Homeಕರ್ನಾಟಕಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

ಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

- Advertisement -
- Advertisement -

1,399 ರೂಪಾಯಿ ಮೌಲ್ಯದ ಒಂದು ಜೊತೆ ಟ್ರಕ್ಕಿಂಗ್ ಟ್ರೌಸರ್‌ ಅನ್ನು ತಲುಪಿಸಲು ವಿಫಲವಾದ ಗ್ರಾಹಕನಿಗೆ 35,000 ರೂಪಾಯಿ ಪಾವತಿಸಲು ಕರ್ನಾಟಕದ ಗ್ರಾಹಕ ನ್ಯಾಯಾಲಯವು ಕ್ರೀಡಾ ಸಲಕರಣೆಗಳ ಮಾರಾಟ ಸಂಸ್ಥೆ ಡೆಕಾಥ್ಲಾನ್‌ಗೆ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳೂರಿನ ನಿವಾಸಿ 23 ವರ್ಷದ ಮೋಹಿತ್ ಅವರು ಡೆಕಾಥ್ಲಾನ್ ಅವರು ಆರ್ಡರ್ ಮಾಡಿದ ಪ್ಯಾಂಟ್ ಅನ್ನು ತಲುಪಿಸಲು ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಸಂಪರ್ಕಿಸಿದ್ದರು.

ಕಳೆದ ವರ್ಷ ಡಿಸೆಂಬರ್ 22 ರಂದು, ಅವರು ಫೋರ್ಕ್ಲಾಜ್ ಟ್ರೆಕ್ಕಿಂಗ್ ಟ್ರೌಸರ್ MT-500 ಅನ್ನು ಖರೀದಿಸುವ ಬಗ್ಗೆ ಡೆಕಾಥ್ಲಾನ್ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದರು. ಆದರೆ ಈ ಉತ್ಪನ್ನವು ಬೆಂಗಳೂರಿನ ETA ಮಾಲ್‌ನಲ್ಲಿರುವ ಚೈನ್ಸ್ ಸ್ಟೋರ್‌ನಲ್ಲಿ ಮಾತ್ರ ಲಭ್ಯವಿದೆ ಎಂದು ತಿಳಿಸಲಾಗಿತ್ತು. ಅದೇ ವೇಳೆ ಅಧಿಕಾರಿಗಳು ಹಣವನ್ನು ಆನ್‌ಲೈನ್‌ನಲ್ಲಿ ಪಾವತಿಸುವಂತೆ ಕೇಳಿದ್ದರು ಮತ್ತು ಪ್ಯಾಂಟ್ ಅನ್ನು ಅವರ ವಿಳಾಸಕ್ಕೆ ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದರು.

ಅದರಂತೆ ಮೋಹಿತ್ ಆನ್‌ಲೈನ್‌ನಲ್ಲಿ 1,399 ರೂ. ಪಾವತಿಸಿದ್ದರು. ಆದರೆ ಅವರು ಆರ್ಡರ್ ಮಾಡಿದ್ದ ಟ್ರೌಸರ್‌ ಅವರಿಗೆ ತಲುಪಿರಲಿಲ್ಲ. ಈ ಬಗ್ಗೆ ಇಟಿಎ ಮಾಲ್‌ನಲ್ಲಿರುವ ಡೆಕಾಥ್ಲಾನ್ ಮಳಿಗೆಯ ಸಿಬ್ಬಂದಿಯನ್ನು ವಿಚಾರಿಸಿದಾಗ ಉತ್ಪನ್ನ ನಾಪತ್ತೆಯಾಗಿದೆ ಎಂದು ತಿಳಿಸಿದ್ದರು.

ಇದನ್ನೂಓದಿ: ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

ಫೆಬ್ರವರಿ 6 ರಂದು, ಮೋಹಿತ್ ಇಟಿಎ ಮಾಲ್‌ನಲ್ಲಿರುವ ಅಂಗಡಿಗೆ ಭೇಟಿ ನೀಡಿದಾಗ, ಡೆಕಾಥ್ಲಾನ್‌ ಅವರ ಹಣವನ್ನು ಹಿಂತಿರುಗಿಸುವುದಾಗಿ ಭರವಸೆ ನೀಡಿತ್ತು. ಆದಾಗ್ಯೂ, ಫೆಬ್ರವರಿ 10 ಮತ್ತು 13 ರಂದು ಫೋನ್ ಕರೆ ಮಾಡಿ ಹಣ ವಾಪಾಸಾತಿಗೆ ವಿನಂತಿ ಮಾಡಿದ್ದರೂ, ಕಂಪೆನಿಯು ಅವರಿಗೆ ಹಣ ಮರುಪಾವತಿ ಮಾಡಿರಲಿಲ್ಲ.

ನಂತರ ಮೋಹಿತ್ ಅವರು ಏಪ್ರಿಲ್ 9 ರಂದು ಲೀಗಲ್ ನೋಟಿಸ್ ಕಳುಹಿಸಿದ್ದರು. ಈ ವೇಳೆ ಇಟಿಎ ಮಾಲ್‌ನಲ್ಲಿರುವ ಅಂಗಡಿಯನ್ನು ಮುಚ್ಚಲಾಗಿದೆ ಎಂಬ ಉತ್ತರವನ್ನು ನೀಡಲಾಗಿತ್ತು. ಅದರ ನಂತರ ಅವರು ಗ್ರಾಹಕ ನ್ಯಾಯಾಲಯಕ್ಕೆ ತೆರಳಿದ್ದರು. ಹಾಗಾಗಿ ನ್ಯಾಯಾಲಯವು ಡೆಕಾಥ್ಲಾನ್‌ಗೆ ನೋಟಿಸ್‌ಗಳನ್ನು ಕಳುಹಿಸಿತ್ತು. ಅದಾಗ್ಯೂ, ಡೆಕಾಥ್ಲಾನ್‌ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ.

ಗ್ರಾಹಕರ ನ್ಯಾಯಾಲಯದ ಮುಖ್ಯಸ್ಥ ಸೋಮಶೇಖರಪ್ಪ ಹಂದಿಗೋಳ ಅವರು ಮಂಗಳವಾರ ತಮ್ಮ ಆದೇಶದಲ್ಲಿ ಮೋಹಿತ್ ಅವರ 1399 ರೂ. ಮತ್ತು ಸೇವಾ ನ್ಯೂನತೆಗೆ 25000 ರೂ. ಮತ್ತು ವ್ಯಾಜ್ಯ ವೆಚ್ಚಕ್ಕಾಗಿ 10000 ರೂ. ಪಾವತಿಸಲು ಕಂಪನಿಗೆ ಆದೇಶಿಸಿದ್ದಾರೆ.

ವಿಡಿಯೊ ನೋಡಿ: ರೈತರ ಕರೆ ಮೇರೆಗೆ ಜಿಯೋ ಇಂದ ಪೋರ್ಟ್‌ ಆದವರೊಂದಿಗೆ ಜಿಯೋ ಕಂಪೆನಿಯವರ ಸ್ವಾರಸ್ಯಕರ ಸಂಭಾಷಣೆ ಕೇಳಿ. JioCustomerCare

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...