Homeಮುಖಪುಟಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಚಾನೆಲ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣವನ್ನು ದಾಖಲಿಸಿತ್ತು.

- Advertisement -
- Advertisement -

ಟಿಆರ್‌ಪಿ ಹಗರಣದ ಬಗ್ಗೆ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಮೂರು ಮಹಾರಾಷ್ಟ್ರ ಮೂಲದ ಟಿವಿ ಚಾನೆಲ್‌ಗಳ ಸುಮಾರು 32 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ವಶಪಡಿಸಿಕೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳ ಪ್ರಕಾರ ವಶಪಡಿಸಲಾದ ಆಸ್ತಿಗಳು ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳಿಗೆ ಸೇರಿವೆ. ಮುಂಬೈ, ಇಂದೋರ್, ದೆಹಲಿ ಮತ್ತು ಗುರಗಾಂವ್‌ನಲ್ಲಿ ಈ ಆಸ್ತಿಗಳಿವೆ. ಚಾನೆಲ್‌ಗಳ ಕೆಲವು ಬ್ಯಾಂಕ್ ಠೇವಣಿಗಳನ್ನು ಕೂಡ ಸೀಜ್ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ.

ಇದನ್ನೂ ಓದಿ: ಕೇರಳ: ಬಿಜೆಪಿ ಮೈತ್ರಿಕೂಟ ತೊರೆದ ‘ಕೇರಳ ಕಾಂಗ್ರೆಸ್’!

ಟಿಆರ್‌ಪಿ ದಂಧೆ ಒಂದು ವಂಚನೆಯ ಆಟ. ಎಷ್ಟು ವೀಕ್ಷಕರು ಯಾವ ಚಾನೆಲ್ ಜಾಸ್ತಿ ನೋಡಿದರು, ಯಾವ ಪ್ರೊಗ್ರಾಮ್ ಹೆಚ್ಚು ನೋಡಿದರು ಎಂಬುದರ ಆಧಾರದಲ್ಲಿ ಆ ಚಾನೆಲ್‌ಗಳಿಗೆ ಜಾಹೀರಾತು ಹರಿದು ಬರುತ್ತದೆ. ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಚಾನೆಲ್ ಬಾರ್ಕ್ ಮುಖ್ಯಸ್ಥನ ಜೊತೆ ಸೇರಿ ಕೃತಕ ಟಿಆರ್‌ಪಿಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿದೆ.

ಜೊತೆಗೆ ಮೇಲೆ ಉಲ್ಲೇಖಿಸಲಾದ ಮೂರು ಮಹಾರಾಷ್ಟ್ರ ಮೂಲದ ಚಾನೆಲ್‌ಗಳು ಕೂಡ ಈ ಕೃತಕ ಟಿಆರ್‌ಪಿ ಏರಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದವು. ಆಯ್ದ ವೀಕ್ಷಕ ಕುಟುಂಬಗಳು ಪದೇ ಪದೇ ಅದೇ ಚಾನೆಲ್ ಅಥವಾ ಆ ಚಾನೆಲ್‌ನ ಒಂದು ಕಾರ್ಯರಕ್ರಮವನ್ನು ವೀಕ್ಷಿಸುವಂತೆ ಲಂಚ ನೀಡುವ ಮೂಲಕ ಇದನ್ನು ಮಾಡಲಾಗಿದೆ.

’ಮೇಲೆ ಉಲ್ಲೇಖಗೊಂಡ ಮೊದಲ ಎರಡು ಚಾನೆಲ್‌ಗಳು 5 ಕುಟುಂಬಗಳ ಜೊತೆಗೆ ಒಪ್ಪಂದ ಮಾಡಿ ಸುಮಾರು 25% ಟಿಆರ್‌ಪಿಯನ್ನು ಪಡೆಯುತ್ತಿದ್ದವು. ಮೂರನೇ ಚಾನಲ್ ಕೂಡಾ 5 ಕುಟುಂಬಗಳೊಂದಿಗೆ ಒಪ್ಪಂದ ಮಾಡಿಕೊಂಡ ಪರಿಣಾಮ ಕೃತಕವಾಗಿ 12% ಟಿಆರ್‌‌‌ಪಿಯನ್ನು ಪಡೆಯುತ್ತಿದ್ದವು’ ಎಂದು ಇ.ಡಿ. ಹೇಳಿದೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳನ್ನು (ಟಿಆರ್‌ಪಿ) ತಿರುಚಿರುವ ಆರೋಪದ ಮೇಲೆ ಮುಂಬೈ ಪೊಲೀಸ್ ಸಿದ್ಧಪಡಿಸಿದ ಎಫ್‌ಐಆರ್ ಅಧ್ಯಯನ ಮಾಡಿದ ನಂತರ ಇ.ಡಿ. ಚಾನೆಲ್‌ಗಳ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿತ್ತು.

“ಟೆಲಿವಿಷನ್ ಚಾನೆಲ್‌ಗಳಾದ ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳು ಟಿಆರ್‌ಪಿಗಳನ್ನು ತಿರುಚುವ ಮೂಲಕ ಅಕ್ರಮ ಲಾಭ ಮಾಡಿಕೊಂಡಿವೆ’ ಎಂದು ಇ.ಡಿ ಮತ್ತು ಮಹಾರಾಷ್ಟ್ರ ಪೊಲೀಸರು ಅಪಾದಿಸಿದ್ದಾರೆ.

