Homeಮುಖಪುಟಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಚಾನೆಲ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣವನ್ನು ದಾಖಲಿಸಿತ್ತು.

- Advertisement -
- Advertisement -

ಟಿಆರ್‌ಪಿ ಹಗರಣದ ಬಗ್ಗೆ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಮೂರು ಮಹಾರಾಷ್ಟ್ರ ಮೂಲದ ಟಿವಿ ಚಾನೆಲ್‌ಗಳ ಸುಮಾರು 32 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ವಶಪಡಿಸಿಕೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳ ಪ್ರಕಾರ ವಶಪಡಿಸಲಾದ ಆಸ್ತಿಗಳು ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳಿಗೆ ಸೇರಿವೆ. ಮುಂಬೈ, ಇಂದೋರ್, ದೆಹಲಿ ಮತ್ತು ಗುರಗಾಂವ್‌ನಲ್ಲಿ ಈ ಆಸ್ತಿಗಳಿವೆ. ಚಾನೆಲ್‌ಗಳ ಕೆಲವು ಬ್ಯಾಂಕ್ ಠೇವಣಿಗಳನ್ನು ಕೂಡ ಸೀಜ್ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ.

ಇದನ್ನೂ ಓದಿ: ಕೇರಳ: ಬಿಜೆಪಿ ಮೈತ್ರಿಕೂಟ ತೊರೆದ ‘ಕೇರಳ ಕಾಂಗ್ರೆಸ್’!

ಟಿಆರ್‌ಪಿ ದಂಧೆ ಒಂದು ವಂಚನೆಯ ಆಟ. ಎಷ್ಟು ವೀಕ್ಷಕರು ಯಾವ ಚಾನೆಲ್ ಜಾಸ್ತಿ ನೋಡಿದರು, ಯಾವ ಪ್ರೊಗ್ರಾಮ್ ಹೆಚ್ಚು ನೋಡಿದರು ಎಂಬುದರ ಆಧಾರದಲ್ಲಿ ಆ ಚಾನೆಲ್‌ಗಳಿಗೆ ಜಾಹೀರಾತು ಹರಿದು ಬರುತ್ತದೆ. ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಚಾನೆಲ್ ಬಾರ್ಕ್ ಮುಖ್ಯಸ್ಥನ ಜೊತೆ ಸೇರಿ ಕೃತಕ ಟಿಆರ್‌ಪಿಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿದೆ.

ಜೊತೆಗೆ ಮೇಲೆ ಉಲ್ಲೇಖಿಸಲಾದ ಮೂರು ಮಹಾರಾಷ್ಟ್ರ ಮೂಲದ ಚಾನೆಲ್‌ಗಳು ಕೂಡ ಈ ಕೃತಕ ಟಿಆರ್‌ಪಿ ಏರಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದವು. ಆಯ್ದ ವೀಕ್ಷಕ ಕುಟುಂಬಗಳು ಪದೇ ಪದೇ ಅದೇ ಚಾನೆಲ್ ಅಥವಾ ಆ ಚಾನೆಲ್‌ನ ಒಂದು ಕಾರ್ಯರಕ್ರಮವನ್ನು ವೀಕ್ಷಿಸುವಂತೆ ಲಂಚ ನೀಡುವ ಮೂಲಕ ಇದನ್ನು ಮಾಡಲಾಗಿದೆ.

’ಮೇಲೆ ಉಲ್ಲೇಖಗೊಂಡ ಮೊದಲ ಎರಡು ಚಾನೆಲ್‌ಗಳು 5 ಕುಟುಂಬಗಳ ಜೊತೆಗೆ ಒಪ್ಪಂದ ಮಾಡಿ ಸುಮಾರು 25% ಟಿಆರ್‌ಪಿಯನ್ನು ಪಡೆಯುತ್ತಿದ್ದವು. ಮೂರನೇ ಚಾನಲ್ ಕೂಡಾ 5 ಕುಟುಂಬಗಳೊಂದಿಗೆ ಒಪ್ಪಂದ ಮಾಡಿಕೊಂಡ ಪರಿಣಾಮ ಕೃತಕವಾಗಿ 12% ಟಿಆರ್‌‌‌ಪಿಯನ್ನು ಪಡೆಯುತ್ತಿದ್ದವು’ ಎಂದು ಇ.ಡಿ. ಹೇಳಿದೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳನ್ನು (ಟಿಆರ್‌ಪಿ) ತಿರುಚಿರುವ ಆರೋಪದ ಮೇಲೆ ಮುಂಬೈ ಪೊಲೀಸ್ ಸಿದ್ಧಪಡಿಸಿದ ಎಫ್‌ಐಆರ್ ಅಧ್ಯಯನ ಮಾಡಿದ ನಂತರ ಇ.ಡಿ. ಚಾನೆಲ್‌ಗಳ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿತ್ತು.

“ಟೆಲಿವಿಷನ್ ಚಾನೆಲ್‌ಗಳಾದ ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳು ಟಿಆರ್‌ಪಿಗಳನ್ನು ತಿರುಚುವ ಮೂಲಕ ಅಕ್ರಮ ಲಾಭ ಮಾಡಿಕೊಂಡಿವೆ’ ಎಂದು ಇ.ಡಿ ಮತ್ತು ಮಹಾರಾಷ್ಟ್ರ ಪೊಲೀಸರು ಅಪಾದಿಸಿದ್ದಾರೆ.

