Homeಕರ್ನಾಟಕಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಯಾರು ಸಂವಿಧಾನವನ್ನು ಗೌರವಿಸುತ್ತಾರೊ, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು ಸೌರ್ಹಾರ್ದತೆಯನ್ನು ಬಯಸುತ್ತಾರೊ ಅವರೇ ನಿಜವಾದ ದೇಶಪ್ರೇಮಿಗಳು’ ಎಂದು ಪ್ರೊ. ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಉದ್ಘಾಟನಾ ಮಾತುಗಳನ್ನಾಡಿದ ಅವರು, “ಜನ ಒಂದುಗೂಡಿದರೆ ಯಾವೂದೂ ಅಸಾಧ್ಯವಲ್ಲ. ಆದ್ದರಿಂದ, ಜನಶಕ್ತಿಯೆ ಅಂತಿಮವಾಗಿದ್ದು. ಅಂತಹ ಜನಶಕ್ತಿಯನ್ನು ಸಂಘಟಿಸಿದರೆ ಸಂವಿಧಾನವನ್ನು ರಕ್ಷಣೆ ಮಾಡಲು ಸಾಧ್ಯ” ಎಂದರು.

“ಪ್ರಶ್ನೆ ಮಾಡುವುದು ಮತ್ತು ಪ್ರಶ್ನಿಸಿಕೊಳ್ಳುವುದು ಬಹಳ ಮುಖ್ಯ; ಪ್ರಪಂಚದ ಎಲ್ಲ ಕ್ರಾಂತಿಕಾರಿಗಳು ಇದನ್ನು ಮಾಡುತ್ತಾರೆ. ಸಂವಿಧಾನವನ್ನು ಕೈನಲ್ಲಿ ಹಿಡಿಕೊಂಡಿರುವ ಪಡೆ ಒಂದು ಕಡೆ, ಸಂವಿಧಾನವನ್ನು ಪಾಲಿಸದ ಪಡೆ ಮತ್ತೊಂದು ಕಡೆ. ಆದರೆ, ಸಂವಿಧಾನ ಹಿಡಿದಿರುವ ಈ ಪಡೆ ‘ಪರ್ಯಾಯ’ವನ್ನು ಸಾಧ್ಯವನ್ನಾಗಿಸುವ ಪಡೆಯಾಗಿದೆ” ಎಂದು ಅವರು ಹೇಳಿದರು.

“ಸಂವಿಧಾನ ಇದೆ ಎನ್ನುವುದು ಅಷ್ಟು ಮುಖ್ಯವಲ್ಲ; ಅದನ್ನು ಯಾರು ಬಳಸುತ್ತಾರೆ ಎನ್ನುವುದು ಮುಖ್ಯವಾಗಿದೆ. ಏಕೆಂದರೆ, ಪ್ರಾಮಾಣಿಕತೆ ಪತನಗೊಂಡ ಕಾಲವಿದು. ಭ್ರಷ್ಟಗೊಂಡ ಬೌದ್ಧಿಕ ವಲಯದ ಕಾಲವಿದೆ. ಅದು ಈಗ ಜಾತಿ, ಧರ್ಮ, ಪೂರ್ವಗ್ರಹ ಪೀಡಿತವಾಗಿ ಭ್ರಷ್ಟಗೊಂಡಿದೆ. ಜಾತಿ-ಧರ್ಮ ಮೂಲಭೂತವಾಗಬಾರದು. ಸಮಾದಲ್ಲಿ ಜಾತಿ-ಧರ್ಮಗಳಿವೆ; ಆದರೆ, ಅದು ಮೂಲಭೂತವಾಗಿರಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತವಾಗಿರುವ ಕಾಲವಿದು. ಯಾರು ಪ್ರಗತಿಪರ, ಯಾರು ದೇಶಪ್ರೇಮಿ ಅಲ್ಲ ಎನ್ನುವುದು ನಾವು ಹಿಂದೂ-ಮುಸ್ಲಿಂ ಎಂಬ ಆಧಾರದಲ್ಲಿ ನೋಡುತ್ತಿದ್ದೇವೆ” ಎಂದರು.

“ನಮ್ಮ ಪರಂಪರೆ ಬಹಳ ಮುಖ್ಯವಗಿದೆ; ಜನಸಾಮಾನ್ಯರನ್ನು ನಮ್ಮ ಪರಂಪರೆಯ ಮೂಲಕ ತಲುಪಬೇಕಾಗಿದೆ. ಹಿಂದೂ ಧರ್ಮ ಒಪ್ಪದ ಅಂಬೇಡ್ಕರ್‌ ಮತ್ತು ಹಿಂದೂ ಧರ್ಮವನ್ನು ಒಪ್ಪುವ ರಾಧಾಕೃಷ್ಣ ಅವರು ದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇರಬೇಕು ಎಂದು ಪ್ರತಿಪಾದಿಸುತ್ತಾರೆ. ರಾಮ್‌ ಪ್ರಸಾದ್ ಮತ್ತು ಅಸ್ಪಾಕುಲ್ಲಾ ಅವರು ಒಂದೇ ಸಮಯದಲ್ಲಿ ಸ್ವಾತಂತ್ಯ್ರಕ್ಕೋಸ್ಕರ ಹೋರಾಟ ಮಾಡಿ, ಒಂದೇ ದಿನ ಹುತಾತ್ಮರಾಗುತ್ತಾರೆ; ಇದು ನಮ್ಮ ಭಾರತ” ಎಂದು ವಿವರಿಸಿದರು.

