Homeಮುಖಪುಟರಾಷ್ಟ್ರವ್ಯಾಪಿ ಮುಷ್ಕರ ಹಿಂಪಡೆದ ಲಾರಿ ಚಾಲಕರು

ರಾಷ್ಟ್ರವ್ಯಾಪಿ ಮುಷ್ಕರ ಹಿಂಪಡೆದ ಲಾರಿ ಚಾಲಕರು

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಕ್ರಿಮಿನಲ್ ಕಾನೂನಿನ ವಿರುದ್ಧ ರಾಷ್ಟ್ರವ್ಯಾಪಿ ಲಾರಿ ಚಾಲಕರು ಹಮ್ಮಿಕೊಂಡಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ.

ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರೊಂದಿಗಿನ ಸಭೆಯ ನಂತರ, ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ (ಎಐಎಂಟಿಸಿ) ಮುಷ್ಕರ ಕೊನೆಗೊಳಿಸಲು ನಿರ್ಧರಿಸಿದೆ.

ಹೊಸ ಕಾನೂನುಗಳು ಇನ್ನೂ ಜಾರಿಗೆ ಬಂದಿಲ್ಲ. ಎಐಎಂಟಿಸಿಯೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಜಾರಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಅಜಯ್‌ ಭಲ್ಲಾ ಅವರು ಸಾರಿಗೆ ಸಂಸ್ಥೆಯ ಸದಸ್ಯರಿಗೆ ಭರವಸೆ ನೀಡಿದ ಹಿನ್ನೆಲೆ, ಮುಷ್ಕರ ಹಿಂಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಹೊಸ ಕ್ರಿಮಿನಲ್‌ ಕಾನೂನಿನಲ್ಲಿ ಹಿಟ್‌ ಅಂಡ್‌ ರನ್ ಪ್ರಕರಣಗಳಿಗೆ ಜೈಲು ಶಿಕ್ಷೆಯ ಮಿತಿಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಲಾರಿ ಚಾಲಕರು ರಾಷ್ಟ್ರವ್ಯಾಪಿ ಮುಷ್ಕರ ಕೈಗೊಂಡಿದ್ದರು. ಜನವರಿ 1ರಿಂದ ಮುಷ್ಕರ ಆರಂಭಗೊಂಡಿತ್ತು. ಲಾರಿ ಚಾಲಕರ ಮುಷ್ಕರಕ್ಕೆ ಬಸ್, ಆಟೋ ಚಾಲಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದರು.

ಇದರಿಂದ ಅಗತ್ಯ ವಸ್ತುಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಹಿನ್ನೆಲೆ ಎಐಎಂಟಿಸಿ ಮುಖಂಡರೊಂದಿಗೆ ನಿನ್ನೆ(ಜ.2) ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಮಾತುಕತೆ ನಡೆಸಿದ್ದು, ಅದು ಸಫಲಗೊಂಡಿದೆ.

ಹೊಸ ಕ್ರಿಮಿನಲ್‌ ಕಾನೂನಿಗೆ ವಿರೋಧವೇಕೆ?

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಹಿಟ್ ಅಂಡ್ ರನ್‌ ಪ್ರಕರಣಗಳ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಅಪಘಾತದ ಬಳಿಕ ಚಾಲಕರು ಪರಾರಿಯಾಗಲು ಯತ್ನಿಸಿದೆ ಅಥವಾ ಮಾರಣಾಂತಿಕ ಅಪಘಾತವನ್ನು ಪೊಲೀಸರಿಗೆ ವರದಿ ಮಾಡದಿದ್ದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 7 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಹಿಂದೆ, ಹಿಟ್ ಅಂಡ್‌ ರನ್ ಪ್ರಕರಣಕ್ಕೆ ಐಪಿಸಿಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಎರಡು ವರ್ಷಗಳವರೆಗೆ ಮಾತ್ರ ಜೈಲು ಶಿಕ್ಷೆ ವಿಧಿಸಬಹುದಾಗಿತ್ತು.

ಹೊಸ ಕಾನೂನಿನ ವಿರುದ್ಧ ಮಹಾರಾಷ್ಟ್ರ, ಉತ್ತರ ಪ್ರದೇಶ, ಹರಿಯಾಣ, ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿತ್ತು.

“ಯಾರೂ ಉದ್ದೇಶಪೂರ್ವಕವಾಗಿ ಅಪಘಾತವೆಸಗುವುದಿಲ್ಲ. ಹೊಸ ಕಾನೂನಿನ ಪ್ರಕಾರ ಅಪಘಾತ ನಡೆದಾಗ ಘಟನಾ ಸ್ಥಳದಿಂದ ಪಲಾಯಣ ಮಾಡದಿದ್ದರೆ ಆಕ್ರೋಶಿತ ಜನರು ಚಾಲಕರ ಮೇಲೆ ದಾಳಿ ಮಾಡುವ ಸಾಧ್ಯತೆಯಿರುತ್ತದೆ. ತಮ್ಮ ರಕ್ಷಣೆಗೋಸ್ಕರ ಪಲಾಯಣ ಮಾಡುವ ಚಾಲಕರನ್ನು ಹೊಸ ಕಾನೂನು ತಡೆಯುತ್ತದೆ” ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇತ್ತೀಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಮೂರು ಕ್ರಿಮಿನಲ್ ಕಾನೂಗಳಾದ ಭಾರತೀಯ ನ್ಯಾಯ (ಎರಡನೆಯ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೆಯ) ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ (ಎರಡನೆಯ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.

ಈ ಮೂರು ಕಾನೂನಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ- 1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್- 1898, ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್-1872 ಅನ್ನು ಬದಲಾಯಿಸುತ್ತದೆ. ಭಾರತೀಯ ನ್ಯಾಯ ಸಂಹಿತೆ ಜಾರಿಯಾದರೆ, ಭಾರತೀಯ ದಂಡ ಸಂಹಿತೆ (IPC)ರದ್ದಾಗಲಿದೆ.

ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ

ನೂತನ 3 ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ತಜ್ಞರ ಸಮಿತಿಯನ್ನು ತಕ್ಷಣ ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ.

ವಕೀಲ ವಿಶಾಲ್ ತಿವಾರಿ ಅವರು ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಸಲ್ಲಿಸಿದ್ದು, 3 ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನಕ್ಕೆ ತಡೆ ಮತ್ತು ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ತಕ್ಷಣ ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಕೋರಿದ್ದಾರೆ.

ಹೆಚ್ಚಿನ ಸಂಸದರು ಅಮಾನತಿನಲ್ಲಿದ್ದಾಗ ಸಂಸತ್ತಿನಲ್ಲಿ ಸರಿಯಾದ ಚರ್ಚೆಯಿಲ್ಲದೆ ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಡಿ.20 ರಂದು ಲೋಕಸಭೆಯಲ್ಲಿ ನೂತನ ಕ್ರಿಮಿನಲ್‌ ಮಸೂದೆಗಳನ್ನು ಅಂಗೀಕರಿಸಿದಾಗ 141 ಪ್ರತಿಪಕ್ಷ ಸಂಸದರು (ಎರಡೂ ಸದನಗಳಿಂದ) ಅಮಾನತುಗೊಂಡಿದ್ದರು. 2021ರಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸಂಸತ್ತಿನಲ್ಲಿ ಸರಿಯಾದ ಚರ್ಚೆಗಳಿಲ್ಲದೆ ಮಸೂದೆಗಳ ಅಂಗೀಕಾರದ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದರು ಎಂದು ತಿವಾರಿ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...