Homeಕರ್ನಾಟಕಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಯಾರು ಸಂವಿಧಾನವನ್ನು ಗೌರವಿಸುತ್ತಾರೊ, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು ಸೌರ್ಹಾರ್ದತೆಯನ್ನು ಬಯಸುತ್ತಾರೊ ಅವರೇ ನಿಜವಾದ ದೇಶಪ್ರೇಮಿಗಳು’ ಎಂದು ಪ್ರೊ. ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಉದ್ಘಾಟನಾ ಮಾತುಗಳನ್ನಾಡಿದ ಅವರು, “ಜನ ಒಂದುಗೂಡಿದರೆ ಯಾವೂದೂ ಅಸಾಧ್ಯವಲ್ಲ. ಆದ್ದರಿಂದ, ಜನಶಕ್ತಿಯೆ ಅಂತಿಮವಾಗಿದ್ದು. ಅಂತಹ ಜನಶಕ್ತಿಯನ್ನು ಸಂಘಟಿಸಿದರೆ ಸಂವಿಧಾನವನ್ನು ರಕ್ಷಣೆ ಮಾಡಲು ಸಾಧ್ಯ” ಎಂದರು.

“ಪ್ರಶ್ನೆ ಮಾಡುವುದು ಮತ್ತು ಪ್ರಶ್ನಿಸಿಕೊಳ್ಳುವುದು ಬಹಳ ಮುಖ್ಯ; ಪ್ರಪಂಚದ ಎಲ್ಲ ಕ್ರಾಂತಿಕಾರಿಗಳು ಇದನ್ನು ಮಾಡುತ್ತಾರೆ. ಸಂವಿಧಾನವನ್ನು ಕೈನಲ್ಲಿ ಹಿಡಿಕೊಂಡಿರುವ ಪಡೆ ಒಂದು ಕಡೆ, ಸಂವಿಧಾನವನ್ನು ಪಾಲಿಸದ ಪಡೆ ಮತ್ತೊಂದು ಕಡೆ. ಆದರೆ, ಸಂವಿಧಾನ ಹಿಡಿದಿರುವ ಈ ಪಡೆ ‘ಪರ್ಯಾಯ’ವನ್ನು ಸಾಧ್ಯವನ್ನಾಗಿಸುವ ಪಡೆಯಾಗಿದೆ” ಎಂದು ಅವರು ಹೇಳಿದರು.

“ಸಂವಿಧಾನ ಇದೆ ಎನ್ನುವುದು ಅಷ್ಟು ಮುಖ್ಯವಲ್ಲ; ಅದನ್ನು ಯಾರು ಬಳಸುತ್ತಾರೆ ಎನ್ನುವುದು ಮುಖ್ಯವಾಗಿದೆ. ಏಕೆಂದರೆ, ಪ್ರಾಮಾಣಿಕತೆ ಪತನಗೊಂಡ ಕಾಲವಿದು. ಭ್ರಷ್ಟಗೊಂಡ ಬೌದ್ಧಿಕ ವಲಯದ ಕಾಲವಿದೆ. ಅದು ಈಗ ಜಾತಿ, ಧರ್ಮ, ಪೂರ್ವಗ್ರಹ ಪೀಡಿತವಾಗಿ ಭ್ರಷ್ಟಗೊಂಡಿದೆ. ಜಾತಿ-ಧರ್ಮ ಮೂಲಭೂತವಾಗಬಾರದು. ಸಮಾದಲ್ಲಿ ಜಾತಿ-ಧರ್ಮಗಳಿವೆ; ಆದರೆ, ಅದು ಮೂಲಭೂತವಾಗಿರಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತವಾಗಿರುವ ಕಾಲವಿದು. ಯಾರು ಪ್ರಗತಿಪರ, ಯಾರು ದೇಶಪ್ರೇಮಿ ಅಲ್ಲ ಎನ್ನುವುದು ನಾವು ಹಿಂದೂ-ಮುಸ್ಲಿಂ ಎಂಬ ಆಧಾರದಲ್ಲಿ ನೋಡುತ್ತಿದ್ದೇವೆ” ಎಂದರು.

“ನಮ್ಮ ಪರಂಪರೆ ಬಹಳ ಮುಖ್ಯವಗಿದೆ; ಜನಸಾಮಾನ್ಯರನ್ನು ನಮ್ಮ ಪರಂಪರೆಯ ಮೂಲಕ ತಲುಪಬೇಕಾಗಿದೆ. ಹಿಂದೂ ಧರ್ಮ ಒಪ್ಪದ ಅಂಬೇಡ್ಕರ್‌ ಮತ್ತು ಹಿಂದೂ ಧರ್ಮವನ್ನು ಒಪ್ಪುವ ರಾಧಾಕೃಷ್ಣ ಅವರು ದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇರಬೇಕು ಎಂದು ಪ್ರತಿಪಾದಿಸುತ್ತಾರೆ. ರಾಮ್‌ ಪ್ರಸಾದ್ ಮತ್ತು ಅಸ್ಪಾಕುಲ್ಲಾ ಅವರು ಒಂದೇ ಸಮಯದಲ್ಲಿ ಸ್ವಾತಂತ್ಯ್ರಕ್ಕೋಸ್ಕರ ಹೋರಾಟ ಮಾಡಿ, ಒಂದೇ ದಿನ ಹುತಾತ್ಮರಾಗುತ್ತಾರೆ; ಇದು ನಮ್ಮ ಭಾರತ” ಎಂದು ವಿವರಿಸಿದರು.

