HomeಮುಖಪುಟTRP ಹಗರಣ: ರಿಪಬ್ಲಿಕ್ ಟಿವಿ ಹಣ ನೀಡಿರುವುದನ್ನು ಒಪ್ಪಿಕೊಂಡ ವೀಕ್ಷಕರು

TRP ಹಗರಣ: ರಿಪಬ್ಲಿಕ್ ಟಿವಿ ಹಣ ನೀಡಿರುವುದನ್ನು ಒಪ್ಪಿಕೊಂಡ ವೀಕ್ಷಕರು

ಟಿಆರ್‌ಪಿ ಹಗರಣದ ಹಿನ್ನಲೆಯಲ್ಲಿ 12 ವಾರಗಳ ಅವಧಿಗೆ ಟಿಆರ್‌ಪಿ ರೇಟಿಂಗ್‌ ನೀಡುವುದನ್ನು ಬಾರ್ಕ್ ಸ್ಥಗಿತಗೊಳಿಸಿದೆ.

- Advertisement -
- Advertisement -

ರಿಪಬ್ಲಿಕ್‌ ಟಿವಿ ಹಾಗೂ ಮುಂಬೈ ಮೂಲದ ಸ್ಥಳೀಯ ಚಾನೆಲ್‌‌ ಒಂದು ತಮ್ಮ ಚಾನೆಲ್‌ಗಳನ್ನು ಕೆಲವು ಗಂಟೆಗಳ ಕಾಲ ಆನ್‌ನಲ್ಲಿ ಇಡುವುದಕ್ಕಾಗಿ ನಮಗೆ ನೇರವಾಗಿ ಹಣ ನೀಡಿವೆ ಎಂದು ನಾಲ್ವರು ವೀಕ್ಷಕರು ಮ್ಯಾಜಿಸ್ಟ್ರೇಟ್‌ ಮುಂದೆ ಹೇಳಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ರಿಪಬ್ಲಿಕ್‌ ಟಿವಿ ಮತ್ತು ಮುಂಬೈನ ಸ್ಥಳೀಯ ಚಾನೆಲ್‌‌‌ಗಳಾದ ಬಾಕ್ಸ್‌ ಸಿನೆಮಾ ಹಾಗೂ ಫಕ್ತ್‌ ಮರಾಠಿ ಚಾನೆಲ್‌ಗಳು ನಕಲಿ ಟಿಆರ್‌ಪಿ ಹಗರಣದಲ್ಲಿ ಭಾಗಿಯಾವೆ ಎಂದು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಪ್ರಕರಣವನ್ನು ಇಂದು ಮ್ಯಾಜಿಸ್ಟ್ರೇಟ್‌ ವಿಚಾರಣೆ ನಡೆಸಿದ್ದು, ತಾವು ಹಣ ಪಡೆದಿರುವುದಾಗಿ ನಾಲ್ವರು ಹೇಳಿದ್ದಾರೆ. ಪ್ರಕರಣದಲ್ಲಿ ಇವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗುತ್ತದೆ ಎಂದು ತನಿಖೆ ನಡೆಸುತ್ತಿರುವ ಕ್ರೈಂ ಬ್ರಾಂಚ್‌ ಪೊಲೀಸರು ಹೇಳಿದ್ದಾರೆ.

