Homeಮುಖಪುಟಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

ಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

- Advertisement -
- Advertisement -

ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್)ಶಾಸಕ ಚಲ್ಲಾ ಧರ್ಮ ರೆಡ್ಡಿ ಅವರ ನಿವಾಸದ ಮೇಲೆ ಭಾನುವಾರ ಸಂಜೆ ದಾಳಿ ನಡೆಸಿದ ಆರೋಪದಡಿ ತೆಲಂಗಾಣದ ವಾರಂಗಲ್ ಪೊಲೀಸರು 39 ಬಿಜೆಪಿ ಕಾರ್ಯಕರ್ತರನ್ನು ಸೋಮವಾರ ಬಂಧಿಸಿದ್ದಾರೆ.

ಪೊಲೀಸರು ಅವರನ್ನು ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಅವರನ್ನು ಮಧ್ಯಾಹ್ನ ವಾರಂಗಲ್ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು. ಶಾಸಕರ ನಿವಾಸದ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಇನ್ನೂ 14 ಜನ ಬಿಜೆಪಿ ಕಾರ್ಯಕರ್ತರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ಬಿಜೆಪಿ ನಾಯಕರು ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಯಾವುದೇ ಖಾತೆಗಳನ್ನು ತೋರಿಸದೆ ಭಾರಿ ಹಣವನ್ನು ಸಂಗ್ರಹಿಸಿ ವಂಚಿಸುತ್ತಿದ್ದಾರೆ ಎಂದು ಶಾಸಕ ಚಲ್ಲಾ ಧರ್ಮ ರೆಡ್ಡಿ ಎಂದು ಆರೋಪಿಸಿದ್ದರು. ಇದನ್ನು ವಿರೋಧಿಸಿ ಪಕ್ಷದ ವಾರಂಗಲ್‌‌(ಅರ್ಬನ್) ಜಿಲ್ಲಾ ಘಟಕದ ಅಧ್ಯಕ್ಷ ರಾವ್ ಪದ್ಮಾ ನೇತೃತ್ವದ ಬಿಜೆಪಿ ಕಾರ್ಯಕರ್ತರು ಹನಮಕೊಂಡದ ಹಂಟರ್ ರಸ್ತೆಯಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು.

ಬಿಜೆಪಿ ಕಾರ್ಯಕರ್ತರು ಶಾಸಕರ ನಿವಾಸದಲ್ಲಿ ಕಲ್ಲು ಮತ್ತು ಮೊಟ್ಟೆಗಳನ್ನು ಎಸೆದಿದ್ದು, ಮನೆಯ ಕಿಟಕಿಯ ಗಾಜು, ಹೂವಿನ ಕುಂಡಗಳು ಸೇರಿದಂತೆ ಇತರ ಆಸ್ತಿಪಾಸ್ತಿಗಳನ್ನು ಹಾನಿಗೊಳಿಸಿದ್ದರು. ಸ್ಥಳದಲ್ಲಿ ಪೊಲೀಸರು ಇದ್ದರೂ ಅವರನ್ನು ಮೀರಿ ದಾಳಿ ಮಾಡಲಾಗಿತ್ತು. ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯ್ತು.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

ಬಿಜೆಪಿಯ ಈ ದಾಳಿಗೆ ಆಡಳಿತಾರೂಢ ಟಿಆರ್‌ಎಸ್ ಪ್ರತೀಕಾರ ತೀರಿಸಿಕೊಂಡಿದ್ದು, ಬಿಜೆಪಿ ಪಕ್ಷದ ಕಚೇರಿಯ ಮೇಲೆ ದಾಳಿ ನಡೆಸಿತ್ತು. ಟಿಆರ್‌ಎಸ್ ಕಾರ್ಯಕರ್ತರು ಕಚೇರಿಗೆ ಕಲ್ಲು ತೂರಿ ಫ್ಲೆಕ್ಸ್ ಬೋರ್ಡ್‌ಗಳು ಮತ್ತು ಬ್ಯಾನರ್‌ಗಳನ್ನು ನಾಶ ಮಾಡಿದ್ದಾರೆ. ಪೊಲೀಸರು ಅವರನ್ನು ಚದುರಿಸಿದ್ದರಾದರೂ, ಅದಕ್ಕೂ ಮೊದಲು ಸ್ಥಳೀಯ ಬಿಜೆಪಿ ನಾಯಕರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಅಂದು ರಾತ್ರಿ ಕೂಡಾ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ ರಂಜಿತ್ ಮತ್ತು ಬಿಜೆವೈಎಂ ಮುಖಂಡ ಅಪುರುಪಾ ಸಯೀ ಅವರ ಮನೆಗಳ ಮೇಲೆ ಟಿಆರ್‌ಎಸ್ ಕಾರ್ಯಕರ್ತರು ದಾಳಿ ನಡೆಸಿದ್ದರು.

ಟಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆ ಟಿ ರಾಮರಾವ್ ಅವರು ತಡರಾತ್ರಿ ನೀಡಿದ ಹೇಳಿಕೆಯಲ್ಲಿ, ಶಾಸಕನ ನಿವಾಸದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದರು. “ತೆಲಂಗಾಣ ಪ್ರತ್ಯೇಕ ರಾಜ್ಯವನ್ನು ಕಟ್ಟುವ ರಾಜಕೀಯ ಆಂದೋಲನದಿಂದ ಟಿಆರ್‌ಎಸ್ ಹುಟ್ಟಿದೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು. ಬಿಜೆಪಿ ಇಂತಹ ಹಿಂಸಾಚಾರವನ್ನು ಆಶ್ರಯಿಸಲು ಬಯಸಿದರೆ, ಟಿಆರ್‌ಎಸ್‌ಗೂ ತನ್ನ ಕಾರ್ಯಕರ್ತರನ್ನು ರಕ್ಷಿಸುವ ಶಕ್ತಿ ಇದೆ ಎಂಬುದನ್ನು ಅವರು ನೆನಪಿನಲ್ಲಿಡಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...