Homeಮುಖಪುಟಟಿಆರ್‌ಪಿ ಹಗರಣ: BARC ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾಗೆ ಜಾಮೀನು

ಟಿಆರ್‌ಪಿ ಹಗರಣ: BARC ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾಗೆ ಜಾಮೀನು

ರಿಪಬ್ಲಿಕ್‌ ಟಿವಿಯ ಟಿಆರ್‌ಪಿ ರೇಟಿಂಗ್‌ ಅನ್ನು‌ ಬದಲಾಯಿಸಿದ್ದಕ್ಕಾಗಿ ಅರ್ನಾಬ್ ಗೋಸ್ವಾಮಿ 12,000 ಅಮೆರಿಕನ್‌ ಡಾಲರ್‌ ಮತ್ತು ಇಡೀ ವರ್ಷಕ್ಕೆ ಒಟ್ಟು 40 ಲಕ್ಷ ರೂಪಾಯಿಗಳನ್ನು ನೀಡಿದ್ದರು- ಪಾರ್ಥೋ ದಾಸ್‌ಗುಪ್ತಾ

- Advertisement -
- Advertisement -

ಟಿಆರ್‌ಪಿ ಹಗರಣದಲ್ಲಿ ಬಂಧನವಾಗಿದ್ದು ಪ್ರಮುಖ ಆರೋಪಿ ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ (BARC) ಮಾಜಿ ಮುಖ್ಯ ನಿರ್ವಹಣಾಧಿಕಾರಿ ಪಾರ್ಥೋ ದಾಸ್‌ಗುಪ್ತಾ ಅವರಿಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದೆ. ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಪಾರ್ಥೋ ದಾಸ್‌ಗುಪ್ತಾ ಅವರನ್ನು ಬಂಧಿಸಿದ್ದರು. ಈ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 15 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ರೇಟಿಂಗ್ ಹೆಚ್ಚಿಸಲು ಅರ್ನಾಬ್ 12,000 ಡಾಲರ್ ಮತ್ತು 40 ಲಕ್ಷ ರೂ ಪಾವತಿಸಿದ್ದಾರೆ: ಪಾರ್ಥೋ ದಾಸ್‌ಗುಪ್ತಾ

ಈ ಹಿಂದೆ  BARC ನ ಮತ್ತೋರ್ವ ಮಾಜಿ ಮುಖ್ಯಸ್ಥ ರೊಮಿಲ್‌ ರಾಮ್‌ಗರ‍್ಹಿಯಾ, ರಿಪಬ್ಲಿಕ್‌ ಮೀಡಿಯಾ ನೆಟ್‌ವರ್ಕ್‌ನ ಸಿಇಒ ವಿಕಾಸ್‌ ಖಾನ್‌ಚಂದಾನಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು.

ಕೆಲವು ವೀಕ್ಷಕರು ರಿಪಬ್ಲಿಕ್ ಟಿವಿಯನ್ನು ನೋಡದಿದ್ದರೂ ಸಹ ಅದನ್ನು ನೋಡುವಂತೆ ಮಾಡಲು ಟಿವಿ ವೀಕ್ಷಕರಿಗೆ ಹಣ ನೀಡಲಾಗಿದೆ ಎಂಬುದಕ್ಕೆ ಸಾಕ್ಷ್ಯ ದೊರಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದವು. ಟಿಆರ್‌ಪಿ ಹಗರಣದ ಬಗ್ಗೆ ಆರಂಭಿಕ ತನಿಖೆಯಲ್ಲಿ ಎರಡು ಸ್ಥಳೀಯ ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನೆಮಾ ಚಾನೆಲ್‌ಗಳನ್ನು ಹೆಸರಿಸಲಾಗಿದೆ.

ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸಲು ಬೇಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು ಎಂದು ಥಾಣೆ ಮೂಲದ ಕೇಬಲ್ ವಿತರಕ ಸಂಸ್ಥೆಯಾದ ಕ್ರಿಸ್ಟಲ್ ಬ್ರಾಡ್‌ಕಾಸ್ಟ್ ಮಾಲಕ ಆಶಿಶ್ ಚೌಧರಿ ಒಪ್ಪಿಕೊಂಡಿದ್ದಾಗಿ ಟಿಆರ್‌ಪಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಿಳಿಸಿತ್ತು.

ಇದನ್ನೂ ಓದಿ: ನೇಷನ್ ವಾಂಟ್ಸ್ ಟು ಸೀ ಅರ್ನಬ್ಸ್ ಚಾಟ್ ಅಕೌಂಟ್!

