HomeಮುಖಪುಟTRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಎಲ್ಲಾ ಸಾಮಾನ್ಯ ನಾಗರಿಕರಂತೆ ಸಿಆರ್‌ಪಿಸಿ ಅಡಿಯಲ್ಲಿ ತನಿಖೆ ಎದುರಿಸುತ್ತಿರುವವರು ಹೈಕೋರ್ಟ್‌ಗೆ ಹೋಗಬೇಕು. ನಿಮ್ಮ ಎರಡು ಕಛೇರಿಗಳು ವರ್ಲಿಯಲ್ಲಿದೆ. ನೀವು ಅಲ್ಲಿಗೆ ಹೋಗಿ- ಸುಪ್ರೀಂ

- Advertisement -
- Advertisement -

TRP ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕೆಂದು ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್‌ ಗೋಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. “ಸಾಮಾನ್ಯ ನಾಗರೀಕನಂತೆ ನೀವೂ ಹೈಕೋರ್ಟ್‌ಗೆ ಹೊಗಿ” ಎಂದು ಸುಪ್ರೀಂ ಹೇಳಿದೆ.

“ಹೈಕೋರ್ಟ್ ಈಗಾಗಲೇ ಈ ಪ್ರಕರಣವನ್ನು ತೆಗೆದುಕೊಂಡಿದೆ. ಹೈಕೋರ್ಟ್ ಸೂಚಿಸದೇ ಈ ಪ್ರಕರಣವನ್ನು ನಾವು ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲಾ ಸಾಮಾನ್ಯ ನಾಗರಿಕರಂತೆ ಸಿಆರ್‌ಪಿಸಿ ಅಡಿಯಲ್ಲಿ ತನಿಖೆ ಎದುರಿಸುತ್ತಿರುವವರು ಹೈಕೋರ್ಟ್‌ಗೆ ಹೋಗಬೇಕು. ನಿಮ್ಮ ಎರಡು ಕಛೇರಿಗಳು ವರ್ಲಿಯಲ್ಲಿದೆ. ನೀವು ಅಲ್ಲಿಗೆ ಹೋಗಿ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: TRP ತಿರುಚಿದ ಆರೋಪ; ರಿಪಬ್ಲಿಕ್ ಸೇರಿ 3 ಚಾನೆಲ್‌ಗಳ ಮೇಲೆ ತನಿಖೆ!

“ತನಿಖೆಯನ್ನು ವರ್ಗಾಯಿಸಬೇಕೆಂಬ ರಿಪಬ್ಲಿಕ್ ಟಿವಿಯ ಬೇಡಿಕೆ ತಪ್ಪಾಗಿದ್ದು, ಈ ಪ್ರಕರಣದಲ್ಲಿ, ಅರ್ನಾಬ್ ಗೋಸ್ವಾಮಿ (ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ) ಕಾರ್ಯಕ್ರಮಗಳನ್ನು ನಡೆಸಿ ಸಾಕ್ಷಿಯನ್ನು ಬೆದರಿಸುವ ಮೂಲಕ ರಿಪಬ್ಲಿಕ್ ಟಿವಿ ಕಾನೂನು ಪ್ರಕ್ರಿಯೆಯನ್ನು ದುರುಪಯೋಗಪಡಿಕೊಳ್ಳುತ್ತಿದೆ. TRP ಹಗರಣದ ಕುರಿತ ಪೊಲೀಸ್ ತನಿಖೆಯನ್ನು ತಡೆಯಲು ರಿಪಬ್ಲಿಕ್ ಟಿವಿ ಈ ಅರ್ಜಿ ಸಲ್ಲಿಸಿದೆ. ಮಾಧ್ಯಮದ ಈ ನಡೆ, ಮುಕ್ತ ಮತ್ತು ನ್ಯಾಯಯುತ ತನಿಖೆಗೆ ವಿರುದ್ಧವಾಗಿದೆ” ಎಂದು ಮುಂಬೈ ಪೊಲೀಸರು ಕಳೆದ ರಾತ್ರಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಮುಂಗಡ ಅರ್ಜಿಯ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: “ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಇಂದೂ ಮಲ್ಹೋತ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರ ಮೂವರು ನ್ಯಾಯಾಧೀಶರ ಪೀಠವು ರಿಪಬ್ಲಿಕ್ ಟಿವಿಯ ಅರ್ಜಿಯನ್ನು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆಲಿಸಲಿದೆ.

ವಾಕ್‌ಸ್ವಾತಂತ್ರ್ಯದ ಹರಣಕ್ಕೆ ಸಂಬಂಧಿಸಿದಂತೆ ಚಾನೆಲ್ ಹೇಳಿಕೆಯನ್ನು ವಿರೋಧಿಸಿದ ಮುಂಬೈ ಪೊಲೀಸರು, ಸುಪ್ರೀಂಗೆ ಸಲ್ಲಿಸಿದ ಅಫಿಡವಿಟ್ಟಿನಲ್ಲಿ, “ಆರೋಪಿಸಲ್ಪಟ್ಟ ಅಪರಾಧದ ಸಂದರ್ಭದಲ್ಲಿ ವಾಕ್‌ಸ್ವಾತಂತ್ರ್ಯದ ಹಕ್ಕನ್ನು ಬಳಸಲು ಸಾಧ್ಯವಿಲ್ಲ. ಸಂವಿಧಾನದ ಕಲಂ 19(1)ರ ಅಡಿಯಲ್ಲಿನ ವಾಕ್‌ಸ್ವಾತಂತ್ರ್ಯವು ತನಿಖೆಯ ವಿರುದ್ಧದ ಅಸ್ತ್ರವಾಗಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ಈ ಪ್ರಕರಣದಲ್ಲಿ ಬೇರೆ-ಬೇರೆ ಚಾನೆಲ್‌ಗಳ ಹಲವಾರು ಅಧಿಕಾರಿಗಳನ್ನು ಕರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೀಕ್ಷಕರ ಸಂಖ್ಯೆಯನ್ನು ನಿರ್ವಹಿಸುವ ಖಾಸಗಿ ಕಂಪನಿಯಾದ ಹನ್ಸಾ ನೀಡಿದ ದೂರಿನ ಆಧಾರದ ಮೇಲೆ, TRP ಯನ್ನು ತಿರುಚಿದ್ದಾರೆ ಎನ್ನುವ ಪ್ರಕರಣದ ತನಿಖೆ ನಡೆಯುತ್ತಿದೆ.

ಚಾನೆಲ್‌ನ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರು ಮುಂಬೈ ಪೊಲೀಸರ ವಿರುದ್ಧ ಮೊಕದ್ದಮೆ ಹೂಡುವುದಾಗಿ ಹೇಳಿದ್ದು, “ರಿಪಬ್ಲಿಕ್ ಟಿವಿಯನ್ನು ಉಲ್ಲೇಖಿಸಿರುವ ಒಂದೇ ಒಂದು ಬಾರ್ಕ್ (ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್) ವರದಿಯೂ ಇಲ್ಲ. ಭಾರತದ ಜನರಿಗೆ ಸತ್ಯ ತಿಳಿದಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ವಿಷಕಾರುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ಪಾರ್ಲೆ-ಜಿ ನಿರ್ಧಾರಕ್ಕೆ ನೆಟ್ಟಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....