HomeUncategorizedTRP ಹಗರಣದ 2ನೇ ಚಾರ್ಜ್‌ಶೀಟ್‌‌ನಲ್ಲಿ ಅರ್ನಾಬ್‌ ಗೋಸ್ವಾಮಿ ಆರೋಪಿ

TRP ಹಗರಣದ 2ನೇ ಚಾರ್ಜ್‌ಶೀಟ್‌‌ನಲ್ಲಿ ಅರ್ನಾಬ್‌ ಗೋಸ್ವಾಮಿ ಆರೋಪಿ

- Advertisement -
- Advertisement -

ಟಿಆರ್‌ಪಿ ಹಗರಣದಲ್ಲಿ ಮುಂಬೈ ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಎರಡನೇ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಈ ಚಾರ್ಜ್‌ಶೀಟ್‌‌‌ನಲ್ಲಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಆರೋಪಿ ಎಂದು ಹೆಸರಿಸಿದ್ದಾರೆ.

“ಇತರರ ಜೊತೆಗೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿಯ ಮಾತೃ ಸಂಸ್ಥೆಯಾದ ಎಆರ್‌‌ಜಿ ಔಟ್‌ಲೆಯರ್‌ ಮೀಡಿಯಾವನ್ನು ಚಾರ್ಜ್‌‌ಶೀಟ್‌‌ನಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ” ಎಂದು ಅರ್ನಾಬ್‌ ಗೋಸ್ವಾಮಿಯ ವಕೀಲರು ಹೇಳಿದ್ದಾರೆ.

ಟಿಆರ್‌ಪಿ ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ಗುಪ್ತಚರ ಘಟಕ (ಸಿಐಯು)ವು ಈ ಆರೋಪಪಟ್ಟಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಇದನ್ನೂ ಓದಿ: ರೇಟಿಂಗ್ ಹೆಚ್ಚಿಸಲು ಅರ್ನಾಬ್ 12,000 ಡಾಲರ್ ಮತ್ತು 40 ಲಕ್ಷ ರೂ ಪಾವತಿಸಿದ್ದಾರೆ: ಪಾರ್ಥೋ ದಾಸ್‌ಗುಪ್ತಾ

ಕಳೆದ ವರ್ಷ ಅಕ್ಟೋಬರ್‌ನಲ್ಲಿ ರೇಟಿಂಗ್ ಏಜೆನ್ಸಿ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್), ಹನ್ಸಾ ರಿಸರ್ಚ್ ಗ್ರೂಪ್ (ಎಚ್‌ಆರ್‌ಜಿ) ಮೂಲಕ ಕೆಲವು ಟೆಲಿವಿಷನ್ ಚಾನೆಲ್‌ಗಳು ಟಿಆರ್‌ಪಿ ಸಂಖ್ಯೆಯನ್ನು ತಿರುಚುತ್ತಿದೆ ಎಂದು ಆರೋಪಿಸಿತ್ತು. ಇದರ ನಂತರ ಟಿಆರ್‌ಪಿ ಹಗರಣ ಬೆಳಕಿಗೆ ಬಂದಿತ್ತು.

