Homeಮುಖಪುಟಟಿಆರ್‌ಪಿ ಹಗರಣ: BARC ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾಗೆ ಜಾಮೀನು

ಟಿಆರ್‌ಪಿ ಹಗರಣ: BARC ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾಗೆ ಜಾಮೀನು

ರಿಪಬ್ಲಿಕ್‌ ಟಿವಿಯ ಟಿಆರ್‌ಪಿ ರೇಟಿಂಗ್‌ ಅನ್ನು‌ ಬದಲಾಯಿಸಿದ್ದಕ್ಕಾಗಿ ಅರ್ನಾಬ್ ಗೋಸ್ವಾಮಿ 12,000 ಅಮೆರಿಕನ್‌ ಡಾಲರ್‌ ಮತ್ತು ಇಡೀ ವರ್ಷಕ್ಕೆ ಒಟ್ಟು 40 ಲಕ್ಷ ರೂಪಾಯಿಗಳನ್ನು ನೀಡಿದ್ದರು- ಪಾರ್ಥೋ ದಾಸ್‌ಗುಪ್ತಾ

- Advertisement -
- Advertisement -

ಟಿಆರ್‌ಪಿ ಹಗರಣದಲ್ಲಿ ಬಂಧನವಾಗಿದ್ದು ಪ್ರಮುಖ ಆರೋಪಿ ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ (BARC) ಮಾಜಿ ಮುಖ್ಯ ನಿರ್ವಹಣಾಧಿಕಾರಿ ಪಾರ್ಥೋ ದಾಸ್‌ಗುಪ್ತಾ ಅವರಿಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದೆ. ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಪಾರ್ಥೋ ದಾಸ್‌ಗುಪ್ತಾ ಅವರನ್ನು ಬಂಧಿಸಿದ್ದರು. ಈ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 15 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ರೇಟಿಂಗ್ ಹೆಚ್ಚಿಸಲು ಅರ್ನಾಬ್ 12,000 ಡಾಲರ್ ಮತ್ತು 40 ಲಕ್ಷ ರೂ ಪಾವತಿಸಿದ್ದಾರೆ: ಪಾರ್ಥೋ ದಾಸ್‌ಗುಪ್ತಾ

ಈ ಹಿಂದೆ  BARC ನ ಮತ್ತೋರ್ವ ಮಾಜಿ ಮುಖ್ಯಸ್ಥ ರೊಮಿಲ್‌ ರಾಮ್‌ಗರ‍್ಹಿಯಾ, ರಿಪಬ್ಲಿಕ್‌ ಮೀಡಿಯಾ ನೆಟ್‌ವರ್ಕ್‌ನ ಸಿಇಒ ವಿಕಾಸ್‌ ಖಾನ್‌ಚಂದಾನಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು.

ಕೆಲವು ವೀಕ್ಷಕರು ರಿಪಬ್ಲಿಕ್ ಟಿವಿಯನ್ನು ನೋಡದಿದ್ದರೂ ಸಹ ಅದನ್ನು ನೋಡುವಂತೆ ಮಾಡಲು ಟಿವಿ ವೀಕ್ಷಕರಿಗೆ ಹಣ ನೀಡಲಾಗಿದೆ ಎಂಬುದಕ್ಕೆ ಸಾಕ್ಷ್ಯ ದೊರಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದವು. ಟಿಆರ್‌ಪಿ ಹಗರಣದ ಬಗ್ಗೆ ಆರಂಭಿಕ ತನಿಖೆಯಲ್ಲಿ ಎರಡು ಸ್ಥಳೀಯ ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನೆಮಾ ಚಾನೆಲ್‌ಗಳನ್ನು ಹೆಸರಿಸಲಾಗಿದೆ.

ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸಲು ಬೇಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು ಎಂದು ಥಾಣೆ ಮೂಲದ ಕೇಬಲ್ ವಿತರಕ ಸಂಸ್ಥೆಯಾದ ಕ್ರಿಸ್ಟಲ್ ಬ್ರಾಡ್‌ಕಾಸ್ಟ್ ಮಾಲಕ ಆಶಿಶ್ ಚೌಧರಿ ಒಪ್ಪಿಕೊಂಡಿದ್ದಾಗಿ ಟಿಆರ್‌ಪಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಿಳಿಸಿತ್ತು.

ಇದನ್ನೂ ಓದಿ: ನೇಷನ್ ವಾಂಟ್ಸ್ ಟು ಸೀ ಅರ್ನಬ್ಸ್ ಚಾಟ್ ಅಕೌಂಟ್!

