Homeಮುಖಪುಟಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಚಾನೆಲ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣವನ್ನು ದಾಖಲಿಸಿತ್ತು.

- Advertisement -
- Advertisement -

ಟಿಆರ್‌ಪಿ ಹಗರಣದ ಬಗ್ಗೆ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಮೂರು ಮಹಾರಾಷ್ಟ್ರ ಮೂಲದ ಟಿವಿ ಚಾನೆಲ್‌ಗಳ ಸುಮಾರು 32 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ವಶಪಡಿಸಿಕೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳ ಪ್ರಕಾರ ವಶಪಡಿಸಲಾದ ಆಸ್ತಿಗಳು ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳಿಗೆ ಸೇರಿವೆ. ಮುಂಬೈ, ಇಂದೋರ್, ದೆಹಲಿ ಮತ್ತು ಗುರಗಾಂವ್‌ನಲ್ಲಿ ಈ ಆಸ್ತಿಗಳಿವೆ. ಚಾನೆಲ್‌ಗಳ ಕೆಲವು ಬ್ಯಾಂಕ್ ಠೇವಣಿಗಳನ್ನು ಕೂಡ ಸೀಜ್ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ.

ಇದನ್ನೂ ಓದಿ: ಕೇರಳ: ಬಿಜೆಪಿ ಮೈತ್ರಿಕೂಟ ತೊರೆದ ‘ಕೇರಳ ಕಾಂಗ್ರೆಸ್’!

ಟಿಆರ್‌ಪಿ ದಂಧೆ ಒಂದು ವಂಚನೆಯ ಆಟ. ಎಷ್ಟು ವೀಕ್ಷಕರು ಯಾವ ಚಾನೆಲ್ ಜಾಸ್ತಿ ನೋಡಿದರು, ಯಾವ ಪ್ರೊಗ್ರಾಮ್ ಹೆಚ್ಚು ನೋಡಿದರು ಎಂಬುದರ ಆಧಾರದಲ್ಲಿ ಆ ಚಾನೆಲ್‌ಗಳಿಗೆ ಜಾಹೀರಾತು ಹರಿದು ಬರುತ್ತದೆ. ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಚಾನೆಲ್ ಬಾರ್ಕ್ ಮುಖ್ಯಸ್ಥನ ಜೊತೆ ಸೇರಿ ಕೃತಕ ಟಿಆರ್‌ಪಿಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿದೆ.

ಜೊತೆಗೆ ಮೇಲೆ ಉಲ್ಲೇಖಿಸಲಾದ ಮೂರು ಮಹಾರಾಷ್ಟ್ರ ಮೂಲದ ಚಾನೆಲ್‌ಗಳು ಕೂಡ ಈ ಕೃತಕ ಟಿಆರ್‌ಪಿ ಏರಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದವು. ಆಯ್ದ ವೀಕ್ಷಕ ಕುಟುಂಬಗಳು ಪದೇ ಪದೇ ಅದೇ ಚಾನೆಲ್ ಅಥವಾ ಆ ಚಾನೆಲ್‌ನ ಒಂದು ಕಾರ್ಯರಕ್ರಮವನ್ನು ವೀಕ್ಷಿಸುವಂತೆ ಲಂಚ ನೀಡುವ ಮೂಲಕ ಇದನ್ನು ಮಾಡಲಾಗಿದೆ.

’ಮೇಲೆ ಉಲ್ಲೇಖಗೊಂಡ ಮೊದಲ ಎರಡು ಚಾನೆಲ್‌ಗಳು 5 ಕುಟುಂಬಗಳ ಜೊತೆಗೆ ಒಪ್ಪಂದ ಮಾಡಿ ಸುಮಾರು 25% ಟಿಆರ್‌ಪಿಯನ್ನು ಪಡೆಯುತ್ತಿದ್ದವು. ಮೂರನೇ ಚಾನಲ್ ಕೂಡಾ 5 ಕುಟುಂಬಗಳೊಂದಿಗೆ ಒಪ್ಪಂದ ಮಾಡಿಕೊಂಡ ಪರಿಣಾಮ ಕೃತಕವಾಗಿ 12% ಟಿಆರ್‌‌‌ಪಿಯನ್ನು ಪಡೆಯುತ್ತಿದ್ದವು’ ಎಂದು ಇ.ಡಿ. ಹೇಳಿದೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳನ್ನು (ಟಿಆರ್‌ಪಿ) ತಿರುಚಿರುವ ಆರೋಪದ ಮೇಲೆ ಮುಂಬೈ ಪೊಲೀಸ್ ಸಿದ್ಧಪಡಿಸಿದ ಎಫ್‌ಐಆರ್ ಅಧ್ಯಯನ ಮಾಡಿದ ನಂತರ ಇ.ಡಿ. ಚಾನೆಲ್‌ಗಳ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿತ್ತು.

“ಟೆಲಿವಿಷನ್ ಚಾನೆಲ್‌ಗಳಾದ ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳು ಟಿಆರ್‌ಪಿಗಳನ್ನು ತಿರುಚುವ ಮೂಲಕ ಅಕ್ರಮ ಲಾಭ ಮಾಡಿಕೊಂಡಿವೆ’ ಎಂದು ಇ.ಡಿ ಮತ್ತು ಮಹಾರಾಷ್ಟ್ರ ಪೊಲೀಸರು ಅಪಾದಿಸಿದ್ದಾರೆ.

