Homeಕರ್ನಾಟಕಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಯಾರು ಸಂವಿಧಾನವನ್ನು ಗೌರವಿಸುತ್ತಾರೊ, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು ಸೌರ್ಹಾರ್ದತೆಯನ್ನು ಬಯಸುತ್ತಾರೊ ಅವರೇ ನಿಜವಾದ ದೇಶಪ್ರೇಮಿಗಳು’ ಎಂದು ಪ್ರೊ. ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಉದ್ಘಾಟನಾ ಮಾತುಗಳನ್ನಾಡಿದ ಅವರು, “ಜನ ಒಂದುಗೂಡಿದರೆ ಯಾವೂದೂ ಅಸಾಧ್ಯವಲ್ಲ. ಆದ್ದರಿಂದ, ಜನಶಕ್ತಿಯೆ ಅಂತಿಮವಾಗಿದ್ದು. ಅಂತಹ ಜನಶಕ್ತಿಯನ್ನು ಸಂಘಟಿಸಿದರೆ ಸಂವಿಧಾನವನ್ನು ರಕ್ಷಣೆ ಮಾಡಲು ಸಾಧ್ಯ” ಎಂದರು.

“ಪ್ರಶ್ನೆ ಮಾಡುವುದು ಮತ್ತು ಪ್ರಶ್ನಿಸಿಕೊಳ್ಳುವುದು ಬಹಳ ಮುಖ್ಯ; ಪ್ರಪಂಚದ ಎಲ್ಲ ಕ್ರಾಂತಿಕಾರಿಗಳು ಇದನ್ನು ಮಾಡುತ್ತಾರೆ. ಸಂವಿಧಾನವನ್ನು ಕೈನಲ್ಲಿ ಹಿಡಿಕೊಂಡಿರುವ ಪಡೆ ಒಂದು ಕಡೆ, ಸಂವಿಧಾನವನ್ನು ಪಾಲಿಸದ ಪಡೆ ಮತ್ತೊಂದು ಕಡೆ. ಆದರೆ, ಸಂವಿಧಾನ ಹಿಡಿದಿರುವ ಈ ಪಡೆ ‘ಪರ್ಯಾಯ’ವನ್ನು ಸಾಧ್ಯವನ್ನಾಗಿಸುವ ಪಡೆಯಾಗಿದೆ” ಎಂದು ಅವರು ಹೇಳಿದರು.

“ಸಂವಿಧಾನ ಇದೆ ಎನ್ನುವುದು ಅಷ್ಟು ಮುಖ್ಯವಲ್ಲ; ಅದನ್ನು ಯಾರು ಬಳಸುತ್ತಾರೆ ಎನ್ನುವುದು ಮುಖ್ಯವಾಗಿದೆ. ಏಕೆಂದರೆ, ಪ್ರಾಮಾಣಿಕತೆ ಪತನಗೊಂಡ ಕಾಲವಿದು. ಭ್ರಷ್ಟಗೊಂಡ ಬೌದ್ಧಿಕ ವಲಯದ ಕಾಲವಿದೆ. ಅದು ಈಗ ಜಾತಿ, ಧರ್ಮ, ಪೂರ್ವಗ್ರಹ ಪೀಡಿತವಾಗಿ ಭ್ರಷ್ಟಗೊಂಡಿದೆ. ಜಾತಿ-ಧರ್ಮ ಮೂಲಭೂತವಾಗಬಾರದು. ಸಮಾದಲ್ಲಿ ಜಾತಿ-ಧರ್ಮಗಳಿವೆ; ಆದರೆ, ಅದು ಮೂಲಭೂತವಾಗಿರಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತವಾಗಿರುವ ಕಾಲವಿದು. ಯಾರು ಪ್ರಗತಿಪರ, ಯಾರು ದೇಶಪ್ರೇಮಿ ಅಲ್ಲ ಎನ್ನುವುದು ನಾವು ಹಿಂದೂ-ಮುಸ್ಲಿಂ ಎಂಬ ಆಧಾರದಲ್ಲಿ ನೋಡುತ್ತಿದ್ದೇವೆ” ಎಂದರು.

“ನಮ್ಮ ಪರಂಪರೆ ಬಹಳ ಮುಖ್ಯವಗಿದೆ; ಜನಸಾಮಾನ್ಯರನ್ನು ನಮ್ಮ ಪರಂಪರೆಯ ಮೂಲಕ ತಲುಪಬೇಕಾಗಿದೆ. ಹಿಂದೂ ಧರ್ಮ ಒಪ್ಪದ ಅಂಬೇಡ್ಕರ್‌ ಮತ್ತು ಹಿಂದೂ ಧರ್ಮವನ್ನು ಒಪ್ಪುವ ರಾಧಾಕೃಷ್ಣ ಅವರು ದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇರಬೇಕು ಎಂದು ಪ್ರತಿಪಾದಿಸುತ್ತಾರೆ. ರಾಮ್‌ ಪ್ರಸಾದ್ ಮತ್ತು ಅಸ್ಪಾಕುಲ್ಲಾ ಅವರು ಒಂದೇ ಸಮಯದಲ್ಲಿ ಸ್ವಾತಂತ್ಯ್ರಕ್ಕೋಸ್ಕರ ಹೋರಾಟ ಮಾಡಿ, ಒಂದೇ ದಿನ ಹುತಾತ್ಮರಾಗುತ್ತಾರೆ; ಇದು ನಮ್ಮ ಭಾರತ” ಎಂದು ವಿವರಿಸಿದರು.