ಆರೋಪಿಯು ತಾನು ಹವಾಲಾ ಆಪರೇಟರ್‌ಗಳಿಂದ ಹಣ ಸ್ವೀಕರಿಸಿದ್ದಾಗಿ ಮತ್ತು ಈ ಬಗ್ಗೆ ತಪ್ಪೊಪ್ಪಿಗೆ ಸಾಕ್ಷಿಯಾಗಲು ಒಪ್ಪಿಕೊಂಡಿದ್ದಾಗಿಯೂ ಪೊಲೀಸರು ತಿಳಿಸಿದ್ದಾರೆ. ಮ್ಯಾಕ್ಸ್‌ಮೀಡಿಯಾ ಎಂಬ ಮಾರಾಟ ಸಂಸ್ಥೆಯ ಅಭಿಷೇಕ್ ಕೊಲವಾಡೆ ಮತ್ತು ಆಶಿಶ್ ಚೌಧರಿಯ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೋರಿ ಅಪರಾಧ ವಿಭಾಗ ಸಲ್ಲಿಸಿದ ಅರ್ಜಿಯಲ್ಲಿ ಈ ವಿಚಾರವನ್ನು ಪೊಲೀಸರು ಬಹಿರಂಗಪಡಿಸಿದ್ದರು.

ಎರಡು ರಜಾ ದಿನಗಳಲ್ಲಿ ರಿಪಬ್ಲಿಕ್‌ ಟಿವಿಯ ರೇಟಿಂಗ್‌ ಉತ್ತಮವಾಗಿರುವಂತೆ ಟಿಆರ್‌ಪಿಯನ್ನು‌ ಬದಲಾಯಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ 12,000 ಅಮೆರಿಕನ್‌ ಡಾಲರ್‌ ಮತ್ತು ಇಡೀ ವರ್ಷಕ್ಕೆ ಒಟ್ಟು 40 ಲಕ್ಷ ರೂಪಾಯಿಗಳನ್ನು ತಮಗೆ ಕೊಟ್ಟಿರುವುದಾಗಿ ಬಾರ್ಕ್‌‌ನ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ ಕೈಬರಹದಲ್ಲಿ ಹೇಳಿಕೆ ನೀಡಿದ್ದಾಗಿ ಮುಂಬೈ ಪೊಲೀಸರು ಹೇಳಿದ್ದರು.

ದಾಸ್‌ಗುಪ್ತಾ ಅವರ ಹೇಳಿಕೆಯು ಹೀಗಿದೆ: “ನನಗೆ ಅರ್ನಾಬ್ ಗೋಸ್ವಾಮಿ ಅವರು 2004 ರಿಂದ ಪರಿಚಿತರು. ನಾವು ಟೈಮ್ಸ್ ನೌನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದೆವು. ನಾನು 2013 ರಲ್ಲಿ BARCನ ಸಿಇಒ ಆಗಿ ಸೇರಿಕೊಂಡೆ. ಅರ್ನಾಬ್ ಗೋಸ್ವಾಮಿ ಅವರು 2017 ರಲ್ಲಿ ರಿಪಬ್ಲಿಕ್ ಅನ್ನು ಪ್ರಾರಂಭಿಸಿದರು. ರಿಪಬ್ಲಿಕ್ ಟಿವಿಯನ್ನು ಪ್ರಾರಂಭಿಸುವ ಮೊದಲೇ ಅವರು ನನ್ನೊಂದಿಗೆ ಬ್ರಾಡ್‌ಕಾಸ್ಟಿಂಗ್‌ (ಪ್ರಸಾರ) ಯೋಜನೆಗಳ ಬಗ್ಗೆ ಮಾತನಾಡಿದ್ದರು. ಟಿಆರ್‌ಪಿ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿದೆ ಎಂದು ಗೋಸ್ವಾಮಿಗೆ ಚೆನ್ನಾಗಿ ತಿಳಿದಿತ್ತು. ಹಾಗಾಗಿ ಅವರ ಚಾನಲ್‌ಗೆ ಉತ್ತಮ ರೇಟಿಂಗ್ ಪಡೆಯಲು ಸಹಾಯ ಮಾಡಬೇಕು ಎಂಬುದರ ಬಗ್ಗೆ ಪರೋಕ್ಷವಾಗಿ ಸುಳಿವು ನೀಡುತ್ತಿದ್ದರು. ಭವಿಷ್ಯದಲ್ಲಿ ನನಗೆ ಸಹಾಯ ಮಾಡಲು ಅವರು ಪ್ರಸ್ತಾಪಿಸಿದ್ದರು” ಎಂದು ಹೇಳಿದ್ದಾರೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...