“ಪೆಹಲ್ಗಾಮ್ ಅಮಾನವೀಯ ಘಟನೆನ್ನು ನಾವು ಉಗ್ರವಾಗಿ ಖಂಡಿಸಬೇಕಾಗಿದೆ. ಈ ದೇಶದಲ್ಲಿ ಭಯೋತ್ಪಾನೆ, ದ್ವೇಷೋತ್ಪಾದನೆ ಇದೆ. ಜೊತೆಗೆ ಪ್ರಪಂಚದಲ್ಲಿ ಯುದ್ದೋತ್ಪಾದನೆ ಇವೆ. ಆದರೆ, ನಮಗೆ ಇದು ಯಾವುದೂ ಬೇಡ. ಅಮಾನವೀಯ ಘಟನೆ ನಡೆದ ಸಂಧರ್ಭದಲ್ಲಿ ಮಾನವೀಯವಾಗಿ ಸ್ಪಂಧಿಸುವ ಮನಸ್ಸುಗಳು ಭಾರತದಲ್ಲಿ ಇವೆ ಎನ್ನುವುದು ಪೆಹಲ್ಗಾಮ್ ಘಟನೆ ನಮಗೆ ಉದಾಹರಣೆಯಾಗಿದೆ. ಒಂದು ಕಡೆ ಮೃತ ವ್ಯಕ್ತಿಯ ಮುಂದೆ ರೋಧಿಸುತ್ತಿರುವ ಮಹಿಳೆಯ ಚಿತ್ರವಿದೆ. ಮತ್ತೊಂದು ಕಡೆ, ಒಬ್ಬ ವ್ಯಕ್ತಿ ತನ್ನ ಬೆನ್ನಮೇಲೆ ಹೊತ್ತುಕೊಂಡು ಹೋಗಿ ಯುವಕನ ಜೀವ ರಕ್ಷಿಸುತ್ತಾನೆ. ಇವೆರೆಡೂ ನಮ್ಮ ಮುಂದೆ ಸಂಕೇತವಾಗಿದೆ” ಎಂದರು.

“ಸಂವಿಧಾನವನ್ನು ಪೂಜೆ ಮಾಡುವವರಿಗೆ, ಅದರ ಬಗ್ಗೆ ಗೌರವ ಇದೆಯೇ ಎಂಬುವುದನ್ನು ನಾವು ಪ್ರಶ್ನೆ ಮಾಡಬೇಕಾಗಿದೆ. ಆರಂಭದಲ್ಲಿ ‘ಸಮಾಜವಾದ’ ಎನ್ನುವ ಪದ ಪೀಠಿಕೆಯಲ್ಲಿ ಇರಲಿಲ್ಲ. ಆದರೆ, ಅಂಬೇಡ್ಕರ್ ಅವರು ತಮ್ಮ ಕೊನೆಯ ಸಂವಿಧಾನ ಸಭೆಯಲ್ಲಿ ಮಾತನಾಡುತ್ತಾ, ಸಂವಿಧಾನದ ಒಳಗೆ ಸಮಾಜವಾದದ ಆಶಯ ಅಡಗಿದೆ ಎಂದು ಹೇಳಿದ್ದರು” ಎಂದು ಹೇಳಿದರು.

“ಪಕ್ಷದಲ್ಲಿ ಇದ್ದೂ ಪಕ್ಷವನ್ನು ಮೀರಿ ನೋಡುವ ರಾಜಕೀಯ ನಾಯಕತ್ವ ಬೇಕು. ಧರ್ಮದಲ್ಲಿ ಇದ್ದೂ ಧಾರ್ಮಿಕತೆಯನ್ನು ಮೀರಿ ಧಾರ್ಮಿಕ ನಾಯಕತ್ವ ಈ ದೇಶಕ್ಕೆ ಬರಬೇಕು. ಸಂವಿಧಾನ ಅಸ್ಪೃಶ್ಯತೆ ನಿಷೇಧ ಮಾಡಿದೆ. ಆದರೆ, ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿದೆ. 1.87 ಲಕ್ಷ ಜನರು ಇನ್ನೂ ಕೈನಿಂದ ಮಲ ಎತ್ತುತ್ತಿದ್ದಾರೆ. ಇದು ಹೋಗಲಾಡಿಸಲು ನಮ್ಮ ಮನಸ್ಸಿನ ಮಲಿನತೆ ಹೋಗಬೇಕು. ಸಂಘಟಿತ ವಲಯದ ಜೊತೆಗೆ ಅಸಂಘಟಿತ ವಲಯದ ಬಗ್ಗೆ ಮಾತನಾಡುವ ತುರ್ತು ಇದೆ. ನಮ್ಮ ಸೈದ್ಧಾಂತಿಕ ಬದ್ಧತೆಯನ್ನು ಬಿಟ್ಟುಕೊಡದೆ, ಸೈದ್ಧಾಂತಿಕ ಸಂಕುಚಿತತೆಯನ್ನು ಮೀರಬೇಕು. ದೇಶದಲ್ಲಿ ಬದಲಾವಣೆ ಬರಬೇಕಿದ್ದರೆ, ಕೆಂಪು, ನೀಲಿ, ಹಸಿರು ಒಂದೇ ವೇದಿಕೆಯ ಮೇಲೆ ಬರಬೇಕು” ಎಂದು ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು.

ದಲಿತರಿಗೆ ಅಂಬೇಡ್ಕರ್, ಲಿಂಗಾಯತರಿಗೆ ಬಸವಣ್ಣ ಅರ್ಥವಾಗಿದ್ದರೆ ಕೋಮುವಾದಿಗಳು ಅಧಿಕಾರಕ್ಕೆ ಬರುತ್ತಿರಲಿಲ್ಲ: ಪ್ರೊ. ಎ.ಬಿ ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...