Homeಕರ್ನಾಟಕಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಯಾರು ಸಂವಿಧಾನವನ್ನು ಗೌರವಿಸುತ್ತಾರೊ, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು ಸೌರ್ಹಾರ್ದತೆಯನ್ನು ಬಯಸುತ್ತಾರೊ ಅವರೇ ನಿಜವಾದ ದೇಶಪ್ರೇಮಿಗಳು’ ಎಂದು ಪ್ರೊ. ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಉದ್ಘಾಟನಾ ಮಾತುಗಳನ್ನಾಡಿದ ಅವರು, “ಜನ ಒಂದುಗೂಡಿದರೆ ಯಾವೂದೂ ಅಸಾಧ್ಯವಲ್ಲ. ಆದ್ದರಿಂದ, ಜನಶಕ್ತಿಯೆ ಅಂತಿಮವಾಗಿದ್ದು. ಅಂತಹ ಜನಶಕ್ತಿಯನ್ನು ಸಂಘಟಿಸಿದರೆ ಸಂವಿಧಾನವನ್ನು ರಕ್ಷಣೆ ಮಾಡಲು ಸಾಧ್ಯ” ಎಂದರು.

“ಪ್ರಶ್ನೆ ಮಾಡುವುದು ಮತ್ತು ಪ್ರಶ್ನಿಸಿಕೊಳ್ಳುವುದು ಬಹಳ ಮುಖ್ಯ; ಪ್ರಪಂಚದ ಎಲ್ಲ ಕ್ರಾಂತಿಕಾರಿಗಳು ಇದನ್ನು ಮಾಡುತ್ತಾರೆ. ಸಂವಿಧಾನವನ್ನು ಕೈನಲ್ಲಿ ಹಿಡಿಕೊಂಡಿರುವ ಪಡೆ ಒಂದು ಕಡೆ, ಸಂವಿಧಾನವನ್ನು ಪಾಲಿಸದ ಪಡೆ ಮತ್ತೊಂದು ಕಡೆ. ಆದರೆ, ಸಂವಿಧಾನ ಹಿಡಿದಿರುವ ಈ ಪಡೆ ‘ಪರ್ಯಾಯ’ವನ್ನು ಸಾಧ್ಯವನ್ನಾಗಿಸುವ ಪಡೆಯಾಗಿದೆ” ಎಂದು ಅವರು ಹೇಳಿದರು.

“ಸಂವಿಧಾನ ಇದೆ ಎನ್ನುವುದು ಅಷ್ಟು ಮುಖ್ಯವಲ್ಲ; ಅದನ್ನು ಯಾರು ಬಳಸುತ್ತಾರೆ ಎನ್ನುವುದು ಮುಖ್ಯವಾಗಿದೆ. ಏಕೆಂದರೆ, ಪ್ರಾಮಾಣಿಕತೆ ಪತನಗೊಂಡ ಕಾಲವಿದು. ಭ್ರಷ್ಟಗೊಂಡ ಬೌದ್ಧಿಕ ವಲಯದ ಕಾಲವಿದೆ. ಅದು ಈಗ ಜಾತಿ, ಧರ್ಮ, ಪೂರ್ವಗ್ರಹ ಪೀಡಿತವಾಗಿ ಭ್ರಷ್ಟಗೊಂಡಿದೆ. ಜಾತಿ-ಧರ್ಮ ಮೂಲಭೂತವಾಗಬಾರದು. ಸಮಾದಲ್ಲಿ ಜಾತಿ-ಧರ್ಮಗಳಿವೆ; ಆದರೆ, ಅದು ಮೂಲಭೂತವಾಗಿರಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತವಾಗಿರುವ ಕಾಲವಿದು. ಯಾರು ಪ್ರಗತಿಪರ, ಯಾರು ದೇಶಪ್ರೇಮಿ ಅಲ್ಲ ಎನ್ನುವುದು ನಾವು ಹಿಂದೂ-ಮುಸ್ಲಿಂ ಎಂಬ ಆಧಾರದಲ್ಲಿ ನೋಡುತ್ತಿದ್ದೇವೆ” ಎಂದರು.

“ನಮ್ಮ ಪರಂಪರೆ ಬಹಳ ಮುಖ್ಯವಗಿದೆ; ಜನಸಾಮಾನ್ಯರನ್ನು ನಮ್ಮ ಪರಂಪರೆಯ ಮೂಲಕ ತಲುಪಬೇಕಾಗಿದೆ. ಹಿಂದೂ ಧರ್ಮ ಒಪ್ಪದ ಅಂಬೇಡ್ಕರ್‌ ಮತ್ತು ಹಿಂದೂ ಧರ್ಮವನ್ನು ಒಪ್ಪುವ ರಾಧಾಕೃಷ್ಣ ಅವರು ದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇರಬೇಕು ಎಂದು ಪ್ರತಿಪಾದಿಸುತ್ತಾರೆ. ರಾಮ್‌ ಪ್ರಸಾದ್ ಮತ್ತು ಅಸ್ಪಾಕುಲ್ಲಾ ಅವರು ಒಂದೇ ಸಮಯದಲ್ಲಿ ಸ್ವಾತಂತ್ಯ್ರಕ್ಕೋಸ್ಕರ ಹೋರಾಟ ಮಾಡಿ, ಒಂದೇ ದಿನ ಹುತಾತ್ಮರಾಗುತ್ತಾರೆ; ಇದು ನಮ್ಮ ಭಾರತ” ಎಂದು ವಿವರಿಸಿದರು.

