Homeಮುಖಪುಟಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

ಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

- Advertisement -
- Advertisement -

ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್)ಶಾಸಕ ಚಲ್ಲಾ ಧರ್ಮ ರೆಡ್ಡಿ ಅವರ ನಿವಾಸದ ಮೇಲೆ ಭಾನುವಾರ ಸಂಜೆ ದಾಳಿ ನಡೆಸಿದ ಆರೋಪದಡಿ ತೆಲಂಗಾಣದ ವಾರಂಗಲ್ ಪೊಲೀಸರು 39 ಬಿಜೆಪಿ ಕಾರ್ಯಕರ್ತರನ್ನು ಸೋಮವಾರ ಬಂಧಿಸಿದ್ದಾರೆ.

ಪೊಲೀಸರು ಅವರನ್ನು ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಅವರನ್ನು ಮಧ್ಯಾಹ್ನ ವಾರಂಗಲ್ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು. ಶಾಸಕರ ನಿವಾಸದ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಇನ್ನೂ 14 ಜನ ಬಿಜೆಪಿ ಕಾರ್ಯಕರ್ತರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ಬಿಜೆಪಿ ನಾಯಕರು ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಯಾವುದೇ ಖಾತೆಗಳನ್ನು ತೋರಿಸದೆ ಭಾರಿ ಹಣವನ್ನು ಸಂಗ್ರಹಿಸಿ ವಂಚಿಸುತ್ತಿದ್ದಾರೆ ಎಂದು ಶಾಸಕ ಚಲ್ಲಾ ಧರ್ಮ ರೆಡ್ಡಿ ಎಂದು ಆರೋಪಿಸಿದ್ದರು. ಇದನ್ನು ವಿರೋಧಿಸಿ ಪಕ್ಷದ ವಾರಂಗಲ್‌‌(ಅರ್ಬನ್) ಜಿಲ್ಲಾ ಘಟಕದ ಅಧ್ಯಕ್ಷ ರಾವ್ ಪದ್ಮಾ ನೇತೃತ್ವದ ಬಿಜೆಪಿ ಕಾರ್ಯಕರ್ತರು ಹನಮಕೊಂಡದ ಹಂಟರ್ ರಸ್ತೆಯಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು.

ಬಿಜೆಪಿ ಕಾರ್ಯಕರ್ತರು ಶಾಸಕರ ನಿವಾಸದಲ್ಲಿ ಕಲ್ಲು ಮತ್ತು ಮೊಟ್ಟೆಗಳನ್ನು ಎಸೆದಿದ್ದು, ಮನೆಯ ಕಿಟಕಿಯ ಗಾಜು, ಹೂವಿನ ಕುಂಡಗಳು ಸೇರಿದಂತೆ ಇತರ ಆಸ್ತಿಪಾಸ್ತಿಗಳನ್ನು ಹಾನಿಗೊಳಿಸಿದ್ದರು. ಸ್ಥಳದಲ್ಲಿ ಪೊಲೀಸರು ಇದ್ದರೂ ಅವರನ್ನು ಮೀರಿ ದಾಳಿ ಮಾಡಲಾಗಿತ್ತು. ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯ್ತು.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

ಬಿಜೆಪಿಯ ಈ ದಾಳಿಗೆ ಆಡಳಿತಾರೂಢ ಟಿಆರ್‌ಎಸ್ ಪ್ರತೀಕಾರ ತೀರಿಸಿಕೊಂಡಿದ್ದು, ಬಿಜೆಪಿ ಪಕ್ಷದ ಕಚೇರಿಯ ಮೇಲೆ ದಾಳಿ ನಡೆಸಿತ್ತು. ಟಿಆರ್‌ಎಸ್ ಕಾರ್ಯಕರ್ತರು ಕಚೇರಿಗೆ ಕಲ್ಲು ತೂರಿ ಫ್ಲೆಕ್ಸ್ ಬೋರ್ಡ್‌ಗಳು ಮತ್ತು ಬ್ಯಾನರ್‌ಗಳನ್ನು ನಾಶ ಮಾಡಿದ್ದಾರೆ. ಪೊಲೀಸರು ಅವರನ್ನು ಚದುರಿಸಿದ್ದರಾದರೂ, ಅದಕ್ಕೂ ಮೊದಲು ಸ್ಥಳೀಯ ಬಿಜೆಪಿ ನಾಯಕರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಅಂದು ರಾತ್ರಿ ಕೂಡಾ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ ರಂಜಿತ್ ಮತ್ತು ಬಿಜೆವೈಎಂ ಮುಖಂಡ ಅಪುರುಪಾ ಸಯೀ ಅವರ ಮನೆಗಳ ಮೇಲೆ ಟಿಆರ್‌ಎಸ್ ಕಾರ್ಯಕರ್ತರು ದಾಳಿ ನಡೆಸಿದ್ದರು.

ಟಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆ ಟಿ ರಾಮರಾವ್ ಅವರು ತಡರಾತ್ರಿ ನೀಡಿದ ಹೇಳಿಕೆಯಲ್ಲಿ, ಶಾಸಕನ ನಿವಾಸದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದರು. “ತೆಲಂಗಾಣ ಪ್ರತ್ಯೇಕ ರಾಜ್ಯವನ್ನು ಕಟ್ಟುವ ರಾಜಕೀಯ ಆಂದೋಲನದಿಂದ ಟಿಆರ್‌ಎಸ್ ಹುಟ್ಟಿದೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು. ಬಿಜೆಪಿ ಇಂತಹ ಹಿಂಸಾಚಾರವನ್ನು ಆಶ್ರಯಿಸಲು ಬಯಸಿದರೆ, ಟಿಆರ್‌ಎಸ್‌ಗೂ ತನ್ನ ಕಾರ್ಯಕರ್ತರನ್ನು ರಕ್ಷಿಸುವ ಶಕ್ತಿ ಇದೆ ಎಂಬುದನ್ನು ಅವರು ನೆನಪಿನಲ್ಲಿಡಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...