Homeಮುಖಪುಟರಾಷ್ಟ್ರವ್ಯಾಪಿ ಮುಷ್ಕರ ಹಿಂಪಡೆದ ಲಾರಿ ಚಾಲಕರು

ರಾಷ್ಟ್ರವ್ಯಾಪಿ ಮುಷ್ಕರ ಹಿಂಪಡೆದ ಲಾರಿ ಚಾಲಕರು

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಕ್ರಿಮಿನಲ್ ಕಾನೂನಿನ ವಿರುದ್ಧ ರಾಷ್ಟ್ರವ್ಯಾಪಿ ಲಾರಿ ಚಾಲಕರು ಹಮ್ಮಿಕೊಂಡಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ.

ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರೊಂದಿಗಿನ ಸಭೆಯ ನಂತರ, ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ (ಎಐಎಂಟಿಸಿ) ಮುಷ್ಕರ ಕೊನೆಗೊಳಿಸಲು ನಿರ್ಧರಿಸಿದೆ.

ಹೊಸ ಕಾನೂನುಗಳು ಇನ್ನೂ ಜಾರಿಗೆ ಬಂದಿಲ್ಲ. ಎಐಎಂಟಿಸಿಯೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಜಾರಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಅಜಯ್‌ ಭಲ್ಲಾ ಅವರು ಸಾರಿಗೆ ಸಂಸ್ಥೆಯ ಸದಸ್ಯರಿಗೆ ಭರವಸೆ ನೀಡಿದ ಹಿನ್ನೆಲೆ, ಮುಷ್ಕರ ಹಿಂಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಹೊಸ ಕ್ರಿಮಿನಲ್‌ ಕಾನೂನಿನಲ್ಲಿ ಹಿಟ್‌ ಅಂಡ್‌ ರನ್ ಪ್ರಕರಣಗಳಿಗೆ ಜೈಲು ಶಿಕ್ಷೆಯ ಮಿತಿಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಲಾರಿ ಚಾಲಕರು ರಾಷ್ಟ್ರವ್ಯಾಪಿ ಮುಷ್ಕರ ಕೈಗೊಂಡಿದ್ದರು. ಜನವರಿ 1ರಿಂದ ಮುಷ್ಕರ ಆರಂಭಗೊಂಡಿತ್ತು. ಲಾರಿ ಚಾಲಕರ ಮುಷ್ಕರಕ್ಕೆ ಬಸ್, ಆಟೋ ಚಾಲಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದರು.

ಇದರಿಂದ ಅಗತ್ಯ ವಸ್ತುಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಹಿನ್ನೆಲೆ ಎಐಎಂಟಿಸಿ ಮುಖಂಡರೊಂದಿಗೆ ನಿನ್ನೆ(ಜ.2) ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಮಾತುಕತೆ ನಡೆಸಿದ್ದು, ಅದು ಸಫಲಗೊಂಡಿದೆ.

ಹೊಸ ಕ್ರಿಮಿನಲ್‌ ಕಾನೂನಿಗೆ ವಿರೋಧವೇಕೆ?

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಹಿಟ್ ಅಂಡ್ ರನ್‌ ಪ್ರಕರಣಗಳ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಅಪಘಾತದ ಬಳಿಕ ಚಾಲಕರು ಪರಾರಿಯಾಗಲು ಯತ್ನಿಸಿದೆ ಅಥವಾ ಮಾರಣಾಂತಿಕ ಅಪಘಾತವನ್ನು ಪೊಲೀಸರಿಗೆ ವರದಿ ಮಾಡದಿದ್ದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 7 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಹಿಂದೆ, ಹಿಟ್ ಅಂಡ್‌ ರನ್ ಪ್ರಕರಣಕ್ಕೆ ಐಪಿಸಿಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಎರಡು ವರ್ಷಗಳವರೆಗೆ ಮಾತ್ರ ಜೈಲು ಶಿಕ್ಷೆ ವಿಧಿಸಬಹುದಾಗಿತ್ತು.

ಹೊಸ ಕಾನೂನಿನ ವಿರುದ್ಧ ಮಹಾರಾಷ್ಟ್ರ, ಉತ್ತರ ಪ್ರದೇಶ, ಹರಿಯಾಣ, ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿತ್ತು.

“ಯಾರೂ ಉದ್ದೇಶಪೂರ್ವಕವಾಗಿ ಅಪಘಾತವೆಸಗುವುದಿಲ್ಲ. ಹೊಸ ಕಾನೂನಿನ ಪ್ರಕಾರ ಅಪಘಾತ ನಡೆದಾಗ ಘಟನಾ ಸ್ಥಳದಿಂದ ಪಲಾಯಣ ಮಾಡದಿದ್ದರೆ ಆಕ್ರೋಶಿತ ಜನರು ಚಾಲಕರ ಮೇಲೆ ದಾಳಿ ಮಾಡುವ ಸಾಧ್ಯತೆಯಿರುತ್ತದೆ. ತಮ್ಮ ರಕ್ಷಣೆಗೋಸ್ಕರ ಪಲಾಯಣ ಮಾಡುವ ಚಾಲಕರನ್ನು ಹೊಸ ಕಾನೂನು ತಡೆಯುತ್ತದೆ” ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇತ್ತೀಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಮೂರು ಕ್ರಿಮಿನಲ್ ಕಾನೂಗಳಾದ ಭಾರತೀಯ ನ್ಯಾಯ (ಎರಡನೆಯ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೆಯ) ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ (ಎರಡನೆಯ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.

ಈ ಮೂರು ಕಾನೂನಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ- 1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್- 1898, ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್-1872 ಅನ್ನು ಬದಲಾಯಿಸುತ್ತದೆ. ಭಾರತೀಯ ನ್ಯಾಯ ಸಂಹಿತೆ ಜಾರಿಯಾದರೆ, ಭಾರತೀಯ ದಂಡ ಸಂಹಿತೆ (IPC)ರದ್ದಾಗಲಿದೆ.

ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ

ನೂತನ 3 ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ತಜ್ಞರ ಸಮಿತಿಯನ್ನು ತಕ್ಷಣ ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ.

ವಕೀಲ ವಿಶಾಲ್ ತಿವಾರಿ ಅವರು ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಸಲ್ಲಿಸಿದ್ದು, 3 ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನಕ್ಕೆ ತಡೆ ಮತ್ತು ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ತಕ್ಷಣ ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಕೋರಿದ್ದಾರೆ.

ಹೆಚ್ಚಿನ ಸಂಸದರು ಅಮಾನತಿನಲ್ಲಿದ್ದಾಗ ಸಂಸತ್ತಿನಲ್ಲಿ ಸರಿಯಾದ ಚರ್ಚೆಯಿಲ್ಲದೆ ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಡಿ.20 ರಂದು ಲೋಕಸಭೆಯಲ್ಲಿ ನೂತನ ಕ್ರಿಮಿನಲ್‌ ಮಸೂದೆಗಳನ್ನು ಅಂಗೀಕರಿಸಿದಾಗ 141 ಪ್ರತಿಪಕ್ಷ ಸಂಸದರು (ಎರಡೂ ಸದನಗಳಿಂದ) ಅಮಾನತುಗೊಂಡಿದ್ದರು. 2021ರಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸಂಸತ್ತಿನಲ್ಲಿ ಸರಿಯಾದ ಚರ್ಚೆಗಳಿಲ್ಲದೆ ಮಸೂದೆಗಳ ಅಂಗೀಕಾರದ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದರು ಎಂದು ತಿವಾರಿ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...