Homeಮುಖಪುಟಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

ಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

- Advertisement -
- Advertisement -

ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್)ಶಾಸಕ ಚಲ್ಲಾ ಧರ್ಮ ರೆಡ್ಡಿ ಅವರ ನಿವಾಸದ ಮೇಲೆ ಭಾನುವಾರ ಸಂಜೆ ದಾಳಿ ನಡೆಸಿದ ಆರೋಪದಡಿ ತೆಲಂಗಾಣದ ವಾರಂಗಲ್ ಪೊಲೀಸರು 39 ಬಿಜೆಪಿ ಕಾರ್ಯಕರ್ತರನ್ನು ಸೋಮವಾರ ಬಂಧಿಸಿದ್ದಾರೆ.

ಪೊಲೀಸರು ಅವರನ್ನು ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಅವರನ್ನು ಮಧ್ಯಾಹ್ನ ವಾರಂಗಲ್ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು. ಶಾಸಕರ ನಿವಾಸದ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಇನ್ನೂ 14 ಜನ ಬಿಜೆಪಿ ಕಾರ್ಯಕರ್ತರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ಬಿಜೆಪಿ ನಾಯಕರು ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಯಾವುದೇ ಖಾತೆಗಳನ್ನು ತೋರಿಸದೆ ಭಾರಿ ಹಣವನ್ನು ಸಂಗ್ರಹಿಸಿ ವಂಚಿಸುತ್ತಿದ್ದಾರೆ ಎಂದು ಶಾಸಕ ಚಲ್ಲಾ ಧರ್ಮ ರೆಡ್ಡಿ ಎಂದು ಆರೋಪಿಸಿದ್ದರು. ಇದನ್ನು ವಿರೋಧಿಸಿ ಪಕ್ಷದ ವಾರಂಗಲ್‌‌(ಅರ್ಬನ್) ಜಿಲ್ಲಾ ಘಟಕದ ಅಧ್ಯಕ್ಷ ರಾವ್ ಪದ್ಮಾ ನೇತೃತ್ವದ ಬಿಜೆಪಿ ಕಾರ್ಯಕರ್ತರು ಹನಮಕೊಂಡದ ಹಂಟರ್ ರಸ್ತೆಯಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು.

ಬಿಜೆಪಿ ಕಾರ್ಯಕರ್ತರು ಶಾಸಕರ ನಿವಾಸದಲ್ಲಿ ಕಲ್ಲು ಮತ್ತು ಮೊಟ್ಟೆಗಳನ್ನು ಎಸೆದಿದ್ದು, ಮನೆಯ ಕಿಟಕಿಯ ಗಾಜು, ಹೂವಿನ ಕುಂಡಗಳು ಸೇರಿದಂತೆ ಇತರ ಆಸ್ತಿಪಾಸ್ತಿಗಳನ್ನು ಹಾನಿಗೊಳಿಸಿದ್ದರು. ಸ್ಥಳದಲ್ಲಿ ಪೊಲೀಸರು ಇದ್ದರೂ ಅವರನ್ನು ಮೀರಿ ದಾಳಿ ಮಾಡಲಾಗಿತ್ತು. ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯ್ತು.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

ಬಿಜೆಪಿಯ ಈ ದಾಳಿಗೆ ಆಡಳಿತಾರೂಢ ಟಿಆರ್‌ಎಸ್ ಪ್ರತೀಕಾರ ತೀರಿಸಿಕೊಂಡಿದ್ದು, ಬಿಜೆಪಿ ಪಕ್ಷದ ಕಚೇರಿಯ ಮೇಲೆ ದಾಳಿ ನಡೆಸಿತ್ತು. ಟಿಆರ್‌ಎಸ್ ಕಾರ್ಯಕರ್ತರು ಕಚೇರಿಗೆ ಕಲ್ಲು ತೂರಿ ಫ್ಲೆಕ್ಸ್ ಬೋರ್ಡ್‌ಗಳು ಮತ್ತು ಬ್ಯಾನರ್‌ಗಳನ್ನು ನಾಶ ಮಾಡಿದ್ದಾರೆ. ಪೊಲೀಸರು ಅವರನ್ನು ಚದುರಿಸಿದ್ದರಾದರೂ, ಅದಕ್ಕೂ ಮೊದಲು ಸ್ಥಳೀಯ ಬಿಜೆಪಿ ನಾಯಕರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಅಂದು ರಾತ್ರಿ ಕೂಡಾ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ ರಂಜಿತ್ ಮತ್ತು ಬಿಜೆವೈಎಂ ಮುಖಂಡ ಅಪುರುಪಾ ಸಯೀ ಅವರ ಮನೆಗಳ ಮೇಲೆ ಟಿಆರ್‌ಎಸ್ ಕಾರ್ಯಕರ್ತರು ದಾಳಿ ನಡೆಸಿದ್ದರು.

ಟಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆ ಟಿ ರಾಮರಾವ್ ಅವರು ತಡರಾತ್ರಿ ನೀಡಿದ ಹೇಳಿಕೆಯಲ್ಲಿ, ಶಾಸಕನ ನಿವಾಸದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದರು. “ತೆಲಂಗಾಣ ಪ್ರತ್ಯೇಕ ರಾಜ್ಯವನ್ನು ಕಟ್ಟುವ ರಾಜಕೀಯ ಆಂದೋಲನದಿಂದ ಟಿಆರ್‌ಎಸ್ ಹುಟ್ಟಿದೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು. ಬಿಜೆಪಿ ಇಂತಹ ಹಿಂಸಾಚಾರವನ್ನು ಆಶ್ರಯಿಸಲು ಬಯಸಿದರೆ, ಟಿಆರ್‌ಎಸ್‌ಗೂ ತನ್ನ ಕಾರ್ಯಕರ್ತರನ್ನು ರಕ್ಷಿಸುವ ಶಕ್ತಿ ಇದೆ ಎಂಬುದನ್ನು ಅವರು ನೆನಪಿನಲ್ಲಿಡಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...