Homeಮುಖಪುಟಜಮೀನು ವಿವಾದ: ಇಬ್ಬರು ಮಹಿಳೆಯರ ಜೀವಂತ ಸಮಾಧಿಗೆ ಯತ್ನ!

ಜಮೀನು ವಿವಾದ: ಇಬ್ಬರು ಮಹಿಳೆಯರ ಜೀವಂತ ಸಮಾಧಿಗೆ ಯತ್ನ!

- Advertisement -
- Advertisement -

ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.

ರೇವಾ ಜಿಲ್ಲೆಯ ಹಿನೌಟಾದಲ್ಲಿ ಎರಡು ಕುಟುಂಬಗಳ ನಡುವೆ ಜಮೀನು ಜಗಳ ನಡೆಯುತ್ತಿತ್ತು. ಒಂದು ಕಡೆಯ ಗುಂಪು ಜಮೀನಿನ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದರು. ಅದನ್ನು ಇನ್ನೊಂದು ಕಡೆಯ ಗುಂಪು ವಿರೋಧಿಸುತ್ತಿತ್ತು ಎಂದು ತಿಳಿದು ಬಂದಿದೆ.

ಆದರೂ, ಕಾಮಗಾರಿ ಮುಂದುವರೆಯುತ್ತಿತ್ತು. ಇದನ್ನು ವಿರೋಧಿಸಿ ಇನ್ನೊಂದು ಗುಂಪಿನ ಮಹಿಳೆಯರು ಜಮೀನಿನಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿದ್ದರು. ಆಗ ಕಾಮಗಾರಿ ನಡೆಸುತ್ತಿದ್ದ ಗುಂಪಿನ ಆದೇಶದಂತೆ ಟಿಪ್ಪರ್‌ ಚಾಲಕ, ಕಲ್ಲು ಮಣ್ಣನ್ನು ಪ್ರತಿಭಟನೆ ಮಾಡುತ್ತಿದ್ದ ಮಹಿಳೆಯರ ಮೇಲೆ ಸುರಿದು, ಜೀವಂತ ಸಮಾಧಿಗೆ ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಮಮತಾ ಪಾಂಡೆ ಹಾಗೂ ಆಶಾ ಪಾಂಡೆ ಎಂಬ ಇಬ್ಬರು ಮಹಿಳೆಯರು ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುವುದನ್ನು ವಿರೋಧಿಸಿದ್ದು, ಅವರು ಜೀವಂತ ಸಮಾಧಿ ಮಾಡಲು ಯತ್ನಿಸಲಾಗಿದೆ. ಒಬ್ಬರು ಮಹಿಳೆಯ ಸೊಂಟದವರೆಗೆ ಹಾಗೂ ಇನ್ನೊಬ್ಬರ ಕುತ್ತಿಗೆವರೆಗೆ ಮಣ್ಣು ಹಾಕಲಾಗಿತ್ತು. ಇದರಿಂದ ಒಬ್ಬರು ಪ್ರಜ್ಞೆ ತಪ್ಪಿದ್ದರು ಎಂದು ವರದಿಯಾಗಿದೆ.

ಟಿಪ್ಪರ್ ಚಾಲಕ ವಿಪಿನ್ ಪಾಂಡೆ ಎಂಬಾತನನ್ನು ಬಂಧಿಸಲಾಗಿದ್ದು, ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರನ್ನು ಪೊಲೀಸರು ಹುಡುಕುತ್ತಿದ್ದು, ಎಲ್ಲಾ ಆರೋಪಿಗಳು ಸಂತ್ರಸ್ತರ ಸಂಬಂಧಿಕರು ಎಂದು ಹೇಳಿದ್ದಾರೆ.

ಘಟನೆಯ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿದ್ದು, ಟಿಪ್ಪರ್‌ನ ಹಿಂಭಾಗದಲ್ಲಿ ಮಣ್ಣಿನಡಿಯಿಂದ ಮಹಿಳೆಯರನ್ನು ರಕ್ಷಿಸುತ್ತಿರುವ ದೃಶ್ಯ ಅದರಲ್ಲಿದೆ.

ಆರೋಪಿಗಳು ಮೊದಲು ಮಹಿಳೆಯರ ಜೊತೆ ವಾಗ್ವಾದ ನಡೆಸಿ, ಹಲ್ಲೆ ಮಾಡಿದ್ದು ಬಳಿಕ ಟಿಪ್ಪರ್‌ನಿಂದ ಜಲ್ಲಿ, ಕಲ್ಲು ತುಂಬಿದ ಮಣ್ಣು ಸುರಿದಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರೇವಾ ಜಿಲ್ಲೆಯ ಎಸ್ಪಿ ವಿವೇಕ್ ಸಿಂಗ್ “ಇದು ಎರಡು ಕಡೆಯ ಕುಟುಂಬಗಳ ಜಮೀನು ವಿವಾದ. ಒಂದು ಕಡೆಯವರು ರಸ್ತೆ ಮಾಡಲು ಬಯಸಿದ್ದರು. ಅದಕ್ಕಾಗಿ ಕಲ್ಲು ಮಣ್ಣು ತುಂಬಿಸುತ್ತಿದ್ದರು. ಆ ಸಂದರ್ಭ ಪ್ರತಿಭಟಿಸುತ್ತಿದ್ದ ಇನ್ನೊಂದು ಕಡೆಯ ಮಹಿಳೆಯರ ಮೇಲೆ ಕಲ್ಲು ಮಣ್ಣಿನ ರಾಶಿಯನ್ನು ಸುರಿದಿದ್ದಾರೆ. ಬಿಎನ್‌ಎಸ್‌ನ ಸೆಕ್ಷನ್ 110 ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮಹಿಳೆಯರ ಪೈಕಿ ಒಬ್ಬರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ದ ಕಾಂಗ್ರೆಸ್ ಕಿಡಿ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ “ಬಿಜೆಪಿಯ ಜಂಗಲ್ ರಾಜ್, ಮಧ್ಯ ಪ್ರದೇಶದ ರೇವಾದಿಂದ ಮಾನವೀಯತೆ ತಲೆ ತಗ್ಗಿಸುವ ವಿಡಿಯೋವೊಂದು ಹೊರಬಿದ್ದಿದೆ. ಇಲ್ಲಿ ಜಮೀನು ವಿವಾದದಿಂದಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಪುಂಡರು ಯತ್ನಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ಮಹಿಳಾ ವಿರೋಧಿ ಚಿಂತನೆಗೆ ಈ ವಿಡಿಯೋ ಮತ್ತೊಂದು ಸಾಕ್ಷಿಯಾಗಿದೆ.ಮಹಿಳಾ ಸುರಕ್ಷತೆ ಮತ್ತು ಸಬಲೀಕರಣಕ್ಕೆ ಸಂಬಂಧಿಸಿದ ನರೇಂದ್ರ ಮೋದಿಯವರ ಎಲ್ಲಾ ಹೇಳಿಕೆಗಳು ಪೊಳ್ಳು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ. ದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ, ಆದರೆ ನರೇಂದ್ರ ಮೋದಿಯವರು ಮೌನವಾಗಿದ್ದಾರೆ” ಎಂದಿದೆ.

ಇದನ್ನೂ ಓದಿ : ಕನ್ವರ್ ಯಾತ್ರೆ | ಯುಪಿ ಸರ್ಕಾರದ ‘ಹೆಸರು ಪ್ರದರ್ಶನ’ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ : ಇಂದು ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...