“ಟಿಆರ್‌ಪಿ ರೇಟಿಂಗ್‌ಗಳನ್ನು ಮೋಸದಿಂದ ಹೆಚ್ಚಿಸುವ ಮೂಲಕ, ಈ ಚಾನಲ್‌ಗಳು ವಿಪರೀತ ಜಾಹೀರಾತು ಆದಾಯವನ್ನು ಗಳಿಸಿವೆ” ಎಂದು ಇಡಿ ಹೇಳಿದೆ.

ಟಿಆರ್‌ಪಿ ಎಂಬುದು ಟಿವಿ ಚಾನೆಲ್ ಅಥವಾ ಪ್ರೋಗ್ರಾಂನ ಜನಪ್ರಿಯತೆಯನ್ನು ಸೂಚಿಸುತ್ತದೆ ಮತ್ತು ವೀಕ್ಷಕರು ಯಾವುದನ್ನು ಹೆಚ್ಚು ನೋಡುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಹೀರಾತುದಾರರಿಗೆ ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ಹುತಾತ್ಮ ರೈತರಿಗೆ ಗೌರವ ಸಲ್ಲಿಸದ ಕೇಂದ್ರದ ವಿರುದ್ದ ರಾಹುಲ್ ಗಾಂಧಿ ಹೇಳಿದ್ದೇನು?

ವೀಕ್ಷಕರ ಮನೆಗಳಲ್ಲಿ ಬಾರೋಮೀಟರ್‌ಗಳನ್ನು ಅಳವಡಿಸಿ, ಟಿಆರ್‌‌ಪಿ ಅಳೆಯಲಾಗುತ್ತದೆ. ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಇದನ್ನು ನಿರ್ವಹಿಸುತ್ತದೆ. ಆದರೆ ಅದು ಅಳವಡಿಸುವಿಕೆ ಮತ್ತು ಸೇವೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುತ್ತದೆ. ಈ ಪ್ರಕರಣದಲ್ಲಿ ಅದು ಹನ್ಸಾ ಏಜೆನ್ಸಿಯನ್ನು ನೇಮಿಸಿಕೊಂಡಿತ್ತು. (ಬಾರೋಮೀಟರ್‌ಗಳನ್ನು ಯಾವ ಮನೆಗಳಲ್ಲಿ ಅಳವಡಿಸಬೇಕು ಎಂಬುದನ್ನು ಬಾರ್ಕ್ ನಿರ್ಧರಿಸುತ್ತದೆ).

ಟಿಆರ್‌ಪಿ ಯಾವುದೇ ಚಾನಲ್‌ಗೆ ಜಾಹೀರಾತನ್ನು ಪಡೆಯುವ ಪ್ರಮುಖ ಆಧಾರ ಮೂಲ. ಅದು ಟಿವಿ ಚಾನೆಲ್‌ನ ಆದಾಯವನ್ನು ನಿರ್ಧರಿಸುತ್ತದೆ. ಹೀಗಾಗಿ, ಟಿಆರ್‌ಪಿಯನ್ನು ವಾಮಮಾರ್ಗಗಳಲ್ಲಿ ಹೆಚ್ಚಿಸಿ ಹೆಚ್ಚಿನ ಜಾಹೀರಾತು ಆದಾಯವನ್ನು ಗಳಿಸುವ ಸಾಧನವಾಗಿ ಬಳಸಿಕೊಳ್ಳಲಾಗಿದೆ.

“ಬಾರೋಮೀಟರ್ ಸ್ಥಾಪಿಸಲಾದ ಮನೆಗಳ ಗೌಪ್ಯ ಮಾಹಿತಿಯನ್ನು ಏಜೆನ್ಸಿ ವ್ಯವಸ್ಥಾಪಕರು ಹಣದ ಲಾಭಕ್ಕಾಗಿ ಬಹಿರಂಗಪಡಿಸಿದ್ದು, ನಂತರ ಮನೆಯವರಿಗೆ ಲಂಚ ನೀಡಲಾಯಿತು. ಈ ಮೂಲಕ ನಿರ್ದಿಷ್ಟ ಚಾನೆಲ್‌ಗಳನ್ನು ವೀಕ್ಷಿಸುವಂತೆ ಪ್ರೇರೇಪಿಸಲಾಯಿತು. ಟಿಆರ್‌ಪಿಯನ್ನು ಕೃತಕವಾಗಿ ಏರಿಸಿ ಜಾಹೀರಾತುದಾರರನ್ನು ಮೋಸಗೊಳಿಸಲಾಯಿತು” ಎಂದು ಇ.ಡಿ ವಿವರಿಸಿದೆ.

ಆರೋಪಿತ ಚಾನೆಲ್‌ಗಳು ಒಟ್ಟು 46.77 ಕೋಟಿ ರೂ.ಗಳನ್ನು ಅಕ್ರಮ ಟಿಆರ್‌ಪಿ ಆಧಾರದಲ್ಲಿ ಗಳಿಸಿವೆ ಎಂದು ಇ.ಡಿ ಹೇಳಿದೆ.

ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...