Homeಕರ್ನಾಟಕಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಯಾರು ಸಂವಿಧಾನವನ್ನು ಗೌರವಿಸುತ್ತಾರೊ, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು ಸೌರ್ಹಾರ್ದತೆಯನ್ನು ಬಯಸುತ್ತಾರೊ ಅವರೇ ನಿಜವಾದ ದೇಶಪ್ರೇಮಿಗಳು’ ಎಂದು ಪ್ರೊ. ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಉದ್ಘಾಟನಾ ಮಾತುಗಳನ್ನಾಡಿದ ಅವರು, “ಜನ ಒಂದುಗೂಡಿದರೆ ಯಾವೂದೂ ಅಸಾಧ್ಯವಲ್ಲ. ಆದ್ದರಿಂದ, ಜನಶಕ್ತಿಯೆ ಅಂತಿಮವಾಗಿದ್ದು. ಅಂತಹ ಜನಶಕ್ತಿಯನ್ನು ಸಂಘಟಿಸಿದರೆ ಸಂವಿಧಾನವನ್ನು ರಕ್ಷಣೆ ಮಾಡಲು ಸಾಧ್ಯ” ಎಂದರು.

“ಪ್ರಶ್ನೆ ಮಾಡುವುದು ಮತ್ತು ಪ್ರಶ್ನಿಸಿಕೊಳ್ಳುವುದು ಬಹಳ ಮುಖ್ಯ; ಪ್ರಪಂಚದ ಎಲ್ಲ ಕ್ರಾಂತಿಕಾರಿಗಳು ಇದನ್ನು ಮಾಡುತ್ತಾರೆ. ಸಂವಿಧಾನವನ್ನು ಕೈನಲ್ಲಿ ಹಿಡಿಕೊಂಡಿರುವ ಪಡೆ ಒಂದು ಕಡೆ, ಸಂವಿಧಾನವನ್ನು ಪಾಲಿಸದ ಪಡೆ ಮತ್ತೊಂದು ಕಡೆ. ಆದರೆ, ಸಂವಿಧಾನ ಹಿಡಿದಿರುವ ಈ ಪಡೆ ‘ಪರ್ಯಾಯ’ವನ್ನು ಸಾಧ್ಯವನ್ನಾಗಿಸುವ ಪಡೆಯಾಗಿದೆ” ಎಂದು ಅವರು ಹೇಳಿದರು.

“ಸಂವಿಧಾನ ಇದೆ ಎನ್ನುವುದು ಅಷ್ಟು ಮುಖ್ಯವಲ್ಲ; ಅದನ್ನು ಯಾರು ಬಳಸುತ್ತಾರೆ ಎನ್ನುವುದು ಮುಖ್ಯವಾಗಿದೆ. ಏಕೆಂದರೆ, ಪ್ರಾಮಾಣಿಕತೆ ಪತನಗೊಂಡ ಕಾಲವಿದು. ಭ್ರಷ್ಟಗೊಂಡ ಬೌದ್ಧಿಕ ವಲಯದ ಕಾಲವಿದೆ. ಅದು ಈಗ ಜಾತಿ, ಧರ್ಮ, ಪೂರ್ವಗ್ರಹ ಪೀಡಿತವಾಗಿ ಭ್ರಷ್ಟಗೊಂಡಿದೆ. ಜಾತಿ-ಧರ್ಮ ಮೂಲಭೂತವಾಗಬಾರದು. ಸಮಾದಲ್ಲಿ ಜಾತಿ-ಧರ್ಮಗಳಿವೆ; ಆದರೆ, ಅದು ಮೂಲಭೂತವಾಗಿರಬಾರದು. ಇಡೀ ಬೌದ್ಧಿಕ ವಲಯವೇ ವಿಭಜಿತವಾಗಿರುವ ಕಾಲವಿದು. ಯಾರು ಪ್ರಗತಿಪರ, ಯಾರು ದೇಶಪ್ರೇಮಿ ಅಲ್ಲ ಎನ್ನುವುದು ನಾವು ಹಿಂದೂ-ಮುಸ್ಲಿಂ ಎಂಬ ಆಧಾರದಲ್ಲಿ ನೋಡುತ್ತಿದ್ದೇವೆ” ಎಂದರು.

“ನಮ್ಮ ಪರಂಪರೆ ಬಹಳ ಮುಖ್ಯವಗಿದೆ; ಜನಸಾಮಾನ್ಯರನ್ನು ನಮ್ಮ ಪರಂಪರೆಯ ಮೂಲಕ ತಲುಪಬೇಕಾಗಿದೆ. ಹಿಂದೂ ಧರ್ಮ ಒಪ್ಪದ ಅಂಬೇಡ್ಕರ್‌ ಮತ್ತು ಹಿಂದೂ ಧರ್ಮವನ್ನು ಒಪ್ಪುವ ರಾಧಾಕೃಷ್ಣ ಅವರು ದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇರಬೇಕು ಎಂದು ಪ್ರತಿಪಾದಿಸುತ್ತಾರೆ. ರಾಮ್‌ ಪ್ರಸಾದ್ ಮತ್ತು ಅಸ್ಪಾಕುಲ್ಲಾ ಅವರು ಒಂದೇ ಸಮಯದಲ್ಲಿ ಸ್ವಾತಂತ್ಯ್ರಕ್ಕೋಸ್ಕರ ಹೋರಾಟ ಮಾಡಿ, ಒಂದೇ ದಿನ ಹುತಾತ್ಮರಾಗುತ್ತಾರೆ; ಇದು ನಮ್ಮ ಭಾರತ” ಎಂದು ವಿವರಿಸಿದರು.

