Homeಮುಖಪುಟಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಚಾನೆಲ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣವನ್ನು ದಾಖಲಿಸಿತ್ತು.

- Advertisement -
- Advertisement -

ಟಿಆರ್‌ಪಿ ಹಗರಣದ ಬಗ್ಗೆ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಮೂರು ಮಹಾರಾಷ್ಟ್ರ ಮೂಲದ ಟಿವಿ ಚಾನೆಲ್‌ಗಳ ಸುಮಾರು 32 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ವಶಪಡಿಸಿಕೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳ ಪ್ರಕಾರ ವಶಪಡಿಸಲಾದ ಆಸ್ತಿಗಳು ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳಿಗೆ ಸೇರಿವೆ. ಮುಂಬೈ, ಇಂದೋರ್, ದೆಹಲಿ ಮತ್ತು ಗುರಗಾಂವ್‌ನಲ್ಲಿ ಈ ಆಸ್ತಿಗಳಿವೆ. ಚಾನೆಲ್‌ಗಳ ಕೆಲವು ಬ್ಯಾಂಕ್ ಠೇವಣಿಗಳನ್ನು ಕೂಡ ಸೀಜ್ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ.

ಇದನ್ನೂ ಓದಿ: ಕೇರಳ: ಬಿಜೆಪಿ ಮೈತ್ರಿಕೂಟ ತೊರೆದ ‘ಕೇರಳ ಕಾಂಗ್ರೆಸ್’!

ಟಿಆರ್‌ಪಿ ದಂಧೆ ಒಂದು ವಂಚನೆಯ ಆಟ. ಎಷ್ಟು ವೀಕ್ಷಕರು ಯಾವ ಚಾನೆಲ್ ಜಾಸ್ತಿ ನೋಡಿದರು, ಯಾವ ಪ್ರೊಗ್ರಾಮ್ ಹೆಚ್ಚು ನೋಡಿದರು ಎಂಬುದರ ಆಧಾರದಲ್ಲಿ ಆ ಚಾನೆಲ್‌ಗಳಿಗೆ ಜಾಹೀರಾತು ಹರಿದು ಬರುತ್ತದೆ. ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಚಾನೆಲ್ ಬಾರ್ಕ್ ಮುಖ್ಯಸ್ಥನ ಜೊತೆ ಸೇರಿ ಕೃತಕ ಟಿಆರ್‌ಪಿಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿದೆ.

ಜೊತೆಗೆ ಮೇಲೆ ಉಲ್ಲೇಖಿಸಲಾದ ಮೂರು ಮಹಾರಾಷ್ಟ್ರ ಮೂಲದ ಚಾನೆಲ್‌ಗಳು ಕೂಡ ಈ ಕೃತಕ ಟಿಆರ್‌ಪಿ ಏರಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದವು. ಆಯ್ದ ವೀಕ್ಷಕ ಕುಟುಂಬಗಳು ಪದೇ ಪದೇ ಅದೇ ಚಾನೆಲ್ ಅಥವಾ ಆ ಚಾನೆಲ್‌ನ ಒಂದು ಕಾರ್ಯರಕ್ರಮವನ್ನು ವೀಕ್ಷಿಸುವಂತೆ ಲಂಚ ನೀಡುವ ಮೂಲಕ ಇದನ್ನು ಮಾಡಲಾಗಿದೆ.

’ಮೇಲೆ ಉಲ್ಲೇಖಗೊಂಡ ಮೊದಲ ಎರಡು ಚಾನೆಲ್‌ಗಳು 5 ಕುಟುಂಬಗಳ ಜೊತೆಗೆ ಒಪ್ಪಂದ ಮಾಡಿ ಸುಮಾರು 25% ಟಿಆರ್‌ಪಿಯನ್ನು ಪಡೆಯುತ್ತಿದ್ದವು. ಮೂರನೇ ಚಾನಲ್ ಕೂಡಾ 5 ಕುಟುಂಬಗಳೊಂದಿಗೆ ಒಪ್ಪಂದ ಮಾಡಿಕೊಂಡ ಪರಿಣಾಮ ಕೃತಕವಾಗಿ 12% ಟಿಆರ್‌‌‌ಪಿಯನ್ನು ಪಡೆಯುತ್ತಿದ್ದವು’ ಎಂದು ಇ.ಡಿ. ಹೇಳಿದೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳನ್ನು (ಟಿಆರ್‌ಪಿ) ತಿರುಚಿರುವ ಆರೋಪದ ಮೇಲೆ ಮುಂಬೈ ಪೊಲೀಸ್ ಸಿದ್ಧಪಡಿಸಿದ ಎಫ್‌ಐಆರ್ ಅಧ್ಯಯನ ಮಾಡಿದ ನಂತರ ಇ.ಡಿ. ಚಾನೆಲ್‌ಗಳ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿತ್ತು.

“ಟೆಲಿವಿಷನ್ ಚಾನೆಲ್‌ಗಳಾದ ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳು ಟಿಆರ್‌ಪಿಗಳನ್ನು ತಿರುಚುವ ಮೂಲಕ ಅಕ್ರಮ ಲಾಭ ಮಾಡಿಕೊಂಡಿವೆ’ ಎಂದು ಇ.ಡಿ ಮತ್ತು ಮಹಾರಾಷ್ಟ್ರ ಪೊಲೀಸರು ಅಪಾದಿಸಿದ್ದಾರೆ.

