Homeಕರ್ನಾಟಕಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

ಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

- Advertisement -
- Advertisement -

1,399 ರೂಪಾಯಿ ಮೌಲ್ಯದ ಒಂದು ಜೊತೆ ಟ್ರಕ್ಕಿಂಗ್ ಟ್ರೌಸರ್‌ ಅನ್ನು ತಲುಪಿಸಲು ವಿಫಲವಾದ ಗ್ರಾಹಕನಿಗೆ 35,000 ರೂಪಾಯಿ ಪಾವತಿಸಲು ಕರ್ನಾಟಕದ ಗ್ರಾಹಕ ನ್ಯಾಯಾಲಯವು ಕ್ರೀಡಾ ಸಲಕರಣೆಗಳ ಮಾರಾಟ ಸಂಸ್ಥೆ ಡೆಕಾಥ್ಲಾನ್‌ಗೆ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳೂರಿನ ನಿವಾಸಿ 23 ವರ್ಷದ ಮೋಹಿತ್ ಅವರು ಡೆಕಾಥ್ಲಾನ್ ಅವರು ಆರ್ಡರ್ ಮಾಡಿದ ಪ್ಯಾಂಟ್ ಅನ್ನು ತಲುಪಿಸಲು ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಸಂಪರ್ಕಿಸಿದ್ದರು.

ಕಳೆದ ವರ್ಷ ಡಿಸೆಂಬರ್ 22 ರಂದು, ಅವರು ಫೋರ್ಕ್ಲಾಜ್ ಟ್ರೆಕ್ಕಿಂಗ್ ಟ್ರೌಸರ್ MT-500 ಅನ್ನು ಖರೀದಿಸುವ ಬಗ್ಗೆ ಡೆಕಾಥ್ಲಾನ್ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದರು. ಆದರೆ ಈ ಉತ್ಪನ್ನವು ಬೆಂಗಳೂರಿನ ETA ಮಾಲ್‌ನಲ್ಲಿರುವ ಚೈನ್ಸ್ ಸ್ಟೋರ್‌ನಲ್ಲಿ ಮಾತ್ರ ಲಭ್ಯವಿದೆ ಎಂದು ತಿಳಿಸಲಾಗಿತ್ತು. ಅದೇ ವೇಳೆ ಅಧಿಕಾರಿಗಳು ಹಣವನ್ನು ಆನ್‌ಲೈನ್‌ನಲ್ಲಿ ಪಾವತಿಸುವಂತೆ ಕೇಳಿದ್ದರು ಮತ್ತು ಪ್ಯಾಂಟ್ ಅನ್ನು ಅವರ ವಿಳಾಸಕ್ಕೆ ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದರು.

ಅದರಂತೆ ಮೋಹಿತ್ ಆನ್‌ಲೈನ್‌ನಲ್ಲಿ 1,399 ರೂ. ಪಾವತಿಸಿದ್ದರು. ಆದರೆ ಅವರು ಆರ್ಡರ್ ಮಾಡಿದ್ದ ಟ್ರೌಸರ್‌ ಅವರಿಗೆ ತಲುಪಿರಲಿಲ್ಲ. ಈ ಬಗ್ಗೆ ಇಟಿಎ ಮಾಲ್‌ನಲ್ಲಿರುವ ಡೆಕಾಥ್ಲಾನ್ ಮಳಿಗೆಯ ಸಿಬ್ಬಂದಿಯನ್ನು ವಿಚಾರಿಸಿದಾಗ ಉತ್ಪನ್ನ ನಾಪತ್ತೆಯಾಗಿದೆ ಎಂದು ತಿಳಿಸಿದ್ದರು.

ಇದನ್ನೂಓದಿ: ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

ಫೆಬ್ರವರಿ 6 ರಂದು, ಮೋಹಿತ್ ಇಟಿಎ ಮಾಲ್‌ನಲ್ಲಿರುವ ಅಂಗಡಿಗೆ ಭೇಟಿ ನೀಡಿದಾಗ, ಡೆಕಾಥ್ಲಾನ್‌ ಅವರ ಹಣವನ್ನು ಹಿಂತಿರುಗಿಸುವುದಾಗಿ ಭರವಸೆ ನೀಡಿತ್ತು. ಆದಾಗ್ಯೂ, ಫೆಬ್ರವರಿ 10 ಮತ್ತು 13 ರಂದು ಫೋನ್ ಕರೆ ಮಾಡಿ ಹಣ ವಾಪಾಸಾತಿಗೆ ವಿನಂತಿ ಮಾಡಿದ್ದರೂ, ಕಂಪೆನಿಯು ಅವರಿಗೆ ಹಣ ಮರುಪಾವತಿ ಮಾಡಿರಲಿಲ್ಲ.

ನಂತರ ಮೋಹಿತ್ ಅವರು ಏಪ್ರಿಲ್ 9 ರಂದು ಲೀಗಲ್ ನೋಟಿಸ್ ಕಳುಹಿಸಿದ್ದರು. ಈ ವೇಳೆ ಇಟಿಎ ಮಾಲ್‌ನಲ್ಲಿರುವ ಅಂಗಡಿಯನ್ನು ಮುಚ್ಚಲಾಗಿದೆ ಎಂಬ ಉತ್ತರವನ್ನು ನೀಡಲಾಗಿತ್ತು. ಅದರ ನಂತರ ಅವರು ಗ್ರಾಹಕ ನ್ಯಾಯಾಲಯಕ್ಕೆ ತೆರಳಿದ್ದರು. ಹಾಗಾಗಿ ನ್ಯಾಯಾಲಯವು ಡೆಕಾಥ್ಲಾನ್‌ಗೆ ನೋಟಿಸ್‌ಗಳನ್ನು ಕಳುಹಿಸಿತ್ತು. ಅದಾಗ್ಯೂ, ಡೆಕಾಥ್ಲಾನ್‌ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ.

ಗ್ರಾಹಕರ ನ್ಯಾಯಾಲಯದ ಮುಖ್ಯಸ್ಥ ಸೋಮಶೇಖರಪ್ಪ ಹಂದಿಗೋಳ ಅವರು ಮಂಗಳವಾರ ತಮ್ಮ ಆದೇಶದಲ್ಲಿ ಮೋಹಿತ್ ಅವರ 1399 ರೂ. ಮತ್ತು ಸೇವಾ ನ್ಯೂನತೆಗೆ 25000 ರೂ. ಮತ್ತು ವ್ಯಾಜ್ಯ ವೆಚ್ಚಕ್ಕಾಗಿ 10000 ರೂ. ಪಾವತಿಸಲು ಕಂಪನಿಗೆ ಆದೇಶಿಸಿದ್ದಾರೆ.

ವಿಡಿಯೊ ನೋಡಿ: ರೈತರ ಕರೆ ಮೇರೆಗೆ ಜಿಯೋ ಇಂದ ಪೋರ್ಟ್‌ ಆದವರೊಂದಿಗೆ ಜಿಯೋ ಕಂಪೆನಿಯವರ ಸ್ವಾರಸ್ಯಕರ ಸಂಭಾಷಣೆ ಕೇಳಿ. JioCustomerCare

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...