ಟಿಆರ್‌ಪಿ
ಅರ್ನಾಬ್‌ ಗೋಸ್ವಾಮಿ ಮತ್ತು ಪಾರ್ಥೋ ದಾಸ್‌ಗುಪ್ತಾ

ಈ ಹಗರಣದಲ್ಲಿ ಅರ್ನಾಬ್‌ ಗೋಸ್ವಾಮಿ, ಬಾರ್ಕ್‌ನ ಮಾಜಿ ಮುಖ್ಯ ನಿರ್ವಹಣಾಧಿಕಾರಿ ಪಾರ್ಥೋ ದಾಸ್‌ಗುಪ್ತಾ ಸೇರಿದಂತೆ ಮುಂಬೈ ಪೊಲೀಸರು ಒಟ್ಟು 15 ಜನರನ್ನು ಬಂಧಿಸಿತ್ತು. ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿ, ಮುಂಬೈನ ಸ್ಥಳೀಯ ಚಾನೆಲ್‌‌‌ಗಳಾದ ಬಾಕ್ಸ್‌ ಸಿನೆಮಾ ಹಾಗೂ ಫಕ್ತ್‌ ಮರಾಠಿ ಚಾನೆಲ್‌ಗಳು ಈ ನಕಲಿ ಟಿಆರ್‌ಪಿ ಹಗರಣದಲ್ಲಿ ಭಾಗಿಯಾವೆ ಎಂದು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ಟಿಆರ್‌ಪಿಯ ಅಂಕಿ ಅಂಶಗಳನ್ನು ಸಂಗ್ರಹಿಸಲು ಬೇಕಾಗಿ ಕೆಲವೊಂದು ಮನೆಗಳಿಗೆ ಮೀಟರ್‌ಗಳನ್ನು ಅಳವಡಿಸಲಾಗುತ್ತದೆ. ಈ ಮೀಟರ್‌ ಅಳವಡಿಸುವ ಗುತ್ತಿಗೆಯನ್ನು ‘ಬಾರ್ಕ್‌‌’ ಹನ್ಸಾ ಎಂಬ ಸಂಸ್ಥೆಗೆ ನೀಡಿತ್ತು. ಆದರೆ ಹನ್ಸಾವು ಕೆಲವು ನಿರ್ದಿಷ್ಟ ವಾಹಿನಿಯನ್ನು ಮಾತ್ರ ಆನ್‌ ಮಾಡಿ ಇಡುವಂತೆ ಆ ಮನೆಗಳಿಗೆ ಹಣ ನೀಡಿತ್ತು. ತಮಗೆ ಹಣ ನೀಡುತ್ತಿರುವುದನ್ನು ಈ ವೀಕ್ಷಕರು ಮ್ಯಾಜಿಸ್ಟ್ರೇಟ್‌ ಮುಂದೆ ಒಪ್ಪಿಕೊಂಡಿದ್ದಾರೆ ಮುಂಬೈ ಪೊಲೀಸರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.

ಅಲ್ಲದೆ ಟಿಆರ್‌ಪಿ ತಿರುಚುವಿಕೆಯು ಬಾರ್ಕ್‌ನ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತ ಅವರಿಗೆ ತಿಳಿದಿತ್ತು ಎಂದು ಆರೋಪಿಸಲಾಗಿದ್ದು, ಅದಕ್ಕಾಗಿ ಅವರ ಬಂಧನ ಕೂಡಾ ನಡೆದಿತ್ತು. ಟಿಆರ್‌ಪಿ ಹಗರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಬಾರ್ಕ್ 12 ವಾರಗಳ ಅವಧಿಗೆ ಟಿಆರ್‌ಪಿ ರೇಟಿಂಗ್‌ ನೀಡುವುದನ್ನು ಕೂಡಾ ಸ್ಥಗಿತಗೊಳಿಸಿತ್ತು.

ಹೆಚ್ಚು ಟಿಆರ್‌ಪಿಯ ಟಿವಿ ಚಾನೆಲುಗಳೆಂದರೆ ಅದನ್ನು ಹೆಚ್ಚು ವೀಕ್ಷಕರು ವೀಕ್ಷಿಸುತ್ತಾರೆ ಎಂದರ್ಥ. ಹಾಗಾಗಿ ಹೆಚ್ಚು ಟಿಎಆರ್‌ಪಿ ಇರುವ ಚಾನೆಲುಗಳಿಗೆ ಹೆಚ್ಚು ಹೆಚ್ಚು ಜಾಹಿರಾತು ಬರುತ್ತದೆ. ಇದರಿಂದಾಗಿ ಚಾನೆಲ್‌ನ ಆದಾಯವು ಹೆಚ್ಚಾಗುತ್ತದೆ.

ಇದನ್ನೂ ಓದಿ: TRP ತಿರುಚಿದ ಆರೋಪ; ರಿಪಬ್ಲಿಕ್ ಸೇರಿ 3 ಚಾನೆಲ್‌ಗಳ ಮೇಲೆ ತನಿಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...