Homeಮುಖಪುಟಟಿಆರ್‌ಪಿ ಹಗರಣ: BARC ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾಗೆ ಜಾಮೀನು

ಟಿಆರ್‌ಪಿ ಹಗರಣ: BARC ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾಗೆ ಜಾಮೀನು

ರಿಪಬ್ಲಿಕ್‌ ಟಿವಿಯ ಟಿಆರ್‌ಪಿ ರೇಟಿಂಗ್‌ ಅನ್ನು‌ ಬದಲಾಯಿಸಿದ್ದಕ್ಕಾಗಿ ಅರ್ನಾಬ್ ಗೋಸ್ವಾಮಿ 12,000 ಅಮೆರಿಕನ್‌ ಡಾಲರ್‌ ಮತ್ತು ಇಡೀ ವರ್ಷಕ್ಕೆ ಒಟ್ಟು 40 ಲಕ್ಷ ರೂಪಾಯಿಗಳನ್ನು ನೀಡಿದ್ದರು- ಪಾರ್ಥೋ ದಾಸ್‌ಗುಪ್ತಾ

- Advertisement -
- Advertisement -

ಟಿಆರ್‌ಪಿ ಹಗರಣದಲ್ಲಿ ಬಂಧನವಾಗಿದ್ದು ಪ್ರಮುಖ ಆರೋಪಿ ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ (BARC) ಮಾಜಿ ಮುಖ್ಯ ನಿರ್ವಹಣಾಧಿಕಾರಿ ಪಾರ್ಥೋ ದಾಸ್‌ಗುಪ್ತಾ ಅವರಿಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದೆ. ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಪಾರ್ಥೋ ದಾಸ್‌ಗುಪ್ತಾ ಅವರನ್ನು ಬಂಧಿಸಿದ್ದರು. ಈ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 15 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ರೇಟಿಂಗ್ ಹೆಚ್ಚಿಸಲು ಅರ್ನಾಬ್ 12,000 ಡಾಲರ್ ಮತ್ತು 40 ಲಕ್ಷ ರೂ ಪಾವತಿಸಿದ್ದಾರೆ: ಪಾರ್ಥೋ ದಾಸ್‌ಗುಪ್ತಾ

ಈ ಹಿಂದೆ  BARC ನ ಮತ್ತೋರ್ವ ಮಾಜಿ ಮುಖ್ಯಸ್ಥ ರೊಮಿಲ್‌ ರಾಮ್‌ಗರ‍್ಹಿಯಾ, ರಿಪಬ್ಲಿಕ್‌ ಮೀಡಿಯಾ ನೆಟ್‌ವರ್ಕ್‌ನ ಸಿಇಒ ವಿಕಾಸ್‌ ಖಾನ್‌ಚಂದಾನಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು.

ಕೆಲವು ವೀಕ್ಷಕರು ರಿಪಬ್ಲಿಕ್ ಟಿವಿಯನ್ನು ನೋಡದಿದ್ದರೂ ಸಹ ಅದನ್ನು ನೋಡುವಂತೆ ಮಾಡಲು ಟಿವಿ ವೀಕ್ಷಕರಿಗೆ ಹಣ ನೀಡಲಾಗಿದೆ ಎಂಬುದಕ್ಕೆ ಸಾಕ್ಷ್ಯ ದೊರಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದವು. ಟಿಆರ್‌ಪಿ ಹಗರಣದ ಬಗ್ಗೆ ಆರಂಭಿಕ ತನಿಖೆಯಲ್ಲಿ ಎರಡು ಸ್ಥಳೀಯ ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನೆಮಾ ಚಾನೆಲ್‌ಗಳನ್ನು ಹೆಸರಿಸಲಾಗಿದೆ.

ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸಲು ಬೇಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು ಎಂದು ಥಾಣೆ ಮೂಲದ ಕೇಬಲ್ ವಿತರಕ ಸಂಸ್ಥೆಯಾದ ಕ್ರಿಸ್ಟಲ್ ಬ್ರಾಡ್‌ಕಾಸ್ಟ್ ಮಾಲಕ ಆಶಿಶ್ ಚೌಧರಿ ಒಪ್ಪಿಕೊಂಡಿದ್ದಾಗಿ ಟಿಆರ್‌ಪಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಿಳಿಸಿತ್ತು.

ಇದನ್ನೂ ಓದಿ: ನೇಷನ್ ವಾಂಟ್ಸ್ ಟು ಸೀ ಅರ್ನಬ್ಸ್ ಚಾಟ್ ಅಕೌಂಟ್!

