Homeಕರ್ನಾಟಕಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಯಾರು ಸಂವಿಧಾನವನ್ನು ಗೌರವಿಸುತ್ತಾರೊ, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು ಸೌರ್ಹಾರ್ದತೆಯನ್ನು ಬಯಸುತ್ತಾರೊ ಅವರೇ ನಿಜವಾದ ದೇಶಪ್ರೇಮಿಗಳು’ ಎಂದು ಪ್ರೊ. ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಉದ್ಘಾಟನಾ ಮಾತುಗಳನ್ನಾಡಿದ ಅವರು, “ಜನ ಒಂದುಗೂಡಿದರೆ ಯಾವೂದೂ ಅಸಾಧ್ಯವಲ್ಲ. ಆದ್ದರಿಂದ, ಜನಶಕ್ತಿಯೆ ಅಂತಿಮವಾಗಿದ್ದು. ಅಂತಹ ಜನಶಕ್ತಿಯನ್ನು ಸಂಘಟಿಸಿದರೆ ಸಂವಿಧಾನವನ್ನು ರಕ್ಷಣೆ ಮಾಡಲು ಸಾಧ್ಯ” ಎಂದರು.

“ಪ್ರಶ್ನೆ ಮಾಡುವುದು ಮತ್ತು ಪ್ರಶ್ನಿಸಿಕೊಳ್ಳುವುದು ಬಹಳ ಮುಖ್ಯ; ಪ್ರಪಂಚದ ಎಲ್ಲ ಕ್ರಾಂತಿಕಾರಿಗಳು ಇದನ್ನು ಮಾಡುತ್ತಾರೆ. ಸಂವಿಧಾನವನ್ನು ಕೈನಲ್ಲಿ ಹಿಡಿಕೊಂಡಿರುವ ಪಡೆ ಒಂದು ಕಡೆ, ಸಂವಿಧಾನವನ್ನು ಪಾಲಿಸದ ಪಡೆ ಮತ್ತೊಂದು ಕಡೆ. ಆದರೆ, ಸಂವಿಧಾನ ಹಿಡಿದಿರುವ ಈ ಪಡೆ ‘ಪರ್ಯಾಯ’ವನ್ನು ಸಾಧ್ಯವನ್ನಾಗಿಸುವ ಪಡೆಯಾಗಿದೆ” ಎಂದು ಅವರು ಹೇಳಿದರು.

“ಸಂವಿಧಾನ ಇದೆ ಎನ್ನುವುದು ಅಷ್ಟು ಮುಖ್ಯವಲ್ಲ; ಅದನ್ನು ಯಾರು ಬಳಸುತ್ತಾರೆ ಎನ್ನುವುದು ಮುಖ್ಯವಾಗಿದೆ. ಏಕೆಂದರೆ, ಪ್ರಾಮಾಣಿಕತೆ ಪತನಗೊಂಡ ಕಾಲವಿದು. ಭ್ರಷ್ಟಗೊಂಡ ಬೌದ್ಧಿಕ ವಲಯದ ಕಾಲವಿದೆ. ಅದು ಈಗ ಜಾತಿ, ಧರ್ಮ, ಪೂರ್ವಗ್ರಹ ಪೀಡಿತವಾಗಿ ಭ್ರಷ್ಟಗೊಂಡಿದೆ. ಜಾತಿ-ಧರ್ಮ ಮೂಲಭೂತವಾಗಬಾರದು. ಸಮಾದಲ್ಲಿ ಜಾತಿ-ಧರ್ಮಗಳಿವೆ; ಆದರೆ, ಅದು ಮೂಲಭೂತವಾಗಿರಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತವಾಗಿರುವ ಕಾಲವಿದು. ಯಾರು ಪ್ರಗತಿಪರ, ಯಾರು ದೇಶಪ್ರೇಮಿ ಅಲ್ಲ ಎನ್ನುವುದು ನಾವು ಹಿಂದೂ-ಮುಸ್ಲಿಂ ಎಂಬ ಆಧಾರದಲ್ಲಿ ನೋಡುತ್ತಿದ್ದೇವೆ” ಎಂದರು.

“ನಮ್ಮ ಪರಂಪರೆ ಬಹಳ ಮುಖ್ಯವಗಿದೆ; ಜನಸಾಮಾನ್ಯರನ್ನು ನಮ್ಮ ಪರಂಪರೆಯ ಮೂಲಕ ತಲುಪಬೇಕಾಗಿದೆ. ಹಿಂದೂ ಧರ್ಮ ಒಪ್ಪದ ಅಂಬೇಡ್ಕರ್‌ ಮತ್ತು ಹಿಂದೂ ಧರ್ಮವನ್ನು ಒಪ್ಪುವ ರಾಧಾಕೃಷ್ಣ ಅವರು ದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇರಬೇಕು ಎಂದು ಪ್ರತಿಪಾದಿಸುತ್ತಾರೆ. ರಾಮ್‌ ಪ್ರಸಾದ್ ಮತ್ತು ಅಸ್ಪಾಕುಲ್ಲಾ ಅವರು ಒಂದೇ ಸಮಯದಲ್ಲಿ ಸ್ವಾತಂತ್ಯ್ರಕ್ಕೋಸ್ಕರ ಹೋರಾಟ ಮಾಡಿ, ಒಂದೇ ದಿನ ಹುತಾತ್ಮರಾಗುತ್ತಾರೆ; ಇದು ನಮ್ಮ ಭಾರತ” ಎಂದು ವಿವರಿಸಿದರು.