“ಟಿಆರ್‌ಪಿ ರೇಟಿಂಗ್‌ಗಳನ್ನು ಮೋಸದಿಂದ ಹೆಚ್ಚಿಸುವ ಮೂಲಕ, ಈ ಚಾನಲ್‌ಗಳು ವಿಪರೀತ ಜಾಹೀರಾತು ಆದಾಯವನ್ನು ಗಳಿಸಿವೆ” ಎಂದು ಇಡಿ ಹೇಳಿದೆ.

ಟಿಆರ್‌ಪಿ ಎಂಬುದು ಟಿವಿ ಚಾನೆಲ್ ಅಥವಾ ಪ್ರೋಗ್ರಾಂನ ಜನಪ್ರಿಯತೆಯನ್ನು ಸೂಚಿಸುತ್ತದೆ ಮತ್ತು ವೀಕ್ಷಕರು ಯಾವುದನ್ನು ಹೆಚ್ಚು ನೋಡುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಹೀರಾತುದಾರರಿಗೆ ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ಹುತಾತ್ಮ ರೈತರಿಗೆ ಗೌರವ ಸಲ್ಲಿಸದ ಕೇಂದ್ರದ ವಿರುದ್ದ ರಾಹುಲ್ ಗಾಂಧಿ ಹೇಳಿದ್ದೇನು?

ವೀಕ್ಷಕರ ಮನೆಗಳಲ್ಲಿ ಬಾರೋಮೀಟರ್‌ಗಳನ್ನು ಅಳವಡಿಸಿ, ಟಿಆರ್‌‌ಪಿ ಅಳೆಯಲಾಗುತ್ತದೆ. ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಇದನ್ನು ನಿರ್ವಹಿಸುತ್ತದೆ. ಆದರೆ ಅದು ಅಳವಡಿಸುವಿಕೆ ಮತ್ತು ಸೇವೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುತ್ತದೆ. ಈ ಪ್ರಕರಣದಲ್ಲಿ ಅದು ಹನ್ಸಾ ಏಜೆನ್ಸಿಯನ್ನು ನೇಮಿಸಿಕೊಂಡಿತ್ತು. (ಬಾರೋಮೀಟರ್‌ಗಳನ್ನು ಯಾವ ಮನೆಗಳಲ್ಲಿ ಅಳವಡಿಸಬೇಕು ಎಂಬುದನ್ನು ಬಾರ್ಕ್ ನಿರ್ಧರಿಸುತ್ತದೆ).

ಟಿಆರ್‌ಪಿ ಯಾವುದೇ ಚಾನಲ್‌ಗೆ ಜಾಹೀರಾತನ್ನು ಪಡೆಯುವ ಪ್ರಮುಖ ಆಧಾರ ಮೂಲ. ಅದು ಟಿವಿ ಚಾನೆಲ್‌ನ ಆದಾಯವನ್ನು ನಿರ್ಧರಿಸುತ್ತದೆ. ಹೀಗಾಗಿ, ಟಿಆರ್‌ಪಿಯನ್ನು ವಾಮಮಾರ್ಗಗಳಲ್ಲಿ ಹೆಚ್ಚಿಸಿ ಹೆಚ್ಚಿನ ಜಾಹೀರಾತು ಆದಾಯವನ್ನು ಗಳಿಸುವ ಸಾಧನವಾಗಿ ಬಳಸಿಕೊಳ್ಳಲಾಗಿದೆ.

“ಬಾರೋಮೀಟರ್ ಸ್ಥಾಪಿಸಲಾದ ಮನೆಗಳ ಗೌಪ್ಯ ಮಾಹಿತಿಯನ್ನು ಏಜೆನ್ಸಿ ವ್ಯವಸ್ಥಾಪಕರು ಹಣದ ಲಾಭಕ್ಕಾಗಿ ಬಹಿರಂಗಪಡಿಸಿದ್ದು, ನಂತರ ಮನೆಯವರಿಗೆ ಲಂಚ ನೀಡಲಾಯಿತು. ಈ ಮೂಲಕ ನಿರ್ದಿಷ್ಟ ಚಾನೆಲ್‌ಗಳನ್ನು ವೀಕ್ಷಿಸುವಂತೆ ಪ್ರೇರೇಪಿಸಲಾಯಿತು. ಟಿಆರ್‌ಪಿಯನ್ನು ಕೃತಕವಾಗಿ ಏರಿಸಿ ಜಾಹೀರಾತುದಾರರನ್ನು ಮೋಸಗೊಳಿಸಲಾಯಿತು” ಎಂದು ಇ.ಡಿ ವಿವರಿಸಿದೆ.

ಆರೋಪಿತ ಚಾನೆಲ್‌ಗಳು ಒಟ್ಟು 46.77 ಕೋಟಿ ರೂ.ಗಳನ್ನು ಅಕ್ರಮ ಟಿಆರ್‌ಪಿ ಆಧಾರದಲ್ಲಿ ಗಳಿಸಿವೆ ಎಂದು ಇ.ಡಿ ಹೇಳಿದೆ.

ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...