Homeಮುಖಪುಟಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

ಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

- Advertisement -
- Advertisement -

ಟಿಆರ್‌ಪಿ ಹಗರಣದಲ್ಲಿ ಬಂಧನವಾಗಿದ್ದ ಬಾರ್ಕ್‌ನ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾ ಶುಕ್ರವಾರ ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಟಿಆರ್‌ಪಿ ಹಗರಣದಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿರುವ ಮುಂಬೈ ಪೊಲೀಸರು ಇವರನ್ನು ಡಿಸಂಬರ್ 24 ರಂದು ಬಂಧಿಸಿದ್ದರು.

ದಾಸ್‌ಗುಪ್ತ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಎಎನ್‌ಐ ವರದಿ ಮಾಡಿದೆ. “ಟಿಆರ್‌ಪಿ ಹಗರಣದ ಪ್ರಮುಖ ಆರೋಪಿ ಬಾರ್ಕ್‌ನ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತ ಕಳೆದ ರಾತ್ರಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯಕ್ಕೆ ಇವರು ತುರ್ತು ನಿಗಾ ಘಟಕದಲ್ಲಿ ಕೃತಕ ಉಸಿರಾಟದ ಬೆಂಬಲದಲ್ಲಿದ್ದಾರೆ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಟಿಆರ್‌ಪಿ ಹಗರಣ ಭಾಗಿಯಾಗಿದ್ದಾರೆಂದು ಮುಂಬೈ ಪೊಲೀಸರು ಬಾರ್ಕ್(ರೇಟಿಂಗ್ ಏಜೆನ್ಸಿ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್)ನ ಮಾಜಿ ಸಿಇಒ ಪಾರ್ಥೋ ದಾಸ್‌ ಗುಪ್ತಾ ಅವರ ಬಂಧನದ ನಂತರ ಪ್ರಕರಣದಲ್ಲಿ ಹಲವು ಮಹತ್ವದ ಸುಳಿವುಗಳನ್ನು ಪಡೆದಿದ್ದರು.

ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ಟಿಆರ್‌ಪಿ ತಿರುಚುವಿಕೆಯು 2016 ರಿಂದಲೇ ನಡೆಯುತ್ತಿದ್ದು, ಒಂದನೇ ಸ್ಥಾನದಲ್ಲಿದ್ದ ಟೈಮ್ಸ್ ನೌ ಚಾನೆಲ್ ಅನ್ನು ಎರಡನೇ ಸ್ಥಾನಕ್ಕೆ ತಳ್ಳಿ ಅರ್ನಾಬ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯನ್ನು ಒಂದನೇ ಸ್ಥಾನಕ್ಕೆ ತರಲಾಗಿದೆ ಎಂದು ಮುಂಬೈ ಜಂಟಿ ಪೊಲೀಸ್ ಆಯುಕ್ತ ಮಿಲಿಂದ್ ಭರಂಬೆ ತಿಳಿಸಿದ್ದಾರೆ.

ಈ ಕಾರಣಕ್ಕೆ ಪೊಲೀಸರು ದಾಸ್‌ಗುಪ್ತ ಅವರನ್ನು ವಿಚಾರಣೆ ನಡೆಸುತ್ತಿದ್ದರು. ಮುಂಬೈ ಪೊಲೀಸರು ಶುಕ್ರವಾರ ಅರ್ನಾಬ್ ಗೋಸ್ವಾಮಿ ಮತ್ತು ದಾಸ್‌ಗುಪ್ತ ಅವರ ನಡುವಿನ ವಾಟ್ಸಾಪ್ ಸಂದೇಶಗಳ ದಾಖಲೆಯನ್ನು ಬಿಡುಗಡೆ ಮಾಡಿದ್ದರು. ಇದರಲ್ಲಿ ಹತ್ತಾರು ಸ್ಫೋಟಕ ಮಾಹಿತಿಗಳು ಹೊರ ಬಂದಿದ್ದವು.

ಟಿಆರ್‌ಪಿ ಹಗರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸಾಪ್‌ ಚಾಟ್‌ಗಳ ಸುಮಾರು 500 ಪುಟಗಳನ್ನು ಬಹಿರಂಗಗೊಳಿಸಿದ್ದಾರೆ ಎಂಬುದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.


ಇದನ್ನೂ ಓದಿ: Arnab Goswami’s leaked Whatsapp chats and the TRP Manipulation Scam

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...