Homeಕರ್ನಾಟಕಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

ಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

- Advertisement -
- Advertisement -

1,399 ರೂಪಾಯಿ ಮೌಲ್ಯದ ಒಂದು ಜೊತೆ ಟ್ರಕ್ಕಿಂಗ್ ಟ್ರೌಸರ್‌ ಅನ್ನು ತಲುಪಿಸಲು ವಿಫಲವಾದ ಗ್ರಾಹಕನಿಗೆ 35,000 ರೂಪಾಯಿ ಪಾವತಿಸಲು ಕರ್ನಾಟಕದ ಗ್ರಾಹಕ ನ್ಯಾಯಾಲಯವು ಕ್ರೀಡಾ ಸಲಕರಣೆಗಳ ಮಾರಾಟ ಸಂಸ್ಥೆ ಡೆಕಾಥ್ಲಾನ್‌ಗೆ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳೂರಿನ ನಿವಾಸಿ 23 ವರ್ಷದ ಮೋಹಿತ್ ಅವರು ಡೆಕಾಥ್ಲಾನ್ ಅವರು ಆರ್ಡರ್ ಮಾಡಿದ ಪ್ಯಾಂಟ್ ಅನ್ನು ತಲುಪಿಸಲು ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಸಂಪರ್ಕಿಸಿದ್ದರು.

ಕಳೆದ ವರ್ಷ ಡಿಸೆಂಬರ್ 22 ರಂದು, ಅವರು ಫೋರ್ಕ್ಲಾಜ್ ಟ್ರೆಕ್ಕಿಂಗ್ ಟ್ರೌಸರ್ MT-500 ಅನ್ನು ಖರೀದಿಸುವ ಬಗ್ಗೆ ಡೆಕಾಥ್ಲಾನ್ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದರು. ಆದರೆ ಈ ಉತ್ಪನ್ನವು ಬೆಂಗಳೂರಿನ ETA ಮಾಲ್‌ನಲ್ಲಿರುವ ಚೈನ್ಸ್ ಸ್ಟೋರ್‌ನಲ್ಲಿ ಮಾತ್ರ ಲಭ್ಯವಿದೆ ಎಂದು ತಿಳಿಸಲಾಗಿತ್ತು. ಅದೇ ವೇಳೆ ಅಧಿಕಾರಿಗಳು ಹಣವನ್ನು ಆನ್‌ಲೈನ್‌ನಲ್ಲಿ ಪಾವತಿಸುವಂತೆ ಕೇಳಿದ್ದರು ಮತ್ತು ಪ್ಯಾಂಟ್ ಅನ್ನು ಅವರ ವಿಳಾಸಕ್ಕೆ ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದರು.

ಅದರಂತೆ ಮೋಹಿತ್ ಆನ್‌ಲೈನ್‌ನಲ್ಲಿ 1,399 ರೂ. ಪಾವತಿಸಿದ್ದರು. ಆದರೆ ಅವರು ಆರ್ಡರ್ ಮಾಡಿದ್ದ ಟ್ರೌಸರ್‌ ಅವರಿಗೆ ತಲುಪಿರಲಿಲ್ಲ. ಈ ಬಗ್ಗೆ ಇಟಿಎ ಮಾಲ್‌ನಲ್ಲಿರುವ ಡೆಕಾಥ್ಲಾನ್ ಮಳಿಗೆಯ ಸಿಬ್ಬಂದಿಯನ್ನು ವಿಚಾರಿಸಿದಾಗ ಉತ್ಪನ್ನ ನಾಪತ್ತೆಯಾಗಿದೆ ಎಂದು ತಿಳಿಸಿದ್ದರು.

ಇದನ್ನೂಓದಿ: ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

ಫೆಬ್ರವರಿ 6 ರಂದು, ಮೋಹಿತ್ ಇಟಿಎ ಮಾಲ್‌ನಲ್ಲಿರುವ ಅಂಗಡಿಗೆ ಭೇಟಿ ನೀಡಿದಾಗ, ಡೆಕಾಥ್ಲಾನ್‌ ಅವರ ಹಣವನ್ನು ಹಿಂತಿರುಗಿಸುವುದಾಗಿ ಭರವಸೆ ನೀಡಿತ್ತು. ಆದಾಗ್ಯೂ, ಫೆಬ್ರವರಿ 10 ಮತ್ತು 13 ರಂದು ಫೋನ್ ಕರೆ ಮಾಡಿ ಹಣ ವಾಪಾಸಾತಿಗೆ ವಿನಂತಿ ಮಾಡಿದ್ದರೂ, ಕಂಪೆನಿಯು ಅವರಿಗೆ ಹಣ ಮರುಪಾವತಿ ಮಾಡಿರಲಿಲ್ಲ.

ನಂತರ ಮೋಹಿತ್ ಅವರು ಏಪ್ರಿಲ್ 9 ರಂದು ಲೀಗಲ್ ನೋಟಿಸ್ ಕಳುಹಿಸಿದ್ದರು. ಈ ವೇಳೆ ಇಟಿಎ ಮಾಲ್‌ನಲ್ಲಿರುವ ಅಂಗಡಿಯನ್ನು ಮುಚ್ಚಲಾಗಿದೆ ಎಂಬ ಉತ್ತರವನ್ನು ನೀಡಲಾಗಿತ್ತು. ಅದರ ನಂತರ ಅವರು ಗ್ರಾಹಕ ನ್ಯಾಯಾಲಯಕ್ಕೆ ತೆರಳಿದ್ದರು. ಹಾಗಾಗಿ ನ್ಯಾಯಾಲಯವು ಡೆಕಾಥ್ಲಾನ್‌ಗೆ ನೋಟಿಸ್‌ಗಳನ್ನು ಕಳುಹಿಸಿತ್ತು. ಅದಾಗ್ಯೂ, ಡೆಕಾಥ್ಲಾನ್‌ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ.

ಗ್ರಾಹಕರ ನ್ಯಾಯಾಲಯದ ಮುಖ್ಯಸ್ಥ ಸೋಮಶೇಖರಪ್ಪ ಹಂದಿಗೋಳ ಅವರು ಮಂಗಳವಾರ ತಮ್ಮ ಆದೇಶದಲ್ಲಿ ಮೋಹಿತ್ ಅವರ 1399 ರೂ. ಮತ್ತು ಸೇವಾ ನ್ಯೂನತೆಗೆ 25000 ರೂ. ಮತ್ತು ವ್ಯಾಜ್ಯ ವೆಚ್ಚಕ್ಕಾಗಿ 10000 ರೂ. ಪಾವತಿಸಲು ಕಂಪನಿಗೆ ಆದೇಶಿಸಿದ್ದಾರೆ.

ವಿಡಿಯೊ ನೋಡಿ: ರೈತರ ಕರೆ ಮೇರೆಗೆ ಜಿಯೋ ಇಂದ ಪೋರ್ಟ್‌ ಆದವರೊಂದಿಗೆ ಜಿಯೋ ಕಂಪೆನಿಯವರ ಸ್ವಾರಸ್ಯಕರ ಸಂಭಾಷಣೆ ಕೇಳಿ. JioCustomerCare

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...