“ಪೆಹಲ್ಗಾಮ್ ಅಮಾನವೀಯ ಘಟನೆನ್ನು ನಾವು ಉಗ್ರವಾಗಿ ಖಂಡಿಸಬೇಕಾಗಿದೆ. ಈ ದೇಶದಲ್ಲಿ ಭಯೋತ್ಪಾನೆ, ದ್ವೇಷೋತ್ಪಾದನೆ ಇದೆ. ಜೊತೆಗೆ ಪ್ರಪಂಚದಲ್ಲಿ ಯುದ್ದೋತ್ಪಾದನೆ ಇವೆ. ಆದರೆ, ನಮಗೆ ಇದು ಯಾವುದೂ ಬೇಡ. ಅಮಾನವೀಯ ಘಟನೆ ನಡೆದ ಸಂಧರ್ಭದಲ್ಲಿ ಮಾನವೀಯವಾಗಿ ಸ್ಪಂಧಿಸುವ ಮನಸ್ಸುಗಳು ಭಾರತದಲ್ಲಿ ಇವೆ ಎನ್ನುವುದು ಪೆಹಲ್ಗಾಮ್ ಘಟನೆ ನಮಗೆ ಉದಾಹರಣೆಯಾಗಿದೆ. ಒಂದು ಕಡೆ ಮೃತ ವ್ಯಕ್ತಿಯ ಮುಂದೆ ರೋಧಿಸುತ್ತಿರುವ ಮಹಿಳೆಯ ಚಿತ್ರವಿದೆ. ಮತ್ತೊಂದು ಕಡೆ, ಒಬ್ಬ ವ್ಯಕ್ತಿ ತನ್ನ ಬೆನ್ನಮೇಲೆ ಹೊತ್ತುಕೊಂಡು ಹೋಗಿ ಯುವಕನ ಜೀವ ರಕ್ಷಿಸುತ್ತಾನೆ. ಇವೆರೆಡೂ ನಮ್ಮ ಮುಂದೆ ಸಂಕೇತವಾಗಿದೆ” ಎಂದರು.

“ಸಂವಿಧಾನವನ್ನು ಪೂಜೆ ಮಾಡುವವರಿಗೆ, ಅದರ ಬಗ್ಗೆ ಗೌರವ ಇದೆಯೇ ಎಂಬುವುದನ್ನು ನಾವು ಪ್ರಶ್ನೆ ಮಾಡಬೇಕಾಗಿದೆ. ಆರಂಭದಲ್ಲಿ ‘ಸಮಾಜವಾದ’ ಎನ್ನುವ ಪದ ಪೀಠಿಕೆಯಲ್ಲಿ ಇರಲಿಲ್ಲ. ಆದರೆ, ಅಂಬೇಡ್ಕರ್ ಅವರು ತಮ್ಮ ಕೊನೆಯ ಸಂವಿಧಾನ ಸಭೆಯಲ್ಲಿ ಮಾತನಾಡುತ್ತಾ, ಸಂವಿಧಾನದ ಒಳಗೆ ಸಮಾಜವಾದದ ಆಶಯ ಅಡಗಿದೆ ಎಂದು ಹೇಳಿದ್ದರು” ಎಂದು ಹೇಳಿದರು.

“ಪಕ್ಷದಲ್ಲಿ ಇದ್ದೂ ಪಕ್ಷವನ್ನು ಮೀರಿ ನೋಡುವ ರಾಜಕೀಯ ನಾಯಕತ್ವ ಬೇಕು. ಧರ್ಮದಲ್ಲಿ ಇದ್ದೂ ಧಾರ್ಮಿಕತೆಯನ್ನು ಮೀರಿ ಧಾರ್ಮಿಕ ನಾಯಕತ್ವ ಈ ದೇಶಕ್ಕೆ ಬರಬೇಕು. ಸಂವಿಧಾನ ಅಸ್ಪೃಶ್ಯತೆ ನಿಷೇಧ ಮಾಡಿದೆ. ಆದರೆ, ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿದೆ. 1.87 ಲಕ್ಷ ಜನರು ಇನ್ನೂ ಕೈನಿಂದ ಮಲ ಎತ್ತುತ್ತಿದ್ದಾರೆ. ಇದು ಹೋಗಲಾಡಿಸಲು ನಮ್ಮ ಮನಸ್ಸಿನ ಮಲಿನತೆ ಹೋಗಬೇಕು. ಸಂಘಟಿತ ವಲಯದ ಜೊತೆಗೆ ಅಸಂಘಟಿತ ವಲಯದ ಬಗ್ಗೆ ಮಾತನಾಡುವ ತುರ್ತು ಇದೆ. ನಮ್ಮ ಸೈದ್ಧಾಂತಿಕ ಬದ್ಧತೆಯನ್ನು ಬಿಟ್ಟುಕೊಡದೆ, ಸೈದ್ಧಾಂತಿಕ ಸಂಕುಚಿತತೆಯನ್ನು ಮೀರಬೇಕು. ದೇಶದಲ್ಲಿ ಬದಲಾವಣೆ ಬರಬೇಕಿದ್ದರೆ, ಕೆಂಪು, ನೀಲಿ, ಹಸಿರು ಒಂದೇ ವೇದಿಕೆಯ ಮೇಲೆ ಬರಬೇಕು” ಎಂದು ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು.

ದಲಿತರಿಗೆ ಅಂಬೇಡ್ಕರ್, ಲಿಂಗಾಯತರಿಗೆ ಬಸವಣ್ಣ ಅರ್ಥವಾಗಿದ್ದರೆ ಕೋಮುವಾದಿಗಳು ಅಧಿಕಾರಕ್ಕೆ ಬರುತ್ತಿರಲಿಲ್ಲ: ಪ್ರೊ. ಎ.ಬಿ ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...