Homeಕರ್ನಾಟಕಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

ಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

- Advertisement -
- Advertisement -

1,399 ರೂಪಾಯಿ ಮೌಲ್ಯದ ಒಂದು ಜೊತೆ ಟ್ರಕ್ಕಿಂಗ್ ಟ್ರೌಸರ್‌ ಅನ್ನು ತಲುಪಿಸಲು ವಿಫಲವಾದ ಗ್ರಾಹಕನಿಗೆ 35,000 ರೂಪಾಯಿ ಪಾವತಿಸಲು ಕರ್ನಾಟಕದ ಗ್ರಾಹಕ ನ್ಯಾಯಾಲಯವು ಕ್ರೀಡಾ ಸಲಕರಣೆಗಳ ಮಾರಾಟ ಸಂಸ್ಥೆ ಡೆಕಾಥ್ಲಾನ್‌ಗೆ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳೂರಿನ ನಿವಾಸಿ 23 ವರ್ಷದ ಮೋಹಿತ್ ಅವರು ಡೆಕಾಥ್ಲಾನ್ ಅವರು ಆರ್ಡರ್ ಮಾಡಿದ ಪ್ಯಾಂಟ್ ಅನ್ನು ತಲುಪಿಸಲು ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಸಂಪರ್ಕಿಸಿದ್ದರು.

ಕಳೆದ ವರ್ಷ ಡಿಸೆಂಬರ್ 22 ರಂದು, ಅವರು ಫೋರ್ಕ್ಲಾಜ್ ಟ್ರೆಕ್ಕಿಂಗ್ ಟ್ರೌಸರ್ MT-500 ಅನ್ನು ಖರೀದಿಸುವ ಬಗ್ಗೆ ಡೆಕಾಥ್ಲಾನ್ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದರು. ಆದರೆ ಈ ಉತ್ಪನ್ನವು ಬೆಂಗಳೂರಿನ ETA ಮಾಲ್‌ನಲ್ಲಿರುವ ಚೈನ್ಸ್ ಸ್ಟೋರ್‌ನಲ್ಲಿ ಮಾತ್ರ ಲಭ್ಯವಿದೆ ಎಂದು ತಿಳಿಸಲಾಗಿತ್ತು. ಅದೇ ವೇಳೆ ಅಧಿಕಾರಿಗಳು ಹಣವನ್ನು ಆನ್‌ಲೈನ್‌ನಲ್ಲಿ ಪಾವತಿಸುವಂತೆ ಕೇಳಿದ್ದರು ಮತ್ತು ಪ್ಯಾಂಟ್ ಅನ್ನು ಅವರ ವಿಳಾಸಕ್ಕೆ ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದರು.

ಅದರಂತೆ ಮೋಹಿತ್ ಆನ್‌ಲೈನ್‌ನಲ್ಲಿ 1,399 ರೂ. ಪಾವತಿಸಿದ್ದರು. ಆದರೆ ಅವರು ಆರ್ಡರ್ ಮಾಡಿದ್ದ ಟ್ರೌಸರ್‌ ಅವರಿಗೆ ತಲುಪಿರಲಿಲ್ಲ. ಈ ಬಗ್ಗೆ ಇಟಿಎ ಮಾಲ್‌ನಲ್ಲಿರುವ ಡೆಕಾಥ್ಲಾನ್ ಮಳಿಗೆಯ ಸಿಬ್ಬಂದಿಯನ್ನು ವಿಚಾರಿಸಿದಾಗ ಉತ್ಪನ್ನ ನಾಪತ್ತೆಯಾಗಿದೆ ಎಂದು ತಿಳಿಸಿದ್ದರು.

ಇದನ್ನೂಓದಿ: ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

ಫೆಬ್ರವರಿ 6 ರಂದು, ಮೋಹಿತ್ ಇಟಿಎ ಮಾಲ್‌ನಲ್ಲಿರುವ ಅಂಗಡಿಗೆ ಭೇಟಿ ನೀಡಿದಾಗ, ಡೆಕಾಥ್ಲಾನ್‌ ಅವರ ಹಣವನ್ನು ಹಿಂತಿರುಗಿಸುವುದಾಗಿ ಭರವಸೆ ನೀಡಿತ್ತು. ಆದಾಗ್ಯೂ, ಫೆಬ್ರವರಿ 10 ಮತ್ತು 13 ರಂದು ಫೋನ್ ಕರೆ ಮಾಡಿ ಹಣ ವಾಪಾಸಾತಿಗೆ ವಿನಂತಿ ಮಾಡಿದ್ದರೂ, ಕಂಪೆನಿಯು ಅವರಿಗೆ ಹಣ ಮರುಪಾವತಿ ಮಾಡಿರಲಿಲ್ಲ.

ನಂತರ ಮೋಹಿತ್ ಅವರು ಏಪ್ರಿಲ್ 9 ರಂದು ಲೀಗಲ್ ನೋಟಿಸ್ ಕಳುಹಿಸಿದ್ದರು. ಈ ವೇಳೆ ಇಟಿಎ ಮಾಲ್‌ನಲ್ಲಿರುವ ಅಂಗಡಿಯನ್ನು ಮುಚ್ಚಲಾಗಿದೆ ಎಂಬ ಉತ್ತರವನ್ನು ನೀಡಲಾಗಿತ್ತು. ಅದರ ನಂತರ ಅವರು ಗ್ರಾಹಕ ನ್ಯಾಯಾಲಯಕ್ಕೆ ತೆರಳಿದ್ದರು. ಹಾಗಾಗಿ ನ್ಯಾಯಾಲಯವು ಡೆಕಾಥ್ಲಾನ್‌ಗೆ ನೋಟಿಸ್‌ಗಳನ್ನು ಕಳುಹಿಸಿತ್ತು. ಅದಾಗ್ಯೂ, ಡೆಕಾಥ್ಲಾನ್‌ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ.

ಗ್ರಾಹಕರ ನ್ಯಾಯಾಲಯದ ಮುಖ್ಯಸ್ಥ ಸೋಮಶೇಖರಪ್ಪ ಹಂದಿಗೋಳ ಅವರು ಮಂಗಳವಾರ ತಮ್ಮ ಆದೇಶದಲ್ಲಿ ಮೋಹಿತ್ ಅವರ 1399 ರೂ. ಮತ್ತು ಸೇವಾ ನ್ಯೂನತೆಗೆ 25000 ರೂ. ಮತ್ತು ವ್ಯಾಜ್ಯ ವೆಚ್ಚಕ್ಕಾಗಿ 10000 ರೂ. ಪಾವತಿಸಲು ಕಂಪನಿಗೆ ಆದೇಶಿಸಿದ್ದಾರೆ.

ವಿಡಿಯೊ ನೋಡಿ: ರೈತರ ಕರೆ ಮೇರೆಗೆ ಜಿಯೋ ಇಂದ ಪೋರ್ಟ್‌ ಆದವರೊಂದಿಗೆ ಜಿಯೋ ಕಂಪೆನಿಯವರ ಸ್ವಾರಸ್ಯಕರ ಸಂಭಾಷಣೆ ಕೇಳಿ. JioCustomerCare

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...