“ಟಿಆರ್‌ಪಿ ರೇಟಿಂಗ್‌ಗಳನ್ನು ಮೋಸದಿಂದ ಹೆಚ್ಚಿಸುವ ಮೂಲಕ, ಈ ಚಾನಲ್‌ಗಳು ವಿಪರೀತ ಜಾಹೀರಾತು ಆದಾಯವನ್ನು ಗಳಿಸಿವೆ” ಎಂದು ಇಡಿ ಹೇಳಿದೆ.

ಟಿಆರ್‌ಪಿ ಎಂಬುದು ಟಿವಿ ಚಾನೆಲ್ ಅಥವಾ ಪ್ರೋಗ್ರಾಂನ ಜನಪ್ರಿಯತೆಯನ್ನು ಸೂಚಿಸುತ್ತದೆ ಮತ್ತು ವೀಕ್ಷಕರು ಯಾವುದನ್ನು ಹೆಚ್ಚು ನೋಡುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಹೀರಾತುದಾರರಿಗೆ ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ಹುತಾತ್ಮ ರೈತರಿಗೆ ಗೌರವ ಸಲ್ಲಿಸದ ಕೇಂದ್ರದ ವಿರುದ್ದ ರಾಹುಲ್ ಗಾಂಧಿ ಹೇಳಿದ್ದೇನು?

ವೀಕ್ಷಕರ ಮನೆಗಳಲ್ಲಿ ಬಾರೋಮೀಟರ್‌ಗಳನ್ನು ಅಳವಡಿಸಿ, ಟಿಆರ್‌‌ಪಿ ಅಳೆಯಲಾಗುತ್ತದೆ. ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಇದನ್ನು ನಿರ್ವಹಿಸುತ್ತದೆ. ಆದರೆ ಅದು ಅಳವಡಿಸುವಿಕೆ ಮತ್ತು ಸೇವೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುತ್ತದೆ. ಈ ಪ್ರಕರಣದಲ್ಲಿ ಅದು ಹನ್ಸಾ ಏಜೆನ್ಸಿಯನ್ನು ನೇಮಿಸಿಕೊಂಡಿತ್ತು. (ಬಾರೋಮೀಟರ್‌ಗಳನ್ನು ಯಾವ ಮನೆಗಳಲ್ಲಿ ಅಳವಡಿಸಬೇಕು ಎಂಬುದನ್ನು ಬಾರ್ಕ್ ನಿರ್ಧರಿಸುತ್ತದೆ).

ಟಿಆರ್‌ಪಿ ಯಾವುದೇ ಚಾನಲ್‌ಗೆ ಜಾಹೀರಾತನ್ನು ಪಡೆಯುವ ಪ್ರಮುಖ ಆಧಾರ ಮೂಲ. ಅದು ಟಿವಿ ಚಾನೆಲ್‌ನ ಆದಾಯವನ್ನು ನಿರ್ಧರಿಸುತ್ತದೆ. ಹೀಗಾಗಿ, ಟಿಆರ್‌ಪಿಯನ್ನು ವಾಮಮಾರ್ಗಗಳಲ್ಲಿ ಹೆಚ್ಚಿಸಿ ಹೆಚ್ಚಿನ ಜಾಹೀರಾತು ಆದಾಯವನ್ನು ಗಳಿಸುವ ಸಾಧನವಾಗಿ ಬಳಸಿಕೊಳ್ಳಲಾಗಿದೆ.

“ಬಾರೋಮೀಟರ್ ಸ್ಥಾಪಿಸಲಾದ ಮನೆಗಳ ಗೌಪ್ಯ ಮಾಹಿತಿಯನ್ನು ಏಜೆನ್ಸಿ ವ್ಯವಸ್ಥಾಪಕರು ಹಣದ ಲಾಭಕ್ಕಾಗಿ ಬಹಿರಂಗಪಡಿಸಿದ್ದು, ನಂತರ ಮನೆಯವರಿಗೆ ಲಂಚ ನೀಡಲಾಯಿತು. ಈ ಮೂಲಕ ನಿರ್ದಿಷ್ಟ ಚಾನೆಲ್‌ಗಳನ್ನು ವೀಕ್ಷಿಸುವಂತೆ ಪ್ರೇರೇಪಿಸಲಾಯಿತು. ಟಿಆರ್‌ಪಿಯನ್ನು ಕೃತಕವಾಗಿ ಏರಿಸಿ ಜಾಹೀರಾತುದಾರರನ್ನು ಮೋಸಗೊಳಿಸಲಾಯಿತು” ಎಂದು ಇ.ಡಿ ವಿವರಿಸಿದೆ.

ಆರೋಪಿತ ಚಾನೆಲ್‌ಗಳು ಒಟ್ಟು 46.77 ಕೋಟಿ ರೂ.ಗಳನ್ನು ಅಕ್ರಮ ಟಿಆರ್‌ಪಿ ಆಧಾರದಲ್ಲಿ ಗಳಿಸಿವೆ ಎಂದು ಇ.ಡಿ ಹೇಳಿದೆ.

ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...