“ಪೆಹಲ್ಗಾಮ್ ಅಮಾನವೀಯ ಘಟನೆನ್ನು ನಾವು ಉಗ್ರವಾಗಿ ಖಂಡಿಸಬೇಕಾಗಿದೆ. ಈ ದೇಶದಲ್ಲಿ ಭಯೋತ್ಪಾನೆ, ದ್ವೇಷೋತ್ಪಾದನೆ ಇದೆ. ಜೊತೆಗೆ ಪ್ರಪಂಚದಲ್ಲಿ ಯುದ್ದೋತ್ಪಾದನೆ ಇವೆ. ಆದರೆ, ನಮಗೆ ಇದು ಯಾವುದೂ ಬೇಡ. ಅಮಾನವೀಯ ಘಟನೆ ನಡೆದ ಸಂಧರ್ಭದಲ್ಲಿ ಮಾನವೀಯವಾಗಿ ಸ್ಪಂಧಿಸುವ ಮನಸ್ಸುಗಳು ಭಾರತದಲ್ಲಿ ಇವೆ ಎನ್ನುವುದು ಪೆಹಲ್ಗಾಮ್ ಘಟನೆ ನಮಗೆ ಉದಾಹರಣೆಯಾಗಿದೆ. ಒಂದು ಕಡೆ ಮೃತ ವ್ಯಕ್ತಿಯ ಮುಂದೆ ರೋಧಿಸುತ್ತಿರುವ ಮಹಿಳೆಯ ಚಿತ್ರವಿದೆ. ಮತ್ತೊಂದು ಕಡೆ, ಒಬ್ಬ ವ್ಯಕ್ತಿ ತನ್ನ ಬೆನ್ನಮೇಲೆ ಹೊತ್ತುಕೊಂಡು ಹೋಗಿ ಯುವಕನ ಜೀವ ರಕ್ಷಿಸುತ್ತಾನೆ. ಇವೆರೆಡೂ ನಮ್ಮ ಮುಂದೆ ಸಂಕೇತವಾಗಿದೆ” ಎಂದರು.

“ಸಂವಿಧಾನವನ್ನು ಪೂಜೆ ಮಾಡುವವರಿಗೆ, ಅದರ ಬಗ್ಗೆ ಗೌರವ ಇದೆಯೇ ಎಂಬುವುದನ್ನು ನಾವು ಪ್ರಶ್ನೆ ಮಾಡಬೇಕಾಗಿದೆ. ಆರಂಭದಲ್ಲಿ ‘ಸಮಾಜವಾದ’ ಎನ್ನುವ ಪದ ಪೀಠಿಕೆಯಲ್ಲಿ ಇರಲಿಲ್ಲ. ಆದರೆ, ಅಂಬೇಡ್ಕರ್ ಅವರು ತಮ್ಮ ಕೊನೆಯ ಸಂವಿಧಾನ ಸಭೆಯಲ್ಲಿ ಮಾತನಾಡುತ್ತಾ, ಸಂವಿಧಾನದ ಒಳಗೆ ಸಮಾಜವಾದದ ಆಶಯ ಅಡಗಿದೆ ಎಂದು ಹೇಳಿದ್ದರು” ಎಂದು ಹೇಳಿದರು.

“ಪಕ್ಷದಲ್ಲಿ ಇದ್ದೂ ಪಕ್ಷವನ್ನು ಮೀರಿ ನೋಡುವ ರಾಜಕೀಯ ನಾಯಕತ್ವ ಬೇಕು. ಧರ್ಮದಲ್ಲಿ ಇದ್ದೂ ಧಾರ್ಮಿಕತೆಯನ್ನು ಮೀರಿ ಧಾರ್ಮಿಕ ನಾಯಕತ್ವ ಈ ದೇಶಕ್ಕೆ ಬರಬೇಕು. ಸಂವಿಧಾನ ಅಸ್ಪೃಶ್ಯತೆ ನಿಷೇಧ ಮಾಡಿದೆ. ಆದರೆ, ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿದೆ. 1.87 ಲಕ್ಷ ಜನರು ಇನ್ನೂ ಕೈನಿಂದ ಮಲ ಎತ್ತುತ್ತಿದ್ದಾರೆ. ಇದು ಹೋಗಲಾಡಿಸಲು ನಮ್ಮ ಮನಸ್ಸಿನ ಮಲಿನತೆ ಹೋಗಬೇಕು. ಸಂಘಟಿತ ವಲಯದ ಜೊತೆಗೆ ಅಸಂಘಟಿತ ವಲಯದ ಬಗ್ಗೆ ಮಾತನಾಡುವ ತುರ್ತು ಇದೆ. ನಮ್ಮ ಸೈದ್ಧಾಂತಿಕ ಬದ್ಧತೆಯನ್ನು ಬಿಟ್ಟುಕೊಡದೆ, ಸೈದ್ಧಾಂತಿಕ ಸಂಕುಚಿತತೆಯನ್ನು ಮೀರಬೇಕು. ದೇಶದಲ್ಲಿ ಬದಲಾವಣೆ ಬರಬೇಕಿದ್ದರೆ, ಕೆಂಪು, ನೀಲಿ, ಹಸಿರು ಒಂದೇ ವೇದಿಕೆಯ ಮೇಲೆ ಬರಬೇಕು” ಎಂದು ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು.

ದಲಿತರಿಗೆ ಅಂಬೇಡ್ಕರ್, ಲಿಂಗಾಯತರಿಗೆ ಬಸವಣ್ಣ ಅರ್ಥವಾಗಿದ್ದರೆ ಕೋಮುವಾದಿಗಳು ಅಧಿಕಾರಕ್ಕೆ ಬರುತ್ತಿರಲಿಲ್ಲ: ಪ್ರೊ. ಎ.ಬಿ ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...