“ಪೆಹಲ್ಗಾಮ್ ಅಮಾನವೀಯ ಘಟನೆನ್ನು ನಾವು ಉಗ್ರವಾಗಿ ಖಂಡಿಸಬೇಕಾಗಿದೆ. ಈ ದೇಶದಲ್ಲಿ ಭಯೋತ್ಪಾನೆ, ದ್ವೇಷೋತ್ಪಾದನೆ ಇದೆ. ಜೊತೆಗೆ ಪ್ರಪಂಚದಲ್ಲಿ ಯುದ್ದೋತ್ಪಾದನೆ ಇವೆ. ಆದರೆ, ನಮಗೆ ಇದು ಯಾವುದೂ ಬೇಡ. ಅಮಾನವೀಯ ಘಟನೆ ನಡೆದ ಸಂಧರ್ಭದಲ್ಲಿ ಮಾನವೀಯವಾಗಿ ಸ್ಪಂಧಿಸುವ ಮನಸ್ಸುಗಳು ಭಾರತದಲ್ಲಿ ಇವೆ ಎನ್ನುವುದು ಪೆಹಲ್ಗಾಮ್ ಘಟನೆ ನಮಗೆ ಉದಾಹರಣೆಯಾಗಿದೆ. ಒಂದು ಕಡೆ ಮೃತ ವ್ಯಕ್ತಿಯ ಮುಂದೆ ರೋಧಿಸುತ್ತಿರುವ ಮಹಿಳೆಯ ಚಿತ್ರವಿದೆ. ಮತ್ತೊಂದು ಕಡೆ, ಒಬ್ಬ ವ್ಯಕ್ತಿ ತನ್ನ ಬೆನ್ನಮೇಲೆ ಹೊತ್ತುಕೊಂಡು ಹೋಗಿ ಯುವಕನ ಜೀವ ರಕ್ಷಿಸುತ್ತಾನೆ. ಇವೆರೆಡೂ ನಮ್ಮ ಮುಂದೆ ಸಂಕೇತವಾಗಿದೆ” ಎಂದರು.

“ಸಂವಿಧಾನವನ್ನು ಪೂಜೆ ಮಾಡುವವರಿಗೆ, ಅದರ ಬಗ್ಗೆ ಗೌರವ ಇದೆಯೇ ಎಂಬುವುದನ್ನು ನಾವು ಪ್ರಶ್ನೆ ಮಾಡಬೇಕಾಗಿದೆ. ಆರಂಭದಲ್ಲಿ ‘ಸಮಾಜವಾದ’ ಎನ್ನುವ ಪದ ಪೀಠಿಕೆಯಲ್ಲಿ ಇರಲಿಲ್ಲ. ಆದರೆ, ಅಂಬೇಡ್ಕರ್ ಅವರು ತಮ್ಮ ಕೊನೆಯ ಸಂವಿಧಾನ ಸಭೆಯಲ್ಲಿ ಮಾತನಾಡುತ್ತಾ, ಸಂವಿಧಾನದ ಒಳಗೆ ಸಮಾಜವಾದದ ಆಶಯ ಅಡಗಿದೆ ಎಂದು ಹೇಳಿದ್ದರು” ಎಂದು ಹೇಳಿದರು.

“ಪಕ್ಷದಲ್ಲಿ ಇದ್ದೂ ಪಕ್ಷವನ್ನು ಮೀರಿ ನೋಡುವ ರಾಜಕೀಯ ನಾಯಕತ್ವ ಬೇಕು. ಧರ್ಮದಲ್ಲಿ ಇದ್ದೂ ಧಾರ್ಮಿಕತೆಯನ್ನು ಮೀರಿ ಧಾರ್ಮಿಕ ನಾಯಕತ್ವ ಈ ದೇಶಕ್ಕೆ ಬರಬೇಕು. ಸಂವಿಧಾನ ಅಸ್ಪೃಶ್ಯತೆ ನಿಷೇಧ ಮಾಡಿದೆ. ಆದರೆ, ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿದೆ. 1.87 ಲಕ್ಷ ಜನರು ಇನ್ನೂ ಕೈನಿಂದ ಮಲ ಎತ್ತುತ್ತಿದ್ದಾರೆ. ಇದು ಹೋಗಲಾಡಿಸಲು ನಮ್ಮ ಮನಸ್ಸಿನ ಮಲಿನತೆ ಹೋಗಬೇಕು. ಸಂಘಟಿತ ವಲಯದ ಜೊತೆಗೆ ಅಸಂಘಟಿತ ವಲಯದ ಬಗ್ಗೆ ಮಾತನಾಡುವ ತುರ್ತು ಇದೆ. ನಮ್ಮ ಸೈದ್ಧಾಂತಿಕ ಬದ್ಧತೆಯನ್ನು ಬಿಟ್ಟುಕೊಡದೆ, ಸೈದ್ಧಾಂತಿಕ ಸಂಕುಚಿತತೆಯನ್ನು ಮೀರಬೇಕು. ದೇಶದಲ್ಲಿ ಬದಲಾವಣೆ ಬರಬೇಕಿದ್ದರೆ, ಕೆಂಪು, ನೀಲಿ, ಹಸಿರು ಒಂದೇ ವೇದಿಕೆಯ ಮೇಲೆ ಬರಬೇಕು” ಎಂದು ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು.

ದಲಿತರಿಗೆ ಅಂಬೇಡ್ಕರ್, ಲಿಂಗಾಯತರಿಗೆ ಬಸವಣ್ಣ ಅರ್ಥವಾಗಿದ್ದರೆ ಕೋಮುವಾದಿಗಳು ಅಧಿಕಾರಕ್ಕೆ ಬರುತ್ತಿರಲಿಲ್ಲ: ಪ್ರೊ. ಎ.ಬಿ ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...