HomeಮುಖಪುಟTRP ಹಗರಣ: ರಿಪಬ್ಲಿಕ್ ಟಿವಿ ಹಣ ನೀಡಿರುವುದನ್ನು ಒಪ್ಪಿಕೊಂಡ ವೀಕ್ಷಕರು

TRP ಹಗರಣ: ರಿಪಬ್ಲಿಕ್ ಟಿವಿ ಹಣ ನೀಡಿರುವುದನ್ನು ಒಪ್ಪಿಕೊಂಡ ವೀಕ್ಷಕರು

ಟಿಆರ್‌ಪಿ ಹಗರಣದ ಹಿನ್ನಲೆಯಲ್ಲಿ 12 ವಾರಗಳ ಅವಧಿಗೆ ಟಿಆರ್‌ಪಿ ರೇಟಿಂಗ್‌ ನೀಡುವುದನ್ನು ಬಾರ್ಕ್ ಸ್ಥಗಿತಗೊಳಿಸಿದೆ.

- Advertisement -
- Advertisement -

ರಿಪಬ್ಲಿಕ್‌ ಟಿವಿ ಹಾಗೂ ಮುಂಬೈ ಮೂಲದ ಸ್ಥಳೀಯ ಚಾನೆಲ್‌‌ ಒಂದು ತಮ್ಮ ಚಾನೆಲ್‌ಗಳನ್ನು ಕೆಲವು ಗಂಟೆಗಳ ಕಾಲ ಆನ್‌ನಲ್ಲಿ ಇಡುವುದಕ್ಕಾಗಿ ನಮಗೆ ನೇರವಾಗಿ ಹಣ ನೀಡಿವೆ ಎಂದು ನಾಲ್ವರು ವೀಕ್ಷಕರು ಮ್ಯಾಜಿಸ್ಟ್ರೇಟ್‌ ಮುಂದೆ ಹೇಳಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ರಿಪಬ್ಲಿಕ್‌ ಟಿವಿ ಮತ್ತು ಮುಂಬೈನ ಸ್ಥಳೀಯ ಚಾನೆಲ್‌‌‌ಗಳಾದ ಬಾಕ್ಸ್‌ ಸಿನೆಮಾ ಹಾಗೂ ಫಕ್ತ್‌ ಮರಾಠಿ ಚಾನೆಲ್‌ಗಳು ನಕಲಿ ಟಿಆರ್‌ಪಿ ಹಗರಣದಲ್ಲಿ ಭಾಗಿಯಾವೆ ಎಂದು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಪ್ರಕರಣವನ್ನು ಇಂದು ಮ್ಯಾಜಿಸ್ಟ್ರೇಟ್‌ ವಿಚಾರಣೆ ನಡೆಸಿದ್ದು, ತಾವು ಹಣ ಪಡೆದಿರುವುದಾಗಿ ನಾಲ್ವರು ಹೇಳಿದ್ದಾರೆ. ಪ್ರಕರಣದಲ್ಲಿ ಇವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗುತ್ತದೆ ಎಂದು ತನಿಖೆ ನಡೆಸುತ್ತಿರುವ ಕ್ರೈಂ ಬ್ರಾಂಚ್‌ ಪೊಲೀಸರು ಹೇಳಿದ್ದಾರೆ.

