Homeಮುಖಪುಟಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಚಾನೆಲ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣವನ್ನು ದಾಖಲಿಸಿತ್ತು.

- Advertisement -
- Advertisement -

ಟಿಆರ್‌ಪಿ ಹಗರಣದ ಬಗ್ಗೆ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಮೂರು ಮಹಾರಾಷ್ಟ್ರ ಮೂಲದ ಟಿವಿ ಚಾನೆಲ್‌ಗಳ ಸುಮಾರು 32 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ವಶಪಡಿಸಿಕೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳ ಪ್ರಕಾರ ವಶಪಡಿಸಲಾದ ಆಸ್ತಿಗಳು ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳಿಗೆ ಸೇರಿವೆ. ಮುಂಬೈ, ಇಂದೋರ್, ದೆಹಲಿ ಮತ್ತು ಗುರಗಾಂವ್‌ನಲ್ಲಿ ಈ ಆಸ್ತಿಗಳಿವೆ. ಚಾನೆಲ್‌ಗಳ ಕೆಲವು ಬ್ಯಾಂಕ್ ಠೇವಣಿಗಳನ್ನು ಕೂಡ ಸೀಜ್ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ.

ಇದನ್ನೂ ಓದಿ: ಕೇರಳ: ಬಿಜೆಪಿ ಮೈತ್ರಿಕೂಟ ತೊರೆದ ‘ಕೇರಳ ಕಾಂಗ್ರೆಸ್’!

ಟಿಆರ್‌ಪಿ ದಂಧೆ ಒಂದು ವಂಚನೆಯ ಆಟ. ಎಷ್ಟು ವೀಕ್ಷಕರು ಯಾವ ಚಾನೆಲ್ ಜಾಸ್ತಿ ನೋಡಿದರು, ಯಾವ ಪ್ರೊಗ್ರಾಮ್ ಹೆಚ್ಚು ನೋಡಿದರು ಎಂಬುದರ ಆಧಾರದಲ್ಲಿ ಆ ಚಾನೆಲ್‌ಗಳಿಗೆ ಜಾಹೀರಾತು ಹರಿದು ಬರುತ್ತದೆ. ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಚಾನೆಲ್ ಬಾರ್ಕ್ ಮುಖ್ಯಸ್ಥನ ಜೊತೆ ಸೇರಿ ಕೃತಕ ಟಿಆರ್‌ಪಿಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿದೆ.

ಜೊತೆಗೆ ಮೇಲೆ ಉಲ್ಲೇಖಿಸಲಾದ ಮೂರು ಮಹಾರಾಷ್ಟ್ರ ಮೂಲದ ಚಾನೆಲ್‌ಗಳು ಕೂಡ ಈ ಕೃತಕ ಟಿಆರ್‌ಪಿ ಏರಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದವು. ಆಯ್ದ ವೀಕ್ಷಕ ಕುಟುಂಬಗಳು ಪದೇ ಪದೇ ಅದೇ ಚಾನೆಲ್ ಅಥವಾ ಆ ಚಾನೆಲ್‌ನ ಒಂದು ಕಾರ್ಯರಕ್ರಮವನ್ನು ವೀಕ್ಷಿಸುವಂತೆ ಲಂಚ ನೀಡುವ ಮೂಲಕ ಇದನ್ನು ಮಾಡಲಾಗಿದೆ.

’ಮೇಲೆ ಉಲ್ಲೇಖಗೊಂಡ ಮೊದಲ ಎರಡು ಚಾನೆಲ್‌ಗಳು 5 ಕುಟುಂಬಗಳ ಜೊತೆಗೆ ಒಪ್ಪಂದ ಮಾಡಿ ಸುಮಾರು 25% ಟಿಆರ್‌ಪಿಯನ್ನು ಪಡೆಯುತ್ತಿದ್ದವು. ಮೂರನೇ ಚಾನಲ್ ಕೂಡಾ 5 ಕುಟುಂಬಗಳೊಂದಿಗೆ ಒಪ್ಪಂದ ಮಾಡಿಕೊಂಡ ಪರಿಣಾಮ ಕೃತಕವಾಗಿ 12% ಟಿಆರ್‌‌‌ಪಿಯನ್ನು ಪಡೆಯುತ್ತಿದ್ದವು’ ಎಂದು ಇ.ಡಿ. ಹೇಳಿದೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳನ್ನು (ಟಿಆರ್‌ಪಿ) ತಿರುಚಿರುವ ಆರೋಪದ ಮೇಲೆ ಮುಂಬೈ ಪೊಲೀಸ್ ಸಿದ್ಧಪಡಿಸಿದ ಎಫ್‌ಐಆರ್ ಅಧ್ಯಯನ ಮಾಡಿದ ನಂತರ ಇ.ಡಿ. ಚಾನೆಲ್‌ಗಳ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿತ್ತು.

“ಟೆಲಿವಿಷನ್ ಚಾನೆಲ್‌ಗಳಾದ ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳು ಟಿಆರ್‌ಪಿಗಳನ್ನು ತಿರುಚುವ ಮೂಲಕ ಅಕ್ರಮ ಲಾಭ ಮಾಡಿಕೊಂಡಿವೆ’ ಎಂದು ಇ.ಡಿ ಮತ್ತು ಮಹಾರಾಷ್ಟ್ರ ಪೊಲೀಸರು ಅಪಾದಿಸಿದ್ದಾರೆ.

