Homeಮುಖಪುಟಲಲಿತ ಪ್ರಬಂಧ: ಕೈ ಮುರಿಸಿಕೊಂಡವನ ಅದ್ವಾನಗಳು..!!

ಲಲಿತ ಪ್ರಬಂಧ: ಕೈ ಮುರಿಸಿಕೊಂಡವನ ಅದ್ವಾನಗಳು..!!

ನಿಮಗೆ ಯಾವ ಭಾಗವನ್ನು ಕೆರೆಯಲು ಕಷ್ಟವಾಗುತ್ತದೋ ಆ ಭಾಗದಲ್ಲಿ ತುರಿಕೆ ಜಾಸ್ತಿ. ಹೌದು ತಾನೇ?

- Advertisement -
- Advertisement -

ವೈದ್ಯರು ಖಾಯಿಲೆಗೆ ಸಂಬಂಧಿಸಿದಂತೆ ರೋಗಿಗಳ ಮೇಲೆ ಹೇರುವ ನಿಯಮಾವಳಿಗಳನ್ನು ಪಾಲಿಸಲು ಅದೆಷ್ಟು ಕಷ್ಟ ಎನ್ನುವುದು ಸ್ವತಃ ಅವರೇ ರೋಗಿಯಾಗದ ಹೊರತು ಅರ್ಥವಾಗದು. ನಾನು ವೈದ್ಯನಲ್ಲ, ಅರೆ ವೈದ್ಯಕೀಯ ವೃತ್ತಿಪರನಾದುದರಿಂದ ನಾನೊಂದು ಪುಟ್ಟ ಪಾಲಿಕ್ಲಿನಿಕ್ ನಡೆಸುತ್ತಿದ್ದೇನೆ. ನಮ್ಮಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ವೈದ್ಯರು ನೀಡುವ ಸೂಚನೆಗಳನ್ನು ನಾನೂ ಅನೇಕ ಬಾರಿ ವಿವರಿಸಿ ಹೇಳುವುದಿದೆ. ಆದರೆ ಅದೇ ರೋಗಿಗಳಿ ಎದುರಾದಂತಹ ಸಮಸ್ಯೆ ನಮಗೂ ಎದುರಾಗದ ಹೊರತು ರೋಗಿಗಳ ಸಂಕಷ್ಟ ನಮಗರಿಯುವುದೇ ಇಲ್ಲ.

ನನ್ನಲ್ಲಿಗೆ ಕನ್ಸಲ್ಟೇಶನ್‌ಗೆ ಬರುವ ಮೂಳೆ ತಜ್ಞ ಡಾ.ಲಾರೆನ್ಸ್ ನನ್ನ ಆತ್ಮೀಯ ಮಿತ್ರರೂ ಹೌದು. ಅವರು ಸೊಂಟ ನೋವೆಂದು ಬಂದ ರೋಗಿಗಳಿಗೆ ಸದಾ ಕುಳಿತುಕೊಳ್ಳುವ ಭಂಗಿಯ ಬಗ್ಗೆ ಎಚ್ಚರಿಸುತ್ತಿರುತ್ತಾರೆ.ಕೆಲವರಿಗೆ ಎಷ್ಟು ವಿವರಿಸಿದರೂ ಅರ್ಥವಾಗುವುದಿಲ್ಲ. ಅವರಿಗೆ ಪ್ರಾಯೋಗಿಕವಾಗಿ ವಿವರಿಸಲು ಅವರು ನನ್ನಲ್ಲಿ ಹೇಳುವುದೂ ಇದೆ. ಅವರಿಗೆ ಕುಳಿತುಕೊಳ್ಳುವ ಸರಿಯಾದ ಭಂಗಿ ಯಾವುದೆಂದು ವಿವರಿಸುವ ನಾನು ಮಾತ್ರ ಕುರ್ಚಿಯಲ್ಲಿ ಕುಳಿತುಕೊಳ್ಳುವಾಗ ಅಂಡಿಗಿಂತ ಬೆನ್ನೂರುವುದೇ ಜಾಸ್ತಿ. ಒಮ್ಮೆ ರೋಗಿಯೊಬ್ಬರಿಗೆ ನಾನು ವಿವರಿಸುತ್ತಿರುವಾಗ ನಾನು ಕೂತಿದ್ದ ಭಂಗಿಯನ್ನು ಡಾ.ಲಾರೆನ್ಸ್ ತುಸು ದೂರ ನಿಂತು ನೋಡುತ್ತಿದ್ದರು. ರೋಗಿ ನನ್ನ ಕ್ಯಾಬಿನಿನಿಂದ ಹೊರ ಹೋದ ಕೂಡಲೇ ನನ್ನ ಕ್ಯಾಬಿನಿಗೆ ಬಂದು “ಓ ಮಾರಾಯ.. ನೀನೇ ಬೆನ್ನೂರಿ ಕೂತು ರೋಗಿಗೆ ಅಂಡೂರಿ ಕೂರಲು ಹೇಳುತ್ತಿದ್ದಿಯಲ್ಲೋ… ಎಂದು ನನ್ನನ್ನು ಗೇಲಿ ಮಾಡತೊಡಗಿದರು. ಅಂದಿನಿಂದ ರೋಗಿಗಳಿಗೆ ಪ್ರಾಯೋಗಿಕವಾಗಿ ವಿವರಿಸುವ ಹೊತ್ತಲ್ಲಾದರೂ ಅಂಡೂರಿ ಕುಳಿತುಕೊಳ್ಳಬೇಕೆಂಬ ಪ್ರಜ್ಞೆಯನ್ನು ಬೆಳೆಸಿರುವೆ.