ಮೂವರು ರಿಪಬ್ಲಿಕ್‌ ಟಿವಿಯಿಂದ ತಮಗೆ ಹಣ ಬಂದಿರುವುದಾಗಿಯು, ಇನ್ನೊಬ್ಬರು ‘ಬಾಕ್ಸ್‌ ಸಿನಿಮಾ’ದಿಂದ ಹಣ ಬಂದಿರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೂವರು ಸಾಕ್ಷಿಗಳು ರಿಪಬ್ಲಿಕ್‌ ಟಿವಿಯ ಅಧಿಕಾರಿಗಳ ಹೆಸರು ಹೇಳಿರುವುದನ್ನು ಮುಂಬಯಿ ಪೊಲೀಸ್‌ ಆಯುಕ್ತ ಪರಂಬೀರ್‌ ಸಿಂಗ್‌ ಖಚಿತಪಡಿಸಿದ್ದರಾದರೂ, ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ ಅವರು ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ತನಿಖೆ ಸಂದರ್ಭದಲ್ಲಿ ಸಾಕ್ಷಿಗಳು ಸಿಆರ್‌ಪಿಸಿ ಸೆಕ್ಷನ್‌ 164 ರ ಅಡಿಯಲ್ಲಿ ಈ ಹೇಳಿಕೆಗಳನ್ನು ನ್ಯಾಯಾಧೀಶರ ಮುಂದೆ ದಾಖಲಿಸಿದ್ದಾರೆ ಎಂದು ಪೊಲೀಸರು ವಿವರಿದ್ದಾರೆ. ಸಾಕ್ಷಿಗಳು ಸ್ವಯಂ ಪ್ರೇರಿತರಾಗಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಖಚಿತವಾದರೆ ಮಾತ್ರ ನ್ಯಾಯಾಧೀಶರು ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಾರೆ. ಹೀಗಾಗಿ ಈ ತಪ್ಪೊಪ್ಪಿಗೆಗಳನ್ನು ಪೊಲೀಸರು ಸಾಕ್ಷಿಗಳಿಂದ ಹೊರತೆಗೆದಿದ್ದಾರೆ ಎಂದು ಈಗ ಆರೋಪಿಸಲಾಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

ಇಲ್ಲಿಯವರೆಗೆ ಬಂಧಿಸಲಾಗಿರುವ ಐವರಲ್ಲಿ ಮೂವರು ತಾವು ಈ ಹಗರಣದ ಪಾಲುದಾರರು ಎಂದು ಒಪ್ಪಿಕೊಂಡಿದ್ದು, ಮನೆಗಳಿಗೆ ಹಣ ನೀಡುತ್ತಿದ್ದುದಾಗಿ ಹೇಳಿದ್ದಾರೆ. ಇವರಲ್ಲಿ ಹನ್ಸಾ ರಿಸರ್ಚ್‌ನ ಮಾಜಿ ಉದ್ಯೋಗಿಯೂ ಸೇರಿದ್ದಾರೆ.

ಟಿಆರ್‌ಪಿಗಾಗಿ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆಗಳಿಗೆ ಪೀಪಲ್‌ಮೀಟರ್‌ಗಳನ್ನು ಇನ್‌ಸ್ಟಾಲ್‌ ಮಾಡುವ ಗುತ್ತಿಗೆಯನ್ನು ಬ್ರಾಡ್‌ಕಾಸ್ಟ್‌ ಆಡಿಯನ್ಸ್‌ ರಿಸರ್ಚ್‌ ಕೌನ್ಸಿಲ್‌ (ಬಾರ್ಕ್‌) ಹನ್ಸಾಗೆ ನೀಡಿತ್ತು. ನಿರ್ದಿಷ್ಟ ವಾಹಿನಿಯನ್ನು ಮಾತ್ರ ಆನ್‌ ಮಾಡಿ ಇಡುವಂತೆ ಮನೆಗಳಿಗೆ ಹಣ ನೀಡುವ ಮೂಲಕ ಇದರಲ್ಲಿ ವಂಚನೆ ನಡೆದಿದ್ದು, ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿರುವುದು ಪ್ರಕರಣಕ್ಕೆ ಬಲ ನೀಡಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಿಆರ್‌ಪಿ ಹಗರಣದ ಹಿನ್ನಲೆಯಲ್ಲಿ ಬಾರ್ಕ್ 12 ವಾರಗಳ ಅವಧಿಗೆ ಟಿಆರ್‌ಪಿ ರೇಟಿಂಗ್‌ ನೀಡುವುದನ್ನು ಸ್ಥಗಿತಗೊಳಿಸಿದೆ.

ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...