Homeಮುಖಪುಟಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಚಾನೆಲ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣವನ್ನು ದಾಖಲಿಸಿತ್ತು.

- Advertisement -
- Advertisement -

ಟಿಆರ್‌ಪಿ ಹಗರಣದ ಬಗ್ಗೆ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಮೂರು ಮಹಾರಾಷ್ಟ್ರ ಮೂಲದ ಟಿವಿ ಚಾನೆಲ್‌ಗಳ ಸುಮಾರು 32 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ವಶಪಡಿಸಿಕೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳ ಪ್ರಕಾರ ವಶಪಡಿಸಲಾದ ಆಸ್ತಿಗಳು ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳಿಗೆ ಸೇರಿವೆ. ಮುಂಬೈ, ಇಂದೋರ್, ದೆಹಲಿ ಮತ್ತು ಗುರಗಾಂವ್‌ನಲ್ಲಿ ಈ ಆಸ್ತಿಗಳಿವೆ. ಚಾನೆಲ್‌ಗಳ ಕೆಲವು ಬ್ಯಾಂಕ್ ಠೇವಣಿಗಳನ್ನು ಕೂಡ ಸೀಜ್ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ.

ಇದನ್ನೂ ಓದಿ: ಕೇರಳ: ಬಿಜೆಪಿ ಮೈತ್ರಿಕೂಟ ತೊರೆದ ‘ಕೇರಳ ಕಾಂಗ್ರೆಸ್’!

ಟಿಆರ್‌ಪಿ ದಂಧೆ ಒಂದು ವಂಚನೆಯ ಆಟ. ಎಷ್ಟು ವೀಕ್ಷಕರು ಯಾವ ಚಾನೆಲ್ ಜಾಸ್ತಿ ನೋಡಿದರು, ಯಾವ ಪ್ರೊಗ್ರಾಮ್ ಹೆಚ್ಚು ನೋಡಿದರು ಎಂಬುದರ ಆಧಾರದಲ್ಲಿ ಆ ಚಾನೆಲ್‌ಗಳಿಗೆ ಜಾಹೀರಾತು ಹರಿದು ಬರುತ್ತದೆ. ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಚಾನೆಲ್ ಬಾರ್ಕ್ ಮುಖ್ಯಸ್ಥನ ಜೊತೆ ಸೇರಿ ಕೃತಕ ಟಿಆರ್‌ಪಿಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿದೆ.

ಜೊತೆಗೆ ಮೇಲೆ ಉಲ್ಲೇಖಿಸಲಾದ ಮೂರು ಮಹಾರಾಷ್ಟ್ರ ಮೂಲದ ಚಾನೆಲ್‌ಗಳು ಕೂಡ ಈ ಕೃತಕ ಟಿಆರ್‌ಪಿ ಏರಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದವು. ಆಯ್ದ ವೀಕ್ಷಕ ಕುಟುಂಬಗಳು ಪದೇ ಪದೇ ಅದೇ ಚಾನೆಲ್ ಅಥವಾ ಆ ಚಾನೆಲ್‌ನ ಒಂದು ಕಾರ್ಯರಕ್ರಮವನ್ನು ವೀಕ್ಷಿಸುವಂತೆ ಲಂಚ ನೀಡುವ ಮೂಲಕ ಇದನ್ನು ಮಾಡಲಾಗಿದೆ.

’ಮೇಲೆ ಉಲ್ಲೇಖಗೊಂಡ ಮೊದಲ ಎರಡು ಚಾನೆಲ್‌ಗಳು 5 ಕುಟುಂಬಗಳ ಜೊತೆಗೆ ಒಪ್ಪಂದ ಮಾಡಿ ಸುಮಾರು 25% ಟಿಆರ್‌ಪಿಯನ್ನು ಪಡೆಯುತ್ತಿದ್ದವು. ಮೂರನೇ ಚಾನಲ್ ಕೂಡಾ 5 ಕುಟುಂಬಗಳೊಂದಿಗೆ ಒಪ್ಪಂದ ಮಾಡಿಕೊಂಡ ಪರಿಣಾಮ ಕೃತಕವಾಗಿ 12% ಟಿಆರ್‌‌‌ಪಿಯನ್ನು ಪಡೆಯುತ್ತಿದ್ದವು’ ಎಂದು ಇ.ಡಿ. ಹೇಳಿದೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳನ್ನು (ಟಿಆರ್‌ಪಿ) ತಿರುಚಿರುವ ಆರೋಪದ ಮೇಲೆ ಮುಂಬೈ ಪೊಲೀಸ್ ಸಿದ್ಧಪಡಿಸಿದ ಎಫ್‌ಐಆರ್ ಅಧ್ಯಯನ ಮಾಡಿದ ನಂತರ ಇ.ಡಿ. ಚಾನೆಲ್‌ಗಳ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿತ್ತು.

“ಟೆಲಿವಿಷನ್ ಚಾನೆಲ್‌ಗಳಾದ ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳು ಟಿಆರ್‌ಪಿಗಳನ್ನು ತಿರುಚುವ ಮೂಲಕ ಅಕ್ರಮ ಲಾಭ ಮಾಡಿಕೊಂಡಿವೆ’ ಎಂದು ಇ.ಡಿ ಮತ್ತು ಮಹಾರಾಷ್ಟ್ರ ಪೊಲೀಸರು ಅಪಾದಿಸಿದ್ದಾರೆ.

“ಟಿಆರ್‌ಪಿ ರೇಟಿಂಗ್‌ಗಳನ್ನು ಮೋಸದಿಂದ ಹೆಚ್ಚಿಸುವ ಮೂಲಕ, ಈ ಚಾನಲ್‌ಗಳು ವಿಪರೀತ ಜಾಹೀರಾತು ಆದಾಯವನ್ನು ಗಳಿಸಿವೆ” ಎಂದು ಇಡಿ ಹೇಳಿದೆ.

ಟಿಆರ್‌ಪಿ ಎಂಬುದು ಟಿವಿ ಚಾನೆಲ್ ಅಥವಾ ಪ್ರೋಗ್ರಾಂನ ಜನಪ್ರಿಯತೆಯನ್ನು ಸೂಚಿಸುತ್ತದೆ ಮತ್ತು ವೀಕ್ಷಕರು ಯಾವುದನ್ನು ಹೆಚ್ಚು ನೋಡುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಹೀರಾತುದಾರರಿಗೆ ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ಹುತಾತ್ಮ ರೈತರಿಗೆ ಗೌರವ ಸಲ್ಲಿಸದ ಕೇಂದ್ರದ ವಿರುದ್ದ ರಾಹುಲ್ ಗಾಂಧಿ ಹೇಳಿದ್ದೇನು?

ವೀಕ್ಷಕರ ಮನೆಗಳಲ್ಲಿ ಬಾರೋಮೀಟರ್‌ಗಳನ್ನು ಅಳವಡಿಸಿ, ಟಿಆರ್‌‌ಪಿ ಅಳೆಯಲಾಗುತ್ತದೆ. ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಇದನ್ನು ನಿರ್ವಹಿಸುತ್ತದೆ. ಆದರೆ ಅದು ಅಳವಡಿಸುವಿಕೆ ಮತ್ತು ಸೇವೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುತ್ತದೆ. ಈ ಪ್ರಕರಣದಲ್ಲಿ ಅದು ಹನ್ಸಾ ಏಜೆನ್ಸಿಯನ್ನು ನೇಮಿಸಿಕೊಂಡಿತ್ತು. (ಬಾರೋಮೀಟರ್‌ಗಳನ್ನು ಯಾವ ಮನೆಗಳಲ್ಲಿ ಅಳವಡಿಸಬೇಕು ಎಂಬುದನ್ನು ಬಾರ್ಕ್ ನಿರ್ಧರಿಸುತ್ತದೆ).

ಟಿಆರ್‌ಪಿ ಯಾವುದೇ ಚಾನಲ್‌ಗೆ ಜಾಹೀರಾತನ್ನು ಪಡೆಯುವ ಪ್ರಮುಖ ಆಧಾರ ಮೂಲ. ಅದು ಟಿವಿ ಚಾನೆಲ್‌ನ ಆದಾಯವನ್ನು ನಿರ್ಧರಿಸುತ್ತದೆ. ಹೀಗಾಗಿ, ಟಿಆರ್‌ಪಿಯನ್ನು ವಾಮಮಾರ್ಗಗಳಲ್ಲಿ ಹೆಚ್ಚಿಸಿ ಹೆಚ್ಚಿನ ಜಾಹೀರಾತು ಆದಾಯವನ್ನು ಗಳಿಸುವ ಸಾಧನವಾಗಿ ಬಳಸಿಕೊಳ್ಳಲಾಗಿದೆ.

“ಬಾರೋಮೀಟರ್ ಸ್ಥಾಪಿಸಲಾದ ಮನೆಗಳ ಗೌಪ್ಯ ಮಾಹಿತಿಯನ್ನು ಏಜೆನ್ಸಿ ವ್ಯವಸ್ಥಾಪಕರು ಹಣದ ಲಾಭಕ್ಕಾಗಿ ಬಹಿರಂಗಪಡಿಸಿದ್ದು, ನಂತರ ಮನೆಯವರಿಗೆ ಲಂಚ ನೀಡಲಾಯಿತು. ಈ ಮೂಲಕ ನಿರ್ದಿಷ್ಟ ಚಾನೆಲ್‌ಗಳನ್ನು ವೀಕ್ಷಿಸುವಂತೆ ಪ್ರೇರೇಪಿಸಲಾಯಿತು. ಟಿಆರ್‌ಪಿಯನ್ನು ಕೃತಕವಾಗಿ ಏರಿಸಿ ಜಾಹೀರಾತುದಾರರನ್ನು ಮೋಸಗೊಳಿಸಲಾಯಿತು” ಎಂದು ಇ.ಡಿ ವಿವರಿಸಿದೆ.

ಆರೋಪಿತ ಚಾನೆಲ್‌ಗಳು ಒಟ್ಟು 46.77 ಕೋಟಿ ರೂ.ಗಳನ್ನು ಅಕ್ರಮ ಟಿಆರ್‌ಪಿ ಆಧಾರದಲ್ಲಿ ಗಳಿಸಿವೆ ಎಂದು ಇ.ಡಿ ಹೇಳಿದೆ.

ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...