“ಟಿಆರ್‌ಪಿ ರೇಟಿಂಗ್‌ಗಳನ್ನು ಮೋಸದಿಂದ ಹೆಚ್ಚಿಸುವ ಮೂಲಕ, ಈ ಚಾನಲ್‌ಗಳು ವಿಪರೀತ ಜಾಹೀರಾತು ಆದಾಯವನ್ನು ಗಳಿಸಿವೆ” ಎಂದು ಇಡಿ ಹೇಳಿದೆ.

ಟಿಆರ್‌ಪಿ ಎಂಬುದು ಟಿವಿ ಚಾನೆಲ್ ಅಥವಾ ಪ್ರೋಗ್ರಾಂನ ಜನಪ್ರಿಯತೆಯನ್ನು ಸೂಚಿಸುತ್ತದೆ ಮತ್ತು ವೀಕ್ಷಕರು ಯಾವುದನ್ನು ಹೆಚ್ಚು ನೋಡುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಹೀರಾತುದಾರರಿಗೆ ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ಹುತಾತ್ಮ ರೈತರಿಗೆ ಗೌರವ ಸಲ್ಲಿಸದ ಕೇಂದ್ರದ ವಿರುದ್ದ ರಾಹುಲ್ ಗಾಂಧಿ ಹೇಳಿದ್ದೇನು?

ವೀಕ್ಷಕರ ಮನೆಗಳಲ್ಲಿ ಬಾರೋಮೀಟರ್‌ಗಳನ್ನು ಅಳವಡಿಸಿ, ಟಿಆರ್‌‌ಪಿ ಅಳೆಯಲಾಗುತ್ತದೆ. ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಇದನ್ನು ನಿರ್ವಹಿಸುತ್ತದೆ. ಆದರೆ ಅದು ಅಳವಡಿಸುವಿಕೆ ಮತ್ತು ಸೇವೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುತ್ತದೆ. ಈ ಪ್ರಕರಣದಲ್ಲಿ ಅದು ಹನ್ಸಾ ಏಜೆನ್ಸಿಯನ್ನು ನೇಮಿಸಿಕೊಂಡಿತ್ತು. (ಬಾರೋಮೀಟರ್‌ಗಳನ್ನು ಯಾವ ಮನೆಗಳಲ್ಲಿ ಅಳವಡಿಸಬೇಕು ಎಂಬುದನ್ನು ಬಾರ್ಕ್ ನಿರ್ಧರಿಸುತ್ತದೆ).

ಟಿಆರ್‌ಪಿ ಯಾವುದೇ ಚಾನಲ್‌ಗೆ ಜಾಹೀರಾತನ್ನು ಪಡೆಯುವ ಪ್ರಮುಖ ಆಧಾರ ಮೂಲ. ಅದು ಟಿವಿ ಚಾನೆಲ್‌ನ ಆದಾಯವನ್ನು ನಿರ್ಧರಿಸುತ್ತದೆ. ಹೀಗಾಗಿ, ಟಿಆರ್‌ಪಿಯನ್ನು ವಾಮಮಾರ್ಗಗಳಲ್ಲಿ ಹೆಚ್ಚಿಸಿ ಹೆಚ್ಚಿನ ಜಾಹೀರಾತು ಆದಾಯವನ್ನು ಗಳಿಸುವ ಸಾಧನವಾಗಿ ಬಳಸಿಕೊಳ್ಳಲಾಗಿದೆ.

“ಬಾರೋಮೀಟರ್ ಸ್ಥಾಪಿಸಲಾದ ಮನೆಗಳ ಗೌಪ್ಯ ಮಾಹಿತಿಯನ್ನು ಏಜೆನ್ಸಿ ವ್ಯವಸ್ಥಾಪಕರು ಹಣದ ಲಾಭಕ್ಕಾಗಿ ಬಹಿರಂಗಪಡಿಸಿದ್ದು, ನಂತರ ಮನೆಯವರಿಗೆ ಲಂಚ ನೀಡಲಾಯಿತು. ಈ ಮೂಲಕ ನಿರ್ದಿಷ್ಟ ಚಾನೆಲ್‌ಗಳನ್ನು ವೀಕ್ಷಿಸುವಂತೆ ಪ್ರೇರೇಪಿಸಲಾಯಿತು. ಟಿಆರ್‌ಪಿಯನ್ನು ಕೃತಕವಾಗಿ ಏರಿಸಿ ಜಾಹೀರಾತುದಾರರನ್ನು ಮೋಸಗೊಳಿಸಲಾಯಿತು” ಎಂದು ಇ.ಡಿ ವಿವರಿಸಿದೆ.

ಆರೋಪಿತ ಚಾನೆಲ್‌ಗಳು ಒಟ್ಟು 46.77 ಕೋಟಿ ರೂ.ಗಳನ್ನು ಅಕ್ರಮ ಟಿಆರ್‌ಪಿ ಆಧಾರದಲ್ಲಿ ಗಳಿಸಿವೆ ಎಂದು ಇ.ಡಿ ಹೇಳಿದೆ.

ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...