Homeಮುಖಪುಟಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಂಚಂದಾನಿಗೆ ಜಾಮೀನು

ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಂಚಂದಾನಿಗೆ ಜಾಮೀನು

"ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸುವುದಕ್ಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು..."

- Advertisement -
- Advertisement -

ನಕಲಿ ಟಿಆರ್‌ಪಿ ರೇಟಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ ಮುಂಬೈನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಇಂದು ಜಾಮೀನು ನೀಡಿದ್ದಾರೆ.

ಈ ಪ್ರಕರಣದಲ್ಲಿ ನಿನ್ನೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 14 ದಿನಗಳ ಕಾಲ ವಿಕಾಸ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಜಾಮೀನು ಕೋರಿ ಖಂಚಂದಾನಿ ಅವರ ವಕೀಲ ನಿತೀನ್ ಪ್ರಧಾನ್ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಇಂದು ಜಾಮೀನು ನೀಡಿದ್ದಾರೆ.

ಇದನ್ನೂ ಓದಿ: ರೈತ ವಿರೋಧಿ ಶಾಸನಗಳು ಮತ್ತು ಬಿಜೆಪಿಯ ಹತ್ತು ಸುಳ್ಳುಗಳು: ಶಿವಸುಂದರ್

“ಅವರ ಬಂಧನವು ಸಂಪೂರ್ಣ ಅಧಿಕಾರದ ದುರುಪಯೋಗ ಮತ್ತು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದೇವೆ. ಏಕೆಂದರೆ, ಖಂಚಂದಾನಿ ಹೆಸರನ್ನು ಎಫ್‌ಐಆರ್ ಅಥವಾ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾಗಿಲ್ಲ” ಎಂದು ನಿತೀನ್ ಪ್ರಧಾನ್ ಹೇಳಿದ್ದರು.

ನಕಲಿ ಟಿಆರ್‌ಪಿ ರೇಟಿಂಗ್ ಹಗರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಯನ್ನು ಮುಂಬೈ ಪೊಲೀಸರು ಭಾನುವಾರ (ಡಿ.13) ಬಂಧಿಸಿದ್ದರು. ಮಹಾರಾಷ್ಟ್ರದಲ್ಲಿ ರಿಪಬ್ಲಿಕ್ ಟಿವಿ‌ ಮತ್ತು ಅದರ ನೌಕರರ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ರಕ್ಷಣೆ ಕೋರಿ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ARG ಔಟ್‌ಲಿಯರ್ ಮೀಡಿಯಾ ಪ್ರೈವೇಟ್‌ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

ಇದನ್ನೂ ಓದಿ: ಉತ್ತರಖಂಡ: ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡುವವರಿಗೆ 1 ಲಕ್ಷದ ವರೆಗೂ ಬಹುಮಾನ!

ಹನ್ಸಾ ಸಂಶೋಧನೆಯ ಅಧಿಕಾರಿ ನಿತಿನ್ ಡಿಯೋಕರ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಟಿಆರ್‌ಪಿ ತಿರುಚಿದ ಪ್ರಕರಣದಲ್ಲಿ ಅಕ್ಟೋಬರ್ 6 ರಂದು ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಆರಂಭಿಸಿದ್ದರು. ಈ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಯ ಬಂಧನ 13ನೇಯದಾಗಿದೆ.

ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸುವುದಕ್ಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು ಎಂದು ಥಾಣೆ ಮೂಲದ ಕೇಬಲ್ ವಿತರಕ ಸಂಸ್ಥೆಯಾದ ಕ್ರಿಸ್ಟಲ್ ಬ್ರಾಡ್‌ಕಾಸ್ಟ್ ಮಾಲೀಕ ಆಶಿಶ್ ಚೌಧರಿ ಒಪ್ಪಿಕೊಂಡಿದ್ದಾಗಿ ಟಿಆರ್‌ಪಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಿಳಿಸಿದೆ.


ಇದನ್ನೂ ಓದಿ: ‘ನನ್ನನ್ನು ಹಣದಿಂದ ಖರೀದಿಸುವ ವ್ಯಕ್ತಿ ಇನ್ನೂ ಹುಟ್ಟಿಲ್ಲ’ – ಮಮತಾಗೆ ತಿರುಗೇಟು ನೀಡಿದ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...