ಮೂವರು ರಿಪಬ್ಲಿಕ್‌ ಟಿವಿಯಿಂದ ತಮಗೆ ಹಣ ಬಂದಿರುವುದಾಗಿಯು, ಇನ್ನೊಬ್ಬರು ‘ಬಾಕ್ಸ್‌ ಸಿನಿಮಾ’ದಿಂದ ಹಣ ಬಂದಿರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೂವರು ಸಾಕ್ಷಿಗಳು ರಿಪಬ್ಲಿಕ್‌ ಟಿವಿಯ ಅಧಿಕಾರಿಗಳ ಹೆಸರು ಹೇಳಿರುವುದನ್ನು ಮುಂಬಯಿ ಪೊಲೀಸ್‌ ಆಯುಕ್ತ ಪರಂಬೀರ್‌ ಸಿಂಗ್‌ ಖಚಿತಪಡಿಸಿದ್ದರಾದರೂ, ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ ಅವರು ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ತನಿಖೆ ಸಂದರ್ಭದಲ್ಲಿ ಸಾಕ್ಷಿಗಳು ಸಿಆರ್‌ಪಿಸಿ ಸೆಕ್ಷನ್‌ 164 ರ ಅಡಿಯಲ್ಲಿ ಈ ಹೇಳಿಕೆಗಳನ್ನು ನ್ಯಾಯಾಧೀಶರ ಮುಂದೆ ದಾಖಲಿಸಿದ್ದಾರೆ ಎಂದು ಪೊಲೀಸರು ವಿವರಿದ್ದಾರೆ. ಸಾಕ್ಷಿಗಳು ಸ್ವಯಂ ಪ್ರೇರಿತರಾಗಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಖಚಿತವಾದರೆ ಮಾತ್ರ ನ್ಯಾಯಾಧೀಶರು ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಾರೆ. ಹೀಗಾಗಿ ಈ ತಪ್ಪೊಪ್ಪಿಗೆಗಳನ್ನು ಪೊಲೀಸರು ಸಾಕ್ಷಿಗಳಿಂದ ಹೊರತೆಗೆದಿದ್ದಾರೆ ಎಂದು ಈಗ ಆರೋಪಿಸಲಾಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

ಇಲ್ಲಿಯವರೆಗೆ ಬಂಧಿಸಲಾಗಿರುವ ಐವರಲ್ಲಿ ಮೂವರು ತಾವು ಈ ಹಗರಣದ ಪಾಲುದಾರರು ಎಂದು ಒಪ್ಪಿಕೊಂಡಿದ್ದು, ಮನೆಗಳಿಗೆ ಹಣ ನೀಡುತ್ತಿದ್ದುದಾಗಿ ಹೇಳಿದ್ದಾರೆ. ಇವರಲ್ಲಿ ಹನ್ಸಾ ರಿಸರ್ಚ್‌ನ ಮಾಜಿ ಉದ್ಯೋಗಿಯೂ ಸೇರಿದ್ದಾರೆ.

ಟಿಆರ್‌ಪಿಗಾಗಿ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆಗಳಿಗೆ ಪೀಪಲ್‌ಮೀಟರ್‌ಗಳನ್ನು ಇನ್‌ಸ್ಟಾಲ್‌ ಮಾಡುವ ಗುತ್ತಿಗೆಯನ್ನು ಬ್ರಾಡ್‌ಕಾಸ್ಟ್‌ ಆಡಿಯನ್ಸ್‌ ರಿಸರ್ಚ್‌ ಕೌನ್ಸಿಲ್‌ (ಬಾರ್ಕ್‌) ಹನ್ಸಾಗೆ ನೀಡಿತ್ತು. ನಿರ್ದಿಷ್ಟ ವಾಹಿನಿಯನ್ನು ಮಾತ್ರ ಆನ್‌ ಮಾಡಿ ಇಡುವಂತೆ ಮನೆಗಳಿಗೆ ಹಣ ನೀಡುವ ಮೂಲಕ ಇದರಲ್ಲಿ ವಂಚನೆ ನಡೆದಿದ್ದು, ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿರುವುದು ಪ್ರಕರಣಕ್ಕೆ ಬಲ ನೀಡಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಿಆರ್‌ಪಿ ಹಗರಣದ ಹಿನ್ನಲೆಯಲ್ಲಿ ಬಾರ್ಕ್ 12 ವಾರಗಳ ಅವಧಿಗೆ ಟಿಆರ್‌ಪಿ ರೇಟಿಂಗ್‌ ನೀಡುವುದನ್ನು ಸ್ಥಗಿತಗೊಳಿಸಿದೆ.

ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...