ಕೈಯ ಮೂಳೆ ಮುರಿಸಿಕೊಂಡು ಬಂದವರಿಗೆ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಕಿ ಕಟ್ಟುವುದು ಸರ್ವೇ ಸಾಮಾನ್ಯ.ಈ ಪ್ಲಾಸ್ಟರ್ ಆಫ್ ಪ್ಯಾರಿಸ್ ಎಷ್ಟು ಚಂದದ ಇಂಗ್ಲಿಷ್ ಪದ ಗುಚ್ಚವಲ್ವಾ..? ಇದನ್ನು ಮೂಳೆ ಮುರಿತಕ್ಕೊಳಗಾಗಿ ಕಟ್ಟಿಸಿಕೊಂಡವನ ಕಷ್ಟ ಅವನಿಗೇ ಗೊತ್ತು. ಪ್ಲಾಸ್ಟರ್ ಹಾಕಿಸಿಕೊಂಡವರ ತುರಿಕೆಯ ಸಂಕಟವಂತೂ ಸ್ವತಃ ಅನುಭವಿಸದೇ ಯಾರಿಗೂ ಅರಿಯಲಾಗದು.

ನಿಮಗೆ ಯಾವ ಭಾಗವನ್ನು ಕೆರೆಯಲು ಕಷ್ಟವಾಗುತ್ತದೋ ಆ ಭಾಗದಲ್ಲಿ ತುರಿಕೆ ಜಾಸ್ತಿ. ಈ ಪ್ಲಾಸ್ಟರ್ ಹಾಕಿಸಿಕೊಂಡವನ ತುರಿಕೆ ಸುಮ್ಮನೆ ಬರುವ ತುರಿಕೆಯಲ್ಲ. ಅದರೊಳಗೆ ಸರಿಯಾಗಿ ಗಾಳಿಯಾಡದೇ ಬೆವೆತು, ಬೆವರು ಒಣಗಿ ಕೆಸರಿನ ಪುಟ್ಟ ಪುಟ್ಟ ಕಣಗಳು ಉಂಟಾಗಿ ತುರಿಕೆ ಆರಂಭವಾಗುತ್ತದೆ. ಮಾತ್ರವಲ್ಲದೇ ಸರಿಯಾಗಿ ಗಾಳಿಯಾಡದೇ ಕೆಲವರ ಚರ್ಮದ ತೆಳುವಾದ ಮೇಲ್ಪದರ ಕಿತ್ತು ಹೋಗುವುದರಿಂದಲೂ ತುರಿಕೆಯಾಗುತ್ತದೆ. ಇಂತಹ ತುರಿಕೆಗಳು ಅದ್ಯಾವ ಪರಿ ರೋಗಿಯನ್ನು ಕೆರೆಯಲು ಪ್ರೇರೇಪಿಸುತ್ತದೆಂದರೆ ಆತ ಮುಂದೆ ಆಗಬಹುದಾದ ಪ್ರತಿಕೂಲ ಪರಿಣಾಮಗಳ ಬಗ್ಗೆಯೂ ಯೋಚಿಸಲಾರ. ಕೆಲವರು ಹಿಡಿಸೂಡಿ ಕಡ್ಡಿಗಳನ್ನು ಪ್ಲಾಸ್ಟರ್‌ನೊಳಕ್ಕೆ ತೂರಿಸಿ ಅದರಿಂದ ಕೆರೆಯುತ್ತಾರೆ.ಇನ್ನು ಕೆಲವರು ಸಪೂರದ ಕೋಲನ್ನು ತುರುಕಿ ಕೆರೆಯುವುದು, ಉದ್ದದ ಬಾಚಣಿಗೆ ತುರುಕಿ ಕೆರೆಯುವುದು ಇವೆಲ್ಲಾ ಸರ್ವೇ ಸಾಮಾನ್ಯ. ಮೊದಲ ಯತ್ನದಲ್ಲಿ ಕೇವಲ ಹಿಡಿಸೂಡಿ ಕಡ್ಡಿಗಳನ್ನು ಮಾತ್ರ ಪ್ಲಾಸ್ಟರ್‌ನ ಒಳ ತುರುಕಲು ಸಾಧ್ಯವಾದರೆ,ಹಂತ ಹಂತವಾಗಿ ಪ್ಲಾಸ್ಟರ್ ಮತ್ತು ಕೈಯ ನಡುವಿನ ಅಂತರ ಸ್ವಲ್ಪ ಸ್ವಲ್ಪವೇ ಹೆಚ್ಚುತ್ತಾ ಆ ಬಳಿಕ ಬೆತ್ತ, ಪುಟ್ಟ ಕೋಲು, ಬಾಚಣಿಗೆ ಇವೆಲ್ಲವನ್ನೂ ತುರುಕಿ ಕೆರೆಯುವಷ್ಟು ಜಾಗ ಸಿಗುತ್ತದೆ. ಕೆಲವರು ಹಿಡಿಸೂಡಿ ಕಡ್ಡಿ ತುರುಕಿ ಅವು ಪ್ಲಾಸ್ಟರ್‌ನೊಳಗೇ ಉಳಿದು ಪಜೀತಿಗೀಡು ಮಾಡುತ್ತದೆ. ಕೆಲವರು ಇಂತಹ ಪರಿಕರಗಳಿಂದೆಲ್ಲಾ ಕೆರೆದೂ ಕೆರೆದು
ದೀರ್ಘ ಕಾಲದ ಕೆರೆತದಿಂದ ಪ್ಲಾಸ್ಟರ್ ಒಳಗೇ ರಕ್ತ ಒಸರಿ, ಕೀವು ತುಂಬಿ ಪ್ಲಾಸ್ಟರ್‌ನೊಳಗಿಂದ ಕೆಟ್ಟ ವಾಸನೆ ಬರುವುದೂ ಇದೆ.ಅದಾಗ್ಯೂ ಇಂತಹ ಒಂದು ಕೆರೆತ ನೀಡುವ ಸುಖಕ್ಕೆ ಪಾರವೇ ಇರುವುದಿಲ್ಲ. ನಾನು ಅದೆಷ್ಟೋ ಮಂದಿಯ ಪ್ಲಾಸ್ಟರ್ ಬಿಚ್ಚುವಾಗ ಮುಖಕ್ಕೆ ಡಬಲ್ ಮಾಸ್ಕ್ ಹಾಕಬೇಕಾದ ಸನ್ನಿವೇಶ ನಿರ್ಮಾಣವಾದದ್ದೂ ಇದೆ. ಮೂಳೆ ಮುರಿತಕ್ಕೆ ಹಾಕಿದ ಪ್ಲಾಸ್ಟರ್‌ನಿಂದ ಮೂಳೆಗಳು ಮತ್ತೆ ಕೂಡಿದ್ದರೂ ಅನೇಕರಿಗೆ ಚರ್ಮ ರೋಗ ತಜ್ಞರಿಂದ ಮತ್ತೆ ಎರಡು ವಾರಗಳ ಚಿಕಿತ್ಸೆ ಪಡೆಯಬೇಕಾಗಿ ಬಂದದ್ದನ್ನೂ ನೋಡಿರುವೆ.
ಹಲವರು ಪ್ಲಾಸ್ಟರ್‌ನೊಳಗಿನ ತುರಿಕೆಯ ದೂರನ್ನು ಹಿಡ್ಕೊಂಡು ಬಂದಾಗ “ಏ ಅದೆಲ್ಲಾ ಇದ್ದದ್ದೇ ಕಾಮನ್, ಅದರೊಳಕ್ಕೆ ಕಡ್ಡಿ ಹಾಕಿ ಕೆರೆಯದಿರಿ, ಕೆರೆದರೆ ಇನ್ನಷ್ಟು ಫಜೀತಿಗೀಡಾಗುತ್ತೀರಿ, ಇನ್‌ಫೆಕ್ಷನ್ ಆಗುತ್ತದೆ ಎಂದೆಲ್ಲಾ ವ್ಯಂಗ್ಯದ, ಉಡಾಫೆಯ ದಾಟಿಯಲ್ಲಿ ಅನೇಕರನ್ನು ಗದರಿಸಿದ್ದಿದೆ. ಆದರೆ ಅವರ ಕಷ್ಟ ಸಲಹೆ ಕೊಡುವ ನನಗೆಂತು ಅರ್ಥವಾಗುವುದು..?

