Homeಮುಖಪುಟಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಚಾನೆಲ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣವನ್ನು ದಾಖಲಿಸಿತ್ತು.

- Advertisement -
- Advertisement -

ಟಿಆರ್‌ಪಿ ಹಗರಣದ ಬಗ್ಗೆ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಮೂರು ಮಹಾರಾಷ್ಟ್ರ ಮೂಲದ ಟಿವಿ ಚಾನೆಲ್‌ಗಳ ಸುಮಾರು 32 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ವಶಪಡಿಸಿಕೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳ ಪ್ರಕಾರ ವಶಪಡಿಸಲಾದ ಆಸ್ತಿಗಳು ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳಿಗೆ ಸೇರಿವೆ. ಮುಂಬೈ, ಇಂದೋರ್, ದೆಹಲಿ ಮತ್ತು ಗುರಗಾಂವ್‌ನಲ್ಲಿ ಈ ಆಸ್ತಿಗಳಿವೆ. ಚಾನೆಲ್‌ಗಳ ಕೆಲವು ಬ್ಯಾಂಕ್ ಠೇವಣಿಗಳನ್ನು ಕೂಡ ಸೀಜ್ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ.

ಇದನ್ನೂ ಓದಿ: ಕೇರಳ: ಬಿಜೆಪಿ ಮೈತ್ರಿಕೂಟ ತೊರೆದ ‘ಕೇರಳ ಕಾಂಗ್ರೆಸ್’!

ಟಿಆರ್‌ಪಿ ದಂಧೆ ಒಂದು ವಂಚನೆಯ ಆಟ. ಎಷ್ಟು ವೀಕ್ಷಕರು ಯಾವ ಚಾನೆಲ್ ಜಾಸ್ತಿ ನೋಡಿದರು, ಯಾವ ಪ್ರೊಗ್ರಾಮ್ ಹೆಚ್ಚು ನೋಡಿದರು ಎಂಬುದರ ಆಧಾರದಲ್ಲಿ ಆ ಚಾನೆಲ್‌ಗಳಿಗೆ ಜಾಹೀರಾತು ಹರಿದು ಬರುತ್ತದೆ. ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಚಾನೆಲ್ ಬಾರ್ಕ್ ಮುಖ್ಯಸ್ಥನ ಜೊತೆ ಸೇರಿ ಕೃತಕ ಟಿಆರ್‌ಪಿಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿದೆ.

ಜೊತೆಗೆ ಮೇಲೆ ಉಲ್ಲೇಖಿಸಲಾದ ಮೂರು ಮಹಾರಾಷ್ಟ್ರ ಮೂಲದ ಚಾನೆಲ್‌ಗಳು ಕೂಡ ಈ ಕೃತಕ ಟಿಆರ್‌ಪಿ ಏರಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದವು. ಆಯ್ದ ವೀಕ್ಷಕ ಕುಟುಂಬಗಳು ಪದೇ ಪದೇ ಅದೇ ಚಾನೆಲ್ ಅಥವಾ ಆ ಚಾನೆಲ್‌ನ ಒಂದು ಕಾರ್ಯರಕ್ರಮವನ್ನು ವೀಕ್ಷಿಸುವಂತೆ ಲಂಚ ನೀಡುವ ಮೂಲಕ ಇದನ್ನು ಮಾಡಲಾಗಿದೆ.

’ಮೇಲೆ ಉಲ್ಲೇಖಗೊಂಡ ಮೊದಲ ಎರಡು ಚಾನೆಲ್‌ಗಳು 5 ಕುಟುಂಬಗಳ ಜೊತೆಗೆ ಒಪ್ಪಂದ ಮಾಡಿ ಸುಮಾರು 25% ಟಿಆರ್‌ಪಿಯನ್ನು ಪಡೆಯುತ್ತಿದ್ದವು. ಮೂರನೇ ಚಾನಲ್ ಕೂಡಾ 5 ಕುಟುಂಬಗಳೊಂದಿಗೆ ಒಪ್ಪಂದ ಮಾಡಿಕೊಂಡ ಪರಿಣಾಮ ಕೃತಕವಾಗಿ 12% ಟಿಆರ್‌‌‌ಪಿಯನ್ನು ಪಡೆಯುತ್ತಿದ್ದವು’ ಎಂದು ಇ.ಡಿ. ಹೇಳಿದೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳನ್ನು (ಟಿಆರ್‌ಪಿ) ತಿರುಚಿರುವ ಆರೋಪದ ಮೇಲೆ ಮುಂಬೈ ಪೊಲೀಸ್ ಸಿದ್ಧಪಡಿಸಿದ ಎಫ್‌ಐಆರ್ ಅಧ್ಯಯನ ಮಾಡಿದ ನಂತರ ಇ.ಡಿ. ಚಾನೆಲ್‌ಗಳ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿತ್ತು.

“ಟೆಲಿವಿಷನ್ ಚಾನೆಲ್‌ಗಳಾದ ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳು ಟಿಆರ್‌ಪಿಗಳನ್ನು ತಿರುಚುವ ಮೂಲಕ ಅಕ್ರಮ ಲಾಭ ಮಾಡಿಕೊಂಡಿವೆ’ ಎಂದು ಇ.ಡಿ ಮತ್ತು ಮಹಾರಾಷ್ಟ್ರ ಪೊಲೀಸರು ಅಪಾದಿಸಿದ್ದಾರೆ.