ಆರೋಪಿಯು ತಾನು ಹವಾಲಾ ಆಪರೇಟರ್‌ಗಳಿಂದ ಹಣ ಸ್ವೀಕರಿಸಿದ್ದಾಗಿ ಮತ್ತು ಈ ಬಗ್ಗೆ ತಪ್ಪೊಪ್ಪಿಗೆ ಸಾಕ್ಷಿಯಾಗಲು ಒಪ್ಪಿಕೊಂಡಿದ್ದಾಗಿಯೂ ಪೊಲೀಸರು ತಿಳಿಸಿದ್ದಾರೆ. ಮ್ಯಾಕ್ಸ್‌ಮೀಡಿಯಾ ಎಂಬ ಮಾರಾಟ ಸಂಸ್ಥೆಯ ಅಭಿಷೇಕ್ ಕೊಲವಾಡೆ ಮತ್ತು ಆಶಿಶ್ ಚೌಧರಿಯ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೋರಿ ಅಪರಾಧ ವಿಭಾಗ ಸಲ್ಲಿಸಿದ ಅರ್ಜಿಯಲ್ಲಿ ಈ ವಿಚಾರವನ್ನು ಪೊಲೀಸರು ಬಹಿರಂಗಪಡಿಸಿದ್ದರು.

ಎರಡು ರಜಾ ದಿನಗಳಲ್ಲಿ ರಿಪಬ್ಲಿಕ್‌ ಟಿವಿಯ ರೇಟಿಂಗ್‌ ಉತ್ತಮವಾಗಿರುವಂತೆ ಟಿಆರ್‌ಪಿಯನ್ನು‌ ಬದಲಾಯಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ 12,000 ಅಮೆರಿಕನ್‌ ಡಾಲರ್‌ ಮತ್ತು ಇಡೀ ವರ್ಷಕ್ಕೆ ಒಟ್ಟು 40 ಲಕ್ಷ ರೂಪಾಯಿಗಳನ್ನು ತಮಗೆ ಕೊಟ್ಟಿರುವುದಾಗಿ ಬಾರ್ಕ್‌‌ನ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ ಕೈಬರಹದಲ್ಲಿ ಹೇಳಿಕೆ ನೀಡಿದ್ದಾಗಿ ಮುಂಬೈ ಪೊಲೀಸರು ಹೇಳಿದ್ದರು.

ದಾಸ್‌ಗುಪ್ತಾ ಅವರ ಹೇಳಿಕೆಯು ಹೀಗಿದೆ: “ನನಗೆ ಅರ್ನಾಬ್ ಗೋಸ್ವಾಮಿ ಅವರು 2004 ರಿಂದ ಪರಿಚಿತರು. ನಾವು ಟೈಮ್ಸ್ ನೌನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದೆವು. ನಾನು 2013 ರಲ್ಲಿ BARCನ ಸಿಇಒ ಆಗಿ ಸೇರಿಕೊಂಡೆ. ಅರ್ನಾಬ್ ಗೋಸ್ವಾಮಿ ಅವರು 2017 ರಲ್ಲಿ ರಿಪಬ್ಲಿಕ್ ಅನ್ನು ಪ್ರಾರಂಭಿಸಿದರು. ರಿಪಬ್ಲಿಕ್ ಟಿವಿಯನ್ನು ಪ್ರಾರಂಭಿಸುವ ಮೊದಲೇ ಅವರು ನನ್ನೊಂದಿಗೆ ಬ್ರಾಡ್‌ಕಾಸ್ಟಿಂಗ್‌ (ಪ್ರಸಾರ) ಯೋಜನೆಗಳ ಬಗ್ಗೆ ಮಾತನಾಡಿದ್ದರು. ಟಿಆರ್‌ಪಿ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿದೆ ಎಂದು ಗೋಸ್ವಾಮಿಗೆ ಚೆನ್ನಾಗಿ ತಿಳಿದಿತ್ತು. ಹಾಗಾಗಿ ಅವರ ಚಾನಲ್‌ಗೆ ಉತ್ತಮ ರೇಟಿಂಗ್ ಪಡೆಯಲು ಸಹಾಯ ಮಾಡಬೇಕು ಎಂಬುದರ ಬಗ್ಗೆ ಪರೋಕ್ಷವಾಗಿ ಸುಳಿವು ನೀಡುತ್ತಿದ್ದರು. ಭವಿಷ್ಯದಲ್ಲಿ ನನಗೆ ಸಹಾಯ ಮಾಡಲು ಅವರು ಪ್ರಸ್ತಾಪಿಸಿದ್ದರು” ಎಂದು ಹೇಳಿದ್ದಾರೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...