ನನ್ನ ಪಾಲಿಕ್ಲಿನಿಕ್‌ಗೆ ಬಂದವರಿಗೆಲ್ಲಾ ಸಲಹೆ ಕೊಡುವ ನನಗೂ ಒಮ್ಮೆ ಅಪಘಾತವಾಗಿ ಬಲ ಭುಜದ ಮೂಳೆ ಮುರಿಯಿತು. ಮೂರು ತಿಂಗಳು ಗೃಹಬಂಧಿಯಾಗಬೇಕಾಯಿತು. ನನ್ನ ಎರಡನೇ ಪತ್ನಿಯೆಂದೇ ಹೇಳಬಹುದಾದ ಬೈಕನ್ನು‌ ಐದು ತಿಂಗಳ ಕಾಲ ಮುಟ್ಟಲೇ ಬಾರದ ಪರಿಸ್ಥಿತಿಗೀಡಾದೆ. ನನ್ನ ಸ್ನೇಹಿತ ಡಾ.ಲಾರೆನ್ಸ್ ಭುಜದ ಶಸ್ತಕ್ರಿಯೆ ಮಾಡಿ ಕುತ್ತಿಗೆಯಿಂದ ಭುಜದತ್ತ ಬರುವ ಕ್ಲ್ಯಾವಿಕಲ್ ಬೋನ್ ಮೇಲೆ ಒಂದು ಸ್ಟೀಲ್ ಪಟ್ಟಿಯಿಟ್ಟು ಡ್ರಿಲ್ಲಿಂಗ್ ಮೆಶಿನಿನಿಂದ ತೂತು ಕೊರೆದು ಆರು ಸ್ಕ್ರೂಗಳನ್ನು ಅಳವಡಿಸಿದರು. ಶಸ್ತ್ರಕ್ರಿಯೆ ಮುಗಿದಾಗ ಮಂಪರಿನಲ್ಲಿದ್ದೆ. ಮರುದಿನ ಮುಂಜಾನೆ ನನ್ನನ್ನು ನೋಡಲು ಡಾ.ಲಾರೆನ್ಸ್ ಬಂದಾಗ ನಾನವರಿಗೆ ಹೇಳಿದ ಮೊದಲ ಮಾತು “ನಿಮ್ಮದು ಮತ್ತು ನನ್ನ ನೆರೆಮನೆಯ ಮ್ಯಾಕ್ಸಿಂ ಮಾಮನದು ಒಂದೇ ಕೆಲಸ. ಇಬ್ಬರೂ ಬಡಗಿಗಳು. ವ್ಯತ್ಯಾಸವಿಷ್ಟೆ, ಅವರು ಮರದ ಹಲಗೆಗೆ ಡ್ರಿಲ್ ಮೆಶಿನ್‌ನಿಂದ ತೂತು ಕೊರೆದು ಸ್ಕ್ರೂ ಅಳವಡಿಸುತ್ತಾರೆ. ನೀವು ಮನುಷ್ಯನ ಮೂಳೆಗಳ ಮೇಲೆ ಆ ಕೆಲಸ ಮಾಡುತ್ತೀರಿ..” ಲೋ ತಲೆಹರಟೆ..ಅದೆಲ್ಲಾ ಕ್ಲಿನಿಕಲ್ಲಿ ಆರಾಮಾಗಿ ಕೂತು ಮಾತಾಡೋಣ, ಈಗ ನೋವು ಹೇಗಿದೆ ಎಂದು ಹೇಳು ಮಾರಾಯ ಎನ್ನುತ್ತಾ ನಗತೊಡಗಿದರು.