ಆರೋಪಿಯು ತಾನು ಹವಾಲಾ ಆಪರೇಟರ್‌ಗಳಿಂದ ಹಣ ಸ್ವೀಕರಿಸಿದ್ದಾಗಿ ಮತ್ತು ಈ ಬಗ್ಗೆ ತಪ್ಪೊಪ್ಪಿಗೆ ಸಾಕ್ಷಿಯಾಗಲು ಒಪ್ಪಿಕೊಂಡಿದ್ದಾಗಿಯೂ ಪೊಲೀಸರು ತಿಳಿಸಿದ್ದಾರೆ. ಮ್ಯಾಕ್ಸ್‌ಮೀಡಿಯಾ ಎಂಬ ಮಾರಾಟ ಸಂಸ್ಥೆಯ ಅಭಿಷೇಕ್ ಕೊಲವಾಡೆ ಮತ್ತು ಆಶಿಶ್ ಚೌಧರಿಯ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೋರಿ ಅಪರಾಧ ವಿಭಾಗ ಸಲ್ಲಿಸಿದ ಅರ್ಜಿಯಲ್ಲಿ ಈ ವಿಚಾರವನ್ನು ಪೊಲೀಸರು ಬಹಿರಂಗಪಡಿಸಿದ್ದರು.

ಎರಡು ರಜಾ ದಿನಗಳಲ್ಲಿ ರಿಪಬ್ಲಿಕ್‌ ಟಿವಿಯ ರೇಟಿಂಗ್‌ ಉತ್ತಮವಾಗಿರುವಂತೆ ಟಿಆರ್‌ಪಿಯನ್ನು‌ ಬದಲಾಯಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ 12,000 ಅಮೆರಿಕನ್‌ ಡಾಲರ್‌ ಮತ್ತು ಇಡೀ ವರ್ಷಕ್ಕೆ ಒಟ್ಟು 40 ಲಕ್ಷ ರೂಪಾಯಿಗಳನ್ನು ತಮಗೆ ಕೊಟ್ಟಿರುವುದಾಗಿ ಬಾರ್ಕ್‌‌ನ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ ಕೈಬರಹದಲ್ಲಿ ಹೇಳಿಕೆ ನೀಡಿದ್ದಾಗಿ ಮುಂಬೈ ಪೊಲೀಸರು ಹೇಳಿದ್ದರು.

ದಾಸ್‌ಗುಪ್ತಾ ಅವರ ಹೇಳಿಕೆಯು ಹೀಗಿದೆ: “ನನಗೆ ಅರ್ನಾಬ್ ಗೋಸ್ವಾಮಿ ಅವರು 2004 ರಿಂದ ಪರಿಚಿತರು. ನಾವು ಟೈಮ್ಸ್ ನೌನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದೆವು. ನಾನು 2013 ರಲ್ಲಿ BARCನ ಸಿಇಒ ಆಗಿ ಸೇರಿಕೊಂಡೆ. ಅರ್ನಾಬ್ ಗೋಸ್ವಾಮಿ ಅವರು 2017 ರಲ್ಲಿ ರಿಪಬ್ಲಿಕ್ ಅನ್ನು ಪ್ರಾರಂಭಿಸಿದರು. ರಿಪಬ್ಲಿಕ್ ಟಿವಿಯನ್ನು ಪ್ರಾರಂಭಿಸುವ ಮೊದಲೇ ಅವರು ನನ್ನೊಂದಿಗೆ ಬ್ರಾಡ್‌ಕಾಸ್ಟಿಂಗ್‌ (ಪ್ರಸಾರ) ಯೋಜನೆಗಳ ಬಗ್ಗೆ ಮಾತನಾಡಿದ್ದರು. ಟಿಆರ್‌ಪಿ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿದೆ ಎಂದು ಗೋಸ್ವಾಮಿಗೆ ಚೆನ್ನಾಗಿ ತಿಳಿದಿತ್ತು. ಹಾಗಾಗಿ ಅವರ ಚಾನಲ್‌ಗೆ ಉತ್ತಮ ರೇಟಿಂಗ್ ಪಡೆಯಲು ಸಹಾಯ ಮಾಡಬೇಕು ಎಂಬುದರ ಬಗ್ಗೆ ಪರೋಕ್ಷವಾಗಿ ಸುಳಿವು ನೀಡುತ್ತಿದ್ದರು. ಭವಿಷ್ಯದಲ್ಲಿ ನನಗೆ ಸಹಾಯ ಮಾಡಲು ಅವರು ಪ್ರಸ್ತಾಪಿಸಿದ್ದರು” ಎಂದು ಹೇಳಿದ್ದಾರೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...