HomeಮುಖಪುಟTRP ಹಗರಣ: ರಿಪಬ್ಲಿಕ್ ಟಿವಿ ಹಣ ನೀಡಿರುವುದನ್ನು ಒಪ್ಪಿಕೊಂಡ ವೀಕ್ಷಕರು

TRP ಹಗರಣ: ರಿಪಬ್ಲಿಕ್ ಟಿವಿ ಹಣ ನೀಡಿರುವುದನ್ನು ಒಪ್ಪಿಕೊಂಡ ವೀಕ್ಷಕರು

ಟಿಆರ್‌ಪಿ ಹಗರಣದ ಹಿನ್ನಲೆಯಲ್ಲಿ 12 ವಾರಗಳ ಅವಧಿಗೆ ಟಿಆರ್‌ಪಿ ರೇಟಿಂಗ್‌ ನೀಡುವುದನ್ನು ಬಾರ್ಕ್ ಸ್ಥಗಿತಗೊಳಿಸಿದೆ.

- Advertisement -
- Advertisement -

ರಿಪಬ್ಲಿಕ್‌ ಟಿವಿ ಹಾಗೂ ಮುಂಬೈ ಮೂಲದ ಸ್ಥಳೀಯ ಚಾನೆಲ್‌‌ ಒಂದು ತಮ್ಮ ಚಾನೆಲ್‌ಗಳನ್ನು ಕೆಲವು ಗಂಟೆಗಳ ಕಾಲ ಆನ್‌ನಲ್ಲಿ ಇಡುವುದಕ್ಕಾಗಿ ನಮಗೆ ನೇರವಾಗಿ ಹಣ ನೀಡಿವೆ ಎಂದು ನಾಲ್ವರು ವೀಕ್ಷಕರು ಮ್ಯಾಜಿಸ್ಟ್ರೇಟ್‌ ಮುಂದೆ ಹೇಳಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ರಿಪಬ್ಲಿಕ್‌ ಟಿವಿ ಮತ್ತು ಮುಂಬೈನ ಸ್ಥಳೀಯ ಚಾನೆಲ್‌‌‌ಗಳಾದ ಬಾಕ್ಸ್‌ ಸಿನೆಮಾ ಹಾಗೂ ಫಕ್ತ್‌ ಮರಾಠಿ ಚಾನೆಲ್‌ಗಳು ನಕಲಿ ಟಿಆರ್‌ಪಿ ಹಗರಣದಲ್ಲಿ ಭಾಗಿಯಾವೆ ಎಂದು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಪ್ರಕರಣವನ್ನು ಇಂದು ಮ್ಯಾಜಿಸ್ಟ್ರೇಟ್‌ ವಿಚಾರಣೆ ನಡೆಸಿದ್ದು, ತಾವು ಹಣ ಪಡೆದಿರುವುದಾಗಿ ನಾಲ್ವರು ಹೇಳಿದ್ದಾರೆ. ಪ್ರಕರಣದಲ್ಲಿ ಇವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗುತ್ತದೆ ಎಂದು ತನಿಖೆ ನಡೆಸುತ್ತಿರುವ ಕ್ರೈಂ ಬ್ರಾಂಚ್‌ ಪೊಲೀಸರು ಹೇಳಿದ್ದಾರೆ.