ಶಸ್ತ್ರ ಚಿಕಿತ್ಸೆಯ ಬಳಿಕ ಆಸ್ಪತ್ರೆಯಲ್ಲಿದ್ದ ಎರಡು ದಿನ ಬ್ಯಾಂಡೇಜ್ ಬಟ್ಟೆಯ ಹಗ್ಗವೊಂದನ್ನು ಕುತ್ತಿಗೆಯಿಂದ ಇಳಿಬಿಟ್ಟು ಮೊಣಕೈಗಿಂತ ಕೆಳಗಿನ ಭಾಗವನ್ನು ನಾಭಿಯ ನೇರಕ್ಕಿಟ್ಟು ಕಟ್ಟಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾಗುವ ದಿನ ಮೆಡಿಕಲ್ ರೆಪ್ ಒಬ್ಬ ನನ್ನ ರೂಮಿಗೆ ಬಂದು ಲಾರೆನ್ಸ್ ಸರ್ ಕಳಿಸಿದ್ದೆಂದು ಒಂದು ಆರ್ಮ್ ಪೌಚ್ ಎಂಬ ಚೀಲವನ್ನು ಉಚಿತವಾಗಿ ತಂದು ಕೊಟ್ಟ. ಆ ಬಳಿಕ ನರ್ಸ್ ಒಬ್ಬಾಕೆ ಬಂದು ಕುತ್ತಿಗೆಯಿಂದ ಕೈಗೆ ಇಳಿಬಿಟ್ಟು ಕಟ್ಟಿದ್ದ ಬ್ಯಾಂಡೇಜ್ ಬಟ್ಟೆಯ ಹಗ್ಗವನ್ನು ಬಿಚ್ಚಿ ಕಸದ ಬುಟ್ಟಿಗೆಸೆದು, ಈ ಆರ್ಮ್ ಪೌಚ್‌ನ ತುದಿಯನ್ನು ನನ್ನ ಕುತ್ತಿಗೆಗೆ ಕಟ್ಟಿ ಅದರ ಚೀಲದಂತಹ ಜಾಗದಲ್ಲಿ ಕೈಯನ್ನು ಬಂಧಿಸಿದಳು. ಅಬ್ಬಾ ಆ ಬ್ಯಾಂಡೇಜ್ ಹಗ್ಗದ ಕಿರಿಕಿರಿಗಿಂತ ಇದೇ ವಾಸಿಯೆಂದೆನಿಸಿತು.

ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ತಲುಪಿ ಇನ್ನೂ ಎರಡು ತಾಸಾಗಲಿಲ್ಲ.. ನನ್ನ ಬೆವರು ನನಗೇ ವಾಸನೆ ಬರತೊಡಗಿತು. ಕೈಯನ್ನು ಆಚೀಚೆ ಅಲುಗಾಡಿಸಲಾಗದೇ ಕಂಕುಳಿಗೆ ತಾಗಿಯೇ ಇದ್ದುದರಿಂದ ಬೆವರುವಿಕೆ ಸ್ವಲ್ಪ ಜಾಸ್ತಿಯೇ ಇತ್ತು. ಅದರ ಮೇಲೆ ಈ ಆರ್ಮ್ ಪೌಚ್‌ ಎಂಬ ಮುಚ್ಚಿದ ಚೀಲ ಬೇರೆ. ಅದೂ ಅಲ್ಲದೇ ಮಾರ್ಚ್ ತಿಂಗಳು. ಮಂಗಳೂರಲ್ಲಿ ಮಾರ್ಚೆಂದರೆ ಬಿರು ಬೇಸಗೆಯ ಕಾಲ. ಕಂಕುಳಡಿಯ ಕೂದಲು ಬೋಳಿಸಿದರೆ ಸ್ವಲ್ಪ ವಾಸನೆ ಕಡಿಮೆಯಾಗಬಹುದೇನೋ ಎಂಬ ದೂರದ ಆಸೆ. ಕಂಕುಳೆತ್ತಲಾಗದಿದ್ದರೆ ಕೂದಲು ಬೋಳಿಸುವುದೆಂತು..? ಒಟ್ಟಿನಲ್ಲಿ ವಿಚಿತ್ರ ಇಕ್ಕಟ್ಟು.

ಸುಮ್ಮನೆ ತಿಂದುಂಡು ಹಾಸಿಗೆಯಲ್ಲಿ ಬಿದ್ದು ಕೊಂಡಿರುವುದೇ ದಿನಚರಿಯಾಗಿತ್ತು. ಮಲಗಿದಲ್ಲಿಂದ ಮಗ್ಗುಲು ಬದಲಿಸಲೂ ಹೆಗಲಿಗೆ ಜಡಿಯಲಾಗಿದ್ದ ಪಟ್ಟಿ ಮತ್ತು ಸ್ಕ್ರೂಗಳು ಬಿಡುತ್ತಿರಲಿಲ್ಲ. ಹೊತ್ತು ಕಳೆಯಲು ಪುಸ್ತಕಗಳು ಮತ್ತು ಮೊಬೈಲಿನ ಹೊರತಾಗಿ ಅನ್ಯ ದಾರಿಯಿರಲಿಲ್ಲ. ಹಾಗೆ ಓದುತ್ತಿರಲು ಪಿ. ಲಂಕೇಶರ ಕವನವೊಂದು ಓದ ಸಿಕ್ಕಿತು.
“ಮಾತುಗಳಿಗೆ
ಗಾಯನದ
ನರ್ತನದ
ಎಳೆ ನಗೆಯ
ತಿಳಿ ಹಸಿರ
ಕೇವಲ ಕಮ್ಮನೆಯ
ಕಂಕುಳ ಬೆವರ ವಾಸನೆಯ
ಕೂಡಲಾರದವ
ಕವಿಯಾಗಲಾರ”
ಈ ಕಾವ್ಯದ ಓದು ಮತ್ತು ನನ್ನನ್ನು ಕಾಡುತ್ತಿರುವ ಬೆವರ ವಾಸನೆ ನನಗೆ ಸತ್ಯವೊಂದರ ಸಾಕ್ಷಾತ್ಕಾರ ಮಾಡಿಸಿತು.
ಅದು ಕಳೆದ ಹದಿನೈದು ವರ್ಷಗಳಿಂದ ಬರೆಯುತ್ತಿದ್ದರೂ ಕಾವ್ಯ ಪ್ರಕಾರ ನನಗೇಕೆ ಒಲಿಯಲೇ ಇಲ್ಲ ಎಂಬುದು ಪರಮ ಸತ್ಯ. ನನ್ನ ಕಂಕುಳ ಬೆವರ ವಾಸನೆಯೇ ನನಗೆ ಅಸಹ್ಯವಾಗುತ್ತಿರಲು ನಾನೆಂತು ಕವಿಯಾಗಲು ಸಾಧ್ಯ..?