“ಟಿಆರ್‌ಪಿ ರೇಟಿಂಗ್‌ಗಳನ್ನು ಮೋಸದಿಂದ ಹೆಚ್ಚಿಸುವ ಮೂಲಕ, ಈ ಚಾನಲ್‌ಗಳು ವಿಪರೀತ ಜಾಹೀರಾತು ಆದಾಯವನ್ನು ಗಳಿಸಿವೆ” ಎಂದು ಇಡಿ ಹೇಳಿದೆ.

ಟಿಆರ್‌ಪಿ ಎಂಬುದು ಟಿವಿ ಚಾನೆಲ್ ಅಥವಾ ಪ್ರೋಗ್ರಾಂನ ಜನಪ್ರಿಯತೆಯನ್ನು ಸೂಚಿಸುತ್ತದೆ ಮತ್ತು ವೀಕ್ಷಕರು ಯಾವುದನ್ನು ಹೆಚ್ಚು ನೋಡುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಹೀರಾತುದಾರರಿಗೆ ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ಹುತಾತ್ಮ ರೈತರಿಗೆ ಗೌರವ ಸಲ್ಲಿಸದ ಕೇಂದ್ರದ ವಿರುದ್ದ ರಾಹುಲ್ ಗಾಂಧಿ ಹೇಳಿದ್ದೇನು?

ವೀಕ್ಷಕರ ಮನೆಗಳಲ್ಲಿ ಬಾರೋಮೀಟರ್‌ಗಳನ್ನು ಅಳವಡಿಸಿ, ಟಿಆರ್‌‌ಪಿ ಅಳೆಯಲಾಗುತ್ತದೆ. ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಇದನ್ನು ನಿರ್ವಹಿಸುತ್ತದೆ. ಆದರೆ ಅದು ಅಳವಡಿಸುವಿಕೆ ಮತ್ತು ಸೇವೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುತ್ತದೆ. ಈ ಪ್ರಕರಣದಲ್ಲಿ ಅದು ಹನ್ಸಾ ಏಜೆನ್ಸಿಯನ್ನು ನೇಮಿಸಿಕೊಂಡಿತ್ತು. (ಬಾರೋಮೀಟರ್‌ಗಳನ್ನು ಯಾವ ಮನೆಗಳಲ್ಲಿ ಅಳವಡಿಸಬೇಕು ಎಂಬುದನ್ನು ಬಾರ್ಕ್ ನಿರ್ಧರಿಸುತ್ತದೆ).

ಟಿಆರ್‌ಪಿ ಯಾವುದೇ ಚಾನಲ್‌ಗೆ ಜಾಹೀರಾತನ್ನು ಪಡೆಯುವ ಪ್ರಮುಖ ಆಧಾರ ಮೂಲ. ಅದು ಟಿವಿ ಚಾನೆಲ್‌ನ ಆದಾಯವನ್ನು ನಿರ್ಧರಿಸುತ್ತದೆ. ಹೀಗಾಗಿ, ಟಿಆರ್‌ಪಿಯನ್ನು ವಾಮಮಾರ್ಗಗಳಲ್ಲಿ ಹೆಚ್ಚಿಸಿ ಹೆಚ್ಚಿನ ಜಾಹೀರಾತು ಆದಾಯವನ್ನು ಗಳಿಸುವ ಸಾಧನವಾಗಿ ಬಳಸಿಕೊಳ್ಳಲಾಗಿದೆ.

“ಬಾರೋಮೀಟರ್ ಸ್ಥಾಪಿಸಲಾದ ಮನೆಗಳ ಗೌಪ್ಯ ಮಾಹಿತಿಯನ್ನು ಏಜೆನ್ಸಿ ವ್ಯವಸ್ಥಾಪಕರು ಹಣದ ಲಾಭಕ್ಕಾಗಿ ಬಹಿರಂಗಪಡಿಸಿದ್ದು, ನಂತರ ಮನೆಯವರಿಗೆ ಲಂಚ ನೀಡಲಾಯಿತು. ಈ ಮೂಲಕ ನಿರ್ದಿಷ್ಟ ಚಾನೆಲ್‌ಗಳನ್ನು ವೀಕ್ಷಿಸುವಂತೆ ಪ್ರೇರೇಪಿಸಲಾಯಿತು. ಟಿಆರ್‌ಪಿಯನ್ನು ಕೃತಕವಾಗಿ ಏರಿಸಿ ಜಾಹೀರಾತುದಾರರನ್ನು ಮೋಸಗೊಳಿಸಲಾಯಿತು” ಎಂದು ಇ.ಡಿ ವಿವರಿಸಿದೆ.

ಆರೋಪಿತ ಚಾನೆಲ್‌ಗಳು ಒಟ್ಟು 46.77 ಕೋಟಿ ರೂ.ಗಳನ್ನು ಅಕ್ರಮ ಟಿಆರ್‌ಪಿ ಆಧಾರದಲ್ಲಿ ಗಳಿಸಿವೆ ಎಂದು ಇ.ಡಿ ಹೇಳಿದೆ.

ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...