“ಪೆಹಲ್ಗಾಮ್ ಅಮಾನವೀಯ ಘಟನೆನ್ನು ನಾವು ಉಗ್ರವಾಗಿ ಖಂಡಿಸಬೇಕಾಗಿದೆ. ಈ ದೇಶದಲ್ಲಿ ಭಯೋತ್ಪಾನೆ, ದ್ವೇಷೋತ್ಪಾದನೆ ಇದೆ. ಜೊತೆಗೆ ಪ್ರಪಂಚದಲ್ಲಿ ಯುದ್ದೋತ್ಪಾದನೆ ಇವೆ. ಆದರೆ, ನಮಗೆ ಇದು ಯಾವುದೂ ಬೇಡ. ಅಮಾನವೀಯ ಘಟನೆ ನಡೆದ ಸಂಧರ್ಭದಲ್ಲಿ ಮಾನವೀಯವಾಗಿ ಸ್ಪಂಧಿಸುವ ಮನಸ್ಸುಗಳು ಭಾರತದಲ್ಲಿ ಇವೆ ಎನ್ನುವುದು ಪೆಹಲ್ಗಾಮ್ ಘಟನೆ ನಮಗೆ ಉದಾಹರಣೆಯಾಗಿದೆ. ಒಂದು ಕಡೆ ಮೃತ ವ್ಯಕ್ತಿಯ ಮುಂದೆ ರೋಧಿಸುತ್ತಿರುವ ಮಹಿಳೆಯ ಚಿತ್ರವಿದೆ. ಮತ್ತೊಂದು ಕಡೆ, ಒಬ್ಬ ವ್ಯಕ್ತಿ ತನ್ನ ಬೆನ್ನಮೇಲೆ ಹೊತ್ತುಕೊಂಡು ಹೋಗಿ ಯುವಕನ ಜೀವ ರಕ್ಷಿಸುತ್ತಾನೆ. ಇವೆರೆಡೂ ನಮ್ಮ ಮುಂದೆ ಸಂಕೇತವಾಗಿದೆ” ಎಂದರು.

“ಸಂವಿಧಾನವನ್ನು ಪೂಜೆ ಮಾಡುವವರಿಗೆ, ಅದರ ಬಗ್ಗೆ ಗೌರವ ಇದೆಯೇ ಎಂಬುವುದನ್ನು ನಾವು ಪ್ರಶ್ನೆ ಮಾಡಬೇಕಾಗಿದೆ. ಆರಂಭದಲ್ಲಿ ‘ಸಮಾಜವಾದ’ ಎನ್ನುವ ಪದ ಪೀಠಿಕೆಯಲ್ಲಿ ಇರಲಿಲ್ಲ. ಆದರೆ, ಅಂಬೇಡ್ಕರ್ ಅವರು ತಮ್ಮ ಕೊನೆಯ ಸಂವಿಧಾನ ಸಭೆಯಲ್ಲಿ ಮಾತನಾಡುತ್ತಾ, ಸಂವಿಧಾನದ ಒಳಗೆ ಸಮಾಜವಾದದ ಆಶಯ ಅಡಗಿದೆ ಎಂದು ಹೇಳಿದ್ದರು” ಎಂದು ಹೇಳಿದರು.

“ಪಕ್ಷದಲ್ಲಿ ಇದ್ದೂ ಪಕ್ಷವನ್ನು ಮೀರಿ ನೋಡುವ ರಾಜಕೀಯ ನಾಯಕತ್ವ ಬೇಕು. ಧರ್ಮದಲ್ಲಿ ಇದ್ದೂ ಧಾರ್ಮಿಕತೆಯನ್ನು ಮೀರಿ ಧಾರ್ಮಿಕ ನಾಯಕತ್ವ ಈ ದೇಶಕ್ಕೆ ಬರಬೇಕು. ಸಂವಿಧಾನ ಅಸ್ಪೃಶ್ಯತೆ ನಿಷೇಧ ಮಾಡಿದೆ. ಆದರೆ, ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿದೆ. 1.87 ಲಕ್ಷ ಜನರು ಇನ್ನೂ ಕೈನಿಂದ ಮಲ ಎತ್ತುತ್ತಿದ್ದಾರೆ. ಇದು ಹೋಗಲಾಡಿಸಲು ನಮ್ಮ ಮನಸ್ಸಿನ ಮಲಿನತೆ ಹೋಗಬೇಕು. ಸಂಘಟಿತ ವಲಯದ ಜೊತೆಗೆ ಅಸಂಘಟಿತ ವಲಯದ ಬಗ್ಗೆ ಮಾತನಾಡುವ ತುರ್ತು ಇದೆ. ನಮ್ಮ ಸೈದ್ಧಾಂತಿಕ ಬದ್ಧತೆಯನ್ನು ಬಿಟ್ಟುಕೊಡದೆ, ಸೈದ್ಧಾಂತಿಕ ಸಂಕುಚಿತತೆಯನ್ನು ಮೀರಬೇಕು. ದೇಶದಲ್ಲಿ ಬದಲಾವಣೆ ಬರಬೇಕಿದ್ದರೆ, ಕೆಂಪು, ನೀಲಿ, ಹಸಿರು ಒಂದೇ ವೇದಿಕೆಯ ಮೇಲೆ ಬರಬೇಕು” ಎಂದು ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು.

ದಲಿತರಿಗೆ ಅಂಬೇಡ್ಕರ್, ಲಿಂಗಾಯತರಿಗೆ ಬಸವಣ್ಣ ಅರ್ಥವಾಗಿದ್ದರೆ ಕೋಮುವಾದಿಗಳು ಅಧಿಕಾರಕ್ಕೆ ಬರುತ್ತಿರಲಿಲ್ಲ: ಪ್ರೊ. ಎ.ಬಿ ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...