದು ವಾದಿಸಿವೆ. ಸ್ವಯಂ-ಗುರುತಿಸುವಿಕೆಯ ಹಕ್ಕನ್ನು ತೆಗೆದುಹಾಕಿರುವುದು ಮತ್ತು ಕಡ್ಡಾಯ ವೈದ್ಯಕೀಯ ಪ್ರಮಾಣೀಕರಣವನ್ನು ಸೇರಿಸಿರುವುದು ಈ ವಿರೋಧಕ್ಕೆ ಪ್ರಮುಖ ಕಾರಣಗಳೆಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.

2014ರ ತೀರ್ಪು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗಾಗಿ ಔಪಚಾರಿಕವಾಗಿ ಮೂರನೇ ಲಿಂಗ (third gender) ಎಂಬ ವರ್ಗವನ್ನು ಸೃಷ್ಟಿಸಿತ್ತು ಮತ್ತು ಅವರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗವೆಂದು ಗುರುತಿಸಿತ್ತು.

ತಿದ್ದುಪಡಿ ಅಧಿಸೂಚನೆ ಹೊರಬಂದ ನಂತರ, ತಾವು ಹಾರ್ಮೋನ್ ರಿಪ್ಲೇಸ್‌ಮೆಂಟ್ ಥೆರಪಿ ಪಡೆಯುತ್ತಿದ್ದ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುವುದನ್ನು ನಿಲ್ಲಿಸಿವೆ ಎಂದು ಇಬ್ಬರೂ ಅರ್ಜಿದಾರರು ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು, ಇಂತಹ ಚಿಕಿತ್ಸೆಯನ್ನು ವ್ಯಕ್ತಿಯೊಬ್ಬರಿಗೆ ದಿಢೀರನೆ ನಿಲ್ಲಿಸಿದರೆ, ಅದು ಅವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ. ಅಲ್ಲದೆ, ಈ ವಿಷಯದ ಬಗ್ಗೆ ಶಾಸನದಲ್ಲೇ ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ. ಶ್ರೀಕುಮಾರ್ ಅವರು, ಸ್ವಯಂ-ಗುರುತಿಸುವಿಕೆಯ ವಿಷಯವು ಹಲವಾರು ದೇಶಗಳಲ್ಲಿ ದೊಡ್ಡ ವಿವಾದವಾಗಿದೆ ಎಂದು ಹೇಳಿದ್ದಾರೆ. ಅಮೆರಿಕಾದಲ್ಲಿ ಅನೇಕರು ತಮ್ಮ ಜೈವಿಕ ಲಿಂಗಕ್ಕೆ ವಿರುದ್ಧವಾಗಿ ತಮ್ಮನ್ನು ತಾವು ಘೋಷಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದಕ್ಕೆ ಉತ್ತರಿಸಿ ನ್ಯಾಯಮೂರ್ತಿ ಥಾಮಸ್ ಅವರು, “ಪಾಶ್ಚಾತ್ಯ ದೇಶಗಳನ್ನು ಅಂಧವಾಗಿ ಅನುಕರಿಸುವುದನ್ನು ತಡೆಯುವುದು ಶಾಸಕಾಂಗದ ಉದ್ದೇಶವಿರಬಹುದು. ಅಲ್ಲಿ ಮಕ್ಕಳು ತಾವು ಬೆಕ್ಕು ಎಂದು ಹೇಳಿಕೊಳ್ಳಬಹುದು ಮತ್ತು ಅದನ್ನು ಯಾರೂ ಪ್ರಶ್ನಿಸುವಂತಿಲ್ಲ. ಇಂತಹ ಪರಿಸ್ಥಿತಿಯನ್ನು ತಡೆಯುವುದೇ ಶಾಸಕಾಂಗದ ಉದ್ದೇಶವಾಗಿರಬಹುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿಂದಿನ ವಿಚಾರಣೆಯಲ್ಲಿ, ಈ ಹೊಸ ಕಾಯ್ದೆಯ ಜಾರಿಯಿಂದಾಗಿ ಹಾರ್ಮೋನ್ ರಿಪ್ಲೇಸ್‌ಮೆಂಟ್ ಥೆರಪಿ ಮತ್ತು ಇತರ ಲಿಂಗ ದೃಢೀಕರಣ ವೈದ್ಯಕೀಯ ಸೇವೆಗಳು ಸ್ಥಗಿತಗೊಳ್ಳಲಿವೆಯೇ ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ನ್ಯಾಯಾಲಯವು ಸಾಲಿಸಿಟರ್ ಜನರಲ್ ಶ್ರೀಕುಮಾರ್ ಅವರಿಗೆ ಸೂಚಿಸಿತ್ತು.

ಶುಕ್ರವಾರದಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರು, ವೈದ್ಯಕೀಯ ತುರ್ತುಸ್ಥಿತಿಗಳಿಗೆ ಸಂಬಂಧಿಸಿದ ಇಂತಹ ಕುಂದುಕೊರತೆಗಳು ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.

ಅರ್ಜಿದಾರರ ಪರ ವಕೀಲರಾದ ಅರುಂಧತಿ ಕಾಟ್ಜು ಅವರು, ಎನ್‌ಎಎಲ್‌ಎಸ್‌ಎ ಪ್ರಕರಣ ಮತ್ತು ಹಿಂದಿನ ಶಾಸನವು ಒಬ್ಬರ ಗ್ರಹಿಸಿದ ಲಿಂಗ ಗುರುತಿನ ಸ್ವಯಂ-ಗುರುತಿಸುವಿಕೆಯ ಹಕ್ಕನ್ನು ಗುರುತಿಸಿದೆ ಎಂದು ಗಮನ ಸೆಳೆದಿದ್ದಾರೆ ಎಂದು ಬಾರ್ ಅಂಡ್ & ವರದಿ ಮಾಡಿದೆ.

ಅಲ್ಲದೆ, ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಹಸ್ತಕ್ಷೇಪಗಳ ಬಗ್ಗೆ ವೈದ್ಯಕೀಯ ಸಂಸ್ಥೆಗಳು ವರದಿ ಸಲ್ಲಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ, “ಶಸ್ತ್ರಚಿಕಿತ್ಸೆಯಲ್ಲದ ಚಿಕಿತ್ಸೆಗಳನ್ನು ನೀಡುತ್ತಿದ್ದ ವೈದ್ಯರ ಮೇಲೆ ಇದು ಭಯದ ವಾತಾವರಣವನ್ನು ನಿರ್ಮಿಸಿದೆ” ಎಂದು ಕಾಟ್ಜು ಹೇಳಿರುವುದನ್ನು livelaw.in ವರದಿ ಮಾಡಿದೆ.

ಈ ತಿದ್ದುಪಡಿಯು ಕೇವಲ ಸ್ವಯಂ ಘೋಷಣೆಯನ್ನು ಮಾತ್ರ ಹೊರಗಿಡುತ್ತದೆ ಎಂದು ಶ್ರೀಕುಮಾರ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಾಲಯವು ಶಾಸನಕ್ಕೆ ತಡೆಯಾಜ್ಞೆ ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರೂ, ಅರ್ಜಿದಾರರಿಗೆ ಮಧ್ಯಂತರ ಪರಿಹಾರವನ್ನು ನೀಡಿರುವುದಾಗಿ ಎಂದು ಬಾರ್ & ಬೆಂಚ್ ವರದಿ ಹೇಳಿದೆ.






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...