ಮೂವರು ರಿಪಬ್ಲಿಕ್‌ ಟಿವಿಯಿಂದ ತಮಗೆ ಹಣ ಬಂದಿರುವುದಾಗಿಯು, ಇನ್ನೊಬ್ಬರು ‘ಬಾಕ್ಸ್‌ ಸಿನಿಮಾ’ದಿಂದ ಹಣ ಬಂದಿರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೂವರು ಸಾಕ್ಷಿಗಳು ರಿಪಬ್ಲಿಕ್‌ ಟಿವಿಯ ಅಧಿಕಾರಿಗಳ ಹೆಸರು ಹೇಳಿರುವುದನ್ನು ಮುಂಬಯಿ ಪೊಲೀಸ್‌ ಆಯುಕ್ತ ಪರಂಬೀರ್‌ ಸಿಂಗ್‌ ಖಚಿತಪಡಿಸಿದ್ದರಾದರೂ, ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ ಅವರು ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ತನಿಖೆ ಸಂದರ್ಭದಲ್ಲಿ ಸಾಕ್ಷಿಗಳು ಸಿಆರ್‌ಪಿಸಿ ಸೆಕ್ಷನ್‌ 164 ರ ಅಡಿಯಲ್ಲಿ ಈ ಹೇಳಿಕೆಗಳನ್ನು ನ್ಯಾಯಾಧೀಶರ ಮುಂದೆ ದಾಖಲಿಸಿದ್ದಾರೆ ಎಂದು ಪೊಲೀಸರು ವಿವರಿದ್ದಾರೆ. ಸಾಕ್ಷಿಗಳು ಸ್ವಯಂ ಪ್ರೇರಿತರಾಗಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಖಚಿತವಾದರೆ ಮಾತ್ರ ನ್ಯಾಯಾಧೀಶರು ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಾರೆ. ಹೀಗಾಗಿ ಈ ತಪ್ಪೊಪ್ಪಿಗೆಗಳನ್ನು ಪೊಲೀಸರು ಸಾಕ್ಷಿಗಳಿಂದ ಹೊರತೆಗೆದಿದ್ದಾರೆ ಎಂದು ಈಗ ಆರೋಪಿಸಲಾಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

ಇಲ್ಲಿಯವರೆಗೆ ಬಂಧಿಸಲಾಗಿರುವ ಐವರಲ್ಲಿ ಮೂವರು ತಾವು ಈ ಹಗರಣದ ಪಾಲುದಾರರು ಎಂದು ಒಪ್ಪಿಕೊಂಡಿದ್ದು, ಮನೆಗಳಿಗೆ ಹಣ ನೀಡುತ್ತಿದ್ದುದಾಗಿ ಹೇಳಿದ್ದಾರೆ. ಇವರಲ್ಲಿ ಹನ್ಸಾ ರಿಸರ್ಚ್‌ನ ಮಾಜಿ ಉದ್ಯೋಗಿಯೂ ಸೇರಿದ್ದಾರೆ.

ಟಿಆರ್‌ಪಿಗಾಗಿ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆಗಳಿಗೆ ಪೀಪಲ್‌ಮೀಟರ್‌ಗಳನ್ನು ಇನ್‌ಸ್ಟಾಲ್‌ ಮಾಡುವ ಗುತ್ತಿಗೆಯನ್ನು ಬ್ರಾಡ್‌ಕಾಸ್ಟ್‌ ಆಡಿಯನ್ಸ್‌ ರಿಸರ್ಚ್‌ ಕೌನ್ಸಿಲ್‌ (ಬಾರ್ಕ್‌) ಹನ್ಸಾಗೆ ನೀಡಿತ್ತು. ನಿರ್ದಿಷ್ಟ ವಾಹಿನಿಯನ್ನು ಮಾತ್ರ ಆನ್‌ ಮಾಡಿ ಇಡುವಂತೆ ಮನೆಗಳಿಗೆ ಹಣ ನೀಡುವ ಮೂಲಕ ಇದರಲ್ಲಿ ವಂಚನೆ ನಡೆದಿದ್ದು, ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿರುವುದು ಪ್ರಕರಣಕ್ಕೆ ಬಲ ನೀಡಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಿಆರ್‌ಪಿ ಹಗರಣದ ಹಿನ್ನಲೆಯಲ್ಲಿ ಬಾರ್ಕ್ 12 ವಾರಗಳ ಅವಧಿಗೆ ಟಿಆರ್‌ಪಿ ರೇಟಿಂಗ್‌ ನೀಡುವುದನ್ನು ಸ್ಥಗಿತಗೊಳಿಸಿದೆ.

ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...