“ಪೆಹಲ್ಗಾಮ್ ಅಮಾನವೀಯ ಘಟನೆನ್ನು ನಾವು ಉಗ್ರವಾಗಿ ಖಂಡಿಸಬೇಕಾಗಿದೆ. ಈ ದೇಶದಲ್ಲಿ ಭಯೋತ್ಪಾನೆ, ದ್ವೇಷೋತ್ಪಾದನೆ ಇದೆ. ಜೊತೆಗೆ ಪ್ರಪಂಚದಲ್ಲಿ ಯುದ್ದೋತ್ಪಾದನೆ ಇವೆ. ಆದರೆ, ನಮಗೆ ಇದು ಯಾವುದೂ ಬೇಡ. ಅಮಾನವೀಯ ಘಟನೆ ನಡೆದ ಸಂಧರ್ಭದಲ್ಲಿ ಮಾನವೀಯವಾಗಿ ಸ್ಪಂಧಿಸುವ ಮನಸ್ಸುಗಳು ಭಾರತದಲ್ಲಿ ಇವೆ ಎನ್ನುವುದು ಪೆಹಲ್ಗಾಮ್ ಘಟನೆ ನಮಗೆ ಉದಾಹರಣೆಯಾಗಿದೆ. ಒಂದು ಕಡೆ ಮೃತ ವ್ಯಕ್ತಿಯ ಮುಂದೆ ರೋಧಿಸುತ್ತಿರುವ ಮಹಿಳೆಯ ಚಿತ್ರವಿದೆ. ಮತ್ತೊಂದು ಕಡೆ, ಒಬ್ಬ ವ್ಯಕ್ತಿ ತನ್ನ ಬೆನ್ನಮೇಲೆ ಹೊತ್ತುಕೊಂಡು ಹೋಗಿ ಯುವಕನ ಜೀವ ರಕ್ಷಿಸುತ್ತಾನೆ. ಇವೆರೆಡೂ ನಮ್ಮ ಮುಂದೆ ಸಂಕೇತವಾಗಿದೆ” ಎಂದರು.

“ಸಂವಿಧಾನವನ್ನು ಪೂಜೆ ಮಾಡುವವರಿಗೆ, ಅದರ ಬಗ್ಗೆ ಗೌರವ ಇದೆಯೇ ಎಂಬುವುದನ್ನು ನಾವು ಪ್ರಶ್ನೆ ಮಾಡಬೇಕಾಗಿದೆ. ಆರಂಭದಲ್ಲಿ ‘ಸಮಾಜವಾದ’ ಎನ್ನುವ ಪದ ಪೀಠಿಕೆಯಲ್ಲಿ ಇರಲಿಲ್ಲ. ಆದರೆ, ಅಂಬೇಡ್ಕರ್ ಅವರು ತಮ್ಮ ಕೊನೆಯ ಸಂವಿಧಾನ ಸಭೆಯಲ್ಲಿ ಮಾತನಾಡುತ್ತಾ, ಸಂವಿಧಾನದ ಒಳಗೆ ಸಮಾಜವಾದದ ಆಶಯ ಅಡಗಿದೆ ಎಂದು ಹೇಳಿದ್ದರು” ಎಂದು ಹೇಳಿದರು.

“ಪಕ್ಷದಲ್ಲಿ ಇದ್ದೂ ಪಕ್ಷವನ್ನು ಮೀರಿ ನೋಡುವ ರಾಜಕೀಯ ನಾಯಕತ್ವ ಬೇಕು. ಧರ್ಮದಲ್ಲಿ ಇದ್ದೂ ಧಾರ್ಮಿಕತೆಯನ್ನು ಮೀರಿ ಧಾರ್ಮಿಕ ನಾಯಕತ್ವ ಈ ದೇಶಕ್ಕೆ ಬರಬೇಕು. ಸಂವಿಧಾನ ಅಸ್ಪೃಶ್ಯತೆ ನಿಷೇಧ ಮಾಡಿದೆ. ಆದರೆ, ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿದೆ. 1.87 ಲಕ್ಷ ಜನರು ಇನ್ನೂ ಕೈನಿಂದ ಮಲ ಎತ್ತುತ್ತಿದ್ದಾರೆ. ಇದು ಹೋಗಲಾಡಿಸಲು ನಮ್ಮ ಮನಸ್ಸಿನ ಮಲಿನತೆ ಹೋಗಬೇಕು. ಸಂಘಟಿತ ವಲಯದ ಜೊತೆಗೆ ಅಸಂಘಟಿತ ವಲಯದ ಬಗ್ಗೆ ಮಾತನಾಡುವ ತುರ್ತು ಇದೆ. ನಮ್ಮ ಸೈದ್ಧಾಂತಿಕ ಬದ್ಧತೆಯನ್ನು ಬಿಟ್ಟುಕೊಡದೆ, ಸೈದ್ಧಾಂತಿಕ ಸಂಕುಚಿತತೆಯನ್ನು ಮೀರಬೇಕು. ದೇಶದಲ್ಲಿ ಬದಲಾವಣೆ ಬರಬೇಕಿದ್ದರೆ, ಕೆಂಪು, ನೀಲಿ, ಹಸಿರು ಒಂದೇ ವೇದಿಕೆಯ ಮೇಲೆ ಬರಬೇಕು” ಎಂದು ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು.

ದಲಿತರಿಗೆ ಅಂಬೇಡ್ಕರ್, ಲಿಂಗಾಯತರಿಗೆ ಬಸವಣ್ಣ ಅರ್ಥವಾಗಿದ್ದರೆ ಕೋಮುವಾದಿಗಳು ಅಧಿಕಾರಕ್ಕೆ ಬರುತ್ತಿರಲಿಲ್ಲ: ಪ್ರೊ. ಎ.ಬಿ ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...