“ಟಿಆರ್‌ಪಿ ರೇಟಿಂಗ್‌ಗಳನ್ನು ಮೋಸದಿಂದ ಹೆಚ್ಚಿಸುವ ಮೂಲಕ, ಈ ಚಾನಲ್‌ಗಳು ವಿಪರೀತ ಜಾಹೀರಾತು ಆದಾಯವನ್ನು ಗಳಿಸಿವೆ” ಎಂದು ಇಡಿ ಹೇಳಿದೆ.

ಟಿಆರ್‌ಪಿ ಎಂಬುದು ಟಿವಿ ಚಾನೆಲ್ ಅಥವಾ ಪ್ರೋಗ್ರಾಂನ ಜನಪ್ರಿಯತೆಯನ್ನು ಸೂಚಿಸುತ್ತದೆ ಮತ್ತು ವೀಕ್ಷಕರು ಯಾವುದನ್ನು ಹೆಚ್ಚು ನೋಡುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಹೀರಾತುದಾರರಿಗೆ ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ಹುತಾತ್ಮ ರೈತರಿಗೆ ಗೌರವ ಸಲ್ಲಿಸದ ಕೇಂದ್ರದ ವಿರುದ್ದ ರಾಹುಲ್ ಗಾಂಧಿ ಹೇಳಿದ್ದೇನು?

ವೀಕ್ಷಕರ ಮನೆಗಳಲ್ಲಿ ಬಾರೋಮೀಟರ್‌ಗಳನ್ನು ಅಳವಡಿಸಿ, ಟಿಆರ್‌‌ಪಿ ಅಳೆಯಲಾಗುತ್ತದೆ. ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಇದನ್ನು ನಿರ್ವಹಿಸುತ್ತದೆ. ಆದರೆ ಅದು ಅಳವಡಿಸುವಿಕೆ ಮತ್ತು ಸೇವೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುತ್ತದೆ. ಈ ಪ್ರಕರಣದಲ್ಲಿ ಅದು ಹನ್ಸಾ ಏಜೆನ್ಸಿಯನ್ನು ನೇಮಿಸಿಕೊಂಡಿತ್ತು. (ಬಾರೋಮೀಟರ್‌ಗಳನ್ನು ಯಾವ ಮನೆಗಳಲ್ಲಿ ಅಳವಡಿಸಬೇಕು ಎಂಬುದನ್ನು ಬಾರ್ಕ್ ನಿರ್ಧರಿಸುತ್ತದೆ).

ಟಿಆರ್‌ಪಿ ಯಾವುದೇ ಚಾನಲ್‌ಗೆ ಜಾಹೀರಾತನ್ನು ಪಡೆಯುವ ಪ್ರಮುಖ ಆಧಾರ ಮೂಲ. ಅದು ಟಿವಿ ಚಾನೆಲ್‌ನ ಆದಾಯವನ್ನು ನಿರ್ಧರಿಸುತ್ತದೆ. ಹೀಗಾಗಿ, ಟಿಆರ್‌ಪಿಯನ್ನು ವಾಮಮಾರ್ಗಗಳಲ್ಲಿ ಹೆಚ್ಚಿಸಿ ಹೆಚ್ಚಿನ ಜಾಹೀರಾತು ಆದಾಯವನ್ನು ಗಳಿಸುವ ಸಾಧನವಾಗಿ ಬಳಸಿಕೊಳ್ಳಲಾಗಿದೆ.

“ಬಾರೋಮೀಟರ್ ಸ್ಥಾಪಿಸಲಾದ ಮನೆಗಳ ಗೌಪ್ಯ ಮಾಹಿತಿಯನ್ನು ಏಜೆನ್ಸಿ ವ್ಯವಸ್ಥಾಪಕರು ಹಣದ ಲಾಭಕ್ಕಾಗಿ ಬಹಿರಂಗಪಡಿಸಿದ್ದು, ನಂತರ ಮನೆಯವರಿಗೆ ಲಂಚ ನೀಡಲಾಯಿತು. ಈ ಮೂಲಕ ನಿರ್ದಿಷ್ಟ ಚಾನೆಲ್‌ಗಳನ್ನು ವೀಕ್ಷಿಸುವಂತೆ ಪ್ರೇರೇಪಿಸಲಾಯಿತು. ಟಿಆರ್‌ಪಿಯನ್ನು ಕೃತಕವಾಗಿ ಏರಿಸಿ ಜಾಹೀರಾತುದಾರರನ್ನು ಮೋಸಗೊಳಿಸಲಾಯಿತು” ಎಂದು ಇ.ಡಿ ವಿವರಿಸಿದೆ.

ಆರೋಪಿತ ಚಾನೆಲ್‌ಗಳು ಒಟ್ಟು 46.77 ಕೋಟಿ ರೂ.ಗಳನ್ನು ಅಕ್ರಮ ಟಿಆರ್‌ಪಿ ಆಧಾರದಲ್ಲಿ ಗಳಿಸಿವೆ ಎಂದು ಇ.ಡಿ ಹೇಳಿದೆ.

ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...