ಮತ್ತೆ ತುರಿಕೆಯ ವಿಚಾರಕ್ಕೆ ಬರುತ್ತೇನೆ. ಕಂಕುಳ ಬೆವರ ವಾಸನೆಯೆಂದ ಮೇಲೆ ತುರಿಕೆ ಇದ್ದೇ ಇರುತ್ತೆ. ಆರ್ಮ್ ಪೌಚಿನಲ್ಲಿ ಬಂಧಿಯಾದ ಬಲ ಕಂಕುಳನ್ನು ಎಡಗೈ ಬೆರಳುಗಳಿಂದ ಕೆರೆಯಬಹುದು. ಈ ಎಡ ಕಂಕುಳು ಕೆರೆಯುವ ಕಷ್ಟ ಹೇಳತೀರದು. ಇನ್ನು ಬೆನ್ನು ತುರಿಸಿದರೆ ಜಾನುವಾರುಗಳು ಕಂಪೌಂಡ್ ಗೋಡೆಗಳಿಗೆ, ಮರಗಳಿಗೆ ಮೈಯುಜ್ಜುವಂತೆ ನಾನೂ ನನ್ನ ಬೆನ್ನನ್ನು ಗೋಡೆಗೆ, ಬಾಗಿಲ ದಾರಂದಗಳಿಗೆಲ್ಲಾ ಉಜ್ಜುತ್ತಾ ಸಮಾಧಾನಪಡುತ್ತಿದ್ದೆ. ಈ ಕೆರೆಯಲಾಗದ ತುರಿಕೆಯ ಕಷ್ಟ ಮುಗಿದು, ಆರ್ಮ್ ಪೌಚೆಂಬ ಕೈ ಕೋಳ, ಮನೆಯೆಂಬ ಜೈಲಿನಿಂದ ಬಿಡುಗಡೆಯಾಗುವ ಹೊತ್ತಿಗೆ ಸಾಕು ಸಾಕಾಗಿ ಬಿಟ್ಟಿತ್ತು.

ಈಗೆಲ್ಲಾ ಕೈ‌ ಮುರಿದು‌ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಕಿದವರಿಗೆ ಬುದ್ಧಿ ಹೇಳುವಾಗ ಒಂದಿನಿತೂ ವ್ಯಂಗ್ಯ ದಾಟಿಯಲ್ಲಿ ಮಾತನಾಡುವುದಿಲ್ಲ. ಯಾವುದೇ ನೋವು, ಕಷ್ಟ ಸ್ವಯಂ ಅನುಭವಿಸದ ಹೊರತಾಗಿ ಅನುಭವಿಸಿದವರ ಸಂಕಟ, ಅಸಹಾಯಕತೆ ಅರಿಯಲು ಸಾಧ್ಯವಿಲ್ಲ.

* ಇಸ್ಮತ್ ಪಜೀರ್

(ಮಂಗಳೂರಿನ ಯುವ ಲೇಖಕರಾದ ಇಸ್ಮತ್ ಪಜೀರ್ ಬ್ಯಾರಿ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿದ್ದರು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸಿ ಅದಕ್ಕೆ ರಾಜೀನಾಮೆ ನೀಡಿ ಹೊರಬಂದವರು. ತಮ್ಮದೇ ಆದ ಪಾಲಿಕ್ಲಿನಿಕ್ ನಡೆಸುತ್ತಿದ್ದಾರೆ.)

ಇದನ್ನೂ ಓದಿ: ಪ್ರಬಂಧ: ನಾಯಿ ಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...